ಕೃಷ್ಣಪ್ಪ ಭೇಟಿಯಾದ ಹರಿಪ್ರಸಾದ್ 
ರಾಜಕೀಯ

ಸಮಾಧಾನಗೊಳ್ಳುವ ಪ್ರಶ್ನೆಯೇ ಇಲ್ಲ: ಸಚಿವ ಸ್ಥಾನ ಬೇಕೆ ಬೇಕು; ಯಾವುದೇ ಆಫರ್ ಕೊಟ್ರು ಬಗ್ಗದ ಎಂ. ಕೃಷ್ಣಪ್ಪ!

ಯಾವುದೇ ಕಾರಣಕ್ಕೂ ಸಮಾಧಾನ ಆಗುವ ಪ್ರಶ್ನೆಯೇ ಇಲ್ಲ, ಸಚಿವ ಸ್ಥಾನ ಕೊಡಲೇ ಬೇಕು. ಮಿಸ್ಟೇಕ್ ಆಗಿದೆ ಎಂದಿದ್ದಾರೆ, ಸರಿಪಡಿಸುತ್ತೇವೆ ಎಂದಿದ್ದಾರೆ. ಹೇಗೆ ಸರಿಪಡಿಸುತ್ತಾರೆ ಗೊತ್ತಿಲ್ಲ, ಸಚಿವ ಸ್ಥಾನ ಕೊಡಲೇಬೇಕು ಎಂದು ಕಿಡಿಕಾರಿದ್ದಾರೆ.

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ನಂತರ ಅಸಮಾಧಾನ ಮತ್ತಷ್ಟು ಭುಗಿಲೆದ್ದಿದೆ. ವಿಜಯನಗರ ಶಾಸಕ ಎಂ. ಕೃಷ್ಣಪ್ಪ ತಮಗೆ ಮಂತ್ರಿಗಿರಿ ಕೊಡಲೇಬೇಕು ಎಂದು ಪಟ್ಟುಹಿಡಿದಿದ್ದಾರೆ.

ಕೃಷ್ಣಪ್ಪ ಅವರನ್ನು ಸಮಾಧಾನ ಪಡಿಸಲು ಕೆಪಿಸಿಸಿ ಕಾರ್ಯಾಧ್ಯಕ್ಷ ಬಿ.ಕೆ. ಹರಿಪ್ರಸಾದ್ ಇಂದು ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಕೃಷ್ಣಪ್ಪರನ್ನು ಸಮಾಧಾನಪಡಿಸಲು ಹಲವು ಹುದ್ದೆಗಳನ್ನು ಆಫರ್ ಮಾಡಿದ್ದರೂ, ಅವರು ಯಾವುದನ್ನೂ ಸ್ವೀಕರಿಸದೆ ಸಚಿವ ಸ್ಥಾನವೇ ಬೇಕು ಎಂದು ಪಟ್ಟು ಹಿಡಿದಿದ್ದಾರೆ. ಇದು ಪಕ್ಷಕ್ಕೆ ಡ್ಯಾಮೇಜ್​ ಆಗುವ ಸಾಧ್ಯತೆ ಇದೆ.

ಎಂ. ಕೃಷ್ಣಪ್ಪ ಅವರ ಪುತ್ರ ಪ್ರಿಯಾಕೃಷ್ಣ ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಹುದ್ದೆ, ಇದರ ಜೊತೆಗೆ ಬಿಡಿಎ ಅಧ್ಯಕ್ಷ ಹುದ್ದೆ, ನಿಗಮ ಅಥವಾ ಮಂಡಳಿ ಅಧ್ಯಕ್ಷ ಹುದ್ದೆಗಳನ್ನು ಆಫರ್ ಮಾಡಲಾಗಿದೆ. ಆದರೆ ಅವರು ಯಾವುದಕ್ಕೂ ಒಪ್ಪುತ್ತಿಲ್ಲ. ಸಚಿವ ಸ್ಥಾನಕ್ಕಾಗಿ ಪಟ್ಟು ಹಿಡಿದಿದ್ದಾರೆ.

