ಮೋದಿ ವಿರುದ್ಧ ಬ್ಯಾನರ್ ಅಳವಡಿಸಿರುವುದು 
ರಾಜಕೀಯ

ವಿಧಾನಸೌಧದ ಮುಂದೆಯೇ ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಬ್ಯಾನರ್: ಯುವ ಕಾಂಗ್ರೆಸ್ ವಿರುದ್ಧ BJP ದೂರು, FIR ದಾಖಲು

ಯುವ ಕಾಂಗ್ರೆಸ್ ಉದ್ದೇಶಪೂರ್ವಕವಾಗಿ ಪ್ರಧಾನಿಯವರ ವ್ಯಕ್ತಿತ್ವಕ್ಕೆ ಧಕ್ಕೆ ತರಲು ಮತ್ತು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಿಸಲು ಇಂತಹ ಪೋಸ್ಟರ್‌ಗಳನ್ನು ಬಳಸುತ್ತಿದೆ. ಇದು ಕೇಂದ್ರ ಸರ್ಕಾರದ ವಿರುದ್ಧ ಜನರನ್ನು ಪ್ರಚೋದಿಸುವ ಸಂಚು.

ಬೆಂಗಳೂರು: ರಾಜ್ಯದ ಆಡಳಿತ ಶಕ್ತಿ ಕೇಂದ್ರವಾಗಿರುವ ವಿಧಾನಸೌಧದ ಮುಂದೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಭಾವಚಿತ್ರವಿರುವ ಆಕ್ಷೇಪಾರ್ಹ ಬ್ಯಾನರ್ ಅಳವಡಿಸಿ, ಸುಳ್ಳು ಮಾಹಿತಿ ಹರಡಲಾಗುತ್ತಿದೆ ಎಂದು ಆರೋಪಿಸಿ ಯುವ ಕಾಂಗ್ರೆಸ್ ವಿರುದ್ಧ ಬಿಜೆಪಿ ದೂರು ದಾಖಲಿಸಿದೆ.

ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಕಚೇರಿಗೆ ಭೇಟಿ ನೀಡಿದ ಬಿಜೆಪಿ ಶಾಸಕ ಸಿ.ಕೆ. ರಾಮಮೂರ್ತಿ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್ ಮತ್ತು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿಗೌಡ ಅವರನ್ನೊಳಗೊಂಡ ನಿಯೋಗವು ದೂರು ನೀಡಿದೆ,

ಯುವ ಕಾಂಗ್ರೆಸ್ ಉದ್ದೇಶಪೂರ್ವಕವಾಗಿ ಪ್ರಧಾನಿಯವರ ವ್ಯಕ್ತಿತ್ವಕ್ಕೆ ಧಕ್ಕೆ ತರಲು ಮತ್ತು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಿಸಲು ಇಂತಹ ಪೋಸ್ಟರ್‌ಗಳನ್ನು ಬಳಸುತ್ತಿದೆ. ಇದು ಕೇಂದ್ರ ಸರ್ಕಾರದ ವಿರುದ್ಧ ಜನರನ್ನು ಪ್ರಚೋದಿಸುವ ಸಂಚು ಎಂದು ಆರೋಪಿಸಿದ್ದಾರೆ.

ಫೆಬ್ರವರಿ 8ರ ಭಾನುವಾರದಂದು ಬೆಂಗಳೂರಿನ ಪ್ರಮುಖ ಸ್ಥಳಗಳಲ್ಲಿ ಮತ್ತು ವಿಧಾನಸೌಧದ ಮುಂಭಾಗದಲ್ಲಿ ಯುವ ಕಾಂಗ್ರೆಸ್ ವತಿಯಿಂದ ಬ್ಯಾನರ್‌ಗಳನ್ನು ಅಳವಡಿಸಲಾಗಿತ್ತು.

