ಹೆಚ್ ಸಿ ಮಹದೇವಪ್ಪ-ಸತೀಶ್ ಜಾರಕಿಹೊಳಿ  
ರಾಜಕೀಯ

ರಾಜ್ಯ ರಾಜಕೀಯದಲ್ಲಿ ಹಲವು ಬೆಳವಣಿಗೆ: ಊಹಾಪೋಹಗಳಿಗೆ ಕಾರಣವಾದ ಮಹದೇವಪ್ಪ-ಸತೀಶ್ ಜಾರಕಿಹೊಳಿ ರಹಸ್ಯ ಮಾತುಕತೆ

ಬೆಂಗಳೂರಿನ ಶಿವಾನಂದ ವೃತ್ತದ ಬಳಿ ಅಕ್ಕಪಕ್ಕದಲ್ಲಿ ಅಧಿಕೃತ ನಿವಾಸಗಳನ್ನು ಹೊಂದಿರುವ ಈ ಇಬ್ಬರು ಸಚಿವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡವರಾಗಿದ್ದಾರೆ.

ಬೆಳಗಾವಿ: ವಿದೇಶ ಪ್ರವಾಸದಿಂದ ಹಿಂದಿರುಗಿದ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ನಿನ್ನೆ ಶನಿವಾರ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ. ಮಹದೇವಪ್ಪ ಅವರೊಂದಿಗೆ ರಹಸ್ಯವಾಗಿ ಚರ್ಚೆ ನಡೆಸಿದ್ದು, ಕಾಂಗ್ರೆಸ್‌ನಲ್ಲಿ ತೀವ್ರ ರಾಜಕೀಯ ಊಹಾಪೋಹಗಳಿಗೆ ಕಾರಣವಾಗಿದೆ.

ಬೆಂಗಳೂರಿನ ಶಿವಾನಂದ ವೃತ್ತದ ಬಳಿ ಅಕ್ಕಪಕ್ಕದಲ್ಲಿ ಅಧಿಕೃತ ನಿವಾಸಗಳನ್ನು ಹೊಂದಿರುವ ಈ ಇಬ್ಬರು ಸಚಿವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡವರಾಗಿದ್ದಾರೆ.

ದಕ್ಷಿಣ ಆಫ್ರಿಕಾಕ್ಕೆ ಒಂದು ವಾರದ ಪ್ರವಾಸಕ್ಕೆ ಹೋಗಿದ್ದ ಸತೀಶ್ ಜಾರಕಿಹೊಳಿ ಮೊನ್ನೆ ಶುಕ್ರವಾರ ಬೆಂಗಳೂರಿಗೆ ಮರಳಿದರು. ನಿನ್ನೆ ಶನಿವಾರ ಬೆಳಗ್ಗೆ ಮಹದೇವಪ್ಪ ಅವರು ಸತೀಶ್ ಜಾರಕಿಹೊಳಿ ಅವರನ್ನು ಅವರ ನಿವಾಸದಲ್ಲಿ ಭೇಟಿಯಾದರು ಎಂದು ಬಲ್ಲ ಮೂಲಗಳು ತಿಳಿಸಿವೆ.

ಮುಖ್ಯಮಂತ್ರಿ ಹುದ್ದೆಯ ಪ್ರಬಲ ಆಕಾಂಕ್ಷಿಯಾಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೆಹಲಿಗೆ ಪ್ರಯಾಣ ಬೆಳೆಸಿದ್ದು, ಲೋಕಸಭೆಯ ವಿರೋಧ ಪಕ್ಷದ ನಾಯಕ ಮತ್ತು ರಾಯ್ ಬರೇಲಿ ಸಂಸದ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡುವ ಸಾಧ್ಯತೆಯಿರುವ ಈ ಸಂದರ್ಭದಲ್ಲಿಈ ಇಬ್ಬರು ಸಚಿವರು ರಹಸ್ಯ ಮಾತುಕತೆ ನಡೆಸಿದ್ದು, ರಾಜಕೀಯ ಮಹತ್ವ ಪಡೆದುಕೊಂಡಿದೆ.

ಈ ಹಿನ್ನೆಲೆಯಲ್ಲಿ, ಬೆಂಗಳೂರಿನಲ್ಲಿ ನಡೆದ ಸತೀಶ್ ಜಾರಕಿಹೊಳಿ- ಹೆಚ್ ಸಿ ಮಹದೇವಪ್ಪ ಭೇಟಿಯು ರಾಜಕೀಯ ವಲಯಗಳಲ್ಲಿ ಗಮನ ಸೆಳೆದಿದೆ. ಇಬ್ಬರೂ ಸಚಿವರು ಸಿದ್ದರಾಮಯ್ಯ ಅವರು ಐದು ವರ್ಷಗಳ ಅವಧಿಯನ್ನು ಮುಖ್ಯಮಂತ್ರಿಯಾಗಿ ಪೂರ್ಣಗೊಳಿಸಬೇಕು ಎಂದು ನಿರಂತರವಾಗಿ ಪ್ರತಿಪಾದಿಸುತ್ತಾ ಬಂದಿದ್ದಾರೆ. ಯಾವುದೇ ಪರಿಸ್ಥಿತಿಯಲ್ಲಿ ನಾಯಕತ್ವ ಬದಲಾವಣೆಯನ್ನು ಅವರು ದೃಢವಾಗಿ ವಿರೋಧಿಸುತ್ತಾರೆ. ಇದಕ್ಕೆ ವ್ಯತಿರಿಕ್ತವಾಗಿ, ಡಿಕೆ ಶಿವಕುಮಾರ್ ದೆಹಲಿ ಮಟ್ಟದಲ್ಲಿ ತಮ್ಮ ಲಾಬಿಯನ್ನು ಮುಂದುವರೆಸಿದ್ದಾರೆ. ತಮ್ಮ ನಿಲುವಿನಿಂದ ಹಿಂದೆ ಸರಿಯಲು ಡಿ ಕೆ ಶಿವಕುಮಾರ್ ನಿರಾಕರಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ನಿರ್ಣಾಯಕ ಹಂತದಲ್ಲಿ, ಇಬ್ಬರು ಹಿರಿಯ ಸಚಿವರ ನಡುವಿನ ಮಾತುಕತೆಯು ಹಲವು ಊಹಾಪೋಹಗಳಿಗೆ ಎಡೆಮಾಡಿಕೊಟ್ಟಿದೆ. ಇದು ಕಾಂಗ್ರೆಸ್‌ನೊಳಗೆ ಕುದಿಯುತ್ತಿರುವ ಅಧಿಕಾರ ಬದಲಾವಣೆಗೆ ಮತ್ತಷ್ಟು ಪುಷ್ಠಿ ನೀಡುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Kaziranga corridor-ಅಸ್ಸಾಂ: 6,957 ಕೋಟಿ ರೂ. ವೆಚ್ಚದ ಕಾಜಿರಂಗ ಕಾರಿಡಾರ್‌ಗೆ ಪ್ರಧಾನಿ ಶಂಕುಸ್ಥಾಪನೆ-Video

ಗ್ರೀನ್‌ಲ್ಯಾಂಡ್ ಮೇಲೆ ಅಮೆರಿಕಾ ನಿಯಂತ್ರಣ: ವಿರೋಧಿಸಿದ ಯುರೋಪಿನ 8 ರಾಷ್ಟ್ರಗಳ ಮೇಲೆ ಶೇ.10ರಷ್ಟು ತೆರಿಗೆ ಘೋಷಿಸಿದ ಟ್ರಂಪ್

U19 World Cup: ಮತ್ತೊಂದು ವಿಶ್ವ ದಾಖಲೆ ಬರೆದ 14 ವರ್ಷದ ವೈಭವ್ ಸೂರ್ಯವಂಶಿ!

RSS ಏನೆಂದು ಅರ್ಥಮಾಡಿಕೊಳ್ಳಲು ಬಯಸಿದರೆ, ಜನರು ಅದರ ಶಾಖೆಗಳಿಗೆ ಬರಬೇಕು: ಸಂಘದ ಮುಖ್ಯಸ್ಥ ಮೋಹನ್ ಭಾಗವತ್

U19 World Cup, India vs Bangladesh: ಬೌಂಡರಿ ಲೈನ್ ಬಳಿ ವೈಭವ್ ಸೂರ್ಯವಂಶಿ ಅದ್ಭುತ ಕ್ಯಾಚ್‌ಗೆ ಫ್ಯಾನ್ಸ್ ಫಿದಾ!

SCROLL FOR NEXT