ಆರ್ ಅಶೋಕ್ 
ರಾಜಕೀಯ

ಗೃಹಲಕ್ಷ್ಮಿ ಯೋಜನೆಗೆ 3 ವರ್ಷ: ‘ಇದು ಮಹಿಳಾ ಸಬಲೀಕರಣವಲ್ಲ, ದೊಡ್ಡ ಹಗರಣ’; ಆರ್. ಅಶೋಕ್ ವಾಗ್ದಾಳಿ

ಕಳೆದ ಮೂರು ವರ್ಷಗಳಿಂದ ಗೃಹಲಕ್ಷ್ಮಿ ಯೋಜನೆಯ ಹೆಸರಿನಲ್ಲಿ ಸರ್ಕಾರ ಭ್ರಷ್ಟಾಚಾರ, ಅಕ್ರಮ ಮತ್ತು ಹಣದ ದುರುಪಯೋಗದಲ್ಲಿ ತೊಡಗಿದೆ. ಇಂತಹ ಪರಿಸ್ಥಿತಿಯಲ್ಲಿ ಮೂರನೇ ವರ್ಷಾಚರಣೆಯನ್ನು ಯಾವ ಆಧಾರದ ಮೇಲೆ ಆಚರಿಸಲಾಗುತ್ತಿದೆ?

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆಗೆ ಮೂರು ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ವಾಗ್ವಾದ ತೀವ್ರಗೊಂಡಿದೆ.

ಯೋಜನೆಯ ಮೂರು ವರ್ಷಗಳ ಸಂಭ್ರಮಾಚರಣೆಯನ್ನು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ತೀವ್ರವಾಗಿ ಖಂಡಿಸಿದ್ದು, ಇದನ್ನು "ನಾಚಿಕೆಗೇಡಿನ ಮಹಾ ಹಗರಣ" ಎಂದು ಬಣ್ಣಿಸಿದ್ದಾರೆ.

ಯೋಜನೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿದ ಅವರು, ಹಲವು ಲೋಪಗಳ ನಡುವೆಯೂ ಸರ್ಕಾರ ಯೋಜನೆಯ ಮೂರನೇ ವರ್ಷಾಚರಣೆ ಮಾಡುತ್ತಿರುವುದನ್ನು ಪ್ರಶ್ನಿಸಿದ್ದಾರೆ.

ಜೂನ್‌ವರೆಗೆ 1,10,562 ಮೃತ ಫಲಾನುಭವಿಗಳ ಖಾತೆಗಳಿಗೆ ರೂ.117.31 ಕೋಟಿ ಜಮೆಯಾಗಿತ್ತು ಎಂದು ಆರೋಪಿಸಿದ ಅವರು, ಜೀವಂತ ಫಲಾನುಭವಿಗಳಿಗೆ ಮಾತ್ರ ಸರ್ಕಾರ ಸಮಯಕ್ಕೆ ಸರಿಯಾಗಿ ಹಣ ಪಾವತಿಸಲು ಸಾಧ್ಯವಾಗುತ್ತಿಲ್ಲ ಎಂದು ಟೀಕಿಸಿದರು.

ನೈಜ ಫಲಾನುಭವಿಗಳಿಗೆ ಮಾಸಿಕ ಕಂತುಗಳು ವಿಳಂಬವಾಗುತ್ತಿವೆ ಎಂದು ಆರೋಪಿಸಿದ ಅಶೋಕ್, ಯೋಜನೆಯಲ್ಲಿನ ಅಕ್ರಮಗಳಿಗೆ ಹೊಣೆಗಾರಿಕೆಯನ್ನು ನಿಗದಿಪಡಿಸಿದ ಬಳಿಕವಷ್ಟೇ ಸರ್ಕಾರ ವಾರ್ಷಿಕೋತ್ಸವ ಆಚರಿಸಬೇಕಿತ್ತು ಎಂದು ಒತ್ತಾಯಿಸಿದ್ದಾರೆ.

ಇದು ಮಹಿಳಾ ಸಬಲೀಕರಣವಲ್ಲ, “ದೊಡ್ಡ ಹಗರಣ” ಎಂದು ಆರೋಪಿಸಿದ ಅವರು, ಮಾಸಿಕ ಗೌರವಧನ ಪಡೆಯಲು ಮಹಿಳಾ ಫಲಾನುಭವಿಗಳು ಕಚೇರಿಯಿಂದ ಕಚೇರಿಗೆ ಅಲೆಯುವಂತಾಗಿದೆ ಎಂದರು.

