ಸಿದ್ದರಾಮಯ್ಯ ಮತ್ತು ಯತೀಂದ್ರ 
ರಾಜಕೀಯ

'ಯತೀಂದ್ರ ಅವರೇ, ಯಾರಿಗಾಗಿ ಇಷ್ಟು ಆಸ್ತಿ ಮಾಡುತ್ತಿದ್ದೀರಿ? ರಾಕೇಶ್ ಬದುಕಿದ್ದರೆ ಸಿದ್ದರಾಮಯ್ಯ ತಲೆ ತಗ್ಗಿಸುವ ಸ್ಥಿತಿ ತರುತ್ತಿರಲಿಲ್ಲ'!

ಯತೀಂದ್ರ ಅನಧಿಕೃತವಾಗಿ ವರ್ಗಾವಣೆ ಸಚಿವರಾಗಿದ್ದಾರೆ. ಅಪ್ಪನ ಅಧಿಕಾರವನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ಸಿದ್ದರಾಮಯ್ಯ ತಲೆ ತಗ್ಗಿಸುವ ಕೆಲಸವನ್ನು ಯತೀಂದ್ರ ಮಾಡುತ್ತಿದ್ದಾರೆ.

ಮೈಸೂರು: ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಅನಧಿಕೃತವಾಗಿ ವರ್ಗಾವಣೆ ಸಚಿವರಾಗಿದ್ದಾರೆ. ಸಿದ್ದರಾಮಯ್ಯಗೆ ಯತೀಂದ್ರ ಕೆಟ್ಟ ಹೆಸರು ತರುತ್ತಿದ್ದಾರೆ. ಸಿದ್ದರಾಮಯ್ಯ ತಲೆ ತಗ್ಗಿಸುವ ಕೆಲಸವನ್ನು ಯತೀಂದ್ರ ಮಾಡುತ್ತಿದ್ದಾರೆ ಎಂದು ಮೈಸೂರು ಮಾಜಿ ಸಂಸದ ಪ್ರತಾಪ್ ಸಿಂಹ ಮತ್ತೆ ವರ್ಗಾವಣೆ ದಂಧೆ ಆರೋಪ ಮಾಡಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ಯತೀಂದ್ರ ಅನಧಿಕೃತವಾಗಿ ವರ್ಗಾವಣೆ ಸಚಿವರಾಗಿದ್ದಾರೆ. ಅಪ್ಪನ ಅಧಿಕಾರವನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ಸಿದ್ದರಾಮಯ್ಯ ತಲೆ ತಗ್ಗಿಸುವ ಕೆಲಸವನ್ನು ಯತೀಂದ್ರ ಮಾಡುತ್ತಿದ್ದಾರೆ. ಮೈಸೂರು ಉಸ್ತುವಾರಿ ಸಚಿವರು ವರ್ಷದಲ್ಲಿ ಮೂರು ದಿನ ಮಾತ್ರ ಕಾಣುತ್ತಾರೆ. ಸ್ವಾತಂತ್ರ‍್ಯ ದಿನ, ಗಣರಾಜ್ಯೋತ್ಸವ ಹಾಗೂ ದಸರಾದಲ್ಲಿ ಅಷ್ಟೇ.

ಇಡೀ ಮೈಸೂರು ಅಭಿವೃದ್ಧಿ ಸತ್ತು ಹೋಗಿದೆ. ವರ್ಗಾವಣೆ ದಂಧೆ ಮೈಸೂರಲ್ಲಿ ದೊಡ್ಡ ಮಟ್ಟದಲ್ಲಿ ಸಾಗಿದೆ. ಯತೀಂದ್ರ ಬಾಯಲ್ಲಿ ಒಂದು ದಿನವಾದರೂ ಮೈಸೂರು ಅಭಿವೃದ್ಧಿ ಮಾತು ಬಂದಿದ್ಯಾ? ಅಂತ ಆಕ್ರೋಶಭರಿತರಾಗಿ ಪ್ರಶ್ನಿಸಿದ್ದಾರೆ.

ಸಿಎಂ ಮೊದಲ ಪುತ್ರ ರಾಕೇಶ್‌ರಿಂದ ಸಿದ್ದರಾಮಯ್ಯಗೆ ಯಾವತ್ತೂ ಮುಜುಗರ ಆಗಿರಲಿಲ್ಲ. ರಾಕೇಶ್ ಬದುಕಿದ್ದರೆ ಸಿದ್ದರಾಮಯ್ಯ ತಲೆ ತಗ್ಗಿಸುವ ಸ್ಥಿತಿ ತರುತ್ತಿರಲಿಲ್ಲ. ಅಪ್ಪನ ಅಧಿಕಾರವನ್ನು ಅತಿ ಹೆಚ್ಚು ಯತೀಂದ್ರ ದುರುಪಯೋಗ ಮಾಡಿಕೊಂಡಿದ್ದಾರೆ.

ಹೀಗಾಗಿ ಸಿದ್ದರಾಮಯ್ಯ ಹೆಜ್ಜೆ ಹೆಜ್ಜೆಗೆ ಮುಜುಗರಕ್ಕೆ ಒಳಗಾಗುತ್ತಿದ್ದಾರೆ. ರಾಜ್ಯದಲ್ಲಿ ಯತೀಂದ್ರ ಸೆಲ್ಸ್ ಟ್ಯಾಕ್ಸ್ ಕಡ್ಡಾಯವಾಗಿದೆ. ಯತೀಂದ್ರ ಅವರೇ ಯಾರಿಗಾಗಿ ಇಷ್ಟು ಆಸ್ತಿ ಮಾಡುತ್ತಿದ್ದೀರಿ? ಮನೆ, ತೋಟ, ಆಸ್ತಿ, ಎಲ್ಲಾ ಇದೆ. ನಿಮ್ಮ ಅಣ್ಣನ ಕುಟುಂಬ ಆರ್ಥಿಕವಾಗಿ ಸದೃಢವಾಗಿದೆ. ಎಲ್ಲರಿಗೂ ಗದರಿಸುವ ಸಿದ್ದರಾಮಯ್ಯ ತಮ್ಮ ಮಗನಿಗೆ ಈ ವಿಚಾರದಲ್ಲಿ ಗದರಿಸಲು ಆಗುತ್ತಿಲ್ಲ ಎಂದಿದ್ದಾರೆ.

ನಾಳೆ ಬೆಳಗ್ಗೆ ಬಿಬಿಎಂಪಿ, ಮೈಸೂರು ಪಾಲಿಕೆ ಚುನಾವಣೆ ನಡೆದರೆ ಕಾಂಗ್ರೆಸ್ ಧೂಳೀಪಟ ಆಗುತ್ತದೆ. ಸ್ಥಳೀಯ ಸಂಸ್ಥೆ ಚುನಾವಣೆ ಮಾಡಲು ಕಾಂಗ್ರೆಸ್‌ಗೆ ಧೈರ್ಯ ಇಲ್ಲ. ಅಧಿಕಾರ ಹಸ್ತಾಂತರ ಇಲ್ಲ ಎಂಬ ಯತೀಂದ್ರ ಹೇಳಿಕೆ ಅವರ ತಂದೆಯ ಮನದ ಮಾತು.

ಸಿದ್ದರಾಮಯ್ಯ ಹೇಳಲು ಆಗದ್ದನ್ನು ಮಗನ ಮೂಲಕ ಹೇಳಿಸುತ್ತಿದ್ದಾರೆ. ವೀರೇಂದ್ರ ಪಾಟೀಲ್ ನಂತರ ಕಾಂಗ್ರೆಸ್‌ಗೆ ರಾಜ್ಯದಲ್ಲಿ ಯಾವ ಸ್ಥಿತಿ ಬಂತೋ ಅದೇ ಸ್ಥಿತಿ ಈಗಲು ಕಾಂಗ್ರೆಸ್‌ಗೆ ಬರುತ್ತದೆ ಎಂದು ತಿಳಿಸಿದ್ದಾರೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!