ಕಾಂಗ್ರೆಸ್ ಟ್ಟೀಟ್ 
ರಾಜಕೀಯ

ಈ ಬಾರಿ ಬಜೆಟ್ ನಲ್ಲಿ ನಮಗೆ ನ್ಯಾಯಯುತ ಪಾಲು ಬೇಕೇ ಬೇಕು: ಕಾಂಗ್ರೆಸ್ ಆಗ್ರಹ

ಸಾಕು ಕೇಂದ್ರದ ಅನ್ಯಾಯ, ಬೇಕು ಕರ್ನಾಟಕಕ್ಕೆ ನ್ಯಾಯ. ಕರ್ನಾಟಕಕ್ಕೆ ವಿಶೇಷ ಯೋಜನೆಗಳಿಲ್ಲ, ಕೇಂದ್ರ ಯೋಜನೆಗಳಿಗೆ ಪೂರಕ ಅನುದಾನವಿಲ್ಲ, ತೆರಿಗೆ ಹಂಚಿಕೆಯಲ್ಲಿ ನ್ಯಾಯವಿಲ್ಲ, ಇದು ಕಳೆದ ಕೆಲವು ವರ್ಷಗಳಿಂದ ಕರ್ನಾಟಕದ ಪಾಲಿನ ಕೇಂದ್ರ ಬಜೆಟ್ಟಿನ ಚಿತ್ರಣವಾಗಿದೆ.

ಬೆಂಗಳೂರು: ಕೇಂದ್ರ ಸರ್ಕಾರದ 2026-2027ನೇ ಸಾಲಿನ ಬಜೆಟ್ ಮಂಡನೆಗೆ ಕ್ಷಣಗಣನೆ ಶುರುವಾಗಿದ್ದು, ಇದರ ಬೆನ್ನಲ್ಲೇ ಈ ಬಾರಿ ಬಜೆಟ್ ನಲ್ಲಿ ನಮಗೆ ನ್ಯಾಯಯುತ ಪಾಲು ಬೇಕೇ ಬೇಕು ಕಾಂಗ್ರೆಸ್ ಆಗ್ರಹಿಸಿದೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ರಾಜ್ಯ ಕಾಂಗ್ರೆಸ್, ಈ ಬಾರಿ ಬಜೆಟ್ ನಲ್ಲಿ ನಮಗೆ ನ್ಯಾಯಯುತ ಪಾಲು ಬೇಕೇ ಬೇಕು. ನಾವು ಕೇಳುತ್ತಿರುವುದು ನಮ್ಮ ಹಕ್ಕನ್ನೇ ಹೊರತು ಭಿಕ್ಷೆಯನ್ನಲ್ಲ ಎಂದು ಹೇಳಿದೆ.

ಸಾಕು ಕೇಂದ್ರದ ಅನ್ಯಾಯ, ಬೇಕು ಕರ್ನಾಟಕಕ್ಕೆ ನ್ಯಾಯ. ಕರ್ನಾಟಕಕ್ಕೆ ವಿಶೇಷ ಯೋಜನೆಗಳಿಲ್ಲ, ಕೇಂದ್ರ ಯೋಜನೆಗಳಿಗೆ ಪೂರಕ ಅನುದಾನವಿಲ್ಲ, ತೆರಿಗೆ ಹಂಚಿಕೆಯಲ್ಲಿ ನ್ಯಾಯವಿಲ್ಲ, ಇದು ಕಳೆದ ಕೆಲವು ವರ್ಷಗಳಿಂದ ಕರ್ನಾಟಕದ ಪಾಲಿನ ಕೇಂದ್ರ ಬಜೆಟ್ಟಿನ ಚಿತ್ರಣವಾಗಿದೆ.

ಈ ಬಾರಿ ಬಜೆಟ್ ನಲ್ಲಿ ನಮಗೆ ನ್ಯಾಯಯುತ ಪಾಲು ಬೇಕೇ ಬೇಕು. ನಾವು ಕೇಳುತ್ತಿರುವುದು ನಮ್ಮ ಹಕ್ಕನ್ನೇ ಹೊರತು ಭಿಕ್ಷೆಯನ್ನಲ್ಲ ಎಂದು ತಿಳಿಸಿದೆ.

