ಸಿದ್ದರಾಮಯ್ಯ  
ರಾಜಕೀಯ

ಸುಮ್ಮನಿರುವುದು ಎಂದರೆ ಮೌನವಾಗಿರುವುದು ಎಂದರ್ಥವಲ್ಲ: ಸಿದ್ದರಾಮಯ್ಯ

ನಾನು ಮೌನವಾಗಿಲ್ಲ. ಹೆಚ್ಚು ಮಾತನಾಡುವುದಿಲ್ಲ ಅಷ್ಟೇ. ಅದನ್ನು ಮೌನ ಎಂದು ಅರ್ಥಮಾಡಿಕೊಳ್ಳಬಾರದು. ತಾವು ಈಗ ಮುಖ್ಯಮಂತ್ರಿಯಾಗಿಲ್ಲ ಎಂಬುದನ್ನೂ ಕಾಂಗ್ರೆಸ್ ನಾಯಕರು ಸ್ಪಷ್ಟಪಡಿಸಿದರು.

ಕಳೆದ ಮೇ 28ರಂದು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಬಳಿಕ ಸಿದ್ದರಾಮಯ್ಯ ಅವರು ಸಾರ್ವಜನಿಕವಾಗಿ ಹೆಚ್ಚು ಕಾಣಿಸಿಕೊಳ್ಳುತ್ತಿಲ್ಲ. ಕಳೆದ ಎರಡು ತಿಂಗಳಿಂದ ಮೌನವಾಗಿದ್ದಾರೆ ಎಂಬ ಟೀಕೆಗೆ ಪ್ರತಿಕ್ರಿಯಿಸಿದ ಅವರು, “ನಾನು ಸುಮ್ಮನಿದ್ದೇನೆ, ಆದರೆ ಖಂಡಿತವಾಗಿಯೂ ಮೌನವಾಗಿಲ್ಲ” ಎಂದು ಹೇಳಿದರು.

ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರಿಗೆ, ಅವರ ಮೌನದ ಬಗ್ಗೆ ಪತ್ರಕರ್ತರು ಪ್ರಶ್ನಿಸಿದರು.

ಅದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ನಾನು ಮೌನವಾಗಿಲ್ಲ. ಹೆಚ್ಚು ಮಾತನಾಡುವುದಿಲ್ಲ ಅಷ್ಟೇ. ಅದನ್ನು ಮೌನ ಎಂದು ಅರ್ಥಮಾಡಿಕೊಳ್ಳಬಾರದು. ತಾವು ಈಗ ಮುಖ್ಯಮಂತ್ರಿಯಾಗಿಲ್ಲ ಎಂಬುದನ್ನೂ ಕಾಂಗ್ರೆಸ್ ನಾಯಕರು ಸ್ಪಷ್ಟಪಡಿಸಿದರು.

ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದ ಜವಾಬ್ದಾರಿ ನನ್ನ ಮೇಲಿತ್ತು. ಈಗ ನಾನು ಕೇವಲ ಶಾಸಕ ಎಂದು ಅವರು ಹೇಳಿದರು.

ಮೇ 28ರಂದು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಬಳಿಕ ಸಿದ್ದರಾಮಯ್ಯ ಅವರು ಸಾರ್ವಜನಿಕವಾಗಿ ಹೆಚ್ಚು ಸಕ್ರಿಯರಾಗದೆ, ತಮ್ಮ ಚಟುವಟಿಕೆಗಳನ್ನು ಸೀಮಿತಗೊಳಿಸಿದ್ದಾರೆ. ತಮ್ಮ ಸಹವರ್ತಿ ಕುರುಬ ಸಮುದಾಯದ ನಾಯಕ ಶಿವಣ್ಣನವರ್ ಅವರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಕುರಿತು ಕೇಳಿದಾಗ, ಕಾಂಗ್ರೆಸ್ ಹೈಕಮಾಂಡ್ ಏನು ನಿರ್ಧರಿಸುತ್ತದೆ ಎಂಬುದು ನನಗೆ ಗೊತ್ತಿಲ್ಲ ಎಂದರು.

ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದಕ್ಕೆ ಕಾಂಗ್ರೆಸ್ ಟೀಕೆಗೆ ಗುರಿಯಾಗಿರುವ ಕುರಿತು ಕೇಳಿದಾಗ, ಈ ಬಗ್ಗೆ ತಾವು ಹೈಕಮಾಂಡ್ ಜತೆ ಮಾತನಾಡಿರುವುದಾಗಿ ಸಿದ್ದರಾಮಯ್ಯ ತಿಳಿಸಿದರು.

ಒಬ್ಬ ಮಹಿಳಾ ಸಚಿವರು ಇರಲಿದ್ದಾರೆ. ನಾನು ಹೈಕಮಾಂಡ್‌ಗೆ ಈ ಬಗ್ಗೆ ತಿಳಿಸಿದ್ದೇನೆ ಎಂದರು.

ಡಿಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟದಲ್ಲಿ ಸದ್ಯ ಒಂದು ಸಚಿವ ಸ್ಥಾನ ಖಾಲಿಯಿದೆ. ಈ ಸ್ಥಾನವನ್ನು ಮಹಿಳೆಯರಿಗೆ ನೀಡಲಾಗುವುದು ಎಂದು ಪಕ್ಷದ ನಾಯಕರು ತಿಳಿಸಿದ್ದಾರೆ.

ಆದರೆ ಶಿವಣ್ಣನವರ್ ಹಾಗೂ ವಿಜಯನಗರದ ಶಾಸಕ ಎಂ. ಕೃಷ್ಣಪ್ಪ ಅವರನ್ನು ಸಚಿವ ಸಂಪುಟಕ್ಕೆ ಸೇರ್ಪಡೆಗೊಳಿಸಲು ಪಕ್ಷ ನಿರ್ಧರಿಸಿದರೆ, ಅಸಮಾಧಾನಗೊಂಡಿರುವ ಕೆಲವು ಹಾಲಿ ಸಚಿವರನ್ನು ಕೈಬಿಟ್ಟು ಡಿಕೆ ಶಿವಕುಮಾರ್ ಸಣ್ಣ ಪ್ರಮಾಣದ ಸಂಪುಟ ಪುನಾರಚನೆ ಮಾಡಬೇಕಾಗಬಹುದು.

ಮಹಿಳಾ ಸಚಿವರಿಲ್ಲದಿರುವುದಕ್ಕೆ ಕಾಂಗ್ರೆಸ್ ವಿರುದ್ಧ ಬಿಜೆಪಿ ಟೀಕೆ ಮಾಡುತ್ತಿರುವುದನ್ನೂ ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡರು.

ಬಿಜೆಪಿಗೆ ಯಾವ ನೈತಿಕತೆ ಇದೆ? ಅಲ್ಪಸಂಖ್ಯಾತರು ಈ ದೇಶದ ನಾಗರಿಕರಲ್ಲವೇ? ಅವರ ಸಂಪುಟದಲ್ಲಿ ಒಬ್ಬ ಅಲ್ಪಸಂಖ್ಯಾತ ಸಚಿವರೂ ಇರಲಿಲ್ಲ ಎಂದರು.

ಸಿದ್ದರಾಮಯ್ಯ ಅವರು ಬಲಪಡಿಸಲು ಪ್ರಯತ್ನಿಸಿದ ಅಹಿಂದ (ಅಲ್ಪಸಂಖ್ಯಾತರು, ಹಿಂದುಳಿದವರು ಮತ್ತು ದಲಿತರು) ಸಾಮಾಜಿಕ-ರಾಜಕೀಯ ಒಕ್ಕೂಟದ ಕುರಿತು ಕೇಳಿದಾಗ, ಸೆಪ್ಟೆಂಬರ್ 6ರಂದು ನಡೆಯಲಿರುವ ಹಿಂದುಳಿದ ವರ್ಗಗಳ ಒಕ್ಕೂಟದ ಬೆಳ್ಳಿ ಹಬ್ಬದ ಕಾರ್ಯಕ್ರಮದಲ್ಲಿ ಭಾಗವಹಿಸುವುದಾಗಿ ತಿಳಿಸಿದರು. ಅಹಿಂದ, ಶೋಷಿತ ಸಮುದಾಯಗಳನ್ನು ಸಂಘಟಿಸುವ ಕೆಲಸ ನಡೆಯುತ್ತಿದೆ ಎಂದರು.

2028ರ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯತಂತ್ರದಲ್ಲಿ ಸಿದ್ದರಾಮಯ್ಯ ಅವರು ಮಹತ್ವದ ಪಾತ್ರ ವಹಿಸಲಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ನಾಯಕರೊಬ್ಬರು ಹೇಳಿದ್ದಾರೆ.

ಬಹುಶಃ ಇದೇ ಕಾರಣಕ್ಕಾಗಿ ಇತ್ತೀಚೆಗೆ ಡಿಕೆ ಶಿವಕುಮಾರ್ ಅವರು ಸಿದ್ದರಾಮಯ್ಯ ಅವರನ್ನು ಪದೇಪದೇ ಹೊಗಳುತ್ತಿದ್ದಾರೆ. ಕರ್ನಾಟಕದಾದ್ಯಂತ ವ್ಯಾಪಕವಾಗಿ ಇರುವ ಮೂರು ಪ್ರಮುಖ ಸಮುದಾಯಗಳೆಂದರೆ ದಲಿತರು, ಮುಸ್ಲಿಮರು ಮತ್ತು ಕುರುಬರು. ಸಿದ್ದರಾಮಯ್ಯ ಅವರು ಈ ಮೂರು ಸಮುದಾಯಗಳ ಬೆಂಬಲವನ್ನು ಹೊಂದಿದ್ದಾರೆ ಎಂದು ಕಾಂಗ್ರೆಸ್ ನಾಯಕರೊಬ್ಬರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮಮತಾ ಆಪ್ತ ಹಾಗೂ ಮಾಜಿ ಉಪಸಭಾಪತಿ ಅಸೀಶ್ ಬ್ಯಾನರ್ಜಿ TMC ಕಚೇರಿಯಲ್ಲಿ ಶವವಾಗಿ ಪತ್ತೆ!

ಮುಂದಿನ ವರ್ಷ ಆಗಸ್ಟ್ ವೇಳೆಗೆ ಮೇಕೆದಾಟು ಯೋಜನೆಗೆ ಶಂಕುಸ್ಥಾಪನೆ: ಸಚಿವ ಎನ್. ಚಲುವರಾಯಸ್ವಾಮಿ

ಮೋದಿನೇ ಡಿ.ಕೆ - ಡಿ.ಕೆ ಅಂತಿದ್ದಾರೆ ನೀವ್ಯಾಕೆ ತಲೆ ಕೆಡಿಸಿಕೊಳ್ಳುತ್ತಿದ್ದೀರಾ? ಫ್ರೀಡಂ ಹಬ್ಬದಲ್ಲಿ ಡಿ.ಕೆ ಶಿವಕುಮಾರ್ ಟಾಂಗ್

ನಿಂತಿಲ್ಲ ಸೋನಿಯಾ ಗಾಂಧಿ ವಿರುದ್ಧ 'ವಂದೇ ಮಾತರಂ' ಟೀಕೆ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಂಚಿಕೊಂಡ ವಿಡಿಯೊದಲ್ಲಿ ಏನಿದೆ?-Video

ಹನೂರು ಶೂಟೌಟ್ ಪ್ರಕರಣ: ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ; ಸಿಎಂ ಡಿ ಕೆ ಶಿವಕುಮಾರ್