ಡಿ.ಕೆ ಶಿವಕುಮಾರ್ 
ರಾಜಕೀಯ

ನಾಯಕತ್ವ ಬದಲಾವಣೆ ಬಹಿರಂಗ ಚರ್ಚೆಯ ವಿಷಯವಲ್ಲ; ಸಿಎಂ-ಹೈಕಮಾಂಡ್ ನಡುವಣ ವಿಚಾರ: ಡಿ.ಕೆ ಶಿವಕುಮಾರ್

ಇಂದು ಅಸ್ಸಾಂ ಚುನಾವಣೆ ಸಂಬಂಧ ಹೈಕಮಾಂಡ್ ನಾಯಕರ ಜತೆ ಸಭೆ ಇದೆ, ನಮ್ಮ ಪಕ್ಷದ ಯೋಜನೆಗಳನ್ನು ಬಹಿರಂಗಪಡಿಸಲು ಹೇಗೆ ಸಾಧ್ಯ? ಇದನ್ನು ಪಕ್ಷದ ಮಟ್ಟದಲ್ಲಿ ಮಾತ್ರ ಚರ್ಚೆ ಮಾಡಲಾಗುವುದು.

ದೆಹಲಿ: ನಾಯಕತ್ವ ಬದಲಾವಣೆ ಬಹಿರಂಗ ಚರ್ಚೆಯ ವಿಷಯವಲ್ಲ: ಸಿಎಂ -ಹೈಕಮಾಂಡ್ ನಡುವಣ ವಿಚಾರ; ಡಿ.ಕೆ. ಶಿವಕುಮಾರ್

ದೆಹಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು. ರಾಹುಲ್ ಗಾಂಧಿ ಅವರ ಜೊತೆ ಸಿಎಂ ಸ್ಥಾನದ ಬಗ್ಗೆ ಚರ್ಚೆ ಮಾಡಲಾಯಿತೇ ಎಂದು ಕೇಳಿದಾಗ, ಈ ರೀತಿ ಉತ್ತರಿಸಿದರು.

ಇಂದು ಅಸ್ಸಾಂ ಚುನಾವಣೆ ಸಂಬಂಧ ಹೈಕಮಾಂಡ್ ನಾಯಕರ ಜತೆ ಸಭೆ ಇದೆ, ನಮ್ಮ ಪಕ್ಷದ ಯೋಜನೆಗಳನ್ನು ಬಹಿರಂಗಪಡಿಸಲು ಹೇಗೆ ಸಾಧ್ಯ? ಇದನ್ನು ಪಕ್ಷದ ಮಟ್ಟದಲ್ಲಿ ಮಾತ್ರ ಚರ್ಚೆ ಮಾಡಲಾಗುವುದು. ಸಾರ್ವಜನಿಕವಾಗಿ ಅಲ್ಲ. ಏನಾದರೂ ಮಾಹಿತಿ ನೀಡುವುದಿದ್ದರೆ, ನಮ್ಮ ಪಕ್ಷದ ಪ್ರಧಾನ ಕಾರ್ಯದರ್ಶಿಗಳು ಇದ್ದಾರೆ, ಅವರು ನೀಡುತ್ತಾರೆ ಎಂದರು.

ಈ ಪ್ರವಾಸದಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುತ್ತೀರಾ ಎಂದು ಕೇಳಿದಾಗ, ನಾನು ಪಕ್ಷದ ನಾಯಕರನ್ನು ಭೇಟಿ ಮಾಡುವ ಉದ್ದೇಶದಿಂದಲೇ ದೆಹಲಿಗೆ ಬಂದಿದ್ದೇನೆ, ನೋಡೋಣ ಎಂದರು. ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಕೆಲವು ಪ್ರಮುಖ ಕಾನೂನಾತ್ಮಕ ವಿಚಾರಗಳನ್ನು ಚರ್ಚೆ ಮಾಡಬೇಕಾಗಿದ್ದು ಹೀಗಾಗಿ ಕಾನೂನು ತಜ್ಞರು ಹಾಗೂ ಕೇಂದ್ರ ಸಚಿವರನ್ನು ಭೇಟಿ ಮಾಡಲಿದ್ದೇನೆ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

GBA ಚುನಾವಣೆಯಲ್ಲಿ ಮುರಿದು ಬೀಳುತ್ತಾ BJP-JDS ಮೈತ್ರಿ?: ಕುಮಾರಸ್ವಾಮಿ ಹೇಳಿದ್ದೇನು?

BMC ಫಲಿತಾಂಶ: ಬಿಜೆಪಿ ಅಬ್ಬರ; ಕಾಂಗ್ರೆಸ್ ಕಳಪೆ ಸಾಧನೆಗೆ ಕಾರಣವೇನು?

ಮನ ಮಿಡಿಯುವ Video: ಗಾಯಗೊಂಡ ಗೆಳತಿ ರಸ್ತೆ ದಾಟುವವರೆಗೆ ವಾಹನಗಳನ್ನೇ ತಡೆದು ಘೀಳಿಟ್ಟ ಆನೆ!

ಮಹಾ ಸ್ಥಳೀಯ ಸಂಸ್ಥೆ ಚುನಾವಣೆ: ಓವೈಸಿಯ AIMIM 114 ಸ್ಥಾನಗಳಲ್ಲಿ ಗೆಲುವು

ಇರಾನ್‌ನಲ್ಲಿ ಸಿಲುಕಿರುವ 60 ಕಾಶ್ಮೀರ ವಿದ್ಯಾರ್ಥಿಗಳು, ಯಾತ್ರಿಕರು ಮಧ್ಯರಾತ್ರಿ ದೆಹಲಿಗೆ ಆಗಮನ

SCROLL FOR NEXT