ಜಂಟಿ ಸದನ ಉದ್ದೇಶಿಸಿ ಭಾಷಣ ಮಾಡುತ್ತಿರುವ ರಾಜ್ಯಪಾಲರು(ಸಂಗ್ರಹ ಚಿತ್ರ) 
ರಾಜ್ಯ

ಜಂಟಿ ಅಧಿವೇಶನ: ಸದನ ಕದನಕ್ಕೆ ಆಡಳಿತರೂಢ ಕಾಂಗ್ರೆಸ್, ಪ್ರತಿಪಕ್ಷ ಬಿಜೆಪಿ-ಜೆಡಿಎಸ್ ಸಿದ್ಧತೆ

ಕೇಂದ್ರದಿಂದ ಎಂಜಿಎನ್‌ಆರ್‌ಇಜಿಎ "ರದ್ದು" ಸೇರಿದಂತೆ ಹಲವಾರು ವಿಷಯಗಳ ಕುರಿತು ಆಡಳಿತಾರೂಢ ಕಾಂಗ್ರೆಸ್ ಮತ್ತು ವಿರೋಧ ಪಕ್ಷಗಳಾದ ಬಿಜೆಪಿ-ಜೆಡಿ(ಎಸ್) ನಡುವೆ ತೀವ್ರ ಘರ್ಷಣೆ ನಿರೀಕ್ಷಿಸಲಾಗಿದೆ.

ಬೆಂಗಳೂರು: ರಾಜ್ಯ ವಿಧಾನಮಂಡಲದ ಜಂಟಿ ಅಧಿವೇಶನ ಗುರವಾರ ಆರಂಭವಾಗಲಿದ್ದು, ಆಡಳಿತರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷಗಳಾದ ಬಿಜೆಪಿ, ಜೆಡಿಎಸ್ ನಡುವೆ ತೀವ್ರ ಜಟಾಪಟಿ ನಡೆಯುವ ಸಾಧ್ಯತೆ ಇದೆ.

ಕೇಂದ್ರದಿಂದ ಎಂಜಿಎನ್‌ಆರ್‌ಇಜಿಎ "ರದ್ದು" ಸೇರಿದಂತೆ ಹಲವಾರು ವಿಷಯಗಳ ಕುರಿತು ಆಡಳಿತಾರೂಢ ಕಾಂಗ್ರೆಸ್ ಮತ್ತು ವಿರೋಧ ಪಕ್ಷಗಳಾದ ಬಿಜೆಪಿ-ಜೆಡಿ(ಎಸ್) ನಡುವೆ ತೀವ್ರ ಘರ್ಷಣೆ ನಿರೀಕ್ಷಿಸಲಾಗಿದೆ.

ಜನವರಿ 22 ರಿಂದ 31 ರವರೆಗಿನ ಅಧಿವೇಶನವು ಗುರುವಾರ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ವಿಧಾನಮಂಡಲದ ಜಂಟಿ ಸಭೆಯನ್ನು ಉದ್ದೇಶಿಸಿ ಭಾಷಣ ಮಾಡುವದರೊಂದಿಗೆ ಆರಂಭವಾಗಬೇಕಿತ್ತು. ಆದರೆ ಇದೀಗ ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ನಿರಾಕರಿಸಿದ್ದಾರೆ.

ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಜಾರಿಗೆ ತಂದಿದ್ದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ) ರದ್ದುಗೊಳಿಸಿದ ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ವಿರುದ್ಧ ನಿರ್ಣಯವನ್ನು ಅಂಗೀಕರಿಸಲು ಮತ್ತು ವಿಬಿ-ಜಿ ರಾಮ್ ಜಿ ಕಾಯ್ದೆ ಹಿಂಪಡೆಯಬೇಕು ಎಂದು ಒತ್ತಾಯಿಸಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ನಿರ್ಣಯವನ್ನು ಅಂಗೀಕರಿಸುವ ಸಾಧ್ಯತೆ ಇದೆ.

