ಸಿಎಂ ಡಿಕೆ ಶಿವಕುಮಾರ್ 
ರಾಜಕೀಯ

ಸಂಪುಟ ವಿಸ್ತರಣೆ ಸರ್ಕಸ್ ನಂತರ ಖಾತೆ ಹಂಚಿಕೆ ಕಸರತ್ತು; ಯಾರಿಗೆ ಯಾವ ಖಾತೆ? ಇಲ್ಲಿದೆ ಸಂಪೂರ್ಣ ಪಟ್ಟಿ

ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಖಾತೆ ಹಂಚಿಕೆ ಕಸರತ್ತು ಆರಂಭವಾಗಿದ್ದು, ಯಾವ ಸಚಿವರಿಗೆ ಯಾವ ಇಲಾಖೆಯ ಜವಾಬ್ದಾರಿ ನೀಡಲಾಗುತ್ತದೆ ಎಂಬ ಕುತೂಹಲ ರಾಜಕೀಯ ವಲಯದಲ್ಲಿ ಹೆಚ್ಚಾಗಿದೆ.

ಬೆಂಗಳೂರು: ಬಹುನಿರೀಕ್ಷಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ಸೋಮವಾರ ವಿಸ್ತರಣೆಯಾಗಿದ್ದು, 19 ಕಾಂಗ್ರೆಸ್ ಶಾಸಕರು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇದೀಗ ಎಲ್ಲರ ಗಮನ ಖಾತೆ ಹಂಚಿಕೆಯತ್ತ ನೆಟ್ಟಿದೆ.

ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಖಾತೆ ಹಂಚಿಕೆ ಕಸರತ್ತು ಆರಂಭವಾಗಿದ್ದು, ಯಾವ ಸಚಿವರಿಗೆ ಯಾವ ಇಲಾಖೆಯ ಜವಾಬ್ದಾರಿ ನೀಡಲಾಗುತ್ತದೆ ಎಂಬ ಕುತೂಹಲ ರಾಜಕೀಯ ವಲಯದಲ್ಲಿ ಹೆಚ್ಚಾಗಿದೆ.

ನಿನ್ನೆ 19 ಸಚಿವರ ಪ್ರಮಾಣವಚನದೊಂದಿಗೆ ಡಿಕೆ ಶಿವಕುಮಾರ್ ಸಂಪುಟದಲ್ಲಿ ಒಟ್ಟು 33 ಸಚಿವರಿದ್ದಾರೆ. ನೂತನ ಸಚಿವರಿಗೆ ಖಾತೆ ಹಂಚಿಕೆ ಬಗ್ಗೆ ಕೂಡ ಚರ್ಚೆ ನಡೆದಿದ್ದು, ಯಾರಿಗೆ ಯಾವ ಖಾತೆ ನೀಡಲಾಗುತ್ತದೆ ಎಂಬ ಬಗ್ಗೆ ಸಂಭಾವ್ಯ ಪಟ್ಟಿ ಇಲ್ಲಿದೆ.

ನೂತನ ಸಚಿವರ ಸಂಭಾವ್ಯ ಖಾತೆಗಳು

  • ಪಿ.ಎಂ. ನರೇಂದ್ರಸ್ವಾಮಿ - ಸಮಾಜ ಕಲ್ಯಾಣ ಇಲಾಖೆ

  • ಬಸವರಾಜ ರಾಯರೆಡ್ಡಿ - ಕಾನೂನು, ಸಂಸದೀಯ ವ್ಯವಹಾರಗಳು ಹಾಗೂ ಶಾಸನ ರಚನೆ, ಪ್ರವಾಸೋದ್ಯಮ

  • ಪುಟ್ಟರಂಗಶೆಟ್ಟಿ- ಪಶುಸಂಗೋಪನೆ ಹಾಗೂ ರೇಷ್ಮೆ

  • ಎಸ್.ಎಸ್. ಮಲ್ಲಿಕಾರ್ಜುನ - ತೋಟಗಾರಿಕೆ ಹಾಗೂ ಗಣಿ ಮತ್ತು ಭೂವಿಜ್ಞಾನ

  • ಎನ್ ಚಲುಬರಾಯಸ್ವಾಮಿ- ಕೃಷಿ

  • ಕೆ ಎಂ ಶಿವಲಿಂಗೇಗೌಡ- ವಸತಿ

  • ಲಕ್ಷ್ಮಣ ಸವದಿ -ಸಹಕಾರ ಹಾಗೂ ಸಕ್ಕರೆ

  • ಮಧು ಬಂಗಾರಪ್ಪ-ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ

  • ಜಮೀರ್ ಅಹಮದ್ ಖಾನ್-ವಕ್ಫ್ ,ಹಜ್ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ

  • ಕೆ ಎನ್ ಬಸವಂತಪ್ಪ- ಪೌರಾಡಳಿತ

  • ವಿಜಯಾನಂದ ಕಾಶಪ್ಪನವರ್-ಕೈಮಗ್ಗ, ಜವಳಿ ಇಲಾಖೆ, ಕೃಷಿ ಮಾರುಕಟ್ಟೆ

  • ಅಜಯ್ ಸಿಂಗ್-ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ದಿಮೆಗಳು

  • ರುದ್ರಪ್ಪ ಲಮಾಣಿ-ಅಬಕಾರಿ ಇಲಾಖೆ

  • ಎಚ್ ಸಿ ಬಾಲಕೃಷ್ಣ-ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ

  • ರಿಜ್ವಾನ್ ಅರ್ಷದ್- ಉನ್ನತ ಶಿಕ್ಷಣ ಇಲಾಖೆ

  • ಬಿ.ನಾಗೇಂದ್ರ,-ಮೀನುಗಾರಿಕೆ, ಬಂದರು, ಒಳನಾಡು ಜಲಸಾರಿಗೆ

  • ಸಂತೋಷ್ ಎಸ್ .ಲಾಡ್- ಕಾರ್ಮಿಕ ಇಲಾಖೆ

  • ಶಿವರಾಜ ತಂಗಡಗಿ- ಹಿಂದುಳಿದ ವರ್ಗ, ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ

  • ಟಿ. ರಘುಮೂರ್ತಿ-ಪರಿಶಿಷ್ಟ ವರ್ಗಗಳ ಕಲ್ಯಾಣ

ಈ 19 ಸಚಿವರಿಗೂ ಖಾತೆ ಹಂಚಿಕೆ ಬಗ್ಗೆ ಮಹತ್ವದ ಸಭೆ ನಡೆದಿದ್ದು, ಶೀಫ್ರವೇ ಅಧಿಕೃತ ಪಟ್ಟಿ ಹೊರಬೀಳಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದ ರೈತರಿಗೆ ತಕ್ಷಣ 10 ಸಾವಿರ ಕೋಟಿ ರೂ. ಪರಿಹಾರ ಬಿಡುಗಡೆ ಮಾಡಿ: ರಾಜ್ಯ ಸರ್ಕಾರಕ್ಕೆ ಬಿ.ವೈ. ವಿಜಯೇಂದ್ರ ಆಗ್ರಹ

ಮಹಿಳೆಯರಿಗೆ ಸಿಹಿ ಸುದ್ದಿ; 'ಋತುತಾರೆ' ಯೋಜನೆ ಜಾರಿ, ರಾಯಭಾರಿಯಾಗಿ ನಟಿ ರಮ್ಯಾ

ಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದು BMTC ಕಂಡಕ್ಟರ್ ಅಟ್ಟಹಾಸ; Video ವೈರಲ್ ಬೆನ್ನಲ್ಲೇ ನಿರ್ವಾಹಕ ಅಮಾನತು!

ಮಂಡ್ಯ: ಕಾರು ಅಪಘಾತದಲ್ಲಿ ಯುವತಿ ಅನುಮಾನಾಸ್ಪದ ಸಾವು; ಬರ್ತ್‌ಡೇ ಪಾರ್ಟಿಗೆ ಕರೆದು ರೇಪ್‌ಗೆ ಯತ್ನಿಸಿ, ಕೊಲೆ ಆರೋಪ!

ಸನಾತನ ಧರ್ಮ ಟೀಕಿಸಿದ್ದ ವ್ಯಕ್ತಿಯ ಬಂಧನವಾಗಿದೆ: ಉದಯನಿಧಿ ಸ್ಟಾಲಿನ್​​​ಗೆ ಕುಟುಕಿದ BJP