ರಾಹುಲ್ ಗಾಂಧಿ - ಮಲ್ಲಿಕಾರ್ಜುನ ಖರ್ಗೆ 
ರಾಜಕೀಯ

ಕೈ ಪಾಳಯದಲ್ಲಿ ಸದ್ಯಕ್ಕಿಲ್ಲ ಸಂಪುಟ ಸರ್ಜರಿ: ವದಂತಿಗಳ ಅಲ್ಲಗಳೆದ ಹೈಕಮಾಂಡ್..!

ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಲ್ಲಿ ಸಚಿವರ ನೇಮಕ ಅಥವಾ ಸಂಪುಟದಿಂದ ಕೈಬಿಡುವ ಪ್ರಕ್ರಿಯೆಗೆ ಸಂಬಂಧಿಸಿದ ಕಡತಗಳು ಎಐಸಿಸಿ ಅಧ್ಯಕ್ಷರ ಅನುಮೋದನೆಗೆ ಬರಬೇಕು. ಆದರೆ, ಕರ್ನಾಟಕದಿಂದ ಈವರೆಗೆ ಅಂತಹ ಯಾವುದೇ ಕಡತ ತಮ್ಮ ಬಳಿಗೆ ಬಂದಿಲ್ಲ.

ಬೆಂಗಳೂರು: ರಾಜ್ಯ ರಾಜಕೀಯ ವಲಯದಲ್ಲಿ ಕಳೆದ ಕೆಲವು ದಿನಗಳಿಂದ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಸಚಿವ ಸಂಪುಟ ಬದಲಾವಣೆ ಅಥವಾ ಪುನಾರಚನೆಯ ವದಂತಿಗಳಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬ್ರೇಕ್ ಹಾಕಿದ್ದಾರೆ.

ರಾಜ್ಯ ಸಚಿವ ಸಂಪುಟದಿಂದ ಕೆಲವರನ್ನು ಕೈಬಿಡುವುದು ಅಥವಾ ಹೊಸಬರನ್ನು ಸೇರಿಸಿಕೊಳ್ಳುವ ಕುರಿತು ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ಖರ್ಗೆ ಸ್ಪಷ್ಟಪಡಿಸಿದ್ದಾರೆ.

ಗುರುವಾರ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವರನ್ನು ಕೈಬಿಡುವ ಅಥವಾ ಹೊಸಬರನ್ನು ಸಂಪುಟಕ್ಕೆ ಸೇರಿಸುವ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ. ಮಾಧ್ಯಮಗಳ ಬಳಿ ಮಾಹಿತಿ ಇದ್ದರೆ ತಿಳಿಸಬಹುದು ಎಂದು ಹೇಳಿದರು.

ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಲ್ಲಿ ಸಚಿವರ ನೇಮಕ ಅಥವಾ ಸಂಪುಟದಿಂದ ಕೈಬಿಡುವ ಪ್ರಕ್ರಿಯೆಗೆ ಸಂಬಂಧಿಸಿದ ಕಡತಗಳು ಎಐಸಿಸಿ ಅಧ್ಯಕ್ಷರ ಅನುಮೋದನೆಗೆ ಬರಬೇಕು. ಆದರೆ, ಕರ್ನಾಟಕದಿಂದ ಈವರೆಗೆ ಅಂತಹ ಯಾವುದೇ ಕಡತ ತಮ್ಮ ಬಳಿಗೆ ಬಂದಿಲ್ಲ. ಯಾವುದಾದರೂ ಬೆಳವಣಿಗೆ ನಡೆದರೆ ನಿಮಗೆ ಫೋನ್ ಮಾಡುತ್ತೇನೆ ಎಂದು ತಿಳಿಸಿದರು.