ಇತ್ತೀಚಿಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ವಿಬಿ ಜಿ ರಾಮ್‌ ಜಿ ಕಾಯ್ದೆಯನ್ನು ವಿರೋಧಿಸಿ ನಿರ್ಣಯ ಕೈಗೊಳ್ಳಲಾಗಿತ್ತು. ಅಲ್ಲದೆ, ಈ ಕಾಯ್ದೆ ವಿರುದ್ಧ ಕಾನೂನು ಹೋರಾಟ ನಡೆಸುವ ತೀರ್ಮಾನವನ್ನು ರಾಜ್ಯ ಸರ್ಕಾರ ಕೈಗೊಂಡಿತ್ತು.

ಹಿಂದಿನ ಮನರೇಗಾ ಕಾಯ್ದೆಯಲ್ಲಿ ಹಣ ದುರುಪಯೋಗಪಡಿಸಿಕೊಂಡ ಆರೋಪದ ವರದಿಗಳನ್ನು ಪ್ರಸ್ತಾಪಿಸಿ ಪ್ರತಿಪಕ್ಷ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಲು ಸಿದ್ಧತೆ ನಡೆಸಿದೆ.

ಅಲ್ಲದೆ ರಾಜ್ಯದಲ್ಲಿ ಆಡಳಿತ ಮತ್ತು ಕಾನೂನು ಸುವ್ಯವಸ್ಥೆ ವೈಫಲ್ಯಗಳ ಆರೋಪ ಹೊರಿಸಿ ಸರ್ಕಾರವನ್ನು ಸಂಕಷ್ಟಕ್ಕೆ ಸಿಲುಕಿಸಲು ಬಿಜೆಪಿ ಸಿದ್ಧವಾಗಿದೆ. ಅಬಕಾರಿ ಇಲಾಖೆಯಲ್ಲಿ ನಡೆದಿರುವ ಅಕ್ರಮ ವಿಪಕ್ಷದ ಬತ್ತಳಿಕೆಯ ಪ್ರಬಲ ಅಸ್ತ್ರವಾಗಿದೆ. ಇದನ್ನು ಮುಂದಿಟ್ಟುಕೊಂಡು ಸಚಿವ ಆರ್ ಬಿ ತಿಮ್ಮಾಪೂರ ಅವರ ರಾಜೀನಾಮೆಗೆ ಪಟ್ಟು ಹಿಡಿಯಲು ತೀರ್ಮಾನ ಮಾಡಲಾಗಿದೆ.

ಕೋಗಿಲು ಬಡಾವಣೆ ಮನೆ ಹಂಚಿಕೆ ವಿಚಾರವನ್ನು ಪ್ರಮುಖವಾಗಿ ಪ್ರಸ್ತಾಪಿಸಲು ನಿರ್ಧಾರ ಮಾಡಲಾಗಿದೆ. ಕೋಗಿಲು ಬಡಾವಣೆಯಲ್ಲಿ ಬಾಂಗ್ಲಾದೇಶಿಗರು ಅಕ್ರಮವಾಗಿ ನೆಲೆಸಿದ್ದಾರೆ ಎಂಬುದು ಆರೋಪವಾಗಿದೆ. ಸರ್ಕಾರ ಯಾವುದೇ ಕಾರಣಕ್ಕೂ ವಸತಿ ಯೋಜನೆ ಅಡಿಯಲ್ಲಿ ಮನೆ ನೀಡಬಾರದು ಎಂದು ಪಟ್ಟು ಹಿಡಿಯಲು ತೀರ್ಮಾನಿಸಲಾಗಿದೆ.

ಸಿದ್ದರಾಮಯ್ಯ ನೇತೃತ್ವದ ಆಡಳಿತವು ಕೇರಳ ಸರ್ಕಾರ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರ ಒತ್ತಡದ ಮೇರೆಗೆ ಮುಸ್ಲಿಂ ಓಲೈಕೆಗಾಗಿ ಅತಿಕ್ರಮಣದಾರರಿಗೆ ಪುನರ್ವಸತಿ ಕಲ್ಪಿಸುತ್ತಿದೆ ಎಂದು ಬಿಜೆಪಿ ಆರೋಪಿಸುತ್ತಿದೆ.