ಕೇಂದ್ರ ಸರ್ಕಾರ ಕನ್ನಡಿಗರಿಗೆ ಅಕ್ಷರಶಃ ನಾಮ ಇಡುತ್ತಿದೆ. ಇದರಲ್ಲಿ ಅನುಮಾನವೇ ಇಲ್ಲ.ರಾಜ್ಯಕ್ಕೆ ವಿಶೇಷ ಯೋಜನೆಗಳನ್ನು ಘೋಷಿಸಿಲ್ಲ ಎಂಬುದು ಒಂದೆಡೆಯಾದರೆ, ಕೇಂದ್ರ ಸರ್ಕಾರದ ಯೋಜನೆಗಳಲ್ಲೂ ಸರಿಯಾಗಿ ಅನುದಾನ ನೀಡುತ್ತಿಲ್ಲ. ಇದರಿಂದ ರಾಜ್ಯ ಸರ್ಕಾರಕ್ಕೆ 23,402 ಕೋಟಿ ರೂ. ಹೊರೆಯಾಗಿದೆ. ಕೇಂದ್ರ ಸಚಿವೆ ನಿರ್ಮಲಾ ಸೀತರಾಮನ್ ಅವರು ಕಳೆದ ಐದು ವರ್ಷಗಳಿಂದ ಕರ್ನಾಟಕಕ್ಕೆ ದ್ರೋಹ ಬಗೆದಿದ್ದು, ಸಾಕು. ಈ ಬಾರಿ ಬಜೆಟ್ ನಲ್ಲಿಯಾದರೂ ಕರ್ನಾಟಕಕ್ಕೆ ನ್ಯಾಯ ಒದಗಿಸಲಿ.

14ನೇ ಹಣಕಾಸು ಆಯೋಗದಲ್ಲಿ ಕರ್ನಾಟಕಕ್ಕೆ 4.71% ತೆರಿಗೆ ಪಾಲು ನೀಡಲಾಗಿತ್ತು, ಆದರೆ 15ನೇ ಹಣಕಾಸು ಆಯೋಗದಲ್ಲಿ ಇದನ್ನು 3.64%ಗೆ ಇಳಿಸಲಾಗಿತ್ತು. ಇದರ ಪರಿಣಾಮವಾಗಿ ಕರ್ನಾಟಕಕ್ಕೆ ತೆರಿಗೆ ಪಾಲಿನಲ್ಲಿ 80 ಸಾವಿರ ಕೋಟಿ ರೂ. ನಷ್ಟವಾಗಿದೆ. ಕೇಂದ್ರ ಸರ್ಕಾರದ ಯೋಜನೆಗಳಲ್ಲಿ ಕರ್ನಾಟಕದ ಪಾಲು 50%ಗಿಂತ ಹೆಚ್ಚಾಗಿದೆ. ಕೇಂದ್ರದ ಯೋಜನೆಗಳಿಗೆ ಕೇಂದ್ರ ಸರ್ಕಾರ ಅನುದಾನ ನೀಡದ ಕಾರಣ ಕರ್ನಾಟಕಕ್ಕೆ 23,402 ಕೋಟಿ ರೂ. ಹೆಚ್ಚಿನ ಹೊರೆ ಬಿದ್ದಿದೆ.

ಕೇಂದ್ರ ಸರ್ಕಾರ ಕರ್ನಾಟಕದ ವಿರುದ್ಧ ವಿಷಕಾರುತ್ತಿದೆ. ಕೇಂದ್ರ ಸರ್ಕಾರದ ಯೋಜನೆಗಳಲ್ಲೂ ರಾಜ್ಯ ಸರ್ಕಾರ 50% ಗಿಂತ ಹೆಚ್ಚು ಅನುದಾನವನ್ನು ಭರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜ್ಯ ಸರ್ಕಾರದ ಹಣದಲ್ಲಿ ಕೇಂದ್ರ ಸರ್ಕಾರ ತನ್ನ ಯೋಜನೆ ಜಾರಿಗೊಳಿಸಿ ಹೆಸರು ಪ್ರಚಾರ ಪಡೆಯುತ್ತಿದೆ. 15ನೇ ಹಣಕಾಸು ಆಯೋಗದಲ್ಲಿ ಆಗಿರುವ ಅನ್ಯಾಯ 16ನೇ ಹಣಕಾಸು ಆಯೋಗದಲ್ಲಿ ಆಗದಿರಲಿ ಎಂದು ಹೇಳಿದೆ.

