ನಿಖಿಲ್ ಕುಮಾರಸ್ವಾಮಿ 
ರಾಜಕೀಯ

ಮೈತ್ರಿ ಚರ್ಚೆ ನಾಲ್ಕು ಗೋಡೆ ನಡುವೆ ಇರಬೇಕು; JDS ಸೈದ್ಧಾಂತಿಕವಾಗಿ ರಾಜಿಯಾಗಿಲ್ಲ, ಸೆಕ್ಯೂಲರಿಸಂ ನಮ್ಮ ಹೃದಯದಲ್ಲಿದೆ: ನಿಖಿಲ್‌ ಕುಮಾರಸ್ವಾಮಿ

ಕೆಲ ಬಿಜೆಪಿಗರಿಂದ ಮೈತ್ರಿ ಮುರಿಯುವ ಹೇಳಿಕೆ ಬಗ್ಗೆ ಕೇಳಲಾದ ಪ್ರಶ್ನೆಗೆ, ನಾವು ಮೈತ್ರಿ ಧರ್ಮವನ್ನು ಅತ್ಯಂತ ಗೌರವದಿಂದ ಪಾಲಿಸುತ್ತಿದ್ದೇವೆ. ನಮ್ಮ ಮೈತ್ರಿಗೆ ಬಿಜೆಪಿ ಹೈಕಮಾಂಡ್ ನಾಯಕರ ಮಾರ್ಗದರ್ಶನ ಇ

ಬೆಂಗಳೂರು: ಬಿಜೆಪಿ-ಜೆಡಿಎಸ್‌ ಮೈತ್ರಿ ವಿಚಾರ ಚರ್ಚೆ ನಾಲ್ಕು ಗೋಡೆಗಳ ನಡುವೆ ಇರಬೇಕೇ ಹೊರತು ಹಾದಿ-ಬೀದಿಯಲ್ಲಿ ಚರ್ಚೆ ಆಗಬಾರದು ಎಂದು ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ವಿಚಾರಗಳು ನಾಲ್ಕು ಗೋಡೆಗಳ ಒಳಗೆ ಚರ್ಚೆಯಾಗಬೇಕು. ಹಾದಿ ಬೀದಿಯಲ್ಲಿ ಚರ್ಚಿಸಿ ಇತ್ಯರ್ಥವಾಗಬಾರದು . ಲೋಕಸಭಾ ಚುನಾವಣೆಯಿಂದಲೂ ಎರಡೂ ಪಕ್ಷಗಳ ಮೈತ್ರಿ ಇದೆ. ಅಂದಿನಿಂದಲೂ ನಮ್ಮನ್ನು ಗೌರವದಿಂದ ನೋಡಿಕೊಂಡಿದ್ದಾರೆ ಎಂದರು.

ಕೆಲ ಬಿಜೆಪಿಗರಿಂದ ಮೈತ್ರಿ ಮುರಿಯುವ ಹೇಳಿಕೆ ಬಗ್ಗೆ ಕೇಳಲಾದ ಪ್ರಶ್ನೆಗೆ, ನಾವು ಮೈತ್ರಿ ಧರ್ಮವನ್ನು ಅತ್ಯಂತ ಗೌರವದಿಂದ ಪಾಲಿಸುತ್ತಿದ್ದೇವೆ. ನಮ್ಮ ಮೈತ್ರಿಗೆ ಬಿಜೆಪಿ ಹೈಕಮಾಂಡ್ ನಾಯಕರ ಮಾರ್ಗದರ್ಶನ ಇದೆ. ಬಿಜೆಪಿ ಆಥವಾ ಜೆಡಿಎಸ್‌ನ ಯಾರೇ ಆಗಿರಲಿ ಹೊರಗೆ ಮಾತನಾಡಬಾರದು. ಎರಡು ಜಿಲ್ಲೆಗಳಲ್ಲಿ ಮೈತ್ರಿ ವಿಚಾರದ ಸಮಸ್ಯೆ ಉದ್ಭವವಾಗಿದೆ. ಅಲ್ಲಿನ ಮೂರ್ನಾಲ್ಕು ಜನ ಪ್ರಚಾರಕ್ಕೆ ಮಾತನಾಡಿದ್ದಾರೆ ಎಂದರು.

ಮುಂದಿನ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಎನ್ನುವುದಕ್ಕಿಂತ ಎನ್‌ಡಿಎ 140ರಿಂದ 150 ಸ್ಥಾನ ಗೆಲ್ಲಲಿದೆ. ನಾವು ಮೈತ್ರಿ ಧರ್ಮ ಪಾಲಿಸುತ್ತೇವೆ. ಲೋಕಸಭೆ ಗೆದ್ದಂತೆ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ದಾಖಲೆ ಸೃಷ್ಟಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕೆ.ಆರ್.ಪೇಟೆಯಲ್ಲಿ ನಾನು ನೀಡಿದ ಹೇಳಿಕೆಯನ್ನು ತಿರುಚಲಾಗಿದೆ, ನೀವು ಈಗಾಗಲೇ ಶಾಸಕರಾಗಿದ್ದೀರಿ. ಮತ್ತೆ ಆರಿಸಿ ಬರುವುದಕ್ಕೆ ಜನರ ಪ್ರೀತಿ ವಿಶ್ವಾಸ ಗಳಿಸಿ ಮಂಜಣ್ಣ ಅಂತ ಹೇಳಿದ್ದೆ.ಅಭ್ಯರ್ಥಿಗಳ ಘೋಷಿಸಲು ನಾನು ಯಾರು? ನಾನು ಜನರ ವಿಶ್ವಾಸ ಉಳಿಸಿಕೊಂಡು ಹೋಗಿ ಅಂತ ಹೇಳುವುದರಲ್ಲಿ ತಪ್ಪೇನಿದೆ ಎಂದು ಕೇಳಿದರು.

ಇನ್ನೂ ಇದಕ್ಕೂ ಮುನ್ನ ವಿಜಯಪುರದಲ್ಲಿ ಮಾತನಾಡಿದ್ದ ನಿಖಿಲ್ ಕುಮಾರಸ್ವಾಮಿ ಮೈತ್ರಿಯ ವಿಮಾನ ಹತ್ತಿದ್ದೇವೆ. ಅದು ಟಬ್ರ್ಯೂಲೆನ್ಸ್ ಆಗುವುದು ಸಹಜ. ಮಧ್ಯದಲ್ಲಿ ಕೆಲವು ಪ್ರಯಾಣಿಕರು ಇಳಿಯುವಂತೆ ಹೇಳಿದರೆ ಅದು ಸಾಧ್ಯವಾಗದು. ಇನ್ನೂ ಜೆಡಿಎಸ್ ಸೈದ್ಧಾಂತಿಕವಾಗಿ ರಾಜಿಯಾಗಿಲ್ಲ. ಸೆಕ್ಯೂಲರಿಸಂ ನಮ್ಮ ಹೃದಯಲ್ಲಿದೆ ಎಂದರು. ಕೆಲವೊಂದು ಅಸಮಾಧಾನ ಬರಬಹುದು ಅದನ್ನು ವರಿಷ್ಠರು ಸಮಾಧಾನ ಮಾಡುತ್ತಾರೆ. ಸಣ್ಣ ಪುಟ್ಟ ಭಿನ್ನಾಭಿಪ್ರಾಯ ಇದ್ದರೂ ಸಹ ಅದನ್ನು ಅವರು ಸರಿ ಪಡಿಸುತ್ತಾರೆ ಎಂದರು. ಸೈದ್ಧಾಂತಿಕವಾಗಿ ನಾವು ಎಂದೂ ಬದಲಾಗಿಲ್ಲ, ಬಿಜೆಪಿ ಜೊತೆ ಕೈ ಜೋಡಿಸಿದ ಮಾತ್ರಕ್ಕೆ ಸೆಕ್ಯೂಲರಿಸಂ ಕೈ ಬಿಟ್ಟಿಲ್ಲ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದ ಯುವಕ ದಾರುಣ ಅಂತ್ಯ

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಪಂತ್‌ರಂತೆ ಆಡಲು ಪ್ರಯತ್ನಿಸಲ್ಲ, ಅವರ ಜೊತೆ ಆಡೋದು ದೊಡ್ಡ ಅನುಭವ: ಫಿಟ್ನೆಸ್ ಅಪ್ಡೇಟ್ ಕೊಟ್ಟ Dhruv Jurel