ಸಿಎಂ ಸಿದ್ದರಾಮಯ್ಯ 
ರಾಜಕೀಯ

ಚಾಮುಂಡೇಶ್ವರಿ ಕ್ಷೇತ್ರದವರು ನನ್ನನ್ನು ಸೋಲಿಸಿದ್ದರು; ಬಾದಾಮಿ ಜನ ಗೆಲ್ಲಿಸಿದ್ದರಿಂದಲೇ ಮುಖ್ಯಮಂತ್ರಿಯಾದೆ: ಸಿದ್ದರಾಮಯ್ಯ

ಐದು ಬಾರಿ ಗೆದ್ದಿದ್ದ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನನ್ನನ್ನು ಸೋಲಿಸಿದರು. ಮೊದಲ ಬಾರಿಗೆ ಸ್ಪರ್ಧಿಸಿದ್ದರೂ ಬಾದಾಮಿಯಲ್ಲಿ ಗೆಲ್ಲಿಸಿದರು. ಇದು ಎಂದಿಗೂ ಮರೆಯಲು ಸಾಧ್ಯವಿಲ್ಲ. ನಾನು ಎರಡ್ಮೂರು ಬಾರಿ ಮಾತ್ರ ಇಲ್ಲಿಗೆ ಬಂದು ಗೆಲ್ಲಿಸಲು ಮನವಿ ಮಾಡಿದ್ದೆ.

ಬಾದಾಮಿ: ಚಾಮುಂಡೇಶ್ವರಿ ಕ್ಷೇತ್ರದವರು ನನ್ನನ್ನು ಸೋಲಿಸಿದ್ದರು. ಆದರೆ, ಬಾದಾಮಿ ಕ್ಷೇತ್ರದ ಜನ ಗೆಲ್ಲಿಸಿದ್ದರು. ಅದರಿಂದಲೇ ಮುಖ್ಯಮಂತ್ರಿಯಾಗಲು ಸಾಧ್ಯವಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬಾದಾಮಿಯಲ್ಲಿ ಚಾಲುಕ್ಯ ಉತ್ಸವ ಉದ್ಘಾಟಿಸಿದ ಅವರು, ನಿಮ್ಮ ಉಪಕಾರವನ್ನು ಎಂದಿಗೂ ಮರೆಯುವುದಿಲ್ಲ. ಚಾಲುಕ್ಯ ಉತ್ಸವ ನಡೆಯಲಿಲ್ಲ, ಇಮ್ಮಡಿ ಪುಲಿಕೇಶಿ ಮೂರ್ತಿ ಪ್ರತಿಷ್ಠಾಪನೆಯಾಗಲಿಲ್ಲ ಎಂಬ ಕೊರಗಿತ್ತು. ಈಗ ಅವೆರಡೂ ಈಡೇರಿವೆ ಎಂದರು.

ಎರಡೂವರೆ ವರ್ಷಗಳಲ್ಲಿ ಬಾದಾಮಿ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗಾಗಿ ₹2 ಸಾವಿರ ಕೋಟಿ ಅನುದಾನ ನೀಡಲಾಗಿದೆ. ವೇದಿಕೆ ಮೇಲೆ ಪ್ರತಿಪಕ್ಷದ ನಾಯಕರೂ ಇದ್ದಾರೆ. ಆದರೆ, ಇಲ್ಲಿ ರಾಜಕೀಯ ಮಾಡುವುದಿಲ್ಲ. ನಿಮ್ಮ ಕ್ಷೇತ್ರದ ಅಭಿವೃದ್ಧಿಗೂ ಅನುದಾನ ಕೊಡುವೆ. ನೀವೂ ಕೇಂದ್ರದಿಂದ ಅನುದಾನ ತರಲು ಕೈಜೋಡಿಸಿ ಎಂದು ಸಿದ್ದರಾಮಯ್ಯ ಹೇಳಿದರು.

