ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ, ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮಾತನಾಡಿದರು. 
ರಾಜಕೀಯ

Cross-voting ಕಗ್ಗಂಟು: ಶಾಕ್‌ನಿಂದ ಹೊರಬರದ BJP-JDS; 11 ಶಾಸಕರ ಚಲನವಲನದ ಮೇಲೆ ಹೈಕಮಾಂಡ್ ನಿಗಾ..!

ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ನೇತೃತ್ವದ ಸತ್ಯಶೋಧನಾ ಸಮಿತಿಯು ಈ ಕುರಿತು ವರದಿಯನ್ನು ಪಕ್ಷದ ಹೈಕಮಾಂಡ್‌ಗೆ ಸಲ್ಲಿಸಿದೆ ಎಂದು ಮೂಲಗಳು ತಿಳಿಸಿವೆ.

ಬೆಂಗಳೂರು: ವಿಧಾನ ಪರಿಷತ್ (ಎಂಎಲ್‌ಸಿ) ಚುನಾವಣೆಯಲ್ಲಿ ನಡೆದ ಅಡ್ಡ ಮತದಾನ ಬಿಜೆಪಿ-ಜೆಡಿಎಸ್ (ಎನ್‌ಡಿಎ) ಮೈತ್ರಿಯನ್ನು ಇನ್ನೂ ಕಾಡುತ್ತಿದೆ. ಒಟ್ಟು 11 ಶಾಸಕರು ಮೈತ್ರಿ ಅಭ್ಯರ್ಥಿಗಳ ವಿರುದ್ಧ ಮತ ಚಲಾಯಿಸಿರುವ ಶಂಕೆ ವ್ಯಕ್ತವಾಗಿದ್ದು, ಈ ಶಾಸಕರ ಚಲನವಲನಗಳ ಮೇಲೆ ಬಿಜೆಪಿ ಹಾಗೂ ಜೆಡಿಎಸ್ ಹೈಕಮಾಂಡ್ ನಿಗಾ ಇರಿಸಿದೆ.

ಬಿಜೆಪಿ ಮೂಲಗಳ ಪ್ರಕಾರ, ಪಕ್ಷದ ಮೂರು ಶಾಸಕರು ಕ್ರಾಸ್‌ವೋಟಿಂಗ್ ಮಾಡಿದ್ದು, ಒಂದು ಮತ ಅಮಾನ್ಯವಾಗಿದೆ ಎಂಬುದು ಪಕ್ಷದ ಆಂತರಿಕ ಪರಿಶೀಲನೆಯಲ್ಲಿ ತಿಳಿದುಬಂದಿದೆ.

ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ನೇತೃತ್ವದ ಸತ್ಯಶೋಧನಾ ಸಮಿತಿಯು ಈ ಕುರಿತು ವರದಿಯನ್ನು ಪಕ್ಷದ ಹೈಕಮಾಂಡ್‌ಗೆ ಸಲ್ಲಿಸಿದೆ ಎಂದು ಮೂಲಗಳು ತಿಳಿಸಿವೆ.

ಇದಕ್ಕೂ ಮುನ್ನ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬೀನ್ ಅವರನ್ನು ಭೇಟಿ ಮಾಡಿ ಈ ಕುರಿತು ವಿವರಣೆ ನೀಡಿದ್ದರು.

ಪಕ್ಷದ ಆಂತರಿಕ ಮಾಹಿತಿಯ ಪ್ರಕಾರ, ಬೆಂಗಳೂರು, ಗದಗ, ಬೀದರ್ ಹಾಗೂ ಕೊಪ್ಪಳ ಜಿಲ್ಲೆಗಳ ತಲಾ ಒಬ್ಬ ಶಾಸಕರು ಕ್ರಾಸ್‌ವೋಟಿಂಗ್ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಈ ಹಿನ್ನೆಲೆಯಲ್ಲಿ, ಕ್ರಾಸ್‌ವೋಟಿಂಗ್ ಮಾಡಿರುವ ಶಂಕಿತ ಶಾಸಕರ ಮೇಲೆ ನಿಗಾ ಇಡುವಂತೆ ರಾಜ್ಯ ನಾಯಕತ್ವಕ್ಕೆ ಬಿಜೆಪಿ ಹೈಕಮಾಂಡ್ ಸೂಚನೆ ನೀಡಿದೆ ಎನ್ನಲಾಗಿದೆ. ಅಲ್ಲದೆ, 2028ರ ವಿಧಾನಸಭೆ ಚುನಾವಣೆಗೆ ಮುನ್ನ ಈ ಶಾಸಕರು ಕಾಂಗ್ರೆಸ್ ಸೇರುವ ಸಾಧ್ಯತೆ ಇರುವುದರಿಂದ, ಅವರ ಕ್ಷೇತ್ರಗಳಲ್ಲಿ ಪರ್ಯಾಯ ನಾಯಕರನ್ನು ