ದಿನೇಶ್ ಗುಂಡೂರಾವ್  
ರಾಜಕೀಯ

ಪ್ರಹ್ಲಾದ್ ಜೋಶಿ ಮೊದಲು ಚುನಾವಣಾ ಬಾಂಡ್‌, PM ಕೇರ್ಸ್‌ ಬಗ್ಗೆ ಉತ್ತರಿಸಲಿ: ದಿನೇಶ್ ಗುಂಡೂರಾವ್

ಚುನಾವಣಾ ಬಾಂಡ್ ಯೋಜನೆಯು ಸಾವಿರಾರು ಕೋಟಿ ರೂಪಾಯಿಗಳನ್ನು ಒಳಗೊಂಡಿದೆ. ಆದರೆ ಹಣವನ್ನು ಯಾರು ದಾನ ಮಾಡಿದರು ಅಥವಾ ಅದರಿಂದ ಯಾರು ಲಾಭ ಪಡೆದರು ಎಂಬುದರ ಕುರಿತು ಯಾವುದೇ ಸ್ಪಷ್ಟತೆ ಇಲ್ಲ ಎಂದರು.

ಮಂಗಳೂರು: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಚುನಾವಣಾ ಬಾಂಡ್‌ಗಳು ಮತ್ತು ಪಿಎಂ ಕೇರ್ಸ್ ನಿಧಿಯ ಮೇಲಿನ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳುತ್ತಿದೆ ಎಂದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶುಕ್ರವಾರ ಆರೋಪಿಸಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗುಂಡೂರಾವ್, ಚುನಾವಣಾ ಬಾಂಡ್ ಯೋಜನೆಯು ಸಾವಿರಾರು ಕೋಟಿ ರೂಪಾಯಿಗಳನ್ನು ಒಳಗೊಂಡಿದೆ. ಆದರೆ ಹಣವನ್ನು ಯಾರು ದಾನ ಮಾಡಿದರು ಅಥವಾ ಅದರಿಂದ ಯಾರು ಲಾಭ ಪಡೆದರು ಎಂಬುದರ ಕುರಿತು ಯಾವುದೇ ಸ್ಪಷ್ಟತೆ ಇಲ್ಲ ಎಂದರು.

ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಜಾಹೀರಾತು ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ದಿನೇಶ್ ಗುಂಡೂರಾವ್ ಅವರು, PM CARES ಅನ್ನು ಸರ್ಕಾರಿ ಟ್ರಸ್ಟ್ ಎಂದು ಘೋಷಿಸಿ, ದುಡ್ಡು ಯಾಕೆ ಸಂಗ್ರಹಿಸಿದರು? ಎಷ್ಟು ಹಣ ಸಂಗ್ರಹ ಆಗಿದೆ? ಎಷ್ಟು ಉಪಯೋಗ ಆಗಿದೆ? ಹಾಗೂ ಚುನಾವಣಾ ಬಾಂಡ್‌ನಲ್ಲಿ ಸಾವಿರಾರು ಕೋಟಿ ರೂ. ಲೂಟಿ ಮಾಡಲಾಗಿದೆ. ಮೊದಲು ಅವರು ಇದರ ಬಗ್ಗೆ ಉತ್ತರಿಸಲಿ ಎಂದು ಸವಾಲು ಹಾಕಿದರು.

"ನಿಜವಾದ ಸಮಸ್ಯೆ ಎಂದರೆ ಅಪಾರದರ್ಶಕ ವ್ಯವಸ್ಥೆಗಳ ಮೂಲಕ ಸಾರ್ವಜನಿಕ ಸಂಪತ್ತನ್ನು ಲೂಟಿ ಮಾಡುವುದು" ಎಂದು ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದರು.

ಗಮನವನ್ನು ಬೇರೆಡೆಗೆ ಸೆಳೆಯಲು ಬಿಜೆಪಿ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ಗುರಿಯಾಗಿಸಿಕೊಂಡಿದೆ ಎಂದು ಸಚಿವರು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಚೀನಾ ಏಕಪಕ್ಷೀಯ ನೀತಿಗೆ ಬ್ರೇಕ್‌: 'Quad' ಸಭೆ ನಡುವೆ ಮಹತ್ವದ ಖನಿಜ ಒಪ್ಪಂದಕ್ಕೆ ಭಾರತ-ಅಮೆರಿಕಾ ಸಹಿ..!

ಚೀನಾಗೆ ಕೌಂಟರ್: ಇಂಡೋ-ಪೆಸಿಫಿಕ್‌ನಲ್ಲಿ ಭದ್ರತಾ ಸಹಕಾರ ಹೆಚ್ಚಿಸಲು 'Quad' ಮಹತ್ವದ ತೀರ್ಮಾನ, ಹೊಸ ಕಾರ್ಯಯೋಜನೆ ಘೋಷಿಸಿದ ಮಾರ್ಕೊ ರುಬಿಯೋ..!

ದೆಹಲಿಯಲ್ಲಿ ಸಿದ್ದರಾಮಯ್ಯ-ಡಿಕೆ.ಶಿವಕುಮಾರ್; ನಾಯಕತ್ವ ಬದಲಾವಣೆ ಊಹಾಪೋಹಗಳಿಗೆ ಬೀಳುತ್ತಾ ತೆರೆ? ಕುತೂಹಲ ಮೂಡಿಸಿದ ಕಾಂಗ್ರೆಸ್ ಸಭೆ..!

ಪ್ಯಾಲೆಸ್ಟೀನ್ ರಾಷ್ಟ್ರ ಸ್ಥಾಪನೆವರೆಗೆ ಇಸ್ರೇಲ್‌ಗೆ ಮಾನ್ಯತೆ ಇಲ್ಲ: ಅಬ್ರಹಾಂ ಒಪ್ಪಂದಕ್ಕೆ 'NO' ಎಂದ ಪಾಕಿಸ್ತಾನ, ಟ್ರಂಪ್ ರಾಜತಾಂತ್ರಿಕ ಯತ್ನಕ್ಕೆ ಹಿನ್ನೆಡೆ..!

‘ಸ್ವಯಂ ರಕ್ಷಣೆ’ ಹೆಸರಿನಲ್ಲಿ ಇರಾನ್ ಕ್ಷಿಪಣಿ ಉಡಾವಣೆ ತಾಣಗಳ ಮೇಲೆ ಅಮೆರಿಕಾ ವಾಯುದಾಳಿ: ಟ್ರಂಪ್ ದ್ವಿಮುಖ ನಡೆ ವಿರುದ್ಧ ಟೀಕೆ, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ..!

SCROLL FOR NEXT