ಬಿಕೆ ಹರಿಪ್ರಸಾದ್, ನರೇಂದ್ರ ಮೋದಿ 
ರಾಜಕೀಯ

ನೀವು ಮಾಡಿದರೆ ರಾಜತಂತ್ರ? ಮತಗಳ ಮೈಲೇಜ್‌ಗಾಗಿ ತಾಯಿ ಹೆಸರನ್ನು ಬಳಸುವುದು ಪ್ರೀತಿಯಲ್ಲ, ಕ್ರೂರ: PM ಮೋದಿ ವಿರುದ್ಧ ಬಿಕೆ ಹರಿಪ್ರಸಾದ್ ವಾಗ್ದಾಳಿ

ನೀಟ್ ಪ್ರತಿಭಟನೆ ವೇಳೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಅವರ ಸ್ವರ್ಗವಾಸಿ ತಾಯಿಯನ್ನು ಹಲವರು ಜೆನ್ Zಗಳು ಅಮಾನಿಯವಾಗಿ ನಿಂದಿಸಿದ್ದರು. ಈ ಸಂಬಂಧ ಅಂತಹರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ.

ಬೆಂಗಳೂರು: ನೀಟ್ ಪ್ರತಿಭಟನೆ ವೇಳೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಅವರ ಸ್ವರ್ಗವಾಸಿ ತಾಯಿಯನ್ನು ಹಲವರು ಜೆನ್ Zಗಳು ಅಮಾನಿಯವಾಗಿ ನಿಂದಿಸಿದ್ದರು. ಈ ಸಂಬಂಧ ಅಂತಹರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಬೆನ್ನಲ್ಲೇ ಹಲವರು ತಮ್ಮ ಕೃತ್ಯದ ಬಗ್ಗೆ ಅಹಸ್ಯ ವ್ಯಕ್ತಪಡಿಸಿ ಪಶ್ಚಾತ್ತಾಪದ ವಿಡಿಯೋಗಳನ್ನು ಮಾಡುತ್ತಿದ್ದಾರೆ. ಇದರ ಬೆನ್ನಲ್ಲೇ ನಿನ್ನೆ ರಾತ್ರಿ ನರೇಂದ್ರ ಮೋದಿ ಅವರು ಮತ್ತೊಂದು ವಿಡಿಯೋ ಮಾಡಿ ದೇಶದ ಯುವ ಜನತೆಯನ್ನು ಕ್ಷಮಿಸಬೇಕು. ಅವರ ತಪ್ಪ ತಿದ್ದಿ ನಮ್ಮೊಂದಿಗೆ ಕರೆದುಕೊಂಡು ಹೋಗಬೇಕು ಎಂದು ಹೇಳಿದ್ದರು.

ಇನ್ನು ಮೋದಿ ವಿಡಿಯೋ ಕುರಿತಂತೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಲೇವಡಿ ಮಾಡಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು ಮಾಡಿದರೆ ಅಪರಾಧನಾ? ಎಂದು ಪ್ರಶ್ನಿಸಿದ್ದಾರೆ. ಮತಗಳ ಮೈಲೇಜ್‌ಗಾಗಿ ತಾಯಿ ಹೆಸರನ್ನು ಬಳಸುವುದು ಪ್ರೀತಿಯಲ್ಲ, ಇದು ನಿರ್ದಯ ರಾಜಕೀಯ ವ್ಯಾಪರ ಎಂದು ಹರಿಪ್ರಸಾದ್ ಹೇಳಿದ್ದಾರೆ.

ಬಿಕೆ ಹರಿಪ್ರಸಾದ್ ಹೇಳಿದ್ದೇನು?

