ಸಿಎಂ ಸಿದ್ದರಾಮಯ್ಯ 
ರಾಜಕೀಯ

"ನನ್ನನ್ನು ರಾಜಕೀಯವಾಗಿ ಮುಗಿಸಿಬಿಟ್ಟರೆ ಅವರ ಹಾದಿ ಸುಗಮ": ಚರ್ಚೆಗೆ ಗ್ರಾಸವಾದ CM ಸಿದ್ದರಾಮಯ್ಯ ಪೋಸ್ಟ್

ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್ಣು ಕೆಂಪಾಗಲು ಕಾರಣ. ನನ್ನ ಮೇಲೆ ವಿರೋಧಿಗಳು ನಡೆಸುತ್ತಿರುವ ಬಹುತೇಕ ದಾಳಿಗಳು, ಮಾಡುತ್ತಿರುವ ಟೀಕೆ-ಆರೋಪಗಳಿಗೆ ನಾನು ಹುಟ್ಟಿದ ಜಾತಿಯೂ ಒಂದು ಕಾರಣ ಎಂದು ಸಿಎಂ ಸಿದ್ದರಾಮಯ್ಯ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆಯ ಚರ್ಚೆ ಮತ್ತೆ ಜೋರಾಗಿರುವ ಸಮಯದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ಮಾಧ್ಯಮದಲ್ಲಿ ಮಾಡಿರುವ ಪೋಸ್ಟ್ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್ಣು ಕೆಂಪಾಗಲು ಕಾರಣ. ನನ್ನ ಮೇಲೆ ವಿರೋಧಿಗಳು ನಡೆಸುತ್ತಿರುವ ಬಹುತೇಕ ದಾಳಿಗಳು, ಮಾಡುತ್ತಿರುವ ಟೀಕೆ-ಆರೋಪಗಳಿಗೆ ನಾನು ಹುಟ್ಟಿದ ಜಾತಿಯೂ ಒಂದು ಕಾರಣ ಎಂದು ಸಿಎಂ ಸಿದ್ದರಾಮಯ್ಯ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಕುರಿಕಾಯುತ್ತಾ ಇರಬೇಕಾದವನು ಮುಖ್ಯಮಂತ್ರಿ ಆಗಿ ಬಿಟ್ಟನಲ್ಲಾ, ಆರ್ಥಿಕ ತಜ್ಞರಿಗೆ ಸರಿಸಮನಾಗಿ ನಿಂತು ಸಾಲುಸಾಲು ಬಜೆಟ್ ಮಂಡಿಸಿ ಶಹಬ್ಬಾಸ್ ಗಿರಿ ಗಳಿಸುತ್ತಿದ್ದಾನಲ್ಲಾ ಎನ್ನುವ ಅಸಹನೆ, ಅವರೊಳಗೆ ದ್ವೇಷ, ಅಸೂಯೆ ಕುದಿಯುತ್ತಿದೆ. ಇವನೊಬ್ಬನನ್ನು ರಾಜಕೀಯವಾಗಿ ಮುಗಿಸಿಬಿಟ್ಟರೆ ಅದರ ನಂತರ ನಮ್ಮೆಲ್ಲರ ಹಾದಿ ಸುಲಭವಾಗುತ್ತದೆ ಎನ್ನುವ ರಾಜಕೀಯ ದುರುದ್ದೇಶದ ಲೆಕ್ಕಾಚಾರ ಇವರ ಮನಸ್ಸಿನಲ್ಲಿದೆ.

ಸಾಮಾಜಿಕ ಬದಲಾವಣೆಗೆ ಕೈ ಹಾಕಿದವರೆಲ್ಲರ ವಿರುದ್ಧ ಇಂತಹ ಷಡ್ಯಂತ್ರಗಳು ನಡೆದಿರುವುದನ್ನು ಇತಿಹಾಸದ ಪುಟದಲ್ಲಿ ಕಾಣಬಹುದು. ಬುದ್ಧ, ಬಸವಣ್ಣ, ಅಂಬೇಡ್ಕರ್, ಗಾಂಧೀಜಿ, ಪೆರಿಯಾರ್, ನಾರಾಯಣ ಗುರು, ಕನಕದಾಸರಾದಿಯಾಗಿ ಸಾಮಾಜಿಕ ಪರಿವರ್ತನೆಗೆ ಹೋರಾಟ ನಡೆಸಿದವರೆಲ್ಲರನ್ನು ಹಣಿಯುವ, ದಮನಿಸುವ, ಮುಗಿಸುವ ಸಂಚು-ಒಳಸಂಚುಗಳು ನಡೆಯುತ್ತಲೇ ಬಂದಿದೆ. ಬಸವಣ್ಣ ಏನು ತಪ್ಪು ಮಾಡಿದ್ದರು? ಜಾತಿ ವಿನಾಶಕ್ಕೆ ಪ್ರಯತ್ನ ಮಾಡಿದ್ದರು, ಅಂತರಜಾತಿ ಮದುವೆ ಮಾಡಿಸಿದ್ದರು, ಅವಕಾಶ ವಂಚಿತ ತಬ್ಬಲಿ ಜಾತಿಗಳಿಗೆ ಸ್ವಾಭಿಮಾನದ ದೀಕ್ಷೆ ಕೊಟ್ಟು ಸಮಾಜದ ಮುಖ್ಯವಾಹಿನಿಯಲ್ಲಿ ಸೇರಿಸುವ ಪ್ರಯತ್ನ ಮಾಡಿದ್ದರು. ಈ ಕಾರಣಕ್ಕಾಗಿ ಅವರನ್ನು ವ್ಯವಸ್ಥಿತ ಸಂಚಿನ ಮೂಲಕ ಮುಗಿಸಲಾಯಿತು ಎಂದು ಸಿಎಂ ಹೇಳಿದ್ದಾರೆ.

ಅವಕಾಶ ವಂಚಿತರ ಪರ ನಿಂತವರನ್ನು ವರ್ತಮಾನವು ಕ್ರೂರವಾಗಿ ನಡೆಸಿಕೊಂಡಿದೆ

ಸಾಮಾಜಿಕ ನ್ಯಾಯದ ಬಂಡಿಯನ್ನು ಮುಂದಕ್ಕೆ ಎಳೆದುಕೊಂಡು ಹೋಗುವುದು ಸುಲಭದ ಕೆಲಸ ಅಲ್ಲ ಎನ್ನುವುದನ್ನು ನಾನು ಅನುಭವದ ಮೂಲಕ ಅರಿತುಕೊಂಡಿದ್ದೇನೆ. ಈ ಪ್ರಯತ್ನ ನಡೆಸಿದವರೆಲ್ಲರನ್ನು ವರ್ತಮಾನ ಬಹಳ ಕ್ರೂರವಾಗಿ ನಡೆಸಿಕೊಂಡಿದೆ. ನಾನು ಸಾಮಾಜಿಕ ನ್ಯಾಯದ ಪರವಾಗಿ ದನಿ ಎತ್ತುವ ಮತ್ತು ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರುವ ಪ್ರಯತ್ನವನ್ನು ಮಾಡಿದಾಗೆಲ್ಲ ನನ್ನ ವಿರುದ್ಧ ದಾಳಿಗಳು ನಡೆದಿವೆ, ಇದು ಈಗಲೂ ಮುಂದುವರಿಯುತ್ತಿದೆ.

ನನ್ನ ವಿರುದ್ಧ ಯಾಕೆ ಷಡ್ಯಂತ್ರ ಮಾಡುತ್ತಿದ್ದಾರೆ ಎನ್ನುವುದೂ ನನಗೆ ಗೊತ್ತಿದೆ. ನಾನು ಈ ರಾಜ್ಯದ ಬಡವರು, ಶೋಷಿತರು, ಅವಕಾಶ ವಂಚಿತರ ಪರವಾಗಿದ್ದೇನೆ, ಸಾಮಾಜಿಕ ನ್ಯಾಯದ ಪರವಾಗಿದ್ದೇನೆ, ಸಂವಿಧಾನದ ಪರವಾಗಿದ್ದೇನೆ, ಶೋಷಿತರ ಅಭಿವೃದ್ದಿಗಾಗಿ ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೆ ತಂದಿದ್ದೇನೆ, ದುರ್ಬಲರಿಗೆ ಅನ್ಯಾಯವಾದಾಗ ದನಿ ಎತ್ತಿದ್ದೇನೆ. ಇದಕ್ಕಾಗಿ ರಾಜ್ಯದ ಜನತೆ 136 ಸ್ಥಾನಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿ ಅಧಿಕಾರಕ್ಕೆ ತಂದಿದ್ದಾರೆ. ಇದು ನಮ್ಮ ರಾಜಕೀಯ ವಿರೋಧಿಗಳಿಗೆ ಸಹಿಸಲಾಗುತ್ತಿಲ್ಲ ಎಂದು ಸಿದ್ದರಾಮಯ್ಯ ಅವರು ಸರಣಿ ಪೋಸ್ಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

KAS ಅಧಿಕಾರಿ ವಿರುದ್ಧ ನಕಲಿ ದಾಖಲೆ ಸೃಷ್ಟಿಸಿ ಅಪಪ್ರಚಾರ ಆರೋಪ: ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಬಂಧನ

'ಡಾಕ್ಟರ್' ಪರೀಕ್ಷೆ ವೇಳೆ ಕಾಪಿ; ರೆಡ್ ಹ್ಯಾಂಡ್ ಆಗಿ ಹಿಡಿದ ಪ್ರಾಧ್ಯಾಪಕರ ಮೇಲೇ ಹಲ್ಲೆ! Video

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಕಡ್ಡಾಯ; ವಾಟ್ಸಾಪ್ ಮೂಲಕ ಪೋಷಕರಿಗೆ ಎಚ್ಚರಿಕೆ!

ಶಿವಾಜಿ ಫೋಟೋ ಮೆರವಣಿಗೆ ವೇಳೆ ಕೋಮು ಸಂಘರ್ಷ: ಬಾಗಲಕೋಟೆಯಲ್ಲಿ ಮತ್ತೆ ಉದ್ವಿಗ್ನತೆ; 'ಕಲ್ಲು ತೂರಿದವರೇ ಹೂ ಎಸೆಯಬೇಕು'- ಬಾಂಡಗೆ

ಫೆಬ್ರವರಿ 21 ರಿಂದ ಸಫಾರಿ ಪುನಾರಂಭ: ಷರತ್ತು ಕಟ್ಟುನಿಟ್ಟಿನ ಪಾಲನೆಗೆ Eshwar Khandre ಸೂಚನೆ

SCROLL FOR NEXT