ಹೆಚ್.ಡಿ. ಕುಮಾರಸ್ವಾಮಿ  
ರಾಜಕೀಯ

ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷದ ಕೊನೆಯ ಸಿಎಂ: ಹೆಚ್.ಡಿ ಕುಮಾರಸ್ವಾಮಿ

ಉತ್ತಮ ಆಡಳಿತಕ್ಕೆ ಸಾಕ್ಷಿಯಾಗಿದ್ದ ಕರ್ನಾಟಕ ಇಂದು ಕೆಟ್ಟ ಆಡಳಿತಕ್ಕೆ ನಿದರ್ಶನ ಆಗಿದೆ. ದೇವರಾಜು ಅರಸು ಎಲ್ಲಿ? ಇವರೆಲ್ಲಿ? ಅರಸು ಅವರ ದಾಖಲೆ ಮುರಿಯುವುದು ಇರಲಿ, ರಾಜ್ಯದಲ್ಲಿ ಇವರೇ ಕಾಂಗ್ರೆಸ್ ಪಕ್ಷದ ಕೊನೆಯ ಮುಖ್ಯಮಂತ್ರಿ ಆಗಲಿದ್ದಾರೆ.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೇವರಾಜು ಅರಸು ದಾಖಲೆ ಮುರಿಯುತ್ತಾರಂತೆ. ಯಾವ ಭಾಗ್ಯಕ್ಕೆ ಇದೆಲ್ಲಾ? ರಾಜ್ಯದ ಪರಿಸ್ಥಿತಿ ನೋಡಿದರೆ ಈ ದಾಖಲೆಗೆ ಮಣ್ಣು ಹೊಯ್ದುಕೊಳ್ಳಬೇಕು. ರಾಜ್ಯದಲ್ಲಿ ಇವರೇ ಕಾಂಗ್ರೆಸ್ ಪಕ್ಷದ ಕೊನೆಯ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಸೋಮವಾರ ಆಕ್ರೋಶ ವ್ಯಕ್ತಪಡಿಸಿದರು.

ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ, ಕರ್ನಾಟಕದಲ್ಲಿ ದೀರ್ಘ ಕಾಲ ಆಡಳಿತ ನಡೆಸಿದ್ದೇನೆ ಎಂಬುದಾಗಿ ಕೊಚ್ಚಿಕೊಳ್ಳುತ್ತಿರುವ ಸಿದ್ದರಾಮಯ್ಯ ಅವರು, ಕೆಟ್ಟ ಆಡಳಿತಕ್ಕೆ ನಿದರ್ಶನ. ಅವರ ಆಡಳಿತದ ದಾಖಲೆಗೆ ಮಣ್ಣು ಹೊಯ್ದುಕೊಳ್ಳಬೇಕು ಎಂದು ಕಿಡಿಕಾರಿದರು.

ಉತ್ತಮ ಆಡಳಿತಕ್ಕೆ ಸಾಕ್ಷಿಯಾಗಿದ್ದ ಕರ್ನಾಟಕ ಇಂದು ಕೆಟ್ಟ ಆಡಳಿತಕ್ಕೆ ನಿದರ್ಶನ ಆಗಿದೆ. ದೇವರಾಜು ಅರಸು ಎಲ್ಲಿ? ಇವರೆಲ್ಲಿ? ಅರಸು ಅವರ ದಾಖಲೆ ಮುರಿಯುವುದು ಇರಲಿ, ರಾಜ್ಯದಲ್ಲಿ ಇವರೇ ಕಾಂಗ್ರೆಸ್ ಪಕ್ಷದ ಕೊನೆಯ ಮುಖ್ಯಮಂತ್ರಿ ಆಗಲಿದ್ದಾರೆಂದು ವ್ಯಂಗ್ಯವಾಡಿದರು.

ಕಾಂಗ್ರೆಸ್ಸಿಗೆ ಮತದಾರರು ಬುದ್ಧಿ ಕಲಿಸುತ್ತಾರೆ. ಮುಂದಿನ ಚುನಾವಣೆಯಲ್ಲಿ ನಾವೇ ಗೆಲ್ಲುತ್ತೇವೆ ಎಂಬುದಾಗಿ ಹೇಳಿಕೊಳ್ಳುವ ಇವರಿಗೆ ಮತದಾರರು ಸರಿಯಾಗಿ ಬುದ್ಧಿ ಕಲಿಸಲಿದ್ದಾರೆ ಎಂದು ಎಚ್ಚರಿಕೆ ನೀಡಿದರು.