ತಾನು ಮಾಡಿದರೆ ರಾಜತಂತ್ರ, ಬೇರೆಯವರು ಮಾಡಿದರೆ ಅಪರಾಧ ಎನ್ನುವ ಹೊಸ ರಾಜಕೀಯ ಗಾದೆಗೆ ಪ್ರಧಾನಿ ಮೋದಿಗೆ ಜೀವಂತ ಉದಾಹರಣೆ! ನಿನ್ನೆ ರಾತ್ರಿ ಸಾಮಾಜಿಕ ಜಾಲತಾಣದಲ್ಲಿ ರೀಲೊಂದನ್ನು ಬಿಡುಗಡೆ ಮಾಡಿ, ನನ್ನನ್ನೂ, ನನ್ನ ತಾಯಿಯನ್ನೂ ನಿಂದಿಸಿದ ದಾರಿ ತಪ್ಪಿದ ಮಕ್ಕಳನ್ನು ಕ್ಷಮಿಸಿದ್ದೇನೆ ಎಂದು ಭಾವುಕ ಅಭಿನಯ ಮಾಡಿದ್ದೀರಲ್ಲ ಪ್ರಧಾನಿಗಳೇ, ದಶಕಗಳ ಕಾಲ ಮಹಿಳೆಯರನ್ನು ತುಚ್ಛವಾಗಿ ಜರಿದು, ವಿರೋಧಿಗಳ ಕುಟುಂಬಗಳ ಮೇಲಿನ ನಿಂದನೆಗೆ ಮೌನಸಮ್ಮತಿ ನೀಡಿದವರು ಇಂದು ಮಾತೃಗೌರವದ ಪ್ರವಚನ ಮಾಡುತ್ತಿರುವುದು ನೋಡಿದರೆ "ಬೆಂಕಿ ಹಚ್ಚಿದವನೇ ಬಕೆಟ್ ಹಿಡಿದು ಅಗ್ನಿಶಾಮಕನಂತೆ ಪೋಸ್ ಕೊಟ್ಟ ಹಾಗಿದೆ!

ಅಜ್ಜಿ ಇಂದಿರಾ ಗಾಂಧಿಯವರ ದೇಹವನ್ನು ಗುಂಡುಗಳಿಂದ ಛಿದ್ರಗೊಳಿಸಿದ ಹತ್ಯೆಯ ನೋವು; ತಂದೆಯ ದೇಹವನ್ನೇ ಛಿದ್ರಗೊಳಿಸಿದ ಭೀಕರ ನೋವನ್ನು ಅನುಭವಿಸಿದ ನಮ್ಮ ನಾಯಕರಾದ ರಾಹುಲ್ ಗಾಂಧಿ, ನನಗೆ ಯಾರ ಮೇಲೂ ಕೋಪ ಅಥವಾ ದ್ವೇಷವಿಲ್ಲ; ನಾನು ಕ್ಷಮಿಸಿದ್ದೇನೆ ಎಂದು ಬಹಿರಂಗವಾಗಿ ಹೇಳಿದ್ದಾರೆ. ತಂದೆಯ ಹಂತಕಿಯನ್ನೇ ಜೈಲಿನಲ್ಲೇ ಭೇಟಿಯಾದ ಪ್ರಿಯಾಂಕಾ ವಾದ್ರಾ, ಪ್ರತೀಕಾರಕ್ಕಿಂತ ಮಾನವೀಯತೆಯನ್ನು ಆರಿಸಿಕೊಂಡರು. ಅದು ಕ್ಯಾಮೆರಾ ಮುಂದೆ ನಿರ್ಮಿಸಿದ ರೀಲ್ ಅಲ್ಲ; ತಮ್ಮ ಬದುಕನ್ನೇ ಛಿದ್ರಗೊಳಿಸಿದ ದುರಂತದ ನಡುವೆಯೂ ದ್ವೇಷವನ್ನು ನಿರಾಕರಿಸಿದ ಸಂಸ್ಕಾರ.

ಸೋನಿಯಾ ಗಾಂಧಿಯವರನ್ನು 'ಜರ್ಸಿ ಹಸು' ಎಂದು ನಿಂದಿಸಿದಾಗ ನಿಮ್ಮ ಆತ್ಮಸಾಕ್ಷಿ ಎಲ್ಲಿತ್ತು? ತುಂಬಿದ ಸಂಸತ್ತಿನಲ್ಲಿ ಸಂಸದೆ ರೇಣುಕಾ ಚೌಧರಿಯವರ ನಗುವನ್ನು "ಶೂರ್ಪನಖಿ" ಪಾತ್ರದ ನಗುವಿಗೆ ಹೋಲಿಸಿ ಇಡೀ ಸದನವನ್ನು ನಗಿಸಿದಾಗ ಮಹಿಳೆಯ ಗೌರವ ನೆನಪಾಗಲಿಲ್ಲವೇ? ಸುನಂದಾ ಪುಷ್ಕರ್ ಅವರನ್ನು 50 ಕೋಟಿಯ ಗರ್ಲ್‌ಫ್ರೆಂಡ್ ಎಂದು ಸಾರ್ವಜನಿಕ ಸಭೆಯಲ್ಲಿ ಹೀಯಾಳಿಸಿದಾಗ ತಾಯಿ, ಸಹೋದರಿ, ಮಹಿಳಾ ಮರ್ಯಾದೆಯ ಪ್ರವಚನಗಳು ಯಾವ ಗುಹೆಯಲ್ಲಿ ತಪಸ್ಸು ಮಾಡುತ್ತಿದ್ದವು ಪ್ರಧಾನಿಗಳೇ?

