ರಾಹುಲ್ ಗಾಂಧಿ - ಡಿ.ಕೆ ಶಿವಕುಮಾರ್ 
ರಾಜಕೀಯ

ದೆಹಲಿಗೆ ಹೋಗೋದು ಬರೋದು ಇದ್ದೇ ಇರುತ್ತೆ: ದೇಶದ ಹಿತಕ್ಕಾಗಿ ರಾಹುಲ್ ಗಾಂಧಿ ಧ್ವನಿ ಎತ್ತಿದ್ದಾರೆ; ಡಿ.ಕೆ. ಶಿವಕುಮಾರ್

ನಾನು ರಾಜ್ಯ ರಾಜಕೀಯದ ಬಗ್ಗೆ ಹಂಗೆಲ್ಲ, ಎಲ್ಲೆಂದರಲ್ಲಿ ಚರ್ಚೆ ಮಾಡುವುದಿಲ್ಲ. ಅದು ಸಾರ್ವಜನಿಕವಾಗಿ ಚರ್ಚಿಸುವ ವಿಚಾರವೂ ಅಲ್ಲ ಎಂದರು.

ಬೆಂಗಳೂರು: ನಾನು ದೆಹಲಿಗೆ ಹೋಗುವುದು ಬರುವುದು ಇದ್ದೇ ಇರುತ್ತದೆ. ನಾನು ಹೋಗದೆ ಮತ್ಯಾರು ಹೋಗುತ್ತಾರೆ? ಅವರು ಯಾವಾಗ ಕರೆಯುತ್ತಾರೋ ಆಗೆಲ್ಲಾ ಹೋಗುತ್ತೇವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳು ಭಾನುವಾರ ಮಾತನಾಡಿಸಿ, 'ಮುಂದಿನ ವಾರ ದೆಹಲಿಗೆ ಹೋಗುತ್ತೀರಾ' ಎಂದು ಕೇಳಿದಾಗ ಶಿವಕುಮಾರ್ ಅವರು ಈ ರೀತಿ ಪ್ರತಿಕ್ರಿಯಿಸಿದರು. ನಾನು ರಾಜ್ಯ ರಾಜಕೀಯದ ಬಗ್ಗೆ ಹಂಗೆಲ್ಲ, ಎಲ್ಲೆಂದರಲ್ಲಿ ಚರ್ಚೆ ಮಾಡುವುದಿಲ್ಲ. ಅದು ಸಾರ್ವಜನಿಕವಾಗಿ ಚರ್ಚಿಸುವ ವಿಚಾರವೂ ಅಲ್ಲ ಎಂದರು.

ರಾಹುಲ್ ಗಾಂಧಿ ಅವರು ದೇಶದ ಹಿತಕ್ಕಾಗಿ ಏನು ಬೇಕೋ ಅದನ್ನು ಮಾಡುತ್ತಾರೆ, ಮಾತಾಡುತ್ತಾರೆ. ಅಮೆರಿಕದ ಜತೆಗಿನ ತೆರಿಗೆ ಒಪ್ಪಂದದಿಂದ ದೇಶದ ಪ್ರತಿ ರೈತನ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ರಾಹುಲ್ ಗಾಂಧಿ ಅವರು ಲೋಕಸಭೆ ವಿರೋಧ ಪಕ್ಷದ ನಾಯಕರಾಗಿ ಚರ್ಚೆ ಮಾಡುತ್ತಾರೆ" ಎಂದರು.

"ಇಂದು ನಾನು ಹಾಗೂ ಸಿಎಂ ಇಬ್ಬರೂ ಕಾರವಾರಕ್ಕೆ ಹೋಗಿ ವೈದ್ಯಕೀಯ ವಿವಿ ಉದ್ಘಾಟನೆ ಮಾಡುತ್ತಿದ್ದೇವೆ. ನಾಳೆ ಕೋಲಾರ ಹಾಗೂ ಚಿಕ್ಕಬಳ್ಳಾಪುರ ಎರಡೂ ಸೇರಿಸಿ ಮನರೇಗಾ ಉಳಿಸಿ ಸಮಾವೇಶ ಹಮ್ಮಿಕೊಂಡಿದ್ದೇವೆ. ದೆಹಲಿಯಿಂದ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರು ಆಗಮಿಸುತ್ತಿದ್ದು, ಸಮಾವೇಶಕ್ಕೆ ಕಾಂಗ್ರೆಸ್ ಪಕ್ಷದ ಎಲ್ಲಾ ಶಾಸಕರು ಆಗಮಿಸಬೇಕು. ಮನರೇಗಾ ರಕ್ಷಣೆಗೆ ಆಗ್ರಹಿಸಿ ಬಹುತೇಕ ಎಲ್ಲಾ ಕ್ಷೇತ್ರಗಳಲ್ಲಿ ಪಾದಯಾತ್ರೆ ಮಾಡಲಾಗಿದೆ. ಬಾಕಿ ಇರುವ ಕ್ಷೇತ್ರಗಳಲ್ಲೂ ಮಾಡಲಾಗುವುದು" ಎಂದು ತಿಳಿಸಿದರು.

