ದಾವೋಸ್ ನಲ್ಲಿ ವಿಶ್ವ ಆರ್ಥಿಕ ವೇದಿಕೆಯಲ್ಲಿ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್  
ರಾಜಕೀಯ

ಭಾರತದ ಅಭಿವೃದ್ಧಿ ಕುರಿತು ರಾಹುಲ್-ಡಿ.ಕೆ ಶಿವಕುಮಾರ್ ಭಿನ್ನ ಹೇಳಿಕೆ; "Slip of the tongue" ಅಲ್ಲ, ತಾಳ್ಮೆಯ ಕಟ್ಟೆಯೊಡೆದಿರುವುದಕ್ಕೆ ಸ್ಪಷ್ಟ ಸಂದೇಶ..!

ಕರ್ನಾಟಕ ಕಾಂಗ್ರೆಸ್‌ನಲ್ಲಿ ಗಾಳಿ ಬೇರೆ ದಿಕ್ಕಿನಲ್ಲಿ ಬೀಸುತ್ತಿದೆಯೇ? ಒಂದೆಡೆ ದಾವೋಸ್ ನಲ್ಲಿ "ಭಾರತ ಉದಯಿಸುತ್ತಿದೆ" ಎಂದು ಡಿಕೆ.ಶಿವಕುಮಾರ್ ಹೇಳುತ್ತಿದ್ದಾರೆ, ರಾಹುಲ್ ಗಾಂಧಿ ಭಾರತದ ಆರ್ಥಿಕತೆ ಸತ್ತು ಹೋಗಿದೆ ಎಂಬ ಹೇಳಿಕೆಯನ್ನು ಮುಂದುವರಿಸುತ್ತಿದ್ದಾರೆ. ಹಾಗಾದರೆ ಇಲ್ಲಿ ಏನಾಗುತ್ತಿದೆ?

ಬೆಂಗಳೂರು: ಭಾರತದ ಅಭಿವೃದ್ಧಿ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಉಪ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು ಭಿನ್ನ ರೀತಿಯಲ್ಲಿ ಹೇಳಿಕೆ ನೀಡಿರುವುದು ಹಲವರ ಹುಬ್ಬೇರುವಂತೆ ಮಾಡಿದೆ.

ಭಾರತದ ಆರ್ಥಿಕತೆ ಸತ್ತುಹೋಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಹೇಳಿದ್ದರು. ಆದರೆ, ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆಯಲ್ಲಿ ಮಾತನಾಡಿರುವ ಡಿಕೆ.ಶಿವಕುಮಾರ್ ಅವರು,"ಭಾರತ ಉದಯಿಸುತ್ತಿದೆ ಎಂದು ಹೇಳಿದ್ದಾರೆ. ಈ ಭಿನ್ನ ಹೇಳಿಕೆ ಕೈಪಾಳಯದಲ್ಲಿ ಒಡಕು ಮೂಡಿರುವುದಕ್ಕೆ ಸ್ಪಷ್ಟ ಸಂದೇಶವಾಗಿದೆ ಎಂದು ಬಿಜೆಪಿ ಹೇಳಿದೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು, ಕರ್ನಾಟಕ ಕಾಂಗ್ರೆಸ್‌ನಲ್ಲಿ ಗಾಳಿ ಬೇರೆ ದಿಕ್ಕಿನಲ್ಲಿ ಬೀಸುತ್ತಿದೆಯೇ? ಒಂದೆಡೆ ದಾವೋಸ್ ನಲ್ಲಿ "ಭಾರತ ಉದಯಿಸುತ್ತಿದೆ" ಎಂದು ಡಿಕೆ.ಶಿವಕುಮಾರ್ ಹೇಳುತ್ತಿದ್ದಾರೆ, ರಾಹುಲ್ ಗಾಂಧಿ ಭಾರತದ ಆರ್ಥಿಕತೆ ಸತ್ತು ಹೋಗಿದೆ ಎಂಬ ಹೇಳಿಕೆಯನ್ನು ಮುಂದುವರಿಸುತ್ತಿದ್ದಾರೆ. ಹಾಗಾದರೆ ಇಲ್ಲಿ ಏನಾಗುತ್ತಿದೆ? ಎಂದು ಪ್ರಶ್ನಿಸಿದ್ದಾರೆ.