ಕಳೆದ ಮೂರು ವರ್ಷಗಳಿಂದ ಗೃಹಲಕ್ಷ್ಮಿ ಯೋಜನೆಯ ಹೆಸರಿನಲ್ಲಿ ಸರ್ಕಾರ ಭ್ರಷ್ಟಾಚಾರ, ಅಕ್ರಮ ಮತ್ತು ಹಣದ ದುರುಪಯೋಗದಲ್ಲಿ ತೊಡಗಿದೆ. ಇಂತಹ ಪರಿಸ್ಥಿತಿಯಲ್ಲಿ ಮೂರನೇ ವರ್ಷಾಚರಣೆಯನ್ನು ಯಾವ ಆಧಾರದ ಮೇಲೆ ಆಚರಿಸಲಾಗುತ್ತಿದೆ? ಇದು “ನಾಚಿಕೆಗೇಡಿನ ಸಂಗತಿ” ಎಂದು ಕಿಡಿಕಾರಿದ್ದಾರೆ.

ಇದೇ ವೇಳೆ ಸರ್ಕಾರದ ಹಣ ಸೋರಿಕೆಯಾಗುವುದನ್ನು ತಡೆಯಲು ವಿಫಲವಾಗಿರುವ ಸರ್ಕಾರ, ಹೊಸ ಪರಿಶೀಲನಾ ವ್ಯವಸ್ಥೆಗಾಗಿ ಹೆಚ್ಚುವರಿಯಾಗಿ ರೂ.20 ಕೋಟಿ ಸಾರ್ವಜನಿಕ ಹಣ ಖರ್ಚು ಮಾಡಲು ಮುಂದಾಗಿರುವುದನ್ನೂ ಅವರು ಪ್ರಶ್ನಿಸಿದ್ದಾರೆ.

ಏತನ್ಮಧ್ಯೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹಲಕ್ಷ್ಮಿ ಯೋಜನೆಗೆ ಮೂರು ವರ್ಷ ಪೂರ್ಣಗೊಂಡಿರುವುದಕ್ಕೆ ಭಾನುವಾರ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಯೋಜನೆಯು ರಾಜ್ಯದ ಕೋಟ್ಯಂತರ ಮಹಿಳೆಯರಿಗೆ ಆರ್ಥಿಕ ನೆರವು, ಆತ್ಮವಿಶ್ವಾಸ ಮತ್ತು ಹೆಚ್ಚಿನ ಸ್ವಾವಲಂಬನೆಯನ್ನು ಒದಗಿಸಿದೆ ಎಂದು ಹೇಳಿದರು.

ಮಹಿಳೆಯರ ಸಬಲೀಕರಣ ಮತ್ತು ಗೌರವಕ್ಕೆ ಸರ್ಕಾರದ ಬದ್ಧತೆಯನ್ನು ಗೃಹಲಕ್ಷ್ಮಿ ಯೋಜನೆ ಪ್ರತಿಬಿಂಬಿಸುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಲಾರಕ್ ದ್ವೀಪದ ಮೇಲಿನ ದಾಳಿಗೆ ಪ್ರತೀಕಾರ: ಜೋರ್ಡಾನ್‌ನ ಅಮೆರಿಕದ ಸೇನಾ ನೆಲೆಗಳ ಮೇಲೆ ಇರಾನ್ ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ!

ನಾಗೇಂದ್ರ ರಾಜೀನಾಮೆಗೆ ರಾಜ್ಯಪಾಲರ ಅಂಗೀಕಾರ: ಸಂಪುಟದ ಎರಡು ಖಾಲಿ ಸ್ಥಾನ ಭರ್ತಿಗೆ ದೆಹಲಿಗೆ ತೆರಳಿದ ಸಿಎಂ ಡಿಕೆಶಿ!

ಮಧ್ಯಪ್ರದೇಶ: ಚಿತ್ರಕೂಟದಲ್ಲಿ 2 ದಶಕಗಳಲ್ಲೇ ಅತ್ಯಂತ ಭೀಕರ ಪ್ರವಾಹ, ಉಕ್ಕಿ ಹರಿದ ಮಂದಾಕಿನಿ ನದಿ; 1,000 ಜನರ ರಕ್ಷಣೆ

ಕೃಷ್ಣ ಜನ್ಮಾಷ್ಟಮಿಗೂ ಮುನ್ನ ಮಥುರಾದಲ್ಲಿ ಬಿಗಿ ಭದ್ರತೆ

ಉದ್ಯಾನವನದ 5% ಭೂಮಿ ಪರಭಾರೆಗೆ ವಿರೋಧ; ಲಾಲ್‌ಬಾಗ್ ನಲ್ಲಿ ಜನಾಂದೋಲನ; ಉದ್ಯಾನ ರಕ್ಷಣೆ ಅಪರಾಧವಾದರೆ ಪ್ರತಿದಿನ ಅಪರಾಧ ಮಾಡ್ತೇನೆ- ತೇಜಸ್ವಿ ಸೂರ್ಯ