ಡಿ ಕೆ ಶಿವಕುಮಾರ್, ಬಿ ಆರ್ ಪಾಟೀಲ್  
ರಾಜಕೀಯ

'ಸಾಮಾಜಿಕ ನ್ಯಾಯಕ್ಕಾಗಿ ನನ್ನ ಬದ್ಧತೆಗೆ ಸಿಕ್ಕ ಪ್ರತಿಫಲ ಇದೇನಾ?': B R ಪಾಟೀಲ್ ಬಹಿರಂಗ ಪತ್ರ

ತಮಗೆ ಸಚಿವ ಸ್ಥಾನ ನೀಡದಿರುವುದಕ್ಕೆ ಬೆಂಬಲಿಗರು ವ್ಯಕ್ತಪಡಿಸುತ್ತಿರುವ ಆಕ್ರೋಶವನ್ನು ಉಲ್ಲೇಖಿಸಿದ ಬಿ ಆರ್ ಪಾಟೀಲ್, ನನಗೂ ನೋವಾಗಿದೆ ಎಂದು ಹೇಳಿದ್ದಾರೆ.

ಕಲಬುರಗಿ: ಆಳಂದ ವಿಧಾನಸಭಾ ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಬಿ.ಆರ್. ಪಾಟೀಲ್ ಅವರಿಗೆ ಕಾಂಗ್ರೆಸ್ ಈ ಬಾರಿ ಸಚಿವ ಸಂಪುಟದಲ್ಲಿ ಸ್ಥಾನ ನೀಡದಿರುವುದಕ್ಕೆ ಅವರು ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ತಮ್ಮ ಕ್ಷೇತ್ರದ ಬೆಂಬಲಿಗರಿಗೆ ಬರೆದಿರುವ ಬಹಿರಂಗ ಪತ್ರದಲ್ಲಿ, ಸಾಮಾಜಿಕ ನ್ಯಾಯ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಉಳಿಸಲು ನಾನು ಜೀವನಪೂರ್ತಿ ಹೋರಾಡಿದ್ದಕ್ಕೆ ಸಿಕ್ಕ ಪ್ರತಿಫಲ ಇದೆಯೇ? ಕೋಮು ಮತ್ತು ವಿಭಜನಾ ಶಕ್ತಿಗಳ ವಿರುದ್ಧ ನಾನು ಅವಿರತವಾಗಿ ಹೋರಾಡಿದ್ದೇನೆ. ರಾಜ್ಯದಲ್ಲಷ್ಟೇ ಅಲ್ಲ, ದೇಶದಾದ್ಯಂತ ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದಿದ್ದೇನೆ ಎಂದು ಬರೆದಿದ್ದಾರೆ.

ತಮಗೆ ಸಚಿವ ಸ್ಥಾನ ನೀಡದಿರುವುದಕ್ಕೆ ಬೆಂಬಲಿಗರು ವ್ಯಕ್ತಪಡಿಸುತ್ತಿರುವ ಆಕ್ರೋಶವನ್ನು ಉಲ್ಲೇಖಿಸಿದ ಬಿ ಆರ್ ಪಾಟೀಲ್, ನನಗೂ ನೋವಾಗಿದೆ. ಆದರೆ ನಾನು ಕುಗ್ಗಿಲ್ಲ. ಪ್ರಜಾಪ್ರಭುತ್ವ ಉಳಿಯಬೇಕು ಮತ್ತು ಸಮಾಜದಲ್ಲಿ ಸಮಾನತೆ ಬರಬೇಕು ಎಂಬ ಉದ್ದೇಶದಿಂದ ನಾನು ನಿರಂತರ ಹೋರಾಟ ನಡೆಸುತ್ತಿದ್ದೇನೆ ಎಂದು ಹೇಳಿದ್ದಾರೆ.

ನಾನು ಮಹಾತ್ಮ ಗಾಂಧಿ, ರಾಮಮನೋಹರ್ ಲೋಹಿಯಾ, ಜಯಪ್ರಕಾಶ್ ನಾರಾಯಣ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ತತ್ವಗಳಲ್ಲಿ ದೃಢ ನಂಬಿಕೆ ಹೊಂದಿದ್ದೇನೆ. ಸಾಮಾಜಿಕ ನ್ಯಾಯಕ್ಕಾಗಿ ನಡೆಸಿದ 50 ವರ್ಷಗಳ ರಾಜಕೀಯ ಹೋರಾಟದಲ್ಲಿ ಹಲವು ಬಾರಿ ಜೈಲು ಶಿಕ್ಷೆಯನ್ನೂ ಅನುಭವಿಸಿದ್ದೇನೆ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

ಹಾರ್ಮುಜ್ ಜಲಸಂಧಿ ಒಪ್ಪಂದ ಸನ್ನಿಹಿತ, ಆದರೆ ಯಾವುದಾದರೊಂದು ದೇಶ ತನ್ನ ನಿಲುವಿನಲ್ಲಿ ಸಡಿಲಿಕೆ ತೋರಿಸಬೇಕು: ಇರಾನ್-ಯುಎಸ್

Mojtaba Khamenei ಎಲ್ಲಿದ್ದಾರೆ? ರಹಸ್ಯ ತಾಣದಲ್ಲಿ ಪರಮೋಚ್ಛ ನಾಯಕ; ಅವರ ಉಪಸ್ಥಿತಿಯೇ ನಮ್ಮ ಧೈರ್ಯ ಎಂದ Iran ಅಧ್ಯಕ್ಷ

ಅಸಮಾಧಾನಿತ ಶಾಸಕರ ಸಮಸ್ಯೆ ಆಲಿಸಿದ್ದೇವೆ, ನಾವೆಲ್ಲಾ ಒಂದು ಕುಟುಂಬ- ಸುರ್ಜೆವಾಲ; ಸಚಿವ ಸ್ಥಾನ ಹೊರತಾಗಿ ಬೇರೆ ಏನು ಕೊಟ್ಟರೂ ಒಪ್ಪಲ್ಲ- ಎಂ ಕೃಷ್ಣಪ್ಪ

Sheikh Hasina: ವಾಪಸ್ ಬಾಂಗ್ಲಾದೇಶಕ್ಕೆ ಹೋಗಲು ನಿರ್ಧರಿಸಿದ್ದೇನೆ; ನನ್ನನ್ನು ಕೊಲ್ಲಲಿ, ಜೈಲಿಗೆ ಹಾಕಲಿ - ಶೇಖ್ ಹಸೀನಾ

ಸಚಿವ ಸ್ಥಾನ ಕೋಟಿ ಕೋಟಿಗೆ ಹರಾಜು: BJPಯಿಂದ ಆಡಿಯೋ ಬಿಡುಗಡೆ; ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