ಕೇಂದ್ರ ಕೃಷಿ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌ 
ರಾಜಕೀಯ

ಕಾಂಗ್ರೆಸ್‌ ಅಕ್ರಮಗಳಿಗೆ ಬ್ರೇಕ್ ಹಾಕಲು ಮನ್ರೇಗಾ ಯೋಜನೆ ಬದಲು: ಶಿವರಾಜ್‌ ಸಿಂಗ್‌ ಚೌಹಾಣ್‌

2006–07ರಿಂದ 2013–14ರವರೆಗೆ ಯುಪಿಎ ಸರ್ಕಾರವು ನರೇಗಾ ಯೋಜನೆ ಮೂಲಕ ಕರ್ನಾಟಕದಲ್ಲಿ 58.46 ಕೋಟಿ ಮಾನವ ದಿನಗಳಷ್ಟು ಕೆಲಸ ಸೃಷ್ಟಿಸಿತ್ತು ಮತ್ತು 8,739.32 ಕೋಟಿ ರೂ. ಅನುದಾನ ಬಿಡುಗಡೆ ಮಾಡಿತ್ತು.

ಬೆಂಗಳೂರು: ಹಿಂದಿನ ವರ್ಷಗಳಲ್ಲಿ, ವಿಶೇಷವಾಗಿ ಕಾಂಗ್ರೆಸ್ ನೇತೃತ್ವದ ಸರ್ಕಾರಗಳ ಅವಧಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನ್ರೇಗಾ)ಯಲ್ಲಿ ವ್ಯಾಪಕ ಭ್ರಷ್ಟಾಚಾರ ಹಾಗೂ ವ್ಯವಸ್ಥಿತ ಅಕ್ರಮಗಳು ನಡೆದಿದ್ದು, ಇದಕ್ಕೆ ಕಡಿವಾ ಹಾಕುವ ಉದ್ದೇಶದಿಂದ ಯೋಜನೆಯನ್ನು ಬದಲಿಸಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ಕೇಂದ್ರ ಸರ್ಕಾರ ಪುನರ್‌ರಚಿಸಿರುವ ಗ್ರಾಮೀಣ ಉದ್ಯೋಗ ಯೋಜನೆ VB-G-RAM-G ಕುರಿತು ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಸಮರ್ಥನೆ ನೀಡಿದ್ದಾರೆ.

ಮನ್ರೇಗಾ ಯೋಜನೆ ಅಡಿ ಹೆಚ್ಚು ಜನರಿಗೆ ಉದ್ಯೋಗ ನೀಡಿದ್ದು ಮತ್ತು ಹೆಚ್ಚು ಅನುದಾನ ಬಿಡುಗಡೆ ಮಾಡಿದ್ದು ನಮ್ಮ ಸರ್ಕಾರ. ಆದರೆ ಇದನ್ನು ಮರೆಮಾಚುತ್ತಿರುವ ಕಾಂಗ್ರೆಸ್‌, ನರೇಗಾ ಯೋಜನೆಯ ರಕ್ಷಕನಂತೆ ತನ್ನನ್ನು ಬಿಂಬಿಸಿಕೊಳ್ಳುತ್ತಿದೆ ಎಂದು ಆರೋಪಿಸಿದರು.

‘2006–07ರಿಂದ 2013–14ರವರೆಗೆ ಯುಪಿಎ ಸರ್ಕಾರವು ನರೇಗಾ ಯೋಜನೆ ಮೂಲಕ ಕರ್ನಾಟಕದಲ್ಲಿ 58.46 ಕೋಟಿ ಮಾನವ ದಿನಗಳಷ್ಟು ಕೆಲಸ ಸೃಷ್ಟಿಸಿತ್ತು ಮತ್ತು 8,739.32 ಕೋಟಿ ರೂ. ಅನುದಾನ ಬಿಡುಗಡೆ ಮಾಡಿತ್ತು. ನಮ್ಮ ಸರ್ಕಾರವು 2014–15ರಿಂದ 2025–26ರಲ್ಲಿ ಈವರೆಗೆ ಒಟ್ಟು 127.52 ಕೋಟಿ ಮಾನವ ದಿನಗಳಷ್ಟು ಕೆಲಸ ಸೃಷ್ಟಿಸಿದ್ದು, 48,549.82 ಕೋಟಿ ರೂ.ಬಿಡುಗಡೆ ಮಾಡಿದೆ.

ಯಾದಗಿರಿ ಜಿಲ್ಲೆಯ ಗ್ರಾಮವೊಂದರಲ್ಲಿ ಪುರುಷರು ಸೀರೆಯುಟ್ಟು, ಮಹಿಳೆಯರಂತೆ ಬಿಂಬಿಸಿಕೊಂಡು ನರೇಗಾದ ಅಡಿ ಕೂಲಿ ಪಡೆದುಕೊಂಡಿದ್ದರು. ಇದು ಅಂತರರಾಷ್ಟ್ರೀಯ ಮಟ್ಟದಲ್ಲಿ ದೊಡ್ಡ ಸುದ್ದಿಯಾಗಿತ್ತು. ಇಂತಹ ನೂರಾರು ಅಕ್ರಮಗಳು ಸೋಷಿಯಲ್‌ ಆಡಿಟ್‌ ಮೂಲಕ ಪತ್ತೆಯಾಗಿದ್ದವು. ಅಕ್ರಮದ ಮೊತ್ತದಲ್ಲಿ ರೂ,.107.78 ಕೋಟಿ ವಸೂಲಿ ಮಾಡುವಂತೆ ಸೂಚಿಸಿದ್ದರೂ, ಒಂದು ರೂಪಾಯಿಯೂ ವಸೂಲಾಗಲಿಲ್ಲ.

