ಡಿಕೆ ಶಿವಕುಮಾರ್ - ರವಿಚಂದ್ರನ್ 
ರಾಜಕೀಯ

CM ಡಿಕೆಶಿ ಬಾಲ್ಯ ಸ್ನೇಹಿತ, ನಟ ರವಿಚಂದ್ರನ್‌ಗೆ MLC ಸ್ಥಾನ? ರಾಜಕೀಯ ಅಖಾಡಕ್ಕೆ ‘ಕ್ರೇಜಿ ಸ್ಟಾರ್’ ಎಂಟ್ರಿ ಸಾಧ್ಯತೆ

ಇತ್ತೀಚಿಗಷ್ಟೇ ನಟ ರವಿಚಂದ್ರನ್‌ ಅವರು ತಮ್ಮ ಬಾಲ್ಯದ ಸ್ನೇಹಿತ, ಸಿಎಂ ಡಿಕೆ ಶಿವಕುಮಾರ್‌ ಅವರನ್ನು ಭೇಟಿ ಮಾಡಿದ್ದರು. ಈ ವಿಚಾರ ರಾಜ್ಯದ ಜನರ ಗಮನ ಸೆಳೆದಿತ್ತು.

ಬೆಂಗಳೂರು: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಬಾಲ್ಯದ ಸ್ನೇಹಿತ, ಕನ್ನಡದ ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ‘ಕ್ರೇಜಿ ಸ್ಟಾರ್’ ವಿ. ರವಿಚಂದ್ರನ್ ಅವರನ್ನು ಕಾಂಗ್ರೆಸ್, ವಿಧಾನ ಪರಿಷತ್ತಿಗೆ ಆಯ್ಕೆ ಮಾಡುವುದು ಬಹುತೇಕ ಖಚಿತವಾಗಿದೆ.

ಇತ್ತೀಚಿಗಷ್ಟೇ ನಟ ರವಿಚಂದ್ರನ್‌ ಅವರು ತಮ್ಮ ಬಾಲ್ಯದ ಸ್ನೇಹಿತ, ಸಿಎಂ ಡಿಕೆ ಶಿವಕುಮಾರ್‌ ಅವರನ್ನು ಭೇಟಿ ಮಾಡಿದ್ದರು. ಈ ವಿಚಾರ ರಾಜ್ಯದ ಜನರ ಗಮನ ಸೆಳೆದಿತ್ತು. ಅಲ್ಲದೆ, ಈ ಭೇಟಿಯ ಹಿಂದಿನ ಉದ್ದೇಶವೇನು ಎಂದು ನಟನ ಅಭಿಮಾನಿಗಳೂ ಸಹ ತಲೆ ಕೆಡಿಸಿಕೊಂಡಿದ್ದರು. ಇದೀಗ ಕ್ರೇಜಿ ಸ್ಟಾರ್ ರವಿಚಂದ್ರನ್ ಅವರು ರಾಜಕೀಯ ಅಖಾಡ ಪ್ರವೇಶಿಸುತ್ತಿರುವ ವಿಚಾರ ಬಹಿರಂಗವಾಗಿದೆ.

ಕನ್ನಡ ಚಿತ್ರರಂಗದಲ್ಲಿ ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಅಪಾರ ಕೊಡುಗೆ ನೀಡಿರುವ ರವಿಚಂದ್ರನ್ ಅವರ ಕಲಾ ಸೇವೆಯನ್ನು ಗುರುತಿಸಿ ಕಾಂಗ್ರೆಸ್ ಸರ್ಕಾರ ಅವರನ್ನು ವಿಧಾನ ಪರಿಷತ್ ಗೆ ನಾಮ ನಿರ್ದೇಶನ ಮಾಡಲು ನಿರ್ಧರಸಿದೆ ಎನ್ನಲಾಗಿದೆ.

ಡಿಕೆ ಶಿವಕುಮಾರ್ ಅವರ ಕ್ಲಾಸ್‌ಮೇಟ್ ಆಗಿರುವ ರವಿಚಂದ್ರನ್ ಅವರ ಹೆಸರನ್ನು ಸಾಂಸ್ಕೃತಿಕ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಾಮನಿರ್ದೇಶನ ಮಾಡಲು ಕಾಂಗ್ರೆಸ್ ಹೈಕಮಾಂಡ್‌ ಗ್ರೀನ್ ಸಿಗ್ನಲ್ ನೀಡಿದ್ದು, , ಶೀಘ್ರದಲ್ಲೇ ಅಧಿಕೃತ ಘೋಷಣೆ ಹೊರಬೀಳುವ ಸಾಧ್ಯತೆಯಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಾಗೇಂದ್ರ ರಾಜೀನಾಮೆ ವಿಚಾರದಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ವಾಗ್ದಾಳಿ; 'ದಲಿತ' ಚಂದ್ರಶೇಖರ್ ಕುಟುಂಬಕ್ಕೆ ನ್ಯಾಯ ಸಿಕ್ಕಿದೆಯೇ? ಆರ್ ಅಶೋಕ್ ಪ್ರಶ್ನೆ!

Nepal Floods: ಭೀಕರ ಪ್ರವಾಹದ ಬಳಿಕ ನೇಪಾಳಕ್ಕೆ ಮತ್ತೊಂದು ಅಪಾಯ! 2 ಸರೋವರಗಳಲ್ಲಿ ಅಪಾರ ನೀರು!

'ಕುಮಾರಸ್ವಾಮಿ ತಮ್ಮ ಹೆಂಡ್ತಿ ಫೋನ್ ಟ್ಯಾಪಿಂಗ್ ಮಾಡಿದ್ದರು, ನಿನ್ನ ಪತ್ನಿ ಮೇಲೆಯೇ ನಂಬಿಕೆ ಇಲ್ಲ, ಇನ್ನೂ...?': ಸಚಿವ ಬಾಲಕೃಷ್ಣ

ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆ ಹೊರತಾಗಿಯೂ ಬಿಜೆಪಿ ಪಾದಯಾತ್ರೆ ಮುಂದುವರಿಕೆ: ಬಿ. ಶ್ರೀರಾಮುಲು

ಪ್ರವಾಹದ ರೌದ್ರಾವತಾರ: ನೇಪಾಳದಿಂದ ಕೊಚ್ಚಿಬಂದ ಮತ್ತಷ್ಟು ಶವಗಳು, ಗಂಡಕ್ ನದಿಯಲ್ಲಿ 3, ಮಹಾರಾಜ್‌ಗಂಜ್‌ನಲ್ಲಿ 4 ಮೃತದೇಹ ಪತ್ತೆ!