ನೇಪಾಳ ಪ್ರವಾಹ ಪೀಡಿತರ ರಕ್ಷಣೆಗೆ ಆಗ್ರಹ

ಇದೇ ವೇಳೆ ನೇಪಾಳದಲ್ಲಿ ಉಂಟಾಗಿರುವ ದಿಢೀರ್ ಪ್ರವಾಹದಿಂದಾಗಿ ಕನ್ನಡಿಗರು ಸೇರಿದಂತೆ ನೂರಾರು ಭಾರತೀಯ ಪ್ರವಾಸಿಗರು ಮತ್ತು ಯಾತ್ರಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದು, ಈ ಕುರಿತು ಮಲ್ಲಿಕಾರ್ಜುನ ಖರ್ಗೆ ಅವರು ತೀವ್ರ ಕಳವಳ ವ್ಯಕ್ತಪಡಿಸಿದರು.

ಸಂತ್ರಸ್ತರ ಸುರಕ್ಷಿತ ರಕ್ಷಣೆ ಹಾಗೂ ಮೃತರ ಕುಟುಂಬಗಳಿಗೆ ಸೂಕ್ತ ಪರಿಹಾರ ಧನ ಒದಗಿಸುವಂತೆ ಕೋರಿ ಪ್ರಧಾನಿ ಮೋದಿ ಅವರಿಗೆ ಅಧಿಕೃತ ಪತ್ರ ಬರೆಯುವುದಾಗಿ ತಿಳಿಸಿದ್ದಾರೆ.

ಭಾರತ ಮತ್ತು ನೇಪಾಳ ನಡುವೆ ಆಳವಾದ ಸಾಂಸ್ಕೃತಿಕ ಬಾಂಧವ್ಯ ಇರುವುದರಿಂದ, ಕೇಂದ್ರ ಸರ್ಕಾರವು ನೇಪಾಳದ ಆಡಳಿತಕ್ಕೂ ರಕ್ಷಣಾ ಕಾರ್ಯಗಳಿಗಾಗಿ ಹೆಚ್ಚಿನ ನೆರವು ನೀಡಬೇಕು ಎಂದು ಒತ್ತಾಯಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ-ಟಿಬೆಟ್ ಗಡಿಯಲ್ಲಿ ಜಲಪ್ರಳಯ: ಸಾವಿನ ಸಂಖ್ಯೆ 469ಕ್ಕೆ ಏರಿಕೆ; 1,400ಕ್ಕೂ ಹೆಚ್ಚು ಜನ ನಾಪತ್ತೆ, ಮತ್ತೊಂದು ಪ್ರವಾಹದ ಭೀತಿ..!

US-Iran ಸಂಘರ್ಷ ಉಲ್ಬಣ: ನೌಕಾ ದಿಗ್ಬಂಧನ ಮುಂದುವರಿದರೆ ಶೇ.100ರಷ್ಟು ಪ್ರತೀಕಾರ; ‘ನೆತನ್ಯಾಹು ನರಕಕ್ಕೆ’: ಟ್ರಂಪ್‌ಗೆ Tehran ಖಡಕ್ ಎಚ್ಚರಿಕೆ

ಪ್ರವಾಹದ ಅಬ್ಬರಕ್ಕೆ ನೇಪಾಳ ತತ್ತರ; ಸಂಪರ್ಕಕ್ಕೆ ಸಿಗದೆ 290 ಭಾರತೀಯರು, ರಕ್ಷಣಾ ಕಾರ್ಯಾಚರಣೆ ಚುರುಕು..!

ಸಿಲಿಕಾನ್ ಸಿಟಿಯಲ್ಲಿ ಮಧ್ಯರಾತ್ರಿ ಗುಂಡಿನ ಸದ್ದು; ಮಾರಕಾಸ್ತ್ರ ಹಿಡಿದು ಅಬ್ಬರಿಸುತ್ತಿದ್ದ ರೌಡಿಶೀಟರ್ ಹೆಡೆಮುರಿ ಕಟ್ಟಿದ ಬೆಂಗಳೂರಿನ ಪೊಲೀಸರು

Nepal Floods: ಸಾವಿನ ಸಂಖ್ಯೆ 359ಕ್ಕೆ ಏರಿಕೆ; 288 ಭಾರತೀಯರು ಸೇರಿ 826 ಮಂದಿ ನಾಪತ್ತೆ; ಮತ್ತೆ ಪ್ರವಾಹ ಭೀತಿ! ಹೊಸ ಸರೋವರ ಪತ್ತೆ!