ಡಿಸಿಎಂ ಡಿಕೆ ಶಿವಕುಮಾರ್ 
ರಾಜಕೀಯ

MGNREGA ಕುರಿತು ಚರ್ಚಿಸಲು ವಿಶೇಷ ಅಧಿವೇಶನ; ಜನವರಿ 26 ರಿಂದ ಕಾಂಗ್ರೆಸ್​​ 'ಮನ್ರೇಗಾ ಉಳಿಸಿ' ಪಾದಯಾತ್ರೆ

ಗ್ರಾಮೀಣ ಉದ್ಯೋಗ ಯೋಜನೆಯನ್ನು ರಕ್ಷಿಸಲು ಸರ್ಕಾರ ಜನವರಿ 26 ರಿಂದ ಫೆಬ್ರವರಿ 2 ರವರೆಗೆ ರಾಜ್ಯಾದ್ಯಂತ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಪಾದಯಾತ್ರೆ ನಡೆಸಲಿದೆ ಎಂದರು.

ಮಂಗಳೂರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ(MGNREGA)ಗೆ ಸಂಬಂಧಿಸಿದ ವಿಷಯಗಳನ್ನು ಚರ್ಚಿಸಲು ರಾಜ್ಯ ಸರ್ಕಾರ ವಿಧಾನಸಭೆಯ ವಿಶೇಷ ಅಧಿವೇಶನ ನಡೆಸಲಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಶನಿವಾರ ಘೋಷಿಸಿದ್ದಾರೆ.

ಇಂದು ಮಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಗ್ರಾಮೀಣ ಉದ್ಯೋಗ ಯೋಜನೆಯನ್ನು ರಕ್ಷಿಸಲು ಸರ್ಕಾರ ಜನವರಿ 26 ರಿಂದ ಫೆಬ್ರವರಿ 2 ರವರೆಗೆ ರಾಜ್ಯಾದ್ಯಂತ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಪಾದಯಾತ್ರೆ ನಡೆಸಲಿದೆ ಎಂದರು.

"MGNREGA ಉಳಿಸಲು, AICC ಒಂದು ಕಾರ್ಯಕ್ರಮವನ್ನು ಯೋಜಿಸಿದೆ. ಆದಾಗ್ಯೂ, ಕರ್ನಾಟಕಕ್ಕೆ ಸಂಬಂಧಿಸಿದಂತೆ, ನಾವು ವಿಭಿನ್ನ ಕಾರ್ಯಕ್ರಮವನ್ನು ಯೋಜಿಸಿದ್ದೇವೆ. MGNREGA ಕುರಿತು ನಾವು ವಿಧಾನಸಭೆಯ ವಿಶೇಷ ಅಧಿವೇಶನವನ್ನು ಕರೆಯುತ್ತಿದ್ದೇವೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ MGNREGA ಉಳಿಸಿ ಪಾದಯಾತ್ರೆ ಆಯೋಜಿಸುತ್ತಿದ್ದೇವೆ" ಎಂದು ಡಿಸಿಎಂ ತಿಳಿಸಿದರು.

ಈ ಪಾದಯಾತ್ರೆಯ ಮೂಲಕ, MGNREGA ಯೋಜನೆ ಬದಲಿಗೆ ವಿಕಸಿತ್ ಭಾರತ್ - ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಮಸೂದೆ, 2025(ವಿಬಿ–ಜಿ ರಾಮ್ ಜಿ ಮಸೂದೆ) ಜನರ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ಪಕ್ಷ ವಿವರಿಸುತ್ತದೆ ಎಂದು ಅವರು ಹೇಳಿದರು.

ರಾಜ್ಯದ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಜನವರಿ 26 ರಿಂದ ಫೆಬ್ರವರಿ 2 ರವರೆಗೆ ಪಾದಯಾತ್ರೆಗಳನ್ನು ನಡೆಸಲಾಗುವುದು. ಪ್ರತಿ ಪಾದಯಾತ್ರೆಯು ಐದರಿಂದ 10 ಕಿಲೋಮೀಟರ್ ದೂರವನ್ನು ಕ್ರಮಿಸುತ್ತದೆ ಮತ್ತು ಪಂಚಾಯತ್ ಸದಸ್ಯರು ಹಾಗೂ ಕಾರ್ಮಿಕರನ್ನು ಒಳಗೊಂಡಿರುತ್ತದೆ ಎಂದರು.

"ಈಗ, ಅವರು ಯೋಜನೆಯನ್ನು ಈ ಸಂಪೂರ್ಣ ಕೊಲ್ಲಲು ಬಯಸಿದ್ದಾರೆ. ಆದ್ದರಿಂದ ನಾವು ಎಲ್ಲಾ ಪಾಲುದಾರರನ್ನು ಪ್ರೋತ್ಸಾಹಿಸಲು ಬಯಸುತ್ತೇವೆ. ನಾವು ಅವರನ್ನು ಕರೆಯುತ್ತೇವೆ, ಅವರಿಗೆ ಮಾಹಿತಿ ನೀಡುತ್ತೇವೆ. ಕಾಯ್ದೆಯನ್ನು ಹಿಂದಕ್ಕೆ ಪಡೆಯುವಂತೆ ನಾವು ಒತ್ತಾಯಿಸುತ್ತೇವೆ" ಎಂದು ಸುದ್ದಿಗಾರರಿಗೆ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ: 15 ಕಿ.ಮೀ. ಒಳಗಿನ ಅಕ್ರಮ ನಿರ್ಮಾಣ ಕೆಡವಲು ಅಮಿತ್ ಶಾ ಸೂಚನೆ

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

SCROLL FOR NEXT