ಡಿ ಕೆ ಶಿವಕುಮಾರ್  
ರಾಜಕೀಯ

'ಶಾಸಕರು ರಾಜೀನಾಮೆ ನೀಡಿದರೆ ಎರಡೇ ನಿಮಿಷದಲ್ಲಿ ಅಂಗೀಕರಿಸುತ್ತೇನೆ': CM ಡಿ.ಕೆ. ಶಿವಕುಮಾರ್-Video

ಇಂದು ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜೀನಾಮೆ ಎಂಬುದು ರಾಜಕೀಯದ ಭಾಗವಾಗಿದ್ದು, ಅದನ್ನು ತಡೆಯಲು ಸಾಧ್ಯವಿಲ್ಲ. ರಾಜಕೀಯದಲ್ಲಿ ಮುಂದುವರಿಯಲು ಬಯಸುವವರು ಪಕ್ಷದೊಂದಿಗೆ ಉಳಿಯಬೇಕು. ಪಕ್ಷ ಇದ್ದರೆ ಎಲ್ಲವೂ ಇರುತ್ತದೆ ಎಂದು ಹೇಳಿದರು.

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ಸಿಗದಿದ್ದುದಕ್ಕೆ ಅಸಮಾಧಾನಗೊಂಡು ಕಾಂಗ್ರೆಸ್ ಶಾಸಕರಲ್ಲಿ ಯಾರಾದರೂ ರಾಜೀನಾಮೆ ನೀಡಲು ಬಯಸಿದರೆ, ಅದನ್ನು ಎರಡು ನಿಮಿಷದಲ್ಲೇ ಅಂಗೀಕರಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಇಂದು ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜೀನಾಮೆ ಎಂಬುದು ರಾಜಕೀಯದ ಭಾಗವಾಗಿದ್ದು, ಅದನ್ನು ತಡೆಯಲು ಸಾಧ್ಯವಿಲ್ಲ. ರಾಜಕೀಯದಲ್ಲಿ ಮುಂದುವರಿಯಲು ಬಯಸುವವರು ಪಕ್ಷದೊಂದಿಗೆ ಉಳಿಯಬೇಕು. ಪಕ್ಷ ಇದ್ದರೆ ಎಲ್ಲವೂ ಇರುತ್ತದೆ ಎಂದು ಹೇಳಿದರು.

ತಮ್ಮದೇ ಅನುಭವವನ್ನು ನೆನಪಿಸಿಕೊಂಡ ಡಿ ಕೆ ಶಿವಕುಮಾರ್, ಧರ್ಮಸಿಂಗ್ ಹಾಗೂ ಸಿದ್ದರಾಮಯ್ಯ ಅವರ ಅವಧಿಯಲ್ಲಿ ತಮಗೂ ಸಚಿವ ಸ್ಥಾನ ಸಿಕ್ಕಿರಲಿಲ್ಲ. ಆದರೂ ತಾವು ಎಂದಿಗೂ ರಾಜೀನಾಮೆ ನೀಡಲಿಲ್ಲ ಎಂದು ಹೇಳಿದರು. ಮಾಜಿ ಮುಖ್ಯಮಂತ್ರಿಗಳಾದ ಬಂಗಾರಪ್ಪ, ಧರ್ಮಸಿಂಗ್ ಹಾಗೂ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಉದಾಹರಣೆಗಳನ್ನು ಉಲ್ಲೇಖಿಸಿದ ಅವರು, ಅನೇಕ ಹಿರಿಯ ನಾಯಕರು ಇಂತಹ ನಿರಾಶೆಗಳನ್ನು ಎದುರಿಸಿದ ಬಳಿಕವೇ ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದಾರೆ ಎಂದು ಹೇಳಿದರು.

ಅಸಮಾಧಾನಗೊಂಡಿರುವ ಶಾಸಕರಿಗೆ ಭರವಸೆ ನೀಡಿದ ಮುಖ್ಯಮಂತ್ರಿ, ಸಚಿವ ಸಂಪುಟದಲ್ಲಿ ಅವಕಾಶ ಸಿಗದವರಿಗೆ ಮುಂಬರುವ ಮಂಡಳಿ ಮತ್ತು ನಿಗಮಗಳ ನೇಮಕಾತಿಗಳಲ್ಲಿ ಅವಕಾಶ ಕಲ್ಪಿಸುವ ಬಗ್ಗೆ ಪರಿಗಣಿಸಲಾಗುವುದು ಎಂದು ತಿಳಿಸಿದರು.

ಸಚಿವ ಸಂಪುಟ ವಿಸ್ತರಣೆ ಕುರಿತು ಕೇಳಿದ ಪ್ರಶ್ನೆಗೆ, ಈ ವಿಷಯದ ಬಗ್ಗೆ ನಿನ್ನೆ ರಾತ್ರಿ ಎಲ್ಲ ಪ್ರಶ್ನೆಗಳಿಗೆ ಉತ್ತರ ನೀಡಿದ್ದೇನೆ, ಇದಕ್ಕಿಂತ ಹೆಚ್ಚಿನದನ್ನು ಹೇಳುವುದಿಲ್ಲ ಎಂದರು.

ಈಗ ತಮ್ಮ ಆದ್ಯತೆ ಆಡಳಿತದತ್ತ ಕೇಂದ್ರೀಕೃತವಾಗಿದೆ. ನ್ಯಾನೊ ಸಮ್ಮೇಳನ ಉದ್ಘಾಟನೆ ಸೇರಿದಂತೆ ಹಲವು ಸಭೆಗಳು ನಿಗದಿಯಾಗಿವೆ ಎಂದು ತಿಳಿಸಿದರು.

ಅಲ್ಲದೆ, ಎಲ್ಲಾ ಸಚಿವರು ತಕ್ಷಣ ತಮ್ಮ ತಮ್ಮ ಜಿಲ್ಲೆಗಳಿಗೆ ತೆರಳಿ ಬರ ಹಾಗೂ ಪ್ರವಾಹ ಪರಿಸ್ಥಿತಿ, ಪರಿಹಾರ ಕ್ರಮಗಳು ಮತ್ತು ಸ್ಥಳೀಯ ಸ್ಥಿತಿಗತಿಗಳನ್ನು ಪರಿಶೀಲಿಸುವಂತೆ ಈಗಾಗಲೇ ಸೂಚನೆ ನೀಡಿರುವುದಾಗಿ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಟಿ ತ್ರಿಶಾ ಕುರಿತು ಆಕ್ಷೇಪಾರ್ಹ ಹೇಳಿಕೆ; DMK ನಾಯಕ ಉದಯನಿಧಿ ಸ್ಟಾಲಿನ್ ಪೊಲೀಸ್ ವಶಕ್ಕೆ, ತಮಿಳುನಾಡು ರಾಜಕೀಯದಲ್ಲಿ ತೀವ್ರ ಸಂಚಲನ..!

Crass, cheap and derogatory': ನಟಿ ತ್ರಿಶಾಗೆ ಅಸಭ್ಯ, ಕೀಳುಮಟ್ಟದಲ್ಲಿ ಅಪಮಾನ, ಉದಯನಿಧಿ ಸ್ಟಾಲಿನ್ ಕ್ಷಮೆಯಾಚನೆಗೆ ಖುಷ್ಬೂ ಸುಂದರ್ ಒತ್ತಾಯ!

ಹೊಸ ಸುಂಕ ನೀತಿಗೆ ಅಮೆರಿಕದಲ್ಲೇ ಭಾರಿ ವಿರೋಧ: ಭಾರತ ಸೇರಿ 59 ದೇಶಗಳ ಪರ ನಿಂತ 25 ರಾಜ್ಯಗಳು; ಟ್ರಂಪ್ ಸರ್ಕಾರಕ್ಕೆ ಕಾನೂನು ಸಂಕಷ್ಟ..!

West Asia War: ಒಪ್ಪಂದಕ್ಕೆ ಬರ್ತೀರಾ? ಇತಿಹಾಸ ಸೇರ್ತೀರಾ?; ಇರಾನ್‌ಗೆ ಟ್ರಂಪ್ ಲಾಸ್ಟ್ ವಾರ್ನಿಂಗ್..!

"ನನಗೊಬ್ಬ ಪಾಕಿಸ್ತಾನಿ ಹುಡುಗನನ್ನು ಹುಡುಕಿ ಕೊಡಿ" ಸಂಘಿ ಹೇಳಿಕೆ ಬೆನ್ನಲ್ಲೇ ಕಂಗನಾ ರಣಾವತ್ ಹಳೆಯ VIDEO ವೈರಲ್!