ಸಿದ್ದರಾಮಯ್ಯ ನಿವಾಸಕ್ಕೆ ಬಿಜೆಪಿ ನಾಯಕರ ಭೇಟಿ  
ರಾಜಕೀಯ

ಏನಾಗ್ತಿದೆ ಕರ್ನಾಟಕ ರಾಜಕೀಯದಲ್ಲಿ ಬೆಳವಣಿಗೆ ?: ಸಿದ್ದರಾಮಯ್ಯ ನಿವಾಸಕ್ಕೆ ಸಾಲು ಸಾಲು ಬಿಜೆಪಿ ನಾಯಕರ ಭೇಟಿ!

ಬುಧವಾರ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಸಿದ್ದರಾಮಯ್ಯರನ್ನ ಭೇಟಿ ಮಾಡಿ ಕೆಲ ಕಾಲ ಚರ್ಚಿಸಿದ್ದರು. ಇದರ ಬೆನ್ನಲ್ಲೇ ನಿನ್ನೆ ಗುರುವಾರ ಮಾಜಿ ಸಚಿವ ಹಾಗೂ ಶಾಸಕ ರಮೇಶ್ ಜಾರಕಿಹೊಳಿ, ಬಿಜೆಪಿ ಮಾಜಿ ಶಾಸಕ ನರಸಿಂಹ ನಾಯಕ (ರಾಜುಗೌಡ) ಆಗಮಿಸಿ ಕೆಲಹೊತ್ತು ಮಾತುಕತೆ ನಡೆಸಿದರು.

ಕರ್ನಾಟಕದ ರಾಜಕೀಯ ಸಮೀಕರಣಗಳಲ್ಲಿ ಮತ್ತೆ ಬದಲಾವಣೆಯ ಲಕ್ಷಣಗಳು ಕಾಣಿಸಿಕೊಳ್ಳುತ್ತಿವೆ. ಹಿರಿಯ ಬಿಜೆಪಿ ನಾಯಕರುಗಳಾದ ಸಿ.ಟಿ. ರವಿ ಹಾಗೂ ರಮೇಶ್ ಜಾರಕಿಹೊಳಿ ಅವರು ಕಳೆದ ಎರಡು ದಿನಗಳಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನ ಅವರ ಕಾವೇರಿ ನಿವಾಸದಲ್ಲಿ ಭೇಟಿಯಾಗಿರುವುದು ರಾಜಕೀಯ ವಲಯದಲ್ಲಿ ಹಲವು ಊಹಾಪೋಹಗಳಿಗೆ ಕಾರಣವಾಗಿದೆ.

ಬುಧವಾರ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಸಿದ್ದರಾಮಯ್ಯರನ್ನ ಭೇಟಿ ಮಾಡಿ ಕೆಲ ಕಾಲ ಚರ್ಚಿಸಿದ್ದರು. ಇದರ ಬೆನ್ನಲ್ಲೇ ನಿನ್ನೆ ಗುರುವಾರ ಮಾಜಿ ಸಚಿವ ಹಾಗೂ ಶಾಸಕ ರಮೇಶ್ ಜಾರಕಿಹೊಳಿ, ಬಿಜೆಪಿ ಮಾಜಿ ಶಾಸಕ ನರಸಿಂಹ ನಾಯಕ (ರಾಜುಗೌಡ), ಸಚಿವರಾದ ನರೇಂದ್ರ ಸ್ವಾಮಿ, ಶಿವಲಿಂಗೇಗೌಡ ಅವರು ಆಗಮಿಸಿ ಕೆಲಹೊತ್ತು ಮಾತುಕತೆ ನಡೆಸಿದರು.

1 ಗಂಟೆ ಕಾಲ ಜಾರಕಿಹೊಳಿ ಜೊತೆ ಚರ್ಚೆ

ಬಿಜೆಪಿ ಶಾಸಕ ರಮೇಶ್​ ಜಾರಕಿಹೊಳಿ ಅವರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಒಂದು ತಾಸಿಗೂ ಹೆಚ್ಚು ಕಾಲ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚಿಸಿದ್ದಾರೆ ಎಂದು ತಿಳಿದು ಬಂದಿದ್ದು, ಇದೇ ವೇಳೆ ಸಿದ್ದರಾಮಯ್ಯ ಅವರನ್ನ ಸಕ್ರಿಯ ರಾಜಕಾರಣದಲ್ಲೇ ಮುಂದುವರೆಯಬೇಕು ಎಂದು ಒತ್ತಾಯಿಸಿದ್ದಾರೆ ಎನ್ನಲಾಗಿದೆ.