2014ರ ನಂತರ ನಿಮ್ಮ ಹೆಸರಿನಲ್ಲಿ ಬೆಳೆದ ಸಾಮಾಜಿಕ ಜಾಲತಾಣದ ಅಂಧಭಕ್ತ ಪಡೆ ಶ್ರೀಮತಿ ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ವಿರೋಧ ಪಕ್ಷದ ನಾಯಕರ ತಾಯಿ, ಪತ್ನಿ ಮತ್ತು ಮಕ್ಕಳ ಚಿತ್ರಗಳನ್ನು ಮಾರ್ಫ್ ಮಾಡಿ, ಅತ್ಯಂತ ಕೀಳು ಭಾಷೆಯಲ್ಲಿ ನಿಂದಿಸುತ್ತಲೇ ಬಂದಿದೆ. ಆ ವಿಕೃತಿಗಳಿಗೆ ಎಂದಾದರೂ ಒಂದು ಕಿವಿಮಾತು ಹೇಳಿದ್ದೀರಾ? 'ಮಹಿಳೆಯರನ್ನು ನಿಂದಿಸಬೇಡಿ' ಎಂದು ನಿಮ್ಮ ಭಕ್ತರಿಗೆ ಒಂದೇ ಒಂದು ರೀಲ್ ಮಾಡಿದ್ದೀರಾ?

ನೋಟು ಅಮಾನ್ಯೀಕರಣದ ಸಂಕಷ್ಟದಲ್ಲಿ ಬ್ಯಾಂಕಿನ ಸಾಲಿನಲ್ಲಿ ನಿಂತಿದ್ದ ನಿಮ್ಮ ವಯೋವೃದ್ಧ ತಾಯಿಯ ಚಿತ್ರವೂ ರಾಜಕೀಯ ಪ್ರಚಾರದ ಸರಕಾಯಿತು. ಈಗ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸಲಾಗದೆ, ಅವರ ಮೇಲಿನ ಲಾಠಿ, ಬಂಧನ, ಪ್ರಕರಣ ಮತ್ತು ಶಿಕ್ಷಣ ವ್ಯವಸ್ಥೆಯ ವೈಫಲ್ಯದಿಂದ ಗಮನ ಬೇರೆಡೆ ಸೆಳೆಯಲು ಮತ್ತೆ ತಾಯಿಯ ಹೆಸರನ್ನೇ ಭಾವನಾತ್ಮಕ ಗುರಾಣಿಯನ್ನಾಗಿ ಬಳಸುತ್ತಿದ್ದೀರಿ. ತಾಯಿಯ ಮೇಲಿನ ಪ್ರೀತಿ ಪವಿತ್ರ; ಆದರೆ ತಾಯಿಯ ಹೆಸರನ್ನು ಪ್ರತಿಯೊಂದು ರಾಜಕೀಯ ಸಂಕಷ್ಟದಲ್ಲೂ ಮತಗಳ ಮೈಲೇಜ್‌ಗಾಗಿ ಬಳಸುವುದು ಪ್ರೀತಿಯಲ್ಲ ಅದು ಅತ್ಯಂತ ನಿರ್ದಯವಾದ ರಾಜಕೀಯ ವ್ಯಾಪಾರ.