ಮಹಾಲೇಖಪಾಲರ ವರದಿಯಲ್ಲಿ 24.12 ಕೋಟಿ ರೂ.ವಸೂಲಿಗೆ ಶಿಫಾರಸು ಮಾಡಲಾಗಿತ್ತು. ಆದರೆ, ರಾಜ್ಯ ಸರ್ಕಾರ ವಸೂಲಿ ಮಾಡಿದ್ದು 2.47 ಕೋಟಿ ರೂ. ಮಾತ್ರ. ಕಲಬುರಗಿ ಜಿಲ್ಲೆಯಲ್ಲಿ ನಡೆದ ಕಾಮಗಾರಿಗಳ ಬಗ್ಗೆ ದೂರು ಬಂದಿತ್ತು. ಕೇಂದ್ರ ಸಚಿವಾಲಯದ ಸಿಬ್ಬಂದಿ ಪರಿಶೀಲನೆ ನಡೆಸಿದಾಗ, ಹಲವು ಅಕ್ರಮಗಳು ಗೊತ್ತಾದವು. ಒಂದೇ ಕೆರೆಯ ಹೂಳನ್ನು ಹಲವು ಬಾರಿ ತೆಗೆಯಲಾಗಿದೆ ಎಂದು ಬಿಲ್‌ ಸೃಷ್ಟಿಸಲಾಗಿತ್ತು. ಕೆಲವೇ ಕುಟುಂಬಗಳಿಗೆ ಆ ಹಣ ಜಮೆಯಾಗಿತ್ತು. ಶಾಲೆಯೊಂದರ ಶೌಚಾಲಯ ನಿರ್ಮಿಸಿದ ಬಿಲ್ ಸೃಷ್ಟಿಸಿ, ಕಾಂಪೌಂಡ್‌ ಕಟ್ಟಲಾಗಿತ್ತು ಎಂದು ವಿವರಿಸಿದರು.

‘ನರೇಗಾದಲ್ಲಿ ಅಕ್ರಮ ನಡೆಯುತ್ತಿದೆ ಎಂದು ಮನಮೋಹನ್‌ ಸಿಂಗ್‌ ಅವರು ತಾವು ಪ್ರಧಾನಿಯಾಗಿದ್ದಾಗ 2011ರಲ್ಲೇ ಹೇಳಿದ್ದರು. ನಕಲಿ ಜಾಬ್‌ಕಾರ್ಡ್‌ಗಳನ್ನು ಸೃಷ್ಟಿಸಲಾಗುತ್ತಿದೆ ಎಂಬುದನ್ನು ಸೋನಿಯಾ ಗಾಂಧಿ ಅವರೂ ಹೇಳಿದ್ದರು. ಈ ಯೋಜನೆಯ ನಿಯಮಗಳಲ್ಲಿ ಇದ್ದ ಲೋಪಗಳನ್ನು ಪರಿಗಣಿಸಿ, ಕೂಲಂಕಷವಾಗಿ ಪರಿಶೀಲನೆ ನಡೆಸಿಯೇ ನರೇಂದ್ರ ಮೋದಿ ಅವರ ಸರ್ಕಾರ ಈ ಕ್ರಮ ತೆಗೆದುಕೊಂಡಿದೆ ಎಂದು ಯೋಜನೆಯನ್ನು ಸಮರ್ಥಿಸಿಕೊಂಡರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಕ್ಕಳ ಸಾವಿಗೆ ಪ್ರತೀಕಾರ: ಇಸ್ರೇಲ್-ಅಮೆರಿಕ, ಗಲ್ಫ್ ದೇಶಗಳ ಮೇಲೆ ದಾಳಿ ನಿಲ್ಲಲ್ಲ; ಇರಾನ್ ಹೊಸ ಸರ್ವೋಚ್ಛ ನಾಯಕ ವಾರ್ನಿಂಗ್!

No shortage of fuel: ಹಾರ್ಮುಜ್ ಜಲಸಂಧಿ ತಲುಪಿಸಬಹುದಾದ ತೈಲಕ್ಕಿಂತ ಹೆಚ್ಚಿನದ್ದು ಬೇರೆಡೆಯಿಂದ ಭಾರತ ತಲುಪಿದೆ; ಪೆಟ್ರೋಲಿಯಂ ಸಚಿವ

ಮಧ್ಯಪ್ರಾಚ್ಯ ಯುದ್ಧಗ್ರಸ್ತ: ತೈಲ, ಅನಿಲ ಪೂರೈಕೆ ವ್ಯತ್ಯಯ ಸಂಕಷ್ಟ; ಆದರೂ ರಹಸ್ಯ'ಭೂಗತ ಗುಹೆ'ಗಳಿಂದ ಭಾರತಕ್ಕೆ No Tension!

ನಮ್ಮ ಶಕ್ತಿ ಇರಾನ್ ನಿರ್ನಾಮಕ್ಕೆ ಮೀಸಲು, ಹಾರ್ಮುಜ್ ಜಲಸಂಧಿಯಲ್ಲಿ ಟ್ಯಾಂಕರ್ ಗಳಿಗೆ ಬೆಂಗಾವಲು ನೀಡಲ್ಲ: ಅಮೆರಿಕ

ಮಾರ್ಚ್ 16 ರಂದು ರಾಜ್ಯದ ಎರಡು ಕ್ಷೇತ್ರಗಳ ಉಪ ಚುನಾವಣೆ ಸೇರಿದಂತೆ ಐದು ರಾಜ್ಯಗಳ ಚುನಾವಣೆ ಘೋಷಣೆ ಸಾಧ್ಯತೆ

SCROLL FOR NEXT