ಪುನೀತ್ ಕೆರೆಹಳ್ಳಿ 
ರಾಜಕೀಯ

'ದುಷ್ಟ ಅಪರಾಧಿಗಳಿಗೆ ಅಭಯ ನೀಡುತ್ತಾ, ಸಮಾಜ ಪರ ಹೋರಾಟಗಾರರನ್ನು ಹತ್ತಿಕ್ಕುವ ದಮನಕಾರಿ ನೀತಿಯೇ ಈ ಸರ್ಕಾರದ ಅಲಿಖಿತ ನಿಯಮ..!'

ಕಾಂಗ್ರೆಸ್ ಸರ್ಕಾರ ತನ್ನ ತುಷ್ಟೀಕರಣ ಮತ್ತು ಓಲೈಕೆ ರಾಜಕೀಯಕ್ಕಾಗಿ, ರಾಜ್ಯದಲ್ಲಿ ಅಕ್ರಮ ಬಾಂಗ್ಲಾ ವಲಸಿಗರ ಹಾವಳಿಯ ವಿರುದ್ಧ ದನಿಯೆತ್ತಿ, ಸಮಾಜದ ಸುರಕ್ಷತೆಗಾಗಿ ಸರ್ಕಾರ ಮಾಡಬೇಕಿದ್ದ ಕೆಲಸವನ್ನು ಮಾಡುತ್ತಿರುವವರನ್ನು ಬಂಧಿಸಿದೆ.

ಬೆಂಗಳೂರು: ದುಷ್ಟ ಅಪರಾಧಿಗಳಿಗೆ ಅಭಯ ನೀಡುತ್ತಾ, ಸಮಾಜ ಪರ ಹೋರಾಟಗಾರರನ್ನು ಹತ್ತಿಕ್ಕುವ ದಮನಕಾರಿ ನೀತಿಯೇ ಈ ಭ್ರಷ್ಟ ಸರ್ಕಾರದ ಅಲಿಖಿತ ನಿಯಮವಾದಂತಿದೆ ಎಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ.

ಹಿಂದೂಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಬಂಧನ ವಿಚಾರ ಸಂಬಂಧ ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ದುಷ್ಟ ಅಪರಾಧಿಗಳಿಗೆ ಅಭಯ ನೀಡುತ್ತಾ, ಸಮಾಜ ಪರ ಹೋರಾಟಗಾರರನ್ನು ಹತ್ತಿಕ್ಕುವ ದಮನಕಾರಿ ನೀತಿಯೇ ಈ ಭ್ರಷ್ಟ ಕಾಂಗ್ರೆಸ್ ಸರ್ಕಾರದ ಅಲಿಖಿತ ನಿಯಮವಾದಂತಿದೆ. ದೇಶದ ಭದ್ರತೆಗೆ ಸವಾಲಾಗಿರುವ ಅಕ್ರಮ ವಲಸಿಗರ ವಿರುದ್ಧ ಜಾಗೃತಿ ಮೂಡಿಸುತ್ತಿರುವ ಪುನೀತ್ ಕೆರೆಹಳ್ಳಿ ಅವರನ್ನು ಬಂಧಿಸಿರುವುದು ಖಂಡನೀಯ, ಇದು ಕಾಂಗ್ರೆಸ್ ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ಸಾಕ್ಷಿಯಾಗಿದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಸರ್ಕಾರ ತನ್ನ ತುಷ್ಟೀಕರಣ ಮತ್ತು ಓಲೈಕೆ ರಾಜಕೀಯಕ್ಕಾಗಿ, ರಾಜ್ಯದಲ್ಲಿ ಅಕ್ರಮ ಬಾಂಗ್ಲಾ ವಲಸಿಗರ ಹಾವಳಿಯ ವಿರುದ್ಧ ದನಿಯೆತ್ತಿ, ಸಮಾಜದ ಸುರಕ್ಷತೆಗಾಗಿ ಸರ್ಕಾರ ಮಾಡಬೇಕಿದ್ದ ಕೆಲಸವನ್ನು ಮಾಡುತ್ತಿರುವವರನ್ನು ಬಂಧಿಸಿದೆ. ಹಿಂದೂ ಪರವಾಗಿ, ಸಮಾಜದ ಸುರಕ್ಷತೆಗಾಗಿ ನಿಲ್ಲುವವರ ಮೇಲೆ ಪೊಲೀಸ್ ಬಲಪ್ರಯೋಗಿಸಿ ಪ್ರಜಾಪ್ರಭುತ್ವ ವಿರೋಧಿ ನಡೆ ಅನುಸರಿಸುತ್ತಿದೆ ಎಂದು ಕಿಡಿಕಾರಿದ್ದಾರೆ.