ಇದು ಬಾಯಿ ತಪ್ಪಿ ನೀಡಿರುವ ಹೇಳಿಕೆಯಲ್ಲ. ಇದು ಕಾಂಗ್ರೆಸ್‌ನ ಒಂದು ಬಣ ವಿಭಿನ್ನ ದಿಕ್ಕಿನಲ್ಲಿ ಸಾಕುತ್ತಿರುವುದನ್ನು ತೋರಿಸುತ್ತಿದೆ. ಡಿಸಿಎಂ ಡಿಕೆ ಶಿವಕುಮಾರ್ ಕಾಂಗ್ರೆಸ್ ಹೈಕಮಾಂಡ್ ಬಗ್ಗೆ ಅತೃಪ್ತರಾಗಲೂ ಕಾರಣಗಳಿವೆ ಎಂಬುದು ನಮಗೆ ತಿಳಿದಿದೆ. ಅಧಿಕಾರ ಹಂಚಿಕೆ ಭರವಸೆಗಳನ್ನು ಮುಂದೂಡಲಾಗಿದೆ, ಇದೀಗ ಅವರು ನೀಡಿರುವ ಹೇಳಿಕೆ ಅವರ ತಾಳ್ಮೆಯ ಕಟ್ಟೆಯೊಡೆದಿದೆ ಎಂಬುದಕ್ಕೆ ಸ್ಪಷ್ಟ ಸಂದೇಶ ನೀಡಿದಂತಾಗಿದೆ.

ಸ್ವರ ಬದಲಾವಣೆಯಿಂದ ಇದು ಸಾಬೀತಾಗುತ್ತಿದೆ. ರಾಹುಲ್ ಗಾಂಧಿ ಕೇಳಲು ಇಷ್ಟಪಡದ ಮಾತುಗಳನ್ನೇ ಡಿಕೆ.ಶಿವಕುಮಾರ್ ಹೇಳಿರುವಂತಿದೆ. ದೆಹಲಿ ಘೋಷಣೆಗಳನ್ನು ಬಳಸಿಕೊಂಡು ಕರ್ನಾಟಕದಲ್ಲಿ ರಾಜಕೀಯ ಮಾಡಲು ಸಾಧ್ಯವಿಲ್ಲ ಎಂಬ ಸಂದೇಶವನ್ನು ಡಿಕೆ.ಶಿವಕುಮಾರ್ ಅವರು ರಾಹುಲ್ ನೆನಪಿಸುತ್ತಿದ್ದಾರೆಯೇ? ಅಥವಾ ರಾಹುಲ್ ಗಾಂಧಿಯವರ ನಿರಾಶಾವಾದಕ್ಕಿಂತ ವಾಸ್ತವ ನಿರೂಪಣೆ ಹೆಚ್ಚು ಮುಖ್ಯ ಎಂಬುದರ ಸೂಕ್ಷ್ಮ ಸಂಕೇತವೇ? ಇಂದು ಸ್ವರ ಬದಲಾವಣೆಯಾಗಿದೆ. ನಾಳೆ ಬಿರುಗಾಳಿಯೂ ಏಳಬಹುದು ಎಂದು ಎಚ್ಚರಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಟ್ರಂಪ್ ಎಚ್ಚರಿಕೆಗೆ ತಲೆಬಾಗದ ಇರಾನ್​: ಸೌದಿ ನೆಲೆಯಲ್ಲಿ ಕ್ಷಿಪಣಿ ದಾಳಿ; ಅಮೆರಿಕಾದ 5 ಟ್ಯಾಂಕರ್ ವಿಮಾನಗಳಿಗೆ ಹಾನಿ..!

West Asia conflict effect: LPG ಕೊರತೆ ತೀವ್ರ; ಮನೆಗಳಲ್ಲಿ PNG, ಹೋಟೆಲ್ ಗಳು ಕಲ್ಲಿದ್ದಲು ಬಳಕೆ ಮಾಡುವಂತೆ ಕೇಂದ್ರ ಸರ್ಕಾರ ಸಲಹೆ

ಹೊಸ ಖಮೇನಿ ಭಯೋತ್ಪಾದಕ ನಾಯಕ; ಆತನ ಬಗ್ಗೆ ಮಾಹಿತಿ ನೀಡಿದವರಿಗೆ 10 ಮಿಲಿಯನ್ ಡಾಲರ್ ಬಹುಮಾನ: ಅಮೆರಿಕ

ಒಡಿಶಾ 'ಕೈ' ಶಾಸಕರಿಗೆ' ಟ್ರಬಲ್ ಶೂಟರ್ ಡಿಕೆಶಿ ಆತಿಥ್ಯ: 'ಆಪರೇಷನ್ ಕಮಲ' ತಡೆಗೆ ಕೈಗೊಂಡ ಮುನ್ನೆಚ್ಚರಿಕಾ ಕ್ರಮ; ಕಾಂಗ್ರೆಸ್ ಸಮರ್ಥನೆ

ಬೇಸಿಗೆಯಲ್ಲಿ ಬತ್ತಿದ ಬೋರ್ ವೆಲ್ ಗಳು: ಬೆಂಗಳೂರಿನ ಧೋಬಿ ಘಾಟ್ ಗಳಲ್ಲಿ ನೀರಿನ ಅಭಾವ!

SCROLL FOR NEXT