ಏತನ್ಮಧ್ಯೆ ನಿನ್ನೆ ಸದನದಲ್ಲಿ ಮಾತನಾಡಿರುವ ಸಚಿವ ಪ್ರಿಯಾಂಕ್ ಖರ್ಗೆಯವರು, ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಒಬ್ಬ ಕನ್ನಡಿಗ ಕೇಂದ್ರ ಸರ್ಕಾರಕ್ಕೆ 100 ರೂ. ತೆರಿಗೆ ನೀಡಿದರೆ, ರಾಜ್ಯಕ್ಕೆ ಮರಳಿ ಬರುವುದು ಕೇವಲ 13 ಪೈಸೆ ಮಾತ್ರ. ಅದೇ ಉತ್ತರ ಪ್ರದೇಶ, ಬಿಹಾರದವರಿಗೆ ಎರಡುಪಟ್ಟು, ಮೂರು ಪಟ್ಟು ಹೆಚ್ಚು ಹಣ ಹೋಗುತ್ತದೆ. ಒಕ್ಕೂಟ ವ್ಯವಸ್ಥೆಯಲ್ಲಿ ನಾವು ಕಟ್ಟಿದ ತೆರಿಗೆಯಲ್ಲಿ ಕನಿಷ್ಠ 25% ಅಥವಾ 30% ತೆರಿಗೆ ಮರುಹಂಚಿಕೆ ಕೇಳುವುದು ತಪ್ಪಾ? ಇದು ತೆರಿಗೆ ಭಯೋತ್ಪಾದನೆಯಲ್ಲದೇ ಮತ್ತೇನು? ಎಂದು ಪ್ರಶ್ನಿಸಿದ್ದಾರೆ.

ಶಾಸಕ ಶರತ್ ಬಚ್ಛೆಗೌಡ ಮಾತನಾಡಿ, ಕರ್ನಾಟಕ ರಾಜ್ಯ ಸರ್ಕಾರದ ಬಜೆಟ್ ನಲ್ಲಿ ಕೇಂದ್ರದ ಪಾಲು ಕೇವಲ 16% ಮಾತ್ರ. ಆದರೆ ಬಿಜೆಪಿ ಆಡಳಿತ ರಾಜ್ಯಗಳಾದ ಬಿಹಾರಕ್ಕೆ 74%, ಉತ್ತರ ಪ್ರದೇಶಕ್ಕೆ 52%, ಮಹಾರಾಷ್ಟ್ರಕ್ಕೆ 29% ಕೇಂದ್ರ ಸರ್ಕಾರ ಕೊಡುಗೆ ನೀಡಿದೆ. ಇದು ಕರ್ನಾಟಕದ ಮೇಲೆ ಕೇಂದ್ರ ಸರ್ಕಾರದ ತೆರಿಗೆ ದಬ್ಬಾಳಿಕೆಯಲ್ಲವೇ? ಎಂದು ಕಿಡಿಕಾರಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಚೀನಾಗೆ ಕೌಂಟರ್: ಇಂಡೋ-ಪೆಸಿಫಿಕ್‌ನಲ್ಲಿ ಭದ್ರತಾ ಸಹಕಾರ ಹೆಚ್ಚಿಸಲು 'Quad' ಮಹತ್ವದ ತೀರ್ಮಾನ, ಹೊಸ ಕಾರ್ಯಯೋಜನೆ ಘೋಷಿಸಿದ ಮಾರ್ಕೊ ರುಬಿಯೋ..!

ದೆಹಲಿಯಲ್ಲಿ ಸಿದ್ದರಾಮಯ್ಯ-ಡಿಕೆ.ಶಿವಕುಮಾರ್; ನಾಯಕತ್ವ ಬದಲಾವಣೆ ಊಹಾಪೋಹಗಳಿಗೆ ಬೀಳುತ್ತಾ ತೆರೆ? ಕುತೂಹಲ ಮೂಡಿಸಿದ ಕಾಂಗ್ರೆಸ್ ಸಭೆ..!

ನನಗೆ 'CM ವಿಜಯ್' ಕಂಡ್ರೆ ಅಸೂಯೆ: ಸಾರ್ವಜನಿಕವಾಗಿ ಸತ್ಯ ಒಪ್ಪಿಕೊಂಡ ಆಂಧ್ರ DCM ಪವನ್ ಕಲ್ಯಾಣ್!

‘ಸ್ವಯಂ ರಕ್ಷಣೆ’ ಹೆಸರಿನಲ್ಲಿ ಇರಾನ್ ಕ್ಷಿಪಣಿ ಉಡಾವಣೆ ತಾಣಗಳ ಮೇಲೆ ಅಮೆರಿಕಾ ವಾಯುದಾಳಿ: ಟ್ರಂಪ್ ದ್ವಿಮುಖ ನಡೆ ವಿರುದ್ಧ ಟೀಕೆ, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ..!

ತಮಿಳುನಾಡು ಸರ್ಕಾರದಿಂದ ಮತ್ತೊಂದು ಮಹತ್ವದ ಘೋಷಣೆ: ಸಣ್ಣ ರೈತರ ₹50,000 ವರೆಗಿನೆ ಬೆಳೆ ಸಾಲ ಮನ್ನಾ!

SCROLL FOR NEXT