ಬಳ್ಳಾರಿಯಲ್ಲಿ ಬಳ್ಳಾರಿ ನಗರ ಕಾಂಗ್ರೆಸ್ ಶಾಸಕ ನರ ಭರತ್ ರೆಡ್ಡಿ ಮತ್ತು ಗಂಗಾವತಿ ಬಿಜೆಪಿ ಶಾಸಕ ಜಿ ಜನಾರ್ದನ ರೆಡ್ಡಿ ಅವರ ಬೆಂಬಲಿಗರ ನಡುವೆ ಬ್ಯಾನರ್ ಅಳವಡಿಕೆ ವಿಷಯಕ್ಕೆ ಸಂಬಂಧಿಸಿದಂತೆ ಘರ್ಷಣೆ ಸಂಭವಿಸಿದ್ದು, ಇದರಲ್ಲಿ ಕಾಂಗ್ರೆಸ್ ಕಾರ್ಯಕರ್ತನೊಬ್ಬ ಗುಂಡೇಟಿನಿಂದ ಸಾವನ್ನಪ್ಪಿದ್ದಾನೆ, ಇದು ಅಧಿವೇಶನದ ಸಮಯದಲ್ಲಿ ಚರ್ಚೆಗೆ ಬರುವ ಸಾಧ್ಯತೆಯಿದೆ, ಏಕೆಂದರೆ ಬಿಜೆಪಿ ಭರತ್ ರೆಡ್ಡಿ ಅವರನ್ನು ಬಂಧಿಸಲು ಮತ್ತು ಘಟನೆಯ ಬಗ್ಗೆ ಸಿಬಿಐ ತನಿಖೆಗೆ ಒತ್ತಾಯಿಸುತ್ತಿದೆ.

ಇನ್ನು ಪ್ರತಿಪಕ್ಷಗಳ ಆರೋಪಕ್ಕೆ ರಾಜ್ಯ ಸರ್ಕಾರ ದಾಖಲೆಗಳ ಸಮೇತ ಕೌಂಟರ್ ಕೊಡುವುದಕ್ಕೆ ಪ್ರತಿತಂತ್ರ ರೂಪಿಸಿದೆ.

ಬಿಜೆಪಿ ಅವಧಿಯಲ್ಲಿನ ಒತ್ತುವರಿ ತೆರವನ್ನು ದಾಖಲೆ ಸಮೇತ ತೋರಿಸುವುದು. ಯಾವ್ಯಾವ ಭಾಗದಲ್ಲಿ ಒತ್ತುವರಿ ತೆರವು ಮಾಡಲಾಗಿತ್ತು ಎಂಬುದನ್ನು ಪ್ರಸ್ತಾಪಿಸಲು ಸರ್ಕಾರ ನಿರ್ಧಾರಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಸಲೀಲೆ ಪ್ರಕರಣ: ಅಮಾನತುಗೊಂಡ ಡಿಜಿಪಿ ರಾಮಚಂದ್ರ ರಾವ್ ಸ್ಥಾನಕ್ಕೆ ಉಮೇಶ್ ಕುಮಾರ್ ನೇಮಕ

35 ಎಸೆತಗಳಲ್ಲಿ 84 ರನ್: 5000 ರನ್ ಸೇರಿದಂತೆ ಒಂದೇ ಪಂದ್ಯದಲ್ಲಿ 5 ದಾಖಲೆ ಮುರಿದ ಅಭಿಷೇಕ್ ಶರ್ಮಾ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ IPL ಪಂದ್ಯ ನಡೆಸಲು ನಾವು ರೆಡಿ, ಆದರೆ RCB ಹಿಂಜರಿಯುತ್ತಿದೆ: ವೆಂಕಟೇಶ್ ಪ್ರಸಾದ್

T20 World Cup: ಭಾರತಕ್ಕೆ ಬರದಿದ್ದರೇ ಟೂರ್ನಿಯಿಂದ ಹೊರಕ್ಕೆ; ಬಾಂಗ್ಲಾಗೆ ಐಸಿಸಿ 24 ಗಂಟೆ ಅಂತಿಮ ಗಡುವು!

ಶಬರಿಮಲೆ ಚಿನ್ನ ಕಳವು ಪ್ರಕರಣ: EDಯಿಂದ 1.3 ಕೋಟಿ ರೂ ಮೌಲ್ಯದ ಆಸ್ತಿ ಮುಟ್ಟುಗೋಲು; ಚಿನ್ನದ ಗಟ್ಟಿ ವಶಕ್ಕೆ!

SCROLL FOR NEXT