ಇನ್ನೊಂದೆಡೆ, ಮಹಿಳಾ ಸರ್ಕಾರಿ ಅಧಿಕಾರಿಗೆ ಅಸಭ್ಯವಾಗಿ ಬೈದು, ಜೀವ ಬೆದರಿಕೆ ಹಾಕಿರುವ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ತಲೆಮರೆಸಿಕೊಂಡಿದ್ದರೂ ಪೊಲೀಸರಿಗೆ ಆತನ ಪತ್ತೆ ಹಚ್ಚಲು ಸಾಧ್ಯವಾಗುತ್ತಿಲ್ಲ.

ಸ್ವಪಕ್ಷದ ಅಪರಾಧಿಗಳಿಗೆ ರಾಜಾತಿಥ್ಯ, ಸಮಾಜದ ಹಿತ ಬಯಸುವವರ ಮೇಲೆ ದಮನಕಾರಿ ನೀತಿ - ಇದೇ ಈ ಕಾಂಗ್ರೆಸ್ ಸರ್ಕಾರದ ನಾಚಿಕೆಗೇಡಿನ ಆಡಳಿತ ವೈಖರಿ. ರಾಜ್ಯ ಸರ್ಕಾರ ತನ್ನ ಪಕ್ಷಪಾತ ಧೋರಣೆಯನ್ನು ಕೈಬಿಟ್ಟು, ಕಾನೂನು ಎಲ್ಲರಿಗೂ ಸಮಾನವಾಗಿರುವಂತೆ ನೋಡಿಕೊಳ್ಳದಿದ್ದರೆ, ಸಂವಿಧಾನಾತ್ಮಕ ಹಕ್ಕುಗಳ ದಮನದ ವಿರುದ್ಧ ರಾಜ್ಯದ ಜನತೆ ಬೀದಿಗಿಳಿದು ಹೋರಾಡಲಿದ್ದಾರೆ ಎಂದು ಎಚ್ಚರಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Strait of Hormuz: 'ಅಡ್ಡ ಬರುವ Iran ಸಣ್ಣ ಬೋಟ್ ಗಳ ಗುಂಡಿಟ್ಟು ಉಡಾಯಿಸಿ': ಅಮೆರಿಕ ಸೇನೆಗೆ Donald Trump ಆದೇಶ!

ಸ್ವಾತಂತ್ರ್ಯದ ನಂತರ ತಮಿಳುನಾಡು, ಪ.ಬಂಗಾಳದಲ್ಲಿ ದಾಖಲೆ ಪ್ರಮಾಣದ ಮತದಾನ, ಮತದಾರರಿಗೆ ಧನ್ಯವಾದ ಹೇಳಿದ ಚುನಾವಣಾ ಆಯೋಗ!

Hassan: 'ಬಡ್ಡಿ ಸಮೇತ ತೀರಿಸೋವರ್ಗೂ ರಾಜಕೀಯದಲ್ಲಿ ಇರ್ತೀನಿ': ಎಚ್ ಡಿಕೆ ಮುಂದೆಯೇ HD Revanna ಕಣ್ಣೀರಿನ ಶಪಥ

IPL 2026: ಮತ್ತೆ ಮುಗ್ಗರಿಸಿದ MI, 103 ರನ್ ಅಂತರದಲ್ಲಿ CSKಗೆ ಜಯ!

IPL 2026: MI ವಿರುದ್ಧ ಸ್ಫೋಟಕ ಬ್ಯಾಟಿಂಗ್, ಶತಕದ ಮೂಲಕ ಐತಿಹಾಸ ನಿರ್ಮಿಸಿದ Sanju Samson, ಎಲೈಟ್ ಗ್ರೂಪ್ ಸೇರ್ಪಡೆ

SCROLL FOR NEXT