ಯಾವುದೇ ಕಾರಣಕ್ಕೂ ಸಮಾಧಾನ ಆಗುವ ಪ್ರಶ್ನೆಯೇ ಇಲ್ಲ, ಸಚಿವ ಸ್ಥಾನ ಕೊಡಲೇ ಬೇಕು. ಮಿಸ್ಟೇಕ್ ಆಗಿದೆ ಎಂದಿದ್ದಾರೆ, ಸರಿಪಡಿಸುತ್ತೇವೆ ಎಂದಿದ್ದಾರೆ. ಹೇಗೆ ಸರಿಪಡಿಸುತ್ತಾರೆ ಗೊತ್ತಿಲ್ಲ, ಸಚಿವ ಸ್ಥಾನ ಕೊಡಲೇಬೇಕು ಎಂದು ಕಿಡಿಕಾರಿದ್ದಾರೆ.

ಸಚಿವ ಸ್ಥಾನ ಕೈತಪ್ಪಿದ ವಿಚಾರದಲ್ಲಿ ಬೇರೆ ಯಾವುದೇ ಚರ್ಚೆಗೆ ಆಸ್ಪದವಿಲ್ಲ. ನನಗೆ ಸಚಿವ ಸ್ಥಾನ ನೀಡಲೇಬೇಕು, ಕೂಡಲೇ ನೀಡಬೇಕು. ಅದನ್ನು ಬಿಟ್ಟು ಬೇರೆ ಯಾವ ಮಾತುಕತೆಯೂ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ನಾಯಕರು ಮನೆಗೆ ಬಂದು ಹೋಗುತ್ತಿರುತ್ತಾರೆ, ಅವರೆಲ್ಲರೂ ನಮ್ಮ ಸ್ನೇಹಿತರು. ತಪ್ಪಿದೆ ಎನ್ನುವುದಕ್ಕಿಂತ ನನಗೆ ಸಚಿವ ಸ್ಥಾನ ನೀಡಬೇಕಿತ್ತು ಮತ್ತು ಅದನ್ನು ತಕ್ಷಣ ಕೊಡಬೇಕು ಅಷ್ಟೇ ಎಂದು ತಮ್ಮ ಖಡಕ್ ನಿಲುವನ್ನು ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'Islamic NATO' ಊಹಾಪೋಹಗಳಿಗೆ ಮತ್ತಷ್ಟು ಬಲ: ಹೊಸ ರಕ್ಷಣಾ ಒಪ್ಪಂದದತ್ತ ಟರ್ಕಿ-ಸೌದಿ-ಪಾಕಿಸ್ತಾನ, ಜಾಗತಿಕ ಮಟ್ಟದಲ್ಲಿ ಹೆಚ್ಚಿದ ಕುತೂಹಲ..!

'ಕಾವೇರಿ ನಮ್ಮ ಜೀವನಾಡಿ, ಈ ವಿಚಾರದಲ್ಲಿ ತುಚ್ಛ ರಾಜಕಾರಣ ಮಾಡಲು ಬಯಸಲ್ಲ: ತಮಿಳುನಾಡು ಸಿಎಂ ವಿಜಯ್..!

'ಭಾರತದ ಕಾನೂನು ಪಾಲಿಸುತ್ತಿದ್ದೀರಾ?': Metaಗೆ ಖಡಕ್ ಕ್ಲಾಸ್‌ ತೆಗೆದುಕೊಂಡ ಕೇಂದ್ರ ಸರ್ಕಾರ, ತೀವ್ರ ವಿಚಾರಣೆ

ಚೆನ್ನೈ ನಟಿ ಕೊಲೆ: ತುಂಡು ತುಂಡಾಗಿ ಸಿಕ್ಕ ದೇಹ, ರುಂಡ ನಾಪತ್ತೆ, ಹಚ್ಚೆಯಿಂದ ಬಯಲಾಯ್ತು ಗುರುತು! ಆರೋಪಿ ಸಿಕ್ಕಿದ್ದೇ ರೋಚಕ!

18 ಅಡಿ ಬಾವಿಯಲ್ಲಿ ಸಮುದ್ರದ ರೀತಿ ಅಲೆ...! ಗುಜರಾತ್‌ನಲ್ಲಿ ಬೆರಗು ಮೂಡಿಸಿದ ವಿಚಿತ್ರ ವಿದ್ಯಮಾನ; ಭೂಮಿಯೊಳಗೆ ನಡೆಯುತ್ತಿರುವುದೇನು? Video