ಇತ್ತೀಚಿನ ತಿಂಗಳುಗಳಲ್ಲಿ ಬಹುತೇಕ ಮೌನವಾಗಿದ್ದ ಸಿದ್ದರಾಮಯ್ಯ ಅವರು ಇದೀಗ ಮತ್ತೆ ರಾಜಕೀಯ ಚರ್ಚೆಯ ಕೇಂದ್ರವಾಗಿದ್ದಾರೆ. ಒಳ ಮೀಸಲಾತಿ, ಸಾಮಾಜಿಕ ನ್ಯಾಯ ಹಾಗೂ ದಲಿತ ಮುಖ್ಯಮಂತ್ರಿ ಮಾಡುವ ಬೇಡಿಕೆ ಕುರಿತು ಅವರು ಬಲವಾಗಿ ಮಾತನಾಡಿದ್ದಾರೆ.

ಜತೆಗೆ, ಡಾ. ಜಿ. ಪರಮೇಶ್ವರ್ ಅವರನ್ನು ಉಪ ಮುಖ್ಯಮಂತ್ರಿಯಾಗಿ ಮಾಡಿದ್ದರಲ್ಲಿ ತಮ್ಮ ಪಾತ್ರವಿತ್ತು ಎಂದು ಸಿದ್ದರಾಮಯ್ಯ ನೀಡಿರುವ ಹೇಳಿಕೆಗಳು ರಾಜಕೀಯ ಊಹಾಪೋಹಗಳಿಗೆ ಮತ್ತೊಂದು ಆಯಾಮವನ್ನು ನೀಡಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ-ಟಿಬೆಟ್ ಗಡಿಯಲ್ಲಿ ಜಲಪ್ರಳಯ: ಸಾವಿನ ಸಂಖ್ಯೆ 469ಕ್ಕೆ ಏರಿಕೆ; 1,400ಕ್ಕೂ ಹೆಚ್ಚು ಜನ ನಾಪತ್ತೆ, ಮತ್ತೊಂದು ಪ್ರವಾಹದ ಭೀತಿ..!

US-Iran ಸಂಘರ್ಷ ಉಲ್ಬಣ: ನೌಕಾ ದಿಗ್ಬಂಧನ ಮುಂದುವರಿದರೆ ಶೇ.100ರಷ್ಟು ಪ್ರತೀಕಾರ; ‘ನೆತನ್ಯಾಹು ನರಕಕ್ಕೆ’: ಟ್ರಂಪ್‌ಗೆ Tehran ಖಡಕ್ ಎಚ್ಚರಿಕೆ

ಪ್ರವಾಹದ ಅಬ್ಬರಕ್ಕೆ ನೇಪಾಳ ತತ್ತರ; ಸಂಪರ್ಕಕ್ಕೆ ಸಿಗದೆ 290 ಭಾರತೀಯರು, ರಕ್ಷಣಾ ಕಾರ್ಯಾಚರಣೆ ಚುರುಕು..!

ಸಿಲಿಕಾನ್ ಸಿಟಿಯಲ್ಲಿ ಮಧ್ಯರಾತ್ರಿ ಗುಂಡಿನ ಸದ್ದು; ಮಾರಕಾಸ್ತ್ರ ಹಿಡಿದು ಅಬ್ಬರಿಸುತ್ತಿದ್ದ ರೌಡಿಶೀಟರ್ ಹೆಡೆಮುರಿ ಕಟ್ಟಿದ ಬೆಂಗಳೂರಿನ ಪೊಲೀಸರು

Nepal Floods: ಸಾವಿನ ಸಂಖ್ಯೆ 359ಕ್ಕೆ ಏರಿಕೆ; 288 ಭಾರತೀಯರು ಸೇರಿ 826 ಮಂದಿ ನಾಪತ್ತೆ; ಮತ್ತೆ ಪ್ರವಾಹ ಭೀತಿ! ಹೊಸ ಸರೋವರ ಪತ್ತೆ!