ಐದು ಬಾರಿ ಗೆದ್ದಿದ್ದ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನನ್ನನ್ನು ಸೋಲಿಸಿದರು. ಮೊದಲ ಬಾರಿಗೆ ಸ್ಪರ್ಧಿಸಿದ್ದರೂ ಬಾದಾಮಿಯಲ್ಲಿ ಗೆಲ್ಲಿಸಿದರು. ಇದು ಎಂದಿಗೂ ಮರೆಯಲು ಸಾಧ್ಯವಿಲ್ಲ. ನಾನು ಎರಡ್ಮೂರು ಬಾರಿ ಮಾತ್ರ ಇಲ್ಲಿಗೆ ಬಂದು ಗೆಲ್ಲಿಸಲು ಮನವಿ ಮಾಡಿದ್ದೆ. ಆದರೆ ನೀವೆಲ್ಲ ನನ್ನನ್ನು ಗೆಲ್ಲಿಸಿದ್ದರ ಪರಿಣಾಮವೇ ನಾನು 2023ರಲ್ಲಿ ಪುನಃ ವರುಣಾದಲ್ಲಿ ಗೆದ್ದು ಸಿಎಂ ಆಗಲು ಕಾರಣವಾಯಿತು. ಇದನ್ನು ನಾನು ಜೀವನಪೂರ್ತಿ ಮರೆಯಲ್ಲ ಎಂದರು. ನಾನು ಶಾಸಕನಾಗಿದ್ದಾಗ ಉತ್ಸವ ಮಾಡಲು ಆಗಲಿಲ್ಲ. ಆದರೀಗ ಸಿಎಂ ಆಗಿದ್ದೇನೆ. ಈಗಲಾದರೂ ಮಾಡೋಣ ಎಂದು ಬಜೆಟ್‌ನಲ್ಲೇ ಘೋಷಣೆ ಮಾಡಿದೆ. ಈ ಉತ್ಸವಕ್ಕೆ ಒಟ್ಟು 3 ಕೋಟಿ ರೂ. ಅನುದಾನ ಕೊಟ್ಟಿದ್ದೇನೆ. ಇನ್ನೂ 1 ಕೋಟಿ ಅನುದಾನ ಕೊಡುವೆ ಭರವಸೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಫೈನಲ್ ಫೈಟ್: ಸಿದ್ದರಾಮಯ್ಯ ಮನವೊಲಿಕೆಗೆ ರಾಹುಲ್ ಗಾಂಧಿ ಯತ್ನ: ಯತೀಂದ್ರಗೆ DCM ಸ್ಥಾನ, ರಾಜ್ಯಸಭೆ ಆಫರ್?

ಪಟ್ಟಕ್ಕಾಗಿ ಫೈನಲ್ ಫೈಟ್: ಮೂರು ಷರತ್ತುಗಳನ್ನು ಹೈಕಮಾಂಡ್ ಮುಂದಿಟ್ಟ ಡಿಕೆಶಿ; CM ಹುದ್ದೆಗಾಗಿ ಬಿಗಿಪಟ್ಟು!

Indian Stock Market: ಕಚ್ಚಾ ತೈಲ ದರ ಏರಿಕೆ, ರೂಪಾಯಿ ಮೌಲ್ಯ, Sensex ಕುಸಿತ

ರಾಜ್ಯ ಸರ್ಕಾರದ 'ದ್ವೇಷ ಭಾಷಣ' ಮಸೂದೆಗೆ ಅಮಿತ್ ಶಾ ಅಡ್ಡಗಾಲು; ಅಸ್ತಿತ್ವದಲ್ಲಿರುವ ಕಾನೂನೇ ಸಾಕು: ಕೇಂದ್ರ

Mekedatu row: ಕರ್ನಾಟಕದ DPR ತಿರಸ್ಕರಿಸಿ; ಪ್ರಧಾನಿ ಮೋದಿಗೆ ತಮಿಳುನಾಡು ಸಿಎಂ ವಿಜಯ್ ಮನವಿ

SCROLL FOR NEXT