ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಸಿದ್ದರಾಮಯ್ಯ ಜೊತೆ ಜಮೀರ್ ಅಹ್ಮದ್ ಖಾನ್  
ರಾಜಕೀಯ

ಸಿದ್ದರಾಮಯ್ಯನವರು ಸಿಎಂ ಪೂರ್ಣಾವಧಿ ಮುಗಿಸುತ್ತಾರೆ, ಅವರ ನಂತರ ಡಿಕೆಶಿ ಆಗಬೇಕು: ಜಮೀರ್ ಅಹ್ಮದ್ ಖಾನ್

ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಬೇಕು ಎಂದು ನಾವು ಯಾವಾಗಲೂ ಹೇಳುತ್ತಲೇ ಬಂದಿದ್ದೇವೆ. ಆದರೆ ಸಿದ್ದರಾಮಯ್ಯ ನಂತರವೇ ಅವರು ಆಗಬೇಕು, ಅದು ನಮ್ಮ ಬೇಡಿಕೆ ಎಂದರು.

ಕೋಲಾರ: ಸಿಎಂ ಸಿದ್ದರಾಮಯ್ಯ 2028 ರವರೆಗೆ ಪೂರ್ಣ ಅವಧಿಗೆ ಅಧಿಕಾರದಲ್ಲಿ ಮುಂದುವರಿಯುತ್ತಾರೆ ಎಂದು ವಸತಿ ಸಚಿವ ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ಪುನರುಚ್ಛರಿಸಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಿದ್ದರಾಮಯ್ಯ ನಂತರವೇ ಮುಖ್ಯಮಂತ್ರಿಯಾಗಬೇಕು ಎಂದು ಹೇಳಿದ್ದಾರೆ.

ಕೋಲಾರದ ಶ್ರೀನಿವಾಸಪುರದ ಲಕ್ಷ್ಮಿಪುರದಲ್ಲಿ ನೂರಾನಿ ಮಸೀದಿಯನ್ನು ಉದ್ಘಾಟಿಸಲು ಆಗಮಿಸಿದ್ದ ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಜಮೀರ್ ಅಹ್ಮದ್, ಡಿ ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಬೇಕು ಎಂದು ನಾವು ಯಾವಾಗಲೂ ಹೇಳುತ್ತಲೇ ಬಂದಿದ್ದೇವೆ. ಆದರೆ ಸಿದ್ದರಾಮಯ್ಯ ನಂತರವೇ ಅವರು ಆಗಬೇಕು, ಅದು ನಮ್ಮ ಬೇಡಿಕೆ ಎಂದರು.

ಡಿ ಕೆ ಶಿವಕುಮಾರ್ ಅವರ ಕಾಂಗ್ರೆಸ್ ನಿಷ್ಠೆಯ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಕಾಂಗ್ರೆಸ್ ಶಿವಕುಮಾರ್ ಅವರ ರಕ್ತದಲ್ಲಿ ಹರಿಯುತ್ತದೆ. ನಮ್ಮಲ್ಲಿ ಹಲವರು ಬೇರೆ ಬೇರೆ ಪಕ್ಷಗಳಿಂದ ಬಂದಿದ್ದೇವೆ, ಆದರೆ ಕಾಂಗ್ರೆಸ್ ಡಿ ಕೆ ಶಿವಕುಮಾರ್ ಅವರ ರಕ್ತದಲ್ಲಿದೆ. ರಕ್ತವನ್ನು ಬದಲಾಯಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ನಾಯಕತ್ವ ಬದಲಾವಣೆಯ ಬಗ್ಗೆ ಪದೇ ಪದೇ ವದಂತಿಗಳು ಕೇಳಿಬರುತ್ತಿರುವ ಬಗ್ಗೆ ಕೇಳಿದಾಗ, ನವೆಂಬರ್ ಕ್ರಾಂತಿ, ಡಿಸೆಂಬರ್ ಕ್ರಾಂತಿ ಮತ್ತು ಈಗ ಜನವರಿ ಸಂಕ್ರಾಂತಿ ಬಗ್ಗೆ ಮಾತನಾಡಿದವರು ಏನೂ ಆಗುವುದಿಲ್ಲ ಎಂಬುದನ್ನು ಅರ್ಥಮಾಡಿಕೊಳ್ಳಬೇಕು. ಹೈಕಮಾಂಡ್ ಸಿದ್ದರಾಮಯ್ಯ ಜೊತೆಗಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ರಿಷಭ್ ಪಂತ್ ಔಟ್; ಭಾರತ ತಂಡ ಸೇರಿದ 24 ವರ್ಷದ ಆಟಗಾರ!

SCROLL FOR NEXT