ವಿಧಾನಸೌಧ 
ರಾಜಕೀಯ

25 ಶಾಸಕರ ನಿಗಮ-ಮಂಡಳಿ ಅಧ್ಯಕ್ಷ ಅವಧಿ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ; ಯಾರೆಲ್ಲಾ ಮುಂದುವರಿಕೆ?

2024 ಜನವರಿ 26 ರಂದು ರಾಜ್ಯದ ವಿವಿಧ ನಿಗಮ ಮತ್ತು ಮಂಡಳಿಗಳಿಗೆ ಎರಡು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ನೇಮಕಗೊಂಡಿದ್ದ ಒಟ್ಟು 25 ಶಾಸಕರ ಅವಧಿ ಮುಗಿದ ಹಿನ್ನೆಲೆಯಲ್ಲಿ ಇಂದು ಅವರ ಅವಧಿ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶಿಸಿದೆ.

ಬೆಂಗಳೂರು: 25 ಶಾಸಕರ ನಿಗಮ - ಮಂಡಳಿಗಳ ಅಧ್ಯಕ್ಷ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಬುಧವಾರ ಅವರ ಅವಧಿಯನ್ನು ಮುಂದಿನ ಆದೇಶದವರೆಗೆ ವಿಸ್ತರಿಸಿ ಮಹತ್ವದ ಅಧಿಸೂಚನೆ ಹೊರಡಿಸಿದೆ.

2024 ಜನವರಿ 26 ರಂದು ರಾಜ್ಯದ ವಿವಿಧ ನಿಗಮ ಮತ್ತು ಮಂಡಳಿಗಳಿಗೆ ಎರಡು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ನೇಮಕಗೊಂಡಿದ್ದ ಒಟ್ಟು 25 ಶಾಸಕರ ಅವಧಿ ಮುಗಿದ ಹಿನ್ನೆಲೆಯಲ್ಲಿ ಇಂದು ಅವರ ಅವಧಿ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶಿಸಿದೆ.

ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ(DPAR)ಹೊರಡಿಸಿರುವ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಎಲ್ಲಾ ಶಾಸಕರಿಗೆ ಸಂಪುಟ ದರ್ಜೆಯ ಸಚಿವರಿಗೆ ನೀಡುವ ಎಲ್ಲಾ ಸೌಲಭ್ಯಗಳೊಂದಿಗೆ ಮುಂದುವರಿಸಲಾಗಿದೆ. ಈ ನೇಮಕಾತಿಯು ಜನವರಿ 26, 2026 ರಿಂದಲೇ ಪೂರ್ವಾನ್ವಯವಾಗುವಂತೆ ಜಾರಿಗೆ ಬರಲಿದೆ.

ಯಾರೆಲ್ಲಾ ಮುಂದುವರಿಕೆ?

ಎನ್.ಎ. ಹ್ಯಾರಿಸ್: ಅಧ್ಯಕ್ಷರು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ).

ಎಸ್.ಆರ್. ಶ್ರೀನಿವಾಸ್ (ವಾಸು): ಅಧ್ಯಕ್ಷರು, ಕೆಎಸ್‌ಆರ್‌ಟಿಸಿ (KSRTC).

ಕೆ.ಎಂ. ಶಿವಲಿಂಗೇಗೌಡ: ಅಧ್ಯಕ್ಷರು, ಕರ್ನಾಟಕ ಗೃಹ ಮಂಡಳಿ.

ಅಪ್ಪಾಜಿ ಸಿ.ಎಸ್. ನಾಡಗೌಡ: ಅಧ್ಯಕ್ಷರು, ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (KSDL).

ಭರಮಗೌಡ (ರಾಜು) ಕಾಗೆ: ಅಧ್ಯಕ್ಷರು, ವಾಯುವ್ಯ ಸಾರಿಗೆ ಸಂಸ್ಥೆ.

ಬಿ.ಕೆ. ಸಂಗಮೇಶ್ವರ್: ಅಧ್ಯಕ್ಷರು, ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿಗಮ (ಲ್ಯಾಂಡ್ ಆರ್ಮಿ).

ಅಬ್ಬಯ್ಯ ಪ್ರಸಾದ್: ಅಧ್ಯಕ್ಷರು, ಕರ್ನಾಟಕ ಕೊಳೆಚೆ ಅಭಿವೃದ್ಧಿ ಮಂಡಳಿ.

ಬಸವನಗೌಡ ದದ್ದಲ್ : ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ.