ವಿದ್ಯಾರ್ಥಿಗಳ ಭವಿಷ್ಯವನ್ನೇ ನಾಶ ಮಾಡಿರುವ ಬಿಜೆಪಿ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಕ್ಷಮೆಯ ಅಗತ್ಯವೂ ಇಲ್ಲ, ಅನಿವಾರ್ಯತೆಯೂ ಇಲ್ಲ. ನಿಮ್ಮ ನಾಟಕೀಯವನ್ನು ಯುವಜನತೆ ತಿರಸ್ಕಾರ ಮಾಡಿದ್ದಾರೆ. ಕೂಡಲೇ ವಿದ್ಯಾರ್ಥಿಗಳ ಮೇಲಿನ ಪ್ರಕರಣಗಳನ್ನು ಹಿಂಪಡೆಯಿರಿ; ಪೊಲೀಸರ ದೌರ್ಜನ್ಯಕ್ಕೆ ಹೊಣೆ ಹೊತ್ತುಕೊಂಡು ದೇಶದ ವಿದ್ಯಾರ್ಥಿಗಳ ಎದರುರು ಕ್ಷಮೆ ಕೇಳಿ.

ಕ್ಯಾಮೆರಾ ಮುಂದೆ ಕಣ್ಣೀರು ಸುರಿಸುವುದು ಕ್ಷಮೆಯಲ್ಲ, ಅಧಿಕಾರದ ಕ್ರೌರ್ಯವನ್ನು ನಿಲ್ಲಿಸುವುದೇ ಕ್ಷಮೆ. ತನ್ನ ನಾಲಿಗೆಯಿಂದ ಮಹಿಳೆಯರನ್ನು ಅವಮಾನಿಸಿ, ತನ್ನ ಭಕ್ತರ ನಾಲಿಗೆಯ ವಿಷಕ್ಕೆ ಮೌನವಾಗಿದ್ದು, ಈಗ ಮಾತೃಭಕ್ತಿಯ ಮುಖವಾಡ ಧರಿಸುವ ಈ ಭಂಡತನವನ್ನು ದೇಶ ಗುರುತಿಸಿದೆ ಪ್ರಧಾನಿಗಳೇ. ನಿಮ್ಮ ರೀಲ್‌ಗಳಿಗೆ ಅಂಧಭಕ್ತರು ಮೆಚ್ಚಬಹುದು; ಆದರೆ ಇತಿಹಾಸ ಮಾತ್ರ ಕ್ಷಮಿಸುವುದಿಲ್ಲ!

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಏರ್ಪೋರ್ಟ್ to ಸೆಮಿಕಂಡಕ್ಟರ್‌, ಆಂಧ್ರಕ್ಕೆ ಬಂಪರ್ ಗಿಫ್ಟ್: ವಿಮಾನ ನಿಲ್ದಾಣ ಉದ್ಘಾಟನೆ ಸೇರಿ 17,900 ಕೋಟಿ ರೂ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ

ಬೆಂಗಳೂರಿಗರೇ ಎಚ್ಚರ! ಎಲ್ಲೆಂದರಲ್ಲಿ ಕಸ ಸುರಿಯುವ ವಾಹನಗಳನ್ನು ಮುಲಾಜಿಲ್ಲದೇ ಸೀಜ್ ಮಾಡಿ; ಪೊಲೀಸರಿಗೆ CM ಡಿಕೆಶಿ ಖಡಕ್ ಸೂಚನೆ

NSA ಅಜಿತ್ ದೋವಲ್ ಗೆ ಪ್ರತಿಷ್ಠಿತ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಿದ ಅಮಿತ್ ಶಾ

ಅಭಿಜೀತ್ ದೀಪ್ಕೆಗೆ ಮತ್ತೆ ಅನಾರೋಗ್ಯ; ಜನರ ಭೇಟಿಗೆ ಬಂದಿದ್ದ CJP ಸಂಸ್ಥಾಪಕ ದಿಢೀರ್ ವಾಪಸ್!

ತುಂಬುತ್ತಿರುವ ಕಬಿನಿ ಜಲಾಶಯದ ನೀರನ್ನು ಹಿಡಿದಿಡಲು ಹೇಗೆ ಸಾಧ್ಯ? ನೀರು ಬಿಡಲೇಬೇಕಾಗುತ್ತದೆ; ಸಿಎಂ ಡಿಕೆ ಶಿವಕುಮಾರ್