ಬಿಜೆಪಿ- ಕಾಂಗ್ರೆಸ್  online desk
ರಾಜಕೀಯ

ದ್ವೇಷ ಭಾಷಣ-ನಕಲಿ ಸುದ್ದಿ ತಡೆಗೆ AI ತಂತ್ರಜ್ಞಾನ ಬಳಕೆ: ಸದ್ದಿಲ್ಲದೇ ಸಾರ್ವಜನಿಕರ ಮೇಲೆ ಕಣ್ಗಾವಲಿಡುವ ವ್ಯವಸ್ಥೆ ಜಾರಿ; ಸರ್ಕಾರದ ವಿರುದ್ಧ BJP ಟೀಕೆ

ಇದು ಸರ್ಕಾರಿ ಪ್ರಾಯೋಜಿತ ಕಣ್ಗಾವಲು. ಇದು ವೈಯಕ್ತಿಕ ಸ್ವಾತಂತ್ರ್ಯದ ಉಲ್ಲಂಘನೆ ಮತ್ತು ಖಾಸಗಿತನದ ಮೇಲಿನ ದಾಳಿ. ಕರ್ನಾಟಕವನ್ನು ಪೊಲೀಸ್‌ ರಾಜ್ಯವಾಗಿಸುವ ನಿಟ್ಟಿನಲ್ಲಿ ಒಂದು ಕ್ರೂರ ಹೆಜ್ಜೆ.

ಬೆಂಗಳೂರು: ದ್ವೇಷ ಭಾಷಣ, ನಕಲಿ ಸುದ್ದಿ, ತಪ್ಪು ಮಾಹಿತಿಯ ಹರಡುವಿಕೆ ಹಾಗೂ ದುರುದ್ದೇಶಿತಪೂರಿತ ಪ್ರಚಾರಗಳನ್ನು ತಡೆಗಟ್ಟಲು ಕೃತಕ ಬುದ್ಧಿಮತ್ತೆ (AI) ಆಧಾರಿತ ‘ಸೋಷಿಯಲ್ ಮೀಡಿಯಾ ಅನಾಲಿಟಿಕ್ಸ್ ಸೊಲ್ಯೂಷನ್’ ಅಭಿವೃದ್ಧಿಪಡಿಸುವ ಸರ್ಕಾರದ ನಿರ್ಧಾರವನ್ನು ಬಿಜೆಪಿ ಟೀಕಿಸಿದೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ ನಾಯಕ ಅಮಿತ್ ಮಾಳವೀಯ ಅವರು, ಸದ್ದಿಲ್ಲದೇ ಸಾರ್ವಜನಿಕರ ಮೇಲೆ ಕಣ್ಗಾವಲಿಡುವ ವ್ಯವಸ್ಥೆ ಜಾರಿ ಮಾಡುತ್ತಿದ್ದಾರೆಂದು ಟೀಕಿಸಿದ್ದಾರೆ.

ಸುಳ್ಳು ಸುದ್ದಿ ಮತ್ತು ಹಾನಿಕಾರ ಮಾಹಿತಿಯನ್ನು ಪತ್ತೆ ಮಾಡುವುದಕ್ಕಾಗಿ ಎಂದರೂ, ಜನ ಸಾಮಾನ್ಯರ ಸಾಮಾಜಿಕ ಮತ್ತು ವೈಯಕ್ತಿಕ ಡಿಜಿಟಲ್‌ ಸಂವಹನದೊಳಗೆ ಈ ತಂತ್ರಾಂಶ ಮೂಗು ತೂರಿಸುತ್ತದೆ ಎಂದು ಹೇಳಿದ್ದಾರೆ.

ಇದು ಸರ್ಕಾರಿ ಪ್ರಾಯೋಜಿತ ಕಣ್ಗಾವಲು. ಇದು ವೈಯಕ್ತಿಕ ಸ್ವಾತಂತ್ರ್ಯದ ಉಲ್ಲಂಘನೆ ಮತ್ತು ಖಾಸಗಿತನದ ಮೇಲಿನ ದಾಳಿ. ಕರ್ನಾಟಕವನ್ನು ಪೊಲೀಸ್‌ ರಾಜ್ಯವಾಗಿಸುವ ನಿಟ್ಟಿನಲ್ಲಿ ಒಂದು ಕ್ರೂರ ಹೆಜ್ಜೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಸರ್ಕಾರಕ್ಕೆ ಜನರ ಮುಕ್ತ ಅಭಿಪ್ರಾಯ ಮತ್ತು ಆಲೋಚನೆಗಳ ಬಗ್ಗೆ ಭಯವಿದೆ. ಹೀಗಾಗಿ ನಿಗಾ ಮತ್ತು ರಕ್ಷಣೆ ಇತ್ಯಾದಿ ಪದಗಳನ್ನು ಬಳಸುತ್ತಿದೆ. ಈ ಮೂಲಕ ಜನರನ್ನು ಬೆದರಿಸುವ, ಮಾಹಿತಿ ಸಂಗ್ರಹಿಸುವ ಮತ್ತು ನಿಯಂತ್ರಣದಲ್ಲಿಡಲು ಪ್ರಯತ್ನಿಸುತ್ತಿದೆ. ಇದನ್ನು ನಾಗರಿಕ ಸಮಾಜ ಒಪ್ಪಲು ಸಾಧ್ಯವಿಲ್ಲ. ಈ ಹುನ್ನಾರವನ್ನು ಬಯಲಿಗೆಳೆಯುವ ಮೂಲಕ ಪ್ರಬಲವಾಗಿ ವಿರೋಧಿಸಲಾಗುವುದು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್