ಬ್ಯಾನರ್‌ಗಳಲ್ಲಿ ಪ್ರಧಾನಿ ಮೋದಿ ಅವರು ಭಾರತ-ಅಮೆರಿಕ ವ್ಯಾಪಾರ ಒಪ್ಪಂದದ ವಿಷಯದಲ್ಲಿ “ಶರಣಾಗಿದ್ದಾರೆ” ಎಂದು ಆರೋಪಿಸಲಾಗಿತ್ತು. ಅಲ್ಲದೆ, ಸಂಸತ್ತಿಗೆ ಬರಲು ಧೈರ್ಯವಿಲ್ಲದ ಪ್ರಧಾನಿ ದೇಶವನ್ನು ಹೇಗೆ ರಕ್ಷಿಸುತ್ತಾರೆ? ಎಂಬ ವಿವಾದಾತ್ಮಕ ಬರಹಗಳಿದ್ದವು ಎಂದು ಬಿಜೆಪಿ ತನ್ನ ದೂರಿನಲ್ಲಿ ತಿಳಿಸಿದೆ.

ಪ್ರಧಾನಮಂತ್ರಿಗಳಿಗೆ ಅವಮಾನ ಮಾಡಿ ಸುಳ್ಳು ಸುದ್ದಿಯ ಬ್ಯಾನರ್‌ ಮೂಲಕ ತೇಜೋವಧೆ ಮಾಡಿ, ರಾಜ್ಯದಲ್ಲಿ ಆಶಾಂತಿ ಮತ್ತು ರಾಜಕೀಯ ದಂಗೆಗಳನ್ನು ಪ್ರಚೋದಿಸುತ್ತಿರುವ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್‌‍ ಪಧಾದಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿ ಕೂಡಲೇ ಬಂಧಿಸಬೇಕಾಕೆಂದು ಒತ್ತಾಯಿಸಿದ್ದಾರೆ.

FIR ದಾಖಲು

ಈ ನಡುವೆ ದೂರು ಬೆನ್ನಲ್ಲೇ ಫ್ಲೇಕ್ಸ್ ಅಳವಡಿಸಿದವರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

ಈ ಬಗ್ಗೆ ತನಿಖೆ ಆರಂಭಿಸಲಿರುವಂತ ವಿಧಾನಸೌಧ ಠಾಣೆಯ ಪೊಲೀಸರು, ಬ್ಯಾನರ್ ಅಳವಡಿಸಿದವರ ವಿರುದ್ಧ ಸೂಕ್ತ ಕಾನೂನು ಕ್ರಮಗೊಳ್ಳುವ ಸಾಧ್ಯತೆಗಳಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

‘ಸ್ವಯಂ ರಕ್ಷಣೆ’ ಹೆಸರಿನಲ್ಲಿ ಇರಾನ್ ಕ್ಷಿಪಣಿ ಉಡಾವಣೆ ತಾಣಗಳ ಮೇಲೆ ಅಮೆರಿಕಾ ವಾಯುದಾಳಿ: ಟ್ರಂಪ್ ದ್ವಿಮುಖ ನಡೆ ವಿರುದ್ಧ ಟೀಕೆ, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ..!

ಸತತ 4ನೇ ಬಾರಿ CNG ದರ ಏರಿಕೆ: ಕೆಜಿಗೆ 2 ರೂ. ಹೆಚ್ಚಳ, ವಾಹನ ಸವಾರರಿಗೆ ಶಾಕ್‌

ಗೃಹಲಕ್ಷ್ಮಿ ಯೋಜನೆಯಲ್ಲಿ 100 ಕೋಟಿ ರೂ.ದುರ್ಬಳಕೆ: ಫಲಾನುಭವಿಗಳ ಮರುಪರಿಶೀಲನೆಗೆ ಸರ್ಕಾರ ಚಿಂತನೆ..!

ವಿಜಯ್ ಸಿಎಂ ಆಗುತ್ತಿದ್ದಂತೆಯೇ ಆಂಧ್ರದಲ್ಲಿ ಗಂಭೀರವಾದ DCM ಪವನ್ ಕಲ್ಯಾಣ್ ! JSP ಕಾರ್ಯಕರ್ತರಿಗೆ ಖಡಕ್ ಸೂಚನೆ

Ebola ಭೀತಿ: ಏರ್ ಲೈನ್ ಗಳಿಗೆ ಡಿಜಿಸಿಎ SOP ಬಿಡುಗಡೆ

SCROLL FOR NEXT