ಕಳೆದ ಎರಡೂವರೆ ವರ್ಷಗಳ ಆಡಳಿತ ಇತಿಹಾಸ ಸೇರುವಂತಹ ಕೆಟ್ಟ ಆಡಳಿತವಾಗಿದೆ, ಭ್ರಷ್ಟಾಚಾರ, ಕೊಲೆ, ಸುಲಿಗೆ, ಡ್ರಗ್ಸ್ ಮಾಫಿಯಾ, ಮಾರ್ಯಾದಾ ಹತ್ಯೆ ಪ್ರಕರಣಗಳು ನಿರಂತರವಾಗಿವೆ. ಇದನ್ನು ಹತ್ತಿಕ್ಕಲು ಸಾಧ್ಯವಾಗದೆ, ದಾಖಲೆಗೋಸ್ಕರ ಸಿದ್ದರಾಮಯ್ಯ ಆಡಳಿತ ನಡೆಸುತ್ತಿರುವಂತಿದೆ.

ಅಧಿಕಾರಿಗಳು ಗುಲಾಮರಾಗಿದ್ದಾರೆ. ಅಧಿಕಾರಿಗಳು ಇವರ ಆಡಳಿತದಲ್ಲಿ ಗುಲಾಮರಾಗಿ ಕೆಲಸ ಮಾಡುತ್ತಿದ್ದಾರೆ, ಸ್ವಾತಂತ್ರ್ಯ ಎಂಬುದೇ ಇಲ್ಲ, ಬ್ಯಾಟರಿ ಹಾಕಿ ಹುಡುಕಿದರೂ ಒಬ್ಬ ಒಳ್ಳೆ ಅಧಿಕಾರಿ ಸಿಗುವುದಿಲ್ಲ ಎಂದು ಕಟುವಾಗಿ ಟೀಕಿಸಿದರು.

ರಾಜ್ಯದ ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಮತ್ತು ಗೃಹ ಸಚಿವರು ನಕಲಿಶ್ಯಾಮರಂತೆ ವರ್ತಿಸುತ್ತಿದ್ದಾರೆ, ಗೃಹ ಸಚಿವರಿಗೆ ಅಧಿಕಾರದ ಗತ್ತು ಎಂಬುದೇ ಗೊತ್ತಿಲ್ಲ, ಯಾವುದೇ ಪ್ರಕರಣ ನಡೆದರೂ ಎಸ್‌ಐಟಿ ರಚಿಸಿ ಕೈತೊಳೆದುಕೊಳ್ಳುವುದು, ನಾಜೂಕಯ್ಯನ ರೀತಿ ಮಾತನಾಡುವುದೊಂದೇ ತಿಳಿದಿರುವುದು ಎಂದು ಕಿಡಿಕಾರಿದರು.

ಇದೇ ವೇಳೆ ಬೆಂಗಳೂರಿನ ಜೆಜೆ ನಗರದಲ್ಲಿ ಓಂ ಶಕ್ತಿ ಮಾಲೆ ಹಾಕಿ ಮೆರವಣಿಗೆಯಲ್ಲಿ ಸಾಗುತ್ತಿದ್ದ ಭಕ್ತರ ಮೇಲೆ ಕಲ್ಲು ಎಸೆದಿರುವ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಸಚಿವ ಕುಮಾರಸ್ವಾಮಿ ಅವರು ಆಗ್ರಹಿಸಿದರು.

ಓಂ ಶಕ್ತಿಗೆ ಯಾತ್ರೆಗೆ ಹೊರಟಿರುವ ಹೆಣ್ಣು ಮಕ್ಕಳ ಮೇಲೆ ಕಲ್ಲು ಎಸೆಯುತ್ತಾರೆ ಎಂದರೆ, ಈ ರಾಜ್ಯ ಎಲ್ಲಿಗೆ ಬಂದಿವೆ ಎಂಬುದು ಅರ್ಥವಾಗುತ್ತದೆ. ಇದಕ್ಕೆಲ್ಲಾ ಈ ಸರ್ಕಾರದ ನಡವಳಿಕೆಯೇ ಕಾರಣ ಎಂದು ಟೀಕಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಪಂತ್‌ರಂತೆ ಆಡಲು ಪ್ರಯತ್ನಿಸಲ್ಲ, ಅವರ ಜೊತೆ ಆಡೋದು ದೊಡ್ಡ ಅನುಭವ: ಫಿಟ್ನೆಸ್ ಅಪ್ಡೇಟ್ ಕೊಟ್ಟ Dhruv Jurel

ಜೈ ಜವಾನ್, ಜೈ ಕಿಸಾನ್: ಐತಿಹಾಸಿಕ ಶತಕದ ಬಳಿಕ ಹೊಸ ಟ್ಯಾಟೂ ರಿವೀಲ್ ಮಾಡಿದ Dhruv Jurel