ಆರ್ಎಸ್ಎಸ್ ವಿರುದ್ಧ ಟೀಕೆ ಮಾಡುವ ಮೂಲಕ ಕಾಂಗ್ರೆಸ್ ನಾಯಕರು ಬಡ್ತಿ ಪಡೆಯುತ್ತಾರೆ ಎಂದು ಬಿಜೆಪಿ ನಾಯಕ ಸಿ.ಟಿ. ರವಿ ಆರೋಪಿಸಿದ್ದಾರೆ. ಆರ್ಎಸ್ಎಸ್ ನ್ನು ‘ಸಾವಿರ ತಲೆಗಳ ವಿಷಪೂರಿತ ಹಾವು’ ಎಂದು ಯತೀಂದ್ರ ಸಿದ್ದರಾಮಯ್ಯ ನೀಡಿದ್ದ ಹೇಳಿಕೆಯನ್ನು ಅವರು ಖಂಡಿಸಿದ್ದಾರೆ.
ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು ಆರ್ಎಸ್ಎಸ್ ನ್ನು ಕೋಮುವಾದ ಮತ್ತು ಜಾತೀಯತೆಯಿಂದ ಪ್ರೇರಿತವಾಗಿರುವ ‘ಸಾವಿರ ತಲೆಗಳ ವಿಷಪೂರಿತ ಹಾವು’ ಎಂದು ಟೀಕಿಸಿದ್ದರು.
ಆಗಸ್ಟ್ 15ರಂದು ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವ ವೇಳೆ ಯತೀಂದ್ರ ಈ ಹೇಳಿಕೆ ನೀಡಿದ್ದಾರೆ. ಅವರ ಭಾಷಣದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಅಲ್ಲದೆ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರ್ಯಾಲಿ ಉದ್ದೇಶಿಸಿ ಮಾತನಾಡಿದ್ದ ಸ್ಥಳವನ್ನು ‘ಶುದ್ಧೀಕರಣ’ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ, ಆರ್ಎಸ್ಎಸ್, ಬಿಜೆಪಿ ಹಾಗೂ ಶ್ರೀರಾಮಸೇನೆ ಸಾರ್ವಜನಿಕವಾಗಿ ಮಲ್ಲಿಕಾರ್ಜುನ ಖರ್ಗೆ ಅವರಲ್ಲಿ ಕ್ಷಮೆಯಾಚಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.