ರೂಪಕಲಾ ಎಂ.: ಅಧ್ಯಕ್ಷರು, ಕರಕುಶಲ ಅಭಿವೃದ್ಧಿ ನಿಗಮ.

ಶರತ್ ಕುಮಾರ್ ಬಚ್ಚೇಗೌಡ: ಅಧ್ಯಕ್ಷರು, ಕಿಯೋನಿಕ್ಸ್ (KEONICS).

ಅನಿಲ್ ಚಿಕ್ಕಮಾದು: ಅಧ್ಯಕ್ಷರು, ಜಂಗಲ್ ಲಾಡ್ಜಸ್.

ಸತೀಶ್ ಕೃಷ್ಣ ಸೈಲ್: ಅಧ್ಯಕ್ಷರು, ಕರ್ನಾಟಕ ಮಾರ್ಕೆಟಿಂಗ್ ಕನ್ಸಲ್ಟೆಂಟ್ಸ್ ಆಂಡ್ ಏಜೆನ್ಸೀಸ್.

ಇವರಲ್ಲದೆ, ಬಸವರಾಜ ಶಿವಣ್ಣನವರ (ಅರಣ್ಯ ಅಭಿವೃದ್ಧಿ), ಬಿ.ಜಿ. ಗೋವಿಂದಪ್ಪ (ಆಹಾರ ನಿಗಮ), ಹೆಚ್.ಸಿ. ಬಾಲಕೃಷ್ಣ (ರಸ್ತೆ ಅಭಿವೃದ್ಧಿ ನಿಗಮ), ಜಿ.ಎಸ್. ಪಾಟೀಲ್ (ಖನಿಜ ನಿಗಮ), ಸಿ. ಪುಟ್ಟರಂಗಶೆಟ್ಟಿ (ಎಂಎಸ್ಐಎಲ್), ಜೆ.ಟಿ. ಪಾಟೀಲ್ (ಹಟ್ಟಿ ಚಿನ್ನದ ಗಣಿ), ಬಿ.ಕೆ. ಗೋಪಾಲಕೃಷ್ಣ ಬೇಳೂರು, ಎಸ್.ಎನ್. ನಾರಾಯಣಸ್ವಾಮಿ, ಟಿ. ರಘುಮೂರ್ತಿ, ರಮೇಶ ಬಂಡಿಸಿದ್ದೇಗೌಡ (ಸೆಸ್ಕ್), ಕನೀಜ್ ಫಾತಿಮಾ, ಟಿ.ಡಿ. ರಾಜೇಗೌಡ ಮತ್ತು ಬಸವನಗೌಡ ತುರುವಿಹಾಳ ಅವರ ಅವಧಿಯನ್ನೂ ವಿಸ್ತರಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ: ಓರ್ವ ಭಾರತೀಯ ಸೇರಿ 12 ಮಂದಿ ಸಾವು..!

ಬೆಂಗಳೂರಿನಲ್ಲಿ ಚಿಕನ್ ಅಂಗಡಿಗಳು ಬಂದ್? ಈ ಎರಡು ದಿನ ನಗರದಲ್ಲಿ ನಾನ್‌ವೆಜ್ ಸಿಗೋದು ಡೌಟ್! ಯಾಕೆ ಗೊತ್ತಾ?

ನೇಪಾಳ ಜಲಪ್ರಳಯ: 7ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ; ಸಾವಿನ ಸಂಖ್ಯೆ 1,003ಕ್ಕೆ ಏರಿಕೆ, ಇನ್ನೂ ಸಿಗದ 3,916 ಜನರ ಸುಳಿವು..!

‘ದೇಶ ಸಂತಸದಿಂದ ತುಂಬಿದೆ, ಆದರೆ ಕೆಲವರು ಸುಳ್ಳು ಹೇಳಿ ಜನರಲ್ಲಿ ನಿರಾಶೆ ಮೂಡಿಸಲು ಯತ್ನಿಸುತ್ತಿದ್ದಾರೆ': ವಿಡಿಯೊ ಮೂಲಕ ಪ್ರಧಾನಿ ಮೋದಿ ಹೇಳಿದ್ದೇನು? ; Video

ಸುಮ್ಮನೆ ಬಿಡಲ್ಲ, ಇರಾನ್‌ಗೆ ತಕ್ಕ ಶಾಸ್ತಿ: ಟ್ರಂಪ್ ಕಠಿಣ ಎಚ್ಚರಿಕೆ, ಮಧ್ಯಪ್ರಾಚ್ಯದಲ್ಲಿ ಮತ್ತೆ ಭುಗಿಲೆದ್ದ ಯುದ್ಧಾತಂಕ..!