ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕುರಿತು ನಾಳೆ ಬೆಳಗ್ಗೆ 10 ಗಂಟೆಗೆ ಎಲ್ಲ ವಿವರ ನೀಡುತ್ತೇನೆ ಎಂದು ಹೇಳುವ ಮೂಲಕ ಯಶವಂತರಾಯಗೌಡ ಪಾಟೀಲ ಕುತೂಹಲ ಮೂಡಿಸಿದ್ದಾರೆ.
ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ಕಳೆದ ಸೋಮವಾರ 19 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ವಿಸ್ತರಣೆಯಾಗಿತ್ತು. ಆದರೆ ಸಚಿವ ಸಂಪುಟದಲ್ಲಿ ಸ್ಥಾನ ಸಿಗದ ಶಾಸಕರು ಮತ್ತು ಅವರ ಬೆಂಬಲಿಗರ ಅಸಮಾಧಾನ, ಆಕ್ರೋಶ ಭುಗಿಲೆದ್ದಿದೆ.
ಸಚಿವ ಸಂಪುಟ ವಿಸ್ತರಣೆ ಬಗ್ಗೆ ಕೂಡ ವಿವರವಾಗಿ ನಾಳೆ ಬೆಳಗ್ಗೆ 10 ಗಂಟೆಗೆ ವಿಜಯಪುರದ ಪ್ರವಾಸಿ ಮಂದಿರದಲ್ಲಿ ಬಹಳ ಸುದೀರ್ಘವಾಗಿ ಮಾತನಾಡುತ್ತೇನೆ ಎಂದಿದ್ದಾರೆ.