ಆರ್. ಅಶೋಕ್ 
ರಾಜಕೀಯ

ಚಾಮರಾಜನಗರ ಶೂಟೌಟ್‌ ಕೇಸ್: ‘ಶೂಟೌಟ್‌ ಅಗತ್ಯವಿತ್ತೇ?; ನ್ಯಾಯಾಂಗ ತನಿಖೆಗೆ ವಿಪಕ್ಷಗಳ ಆಗ್ರಹ

ಈ ಘಟನೆ ಕುರಿತು ಸ್ಥಳೀಯರು ನೀಡುತ್ತಿರುವ ಮಾಹಿತಿ ಮತ್ತು ಅರಣ್ಯಾಧಿಕಾರಿಗಳ ಹೇಳಿಕೆಗಳಲ್ಲಿ ವ್ಯತ್ಯಾಸವಿದೆ. ಹೀಗಾಗಿ ಇಲಾಖಾ ತನಿಖೆಯಿಂದ ಸತ್ಯ ಹೊರಬರಲು ಸಾಧ್ಯವಿಲ್ಲ. ನ್ಯಾಯಾಂಗ ತನಿಖೆಯೇ ಅಗತ್ಯ ಎಂದು ಒತ್ತಾಯಿಸಿದರು.

ಬೆಂಗಳೂರು: ಚಾಮರಾಜನಗರ ಜಿಲ್ಲೆಯಲ್ಲಿ ಮೂವರು ಶಂಕಿತ ಬೇಟೆಗಾರರನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಅವರು ನ್ಯಾಯಾಂಗ ತನಿಖೆಗೆ ಆಗ್ರಹಿಸಿದ್ದಾರೆ. ಅರಣ್ಯಾಧಿಕಾರಿಗಳು ಗುಂಡು ಹಾರಿಸುವ ಅಗತ್ಯವಿತ್ತೇ ಎಂದು ಅವರು ಪ್ರಶ್ನಿಸಿದ್ದಾರೆ.

ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗುಂಡೇಟಿನಿಂದ ಮೃತಪಟ್ಟ ಮೂವರ ಎದೆ ಭಾಗಕ್ಕೆ ಗುಂಡು ತಗುಲಿದೆ ಎನ್ನಲಾಗುತ್ತಿದೆ. ಗುಂಡಿನ ದಾಳಿ ನಡೆದ ಸಂದರ್ಭಗಳ ಬಗ್ಗೆ ಹಲವು ಅನುಮಾನಗಳಿವೆ. ಪೊಲೀಸರು ಮಹಜರು ಪೂರ್ಣಗೊಳಿಸುವ ಮುನ್ನವೇ ಮೃತದೇಹಗಳನ್ನು ಮೈಸೂರಿಗೆ ಸ್ಥಳಾಂತರಿಸಲಾಗಿದೆ ಎಂದು ಆರೋಪಿಸಿದರು.

ಈ ಘಟನೆ ಕುರಿತು ಸ್ಥಳೀಯರು ನೀಡುತ್ತಿರುವ ಮಾಹಿತಿ ಮತ್ತು ಅರಣ್ಯಾಧಿಕಾರಿಗಳ ಹೇಳಿಕೆಗಳಲ್ಲಿ ವ್ಯತ್ಯಾಸವಿದೆ. ಹೀಗಾಗಿ ಇಲಾಖಾ ತನಿಖೆಯಿಂದ ಸತ್ಯ ಹೊರಬರಲು ಸಾಧ್ಯವಿಲ್ಲ. ನ್ಯಾಯಾಂಗ ತನಿಖೆಯೇ ಅಗತ್ಯ ಎಂದು ಒತ್ತಾಯಿಸಿದರು.

ಗುಂಡಿನ ದಾಳಿಯಲ್ಲಿ ಭಾಗಿಯಾಗಿರುವ ಅಧಿಕಾರಿಗಳನ್ನು ತನಿಖೆ ಪೂರ್ಣಗೊಳ್ಳುವವರೆಗೆ ಕರ್ತವ್ಯದಿಂದ ದೂರವಿಡಬೇಕು. ಮೃತರ ಬಳಿ ಇದ್ದ ಶಸ್ತ್ರಾಸ್ತ್ರಗಳು, ಮಾಂಸ ಹಾಗೂ ಅವರ ಕ್ರಿಮಿನಲ್ ಹಿನ್ನೆಲೆಯ ಬಗ್ಗೆಯೂ ಸ್ಪಷ್ಟ ಮಾಹಿತಿ ನೀಡಬೇಕು ಎಂದು ಒತ್ತಾಯಿಸಿದರು.

ಮೃತರು ಚೀಲಗಳಲ್ಲಿ ಮಾಂಸ ಸಾಗಿಸುತ್ತಿದ್ದರು ಎಂಬ ಆರೋಪದ ಕುರಿತು ಪ್ರತಿಕ್ರಿಯಿಸಿ, ಯಾವ ಮಾಂಸ ಪತ್ತೆಯಾಗಿದೆ, ಎಷ್ಟು ಶಸ್ತ್ರಾಸ್ತ್ರಗಳು ಇದ್ದವು ಎಂಬ ಬಗ್ಗೆ ಸರಿಯಾದ ಮಾಹಿತಿ ನೀಡಲಾಗಿಲ್ಲ. “ಮೂವರು ಏಕಾಏಕಿ ಬೇಟೆಗಾರರಾಗಿ ಅರಣ್ಯಾಧಿಕಾರಿಗಳ ಮೇಲೆ ಗುಂಡು ಹಾರಿಸಲು ಮುಂದಾಗಲು ಸಾಧ್ಯವೇ? ಅವರಿಗೆ ಈ ಹಿಂದೆ ಯಾವುದೇ ಅಪರಾಧ ಹಿನ್ನೆಲೆ ಇತ್ತು ಎಂದು ಯಾರೂ ಹೇಳಿಲ್ಲ ಎಂದು ಪ್ರಶ್ನಿಸಿದರು.

ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಸ್ಥಳಕ್ಕೆ ಭೇಟಿ ನೀಡಿ, ಘಟನೆ ನಿಜವಾಗಿಯೂ ಎನ್‌ಕೌಂಟರ್ ಆಗಿತ್ತೇ ಮತ್ತು ಗುಂಡು ಹಾರಿಸುವ ಅಗತ್ಯವಿತ್ತೇ ಎಂಬುದನ್ನು ಜನರಿಗೆ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು.

ಈ ಘಟನೆ ಕುರಿತು ಸಚಿವರು ಸಭೆ ಕರೆದು ಕ್ರಮ ಕೈಗೊಳ್ಳಬೇಕಿತ್ತು. ಆದರೆ ಅವರು ಈ ವಿಚಾರದಲ್ಲಿ ಆಸಕ್ತಿ ತೋರುತ್ತಿಲ್ಲ ಎಂದು ಅಶೋಕ್ ಆರೋಪಿಸಿದರು. “ಸಚಿವರು ಕೂಡಲೇ ಸ್ಥಳಕ್ಕೆ ತೆರಳಿ ಜನರ ಮುಂದೆಯೇ ಸತ್ಯವನ್ನು ತಿಳಿಸಬೇಕು. ಶೂಟೌಟ್‌ ಅಗತ್ಯವಿತ್ತೇ ಎಂಬುದನ್ನು ಸ್ಪಷ್ಟಪಡಿಸಬೇಕು” ಎಂದು ಅವರು ಒತ್ತಾಯಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬೆಂಗಳೂರಿನ ಕ್ಲಾರೆನ್ಸ್ ಶಾಲೆಯಲ್ಲಿ H1N1 ಫ್ಲೂ ಆತಂಕ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗೈರು, ಕಬಾಬ್ ಅಂಗಡಿಗಳ ತೆರವಿಗೆ ಆಗ್ರಹ!

ಪರೀಕ್ಷೆ ಅಕ್ರಮ; ಜಾರ್ಖಂಡ್ ಸಿಎಂ ಸೊರೇನ್, ರಾಹುಲ್ ಗಾಂಧಿ, ತೇಜಸ್ವಿ ಯಾದವ್ ಪ್ರತಿಕೃತಿ ದಹಿಸಿ JPSC-JSSC ಆಕಾಂಕ್ಷಿಗಳ ಪ್ರತಿಭಟನೆ

NLSIU ಘಟಿಕೋತ್ಸವ: NALSAR ಮಾದರಿಯಲ್ಲಿ ಮುಖ್ಯ ನ್ಯಾಯಮೂರ್ತಿಗಳಿಗೆ ಆಹ್ವಾನ ವಿರೋಧಿಸಿದ ಬೆಂಗಳೂರು ಉನ್ನತ ಕಾನೂನು ಕಾಲೇಜು!

ಪಂಜಾಬ್: ತಪ್ಪಿದ ಭಾರಿ ಅನಾಹುತ; ಉಗ್ರ ದಾಳಿ ಸಂಚು ವಿಫಲ, 690 ಗ್ರಾಂ IED ಪೊಲೀಸ್ ವಶಕ್ಕೆ

SIR ಪ್ರಕ್ರಿಯೆ ಯಶಸ್ಸು: ಬಿಹಾರ ಚುನಾವಣೆ ಅಮೆರಿಕ, ಇಂಗ್ಲೆಂಡ್, ಫ್ರಾನ್ಸ್ ಮತ್ತು ಜಪಾನ್‌ಗಳನ್ನು ಮೀರಿಸಿದೆ: CEC ಜ್ಞಾನೇಶ್ ಕುಮಾರ್