ಸಿದ್ದರಾಮಯ್ಯ 
ರಾಜಕೀಯ

ಆಂತರಿಕ ಅಸಮಾಧಾನ: ನೂತನ ಸಚಿವರ ಪದಗ್ರಹಣ ಕಾರ್ಯಕ್ರಮಕ್ಕೆ CM ಸಿಎಂ ಸಿದ್ದರಾಮಯ್ಯ ಗೈರಾಗಿದ್ದೇಕೆ?

ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ವಿಸ್ತರಣೆಯಾಗಿದ್ದು 19 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಲೋಕಭವನದಲ್ಲಿ ಪ್ರಮಾಣವಚನ ಕಾರ್ಯಕ್ರಮ ನಡೆದಿದ್ದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.

ಬೆಂಗಳೂರು: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ವಿಸ್ತರಣೆಯಾಗಿದ್ದು 19 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಲೋಕಭವನದಲ್ಲಿ ಪ್ರಮಾಣವಚನ ಕಾರ್ಯಕ್ರಮ ನಡೆದಿದ್ದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.

ಆದರೆ ಈ ಪ್ರಮುಖ ಸಮಾರಂಭಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗೈರಾಗಿದ್ದರು. 2028ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದ ಸಿದ್ದರಾಮಯ್ಯ, ಮಧ್ಯಾಹ್ನವೇ ತಮ್ಮ ಆಪ್ತರೊಂದಿಗೆ ಪ್ರಮಾಣ ವಚನ ಸಮಾರಂಭಕ್ಕೆ ತಾನು ಹೋಗುವುದಿಲ್ಲ ಎಂದು ಅವರು ಹೇಳಿದ್ದರು. ಈ ಗೈರಿಗೆ ನಿಖರ ಕಾರಣ ಮಾತ್ರ ಏನೆಂಬುದು ಇನ್ನೂ ಸ್ಪಷ್ಟವಾಗಿಲ್ಲ. ನೂತನ ಸಚಿವರ ಪದಗ್ರಹಣಕ್ಕೆ ಮಾಜಿ ಸಿಎಂ ಗೈರಾಗಿರುವುದು ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಒಳಗಿನ ಆಂತರಿಕ ಅಸಮಾಧಾನವನ್ನು ಎತ್ತಿ ತೋರಿಸುತ್ತಿದೆಯೇ ಎಂಬ ಚರ್ಚೆಗಳು ರಾಜಕೀಯ ಪಡಸಾಲೆಯಲ್ಲಿ ಜೋರಾಗಿ ನಡೆಯುತ್ತಿವೆ.

ಮೊದಲಿಗೆ ಮಾಜಿ ಮುಖ್ಯಮಂತ್ರಿ ದಿವಂಗತ ಧರ್ಮಸಿಂಗ್‌ ಅವರ ಪುತ್ರ ಡಾ. ಅಜಯ್‌ ಸಿಂಗ್‌ ಅವರು ಪ್ರಮಾಣವಚನ ಸ್ವೀಕರಿಸಿದರು. ಬಳಿಕ ಕ್ರಮವಾಗಿ ಎಚ್‌.ಸಿ.ಬಾಲಕೃಷ್ಣ, ಕೆ.ಎಸ್‌.ಬಸವಂತಪ್ಪ, ಬಸವರಾಜ್‌ ರಾಯರೆಡ್ಡಿ, ಎನ್‌.ಚಲುವರಾಯಸ್ವಾಮಿ, ಲಕ್ಷ್ಮಣ್‌ ಸವದಿ, ಮಧು ಬಂಗಾರಪ್ಪ, ಎಸ್‌.ಎಸ್‌.ಮಲ್ಲಿಕಾರ್ಜುನ್‌, ಬಿ.ನಾಗೇಂದ್ರ, ಪಿ.ಎಂ.ನರೇಂದ್ರಸ್ವಾಮಿ, ಸಿ.ಪುಟ್ಟರಂಗಶೆಟ್ಟಿ, ಟಿ.ರಘುಮೂರ್ತಿ, ರಿಜ್ವಾನ್‌ ಅರ್ಷದ್‌, ರುದ್ರಪ್ಪ ಲಮಾಣಿ, ಸಂತೋಷ್‌ ಲಾಡ್‌, ಶಿವಲಿಂಗೇಗೌಡ, ಶಿವರಾಜ್‌ ತಂಗಡಗಿ, ವಿಜಯಾನಂದ ಕಾಶಪ್ಪನವರ್‌, ಜಮೀರ್‌ ಅಹ್ಮದ್‌ ಖಾನ್ ಅವರು ಪ್ರಮಾಣವಚನ ಸ್ವೀಕರಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಂಪುಟ ವಿಸ್ತರಣೆಯಲ್ಲಿ ಬಿಗ್ ಟ್ವಿಸ್ಟ್: ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 19 ಶಾಸಕರು; ಕೊನೆ ಕ್ಷಣದಲ್ಲಿ ಒಬ್ಬರಿಗೆ ಕೊಕ್!

ನೂತನ ಸಚಿವರ ಪಟ್ಟಿ ಪ್ರಕಟ ಬೆನ್ನಲ್ಲೇ ಭುಗಿಲೆದ್ದ ಆಕ್ರೋಶ; ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ!

ಕಾವೇರಿ ವಿವಾದ: ನೀರು ಬಿಟ್ಟರೂ ಕರ್ನಾಟಕದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ತಮಿಳುನಾಡು; ಇಲ್ಲಿದೆ ಕಾರಣ...

ಜಂತರ್‌ ಮಂತರ್ ಪ್ರತಿಭಟನೆ ಎಫೆಕ್ಟ್‌: ಆ. 6 ರಂದು Gen Z, ಜನರಲ್ ಆಲ್ಫಾ ಜೊತೆ RSS ಮುಖ್ಯಸ್ಥ ಮೋಹನ್ ಭಾಗವತ್ ಸಂವಾದ

Flipkart Freedom Sale: Samsung Galaxy F70 Pro ಬಿಡುಗಡೆ, ವಿಶೇಷ ಬೆಲೆಯಲ್ಲಿ ಲಭ್ಯ!