ಮೈಸೂರಿನಲ್ಲಿ ರಾಹುಲ್ ಗಾಂಧಿ ಜತೆ ಸಿದ್ದರಾಮಯ್ಯ, ಡಿಕೆಸಿ ಮಹತ್ವದ ಚರ್ಚೆ 
ರಾಜಕೀಯ

ಮೈಸೂರಿನಲ್ಲಿ ರಾಹುಲ್ ಗಾಂಧಿ ಜತೆ ಸಿದ್ದರಾಮಯ್ಯ, ಡಿಕೆಸಿ ಮಹತ್ವದ ಚರ್ಚೆ; ಬಳಿಕ ಸಿಎಂ ಹೇಳಿದ್ದೇನು? Video

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರು ಮಂಗಳವಾರ ಮೈಸೂರಿನ ಮಂಡಕಳ್ಳಿಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿಯನ್ನ ಅವರನ್ನು ಜಂಟಿಯಾಗಿ ಸ್ವಾಗತಿಸಿದರು.

ಮೈಸೂರು: ರಾಜ್ಯ ಕಾಂಗ್ರೆಸ್ ನಲ್ಲಿ ಮತ್ತೆ ನಾಯಕತ್ವ ಬದಲಾವಣೆಯ ಚರ್ಚೆ ಜೋರಾಗಿದ್ದು, ಒಂದು ಕಡೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೊಟ್ಟ ಮಾತು ನೆನಪಿಸುತ್ತಿದ್ದರೆ ಮತ್ತೊಂದು ಕಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈಕಮಾಂಡ್ ನಾಯಕರ ಮಾತೇ ಅಂತಿಮ ಎನ್ನುತ್ತಿದ್ದಾರೆ.

ಸಿಎಂ ಕುರ್ಚಿ ಕಾಳಗದ ನಡುವೆಯೇ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರು ಮಂಗಳವಾರ ಮೈಸೂರಿನ ಮಂಡಕಳ್ಳಿಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿಯನ್ನ ಅವರನ್ನು ಜಂಟಿಯಾಗಿ ಸ್ವಾಗತಿಸಿದರು.

ತಮಿಳುನಾಡಿಗೆ ತೆರಳಲು ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಮೈಸೂರಿಗೆ ಆಗಮಿಸಿದ ರಾಹುಲ್ ಗಾಂಧಿ ಅವರಿಗೆ ಸಿಎಂ ಸಿದ್ದರಾಮಯ್ಯ ಅವರು ಪುಷ್ಪಗುಚ್ಛ ನೀಡಿ ಸ್ವಾಗತಿಸಿ, ಮೈಸೂರು ಅರಮನೆ ಮಾದರಿಯನ್ನು ಉಡುಗೊರೆಯಾಗಿ ನೀಡಿದರು. ಈ ವೇಳೆ ಸಿಎಂ ಹಾಗೂ ಡಿಸಿಎಂ ಕೆಲ ನಿಮಿಷಗಳ ಕಾಲ ರಾಹುಲ್ ಗಾಂಧಿ ಜತೆ ಮಹತ್ವದ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಮ್ಮಲ್ಲಿ ಯಾವ ಗೊಂದಲ ಇಲ್ಲ, ಯಾವ ಸಮಸ್ಯೆಯೂ ಇಲ್ಲ. ಊಹಾಪೋಹ ಬಗ್ಗೆ ಚರ್ಚೆ ಮಾಡ್ತಿರುವುದು ಮಾಧ್ಯಮದವರು ಎಂದರು.

ಯಾರೋ ಎಂಎಲ್ಎ ಏನೂ ಗೊತ್ತಿಲ್ಲದೆ ಏನೋ ಹೇಳುತ್ತಾರೆ. ಅವರಿಗೆ ಏನು ಗೊತ್ತು? ಮಾತನಾಡಬೇಕಿರುವುದು ನಾನು ಮತ್ತು ಡಿ.ಕೆ.ಶಿವಕುಮಾರ್. ಡಿಸಿಎಂ ಡಿ.ಕೆ.ಶಿವಕುಮಾರ್ ಏನಾದರೂ ಮಾತನಾಡಿದ್ದಾರಾ? ನಾನೇನಾದರೂ ಮಾತನಾಡಿದ್ದೀನಾ? ಮಾಹಿತಿ ಇಲ್ಲದ MLA ಹೇಳಿದ್ದಕ್ಕೆ ಪ್ರತಿಕ್ರಿಯೆ ಕೇಳಿದರೆ ಹೇಗೆ? ನಮ್ಮಲ್ಲಿ ಯಾವ ಗೊಂದಲ ಇಲ್ಲ. ಯಾವ ಚರ್ಚೆಯೂ ಇಲ್ಲ. ಖರ್ಗೆ, ಡಿ.ಕೆ.ಶಿವಕುಮಾರ್​ ಜೊತೆ ನಾನು ಮಾತನಾಡಿದ್ದೇನೆ. ಯಾರ ಅಪಸ್ವರವೂ ಇಲ್ಲ, ಯಾವ ಸಮಸ್ಯೆಯೂ ಇಲ್ಲ. ಏನೇ ತೀರ್ಮಾನಗಳಿದ್ದರೂ ಹೈಕಮಾಂಡ್ ಮಾಡುತ್ತೆ. ಹೈಕಮಾಂಡ್ ನಿರ್ಧಾರಕ್ಕೆ ಬದ್ಧವೆಂದು ನಾನು, ಡಿಕೆ ಹೇಳಿದ್ದೇವೆ. ಸದ್ಯಕ್ಕೆ ನಾನೇನು ದೆಹಲಿಗೆ ಹೋಗುತ್ತಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕುರ್ಚಿ ಕಾಳಗ: ಸಿದ್ದರಾಮಯ್ಯ, ಡಿಕೆಸಿ ಜತೆ ರಾಹಲ್ ಗಾಂಧಿ ಪ್ರತ್ಯೇಕ ಚರ್ಚೆ; ಕುತೂಹಲ ಮೂಡಿಸಿದೆ ಚುಟುಕು ಮಾತುಕತೆ! Video

ಇರಾನ್ ಪ್ರತಿಭಟನೆಯಲ್ಲಿ 2000 ಜನ ಸಾವು; ಇದಕ್ಕೆ ಉಗ್ರರು ಕಾರಣ ಎಂದ ಅಧಿಕಾರಿಗಳು

ತುಮಕೂರು ಕ್ರೀಡಾಂಗಣದಿಂದ ಗಾಂಧಿ ಹೆಸರು ತೆರವು- ಬಿಜೆಪಿ ಆರೋಪ; ಜಿ ಪರಮೇಶ್ವರ ಪ್ರತಿಕ್ರಿಯೆ ಏನು? Video

ಫಿನಾಲೆ ಹಂತಕ್ಕೆ'ಬಿಗ್‌ಬಾಸ್‌ ಕನ್ನಡ' 12, ಎಲ್ಲೆಲ್ಲೂ ಗಿಲ್ಲಿ ನಟನ ಹಾವಳಿ! ಗೆಲ್ಲುವ ಅದೃಷ್ಟ ಯಾರಿಗಿದೆ?

Toxic Teaserನಲ್ಲಿ 'ಟೂ ಮಚ್ ಸೆಕ್ಸ್' ಇದೆಯೇ? CBFCಗೆ ಮತ್ತೊಂದು ದೂರು!

SCROLL FOR NEXT