ಮುಖ್ಯಮಂತ್ರಿ ಡಿಕೆ ಶಿವಕುಮಾರ್ - ಲಕ್ಷ್ಮಣ್ ಸವದಿ 
ರಾಜಕೀಯ

ಪ್ರಭಾವಿ ನಾಯಕರ ಲೆಕ್ಕಾಚಾರ ತಲೆಕೆಳಗು; ಲಕ್ಷ್ಮಣ್ ಸವದಿಗೆ ಒಲಿದ ಸಚಿವ ಸ್ಥಾನ, ಡಿಕೆಶಿ ಆಪ್ತೆ ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಆಘಾತ!

ಲಕ್ಷ್ಮಣ್ ಸವದಿಗೆ ಸಂಪುಟ ಸ್ಥಾನ ನೀಡುವ ಮೂಲಕ, ಕಾಂಗ್ರೆಸ್ ಪಕ್ಷವು ಹಿಂದಿನ ಚುನಾವಣೆಯ ಸಮಯದಲ್ಲಿ ಅವರಿಗೆ ನೀಡಿದ ಭರವಸೆಯನ್ನು ಈಡೇರಿಸಿದೆ.

ಬೆಂಗಳೂರು: ಕಳೆದ ತಿಂಗಳಿನಿಂದ ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದ ಸಚಿವ ಸಂಪುಟ ವಿಸ್ತರಣೆ ಕಸರತ್ತಿಗೆ ಕೊನೆಗೂ ತೆರೆ ಬಿದ್ದಿದ್ದು, ಡಿಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟದಲ್ಲಿ ಕಾಂಗ್ರೆಸ್‌ನ 20 ಶಾಸಕರು ಸಚಿವರಾಗಿ ಸೇರ್ಪಡೆಗೊಳ್ಳಲು ಸಜ್ಜಾಗಿದ್ದಾರೆ. ಸಚಿವ ಸ್ಥಾನಕ್ಕಾಗಿ ನಡೆದಿದ್ದ ಪೈಪೋಟಿ ನಡುವೆ ಅಥಣಿ ಕ್ಷೇತ್ರದ ಶಾಸಕ ಲಕ್ಷ್ಮಣ ಸವದಿ ಅವರು ಸಚಿವ ಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಸಿದ್ದರಾಮಯ್ಯ ನೇತೃತ್ವದ ಸಂಪುಟದಲ್ಲಿ ಬೆಳಗಾವಿ ಜಿಲ್ಲೆಯಿಂದ ಸತೀಶ್ ಜಾರಕಿಹೊಳಿ ಮತ್ತು ಲಕ್ಷ್ಮೀ ಹೆಬ್ಬಾಳಕರ್ ಅವರು ಸಚಿವರಾಗಿದ್ದರು. ಇದೀಗ ಸತೀಶ್ ಜಾರಕಿಹೊಳಿ ಅವರಿಗೆ ಮತ್ತು ಲಕ್ಷ್ಮಣ ಸವದಿ ಅವರಿಗೆ ಶಿವಕುಮಾರ್ ನೇತೃತ್ವದ ಸಂಪುಟದಲ್ಲಿಯೂ ಸಚಿವ ಸ್ಥಾನ ದೊರಕಿದೆ.

ಸಚಿವ ಸ್ಥಾನ ಪಡೆಯಲು ಶಾಸಕರಾದ ಲಕ್ಷ್ಮೀ ಹೆಬ್ಬಾಳಕರ, ಅಶೋಕ್ ಪಟ್ಟಣ, ಲಕ್ಷ್ಮಣ ಸವದಿ ಮತ್ತು ಮಹಾಂತೇಶ ಕೌಜಲಗಿ ಮತ್ತಿತರರು ಪ್ರಯತ್ನ ನಡೆಸಿದ್ದರು. ಆದರೆ, ಪ್ರಭಾವಿ ನಾಯಕರ ಎಲ್ಲ ಲೆಕ್ಕಾಚಾರಗಳನ್ನು ತಲೆಕೆಳಗಾಗಿಸಿ ಸಚಿವ ಸ್ಥಾನ ಪಡೆಯುವಲ್ಲಿ ಸವದಿ ಯಶಸ್ವಿಯಾಗಿದ್ದಾರೆ.

ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಆಪ್ತ ವಲಯದೊಂದಿಗೆ ನಿಕಟವಾಗಿ ಗುರುತಿಸಿಕೊಂಡಿರುವ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಸಚಿವ ಸ್ಥಾನ ನಿರಾಕರಿಸಿರುವುದು ಅವರ ಬೆಂಬಲಿಗರಿಗೆ ದೊಡ್ಡ ಆಘಾತವನ್ನುಂಟು ಮಾಡಿದೆ.

ಲಕ್ಷ್ಮಣ್ ಸವದಿಗೆ ಸಂಪುಟ ಸ್ಥಾನ ನೀಡುವ ಮೂಲಕ, ಕಾಂಗ್ರೆಸ್ ಪಕ್ಷವು ಹಿಂದಿನ ಚುನಾವಣೆಯ ಸಮಯದಲ್ಲಿ ಅವರಿಗೆ ನೀಡಿದ ಭರವಸೆಯನ್ನು ಈಡೇರಿಸಿದೆ.

2004, 2008 ಮತ್ತು 2023ರ ವಿಧಾನಸಭೆ ಚುನಾವಣೆಗಳಲ್ಲಿ ಅಥಣಿ ಕ್ಷೇತ್ರದಿಂದ ಗೆದ್ದಿರುವ ಸವದಿ ಅವರಿಗೆ ಒಂದು ಬಾರಿ ವಿಧಾನ ಪರಿಷತ್ ಸದಸ್ಯರಾಗಿ, ಬಿಜೆಪಿ ಸರ್ಕಾರದಲ್ಲಿ ಉಪಮುಖ್ಯಮಂತ್ರಿ ಮತ್ತು ಸಚಿವರಾಗಿಯೂ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.

ಅಥಣಿ ಕ್ಷೇತ್ರದಿಂದ ಟಿಕೆಟ್ ನಿರಾಕರಿಸಲ್ಪಟ್ಟ ನಂತರ ಅವರು ಭಾರತೀಯ ಜನತಾ ಪಕ್ಷಕ್ಕೆ (BJP) ರಾಜೀನಾಮೆ ನೀಡಿದರು ಮತ್ತು ನಂತರ 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಲ್ಲಿಸಿ ವಿಜಯ ಸಾಧಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೂತನ ಸಚಿವರ ಪಟ್ಟಿ ಪ್ರಕಟ ಬೆನ್ನಲ್ಲೇ ಭುಗಿಲೆದ್ದ ಆಕ್ರೋಶ; ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ!

ವಿದ್ಯಾರ್ಥಿ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ಗಳನ್ನು ರಾಜ್ಯಗಳು ರದ್ದು ಅಥವಾ ಹಿಂಪಡೆಯಬಹುದು: 'ಸುಪ್ರೀಂ'

ಸಚಿವ ಸಂಪುಟ ವಿಸ್ತರಣೆಯಲ್ಲಿ ಭಾರೀ ಗೊಂದಲ: ಕೊನೇ ಕ್ಷಣದಲ್ಲಿ ಮಂಕಾಳು ವೈದ್ಯಗೆ ಕಾಂಗ್ರೆಸ್ ಶಾಕ್‌; ಸಚಿವರ ಪಟ್ಟಿಯಲ್ಲಿ ಹೆಸರು ಇದ್ದರೂ ಕೈತಪ್ಪಿದ ಮಂತ್ರಿಗಿರಿ..!

ಚಾಮರಾಜನಗರ: ಸಿದ್ದರಾಮಯ್ಯ ಆಪ್ತ, ಪುಟ್ಟರಂಗಶೆಟ್ಟಿಗೆ ಎರಡನೇ ಬಾರಿ ಒಲಿದ ಸಚಿವ ಸ್ಥಾನ

ಸಚಿವ ಸಂಪುಟ ವಿಸ್ತರಣೆಗೆ ಕ್ಷಣಗಣನೆ: ಇಂದು ಸಂಜೆ 4.05 ಕ್ಕೆ ಪ್ರಮಾಣವಚನ ಕಾರ್ಯಕ್ರಮ, ನೂತನ ಸಚಿವರ ಪಟ್ಟಿ ಹೀಗಿದೆ ನೋಡಿ…