ನಿನ್ನೆ ಜಿಬಿಎ ಕಾಮಗಾರಿಗಳ ಪ್ರಗತಿ ಪರಿಶೀಲನೆ ಸಭೆ ಮಾಡಿದ್ದು, ಬೆಂಗಳೂರು ನಗರದಲ್ಲಿ 5065 ಕೋಟಿ ರೂ. ಮೊತ್ತದ ರಸ್ತೆ ಕಾಮಗಾರಿಗಳು ನಡೆಯುತ್ತಿವೆ. ಎಲ್ಲವನ್ನೂ ಏಪ್ರಿಲ್ ತಿಂಗಳಾಂತ್ಯದಲ್ಲಿ ಪೂರ್ಣಗೊಳಿಸಲು ಸೂಚಿಸಲಾಗಿದೆ. ಬೆಂಗಳೂರು ಸುತ್ತಮುತ್ತ 40 ಕಿ.ಮೀ ಒಳಗೆ ಗುಡ್ಡಗಳ ಅಕ್ಕಪಕ್ಕ ಜಾಗ ಕೊಟ್ಟರೆ ಸರ್ಕಾರ ಅದನ್ನು ಖರೀದಿ ಮಾಡಲಿದೆ. ಸುಮಾರು 100 ಎಕರೆಯಷ್ಟು ಖರೀದಿ ಮಾಡಲಾಗುವುದು" ಎಂದು ಮಾಹಿತಿ ನೀಡಿದರು.

ಕುಮಾರಸ್ವಾಮಿ ಹಾಗೂ ಪರಮೇಶ್ವರ್ ಅವರ ಭೇಟಿ ಬಗ್ಗೆ ಕೇಳಿದಾಗ, "ಪರಮೇಶ್ವರ್ ಅವರು ತಮ್ಮ ಕ್ಷೇತ್ರದಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಲು ಅಥವಾ ಕ್ಷೇತ್ರಕ್ಕೆ ಸಂಬಂಧಿಸಿದ ಇತರೆ ವಿಚಾರವಾಗಿ ಚರ್ಚೆ ಮಾಡಲು ಭೇಟಿಯಾಗಿರಬಹುದು. ರಾಜ್ಯ ಸಚಿವರು ಹಾಗೂ ಕೇಂದ್ರ ಸಚಿವರು ಭೇಟಿ ಮಾಡಿದ್ದಾರೆ" ಎಂದು ತಿಳಿಸಿದರು.

ಯೂತ್ ಕಾಂಗ್ರೆಸ್ ಪ್ರತಿಭಟನೆಯನ್ನು ಕುಮಾರಸ್ವಾಮಿ ಅವರು ಟೀಕೆ ಮಾಡಿರುವ ಬಗ್ಗೆ ಕೇಳಿದಾಗ, "ಇದು ಅವರ ರಾಜಕೀಯ ದಾರಿ, ಅದು ಆ ಯುವಕರ ರಾಜಕೀಯ ದಾರಿ. ಅವರಿಗೆ ಯಾರು ಆ ರೀತಿ ಮಾಡಲು ಮಾರ್ಗದರ್ಶನ ನೀಡಿದರೋ ಗೊತ್ತಿಲ್ಲ" ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸರ್ವಾಧಿಕಾರಿ ಖಮೇನಿ ವಿರುದ್ಧ ಮತ್ತೆ ಭುಗಿಲೆದ್ದ ಪ್ರತಿಭಟನೆ: ಇರಾನ್ ಬೀದಿಗಿಳಿದ ವಿದ್ಯಾರ್ಥಿಗಳು, ಟ್ರಂಪ್ ದಾಳಿಗೆ ಮುಹೂರ್ತ ಫಿಕ್ಸ್?

'ಕೆಂಗಲ್ ಹನುಮಂತಯ್ಯ ಸೇರಿ SM ಕೃಷ್ಣವರೆಗೆ ನೂರಾರು ಒಕ್ಕಲಿಗ ನಾಯಕರನ್ನು ಬೆಳೆಸಿದ್ದು ಕಾಂಗ್ರೆಸ್ ಪಕ್ಷ ಮಾತ್ರ': ಸಿದ್ದರಾಮಯ್ಯ

ಭಾರತದಲ್ಲಿ ದಾಳಿಗೆ ಸಂಚು: ಪಾಕ್‌ನ ISI ಬಾಂಗ್ಲಾದೊಂದಿಗೆ ಸಂಪರ್ಕ ಹೊಂದಿದ್ದ 8 ಮಂದಿ ಬಂಧನ

Jubilee Hills: ತೆಲುಗು ನಟ ಬಾಲಕೃಷ್ಣ ಮನೆ ಮುಂದೆ ಭೀಕರ ಅಪಘಾತ; ವೇಗವಾಗಿ ಬಂದ ಫೆರಾರಿ ಕಾರು ಹಲವು ವಾಹನಗಳಿಗೆ ಢಿಕ್ಕಿ!

ಗುಜರಾತ್ ಕರಾವಳಿಯಲ್ಲಿ 5 ಕೋಟಿ ರೂಪಾಯಿ ಮೌಲ್ಯದ ಸಿಗರೇಟ್ ಹೊಂದಿದ್ದ ಇರಾನ್ ಸಿಬ್ಬಂದಿ ಬಂಧನ

SCROLL FOR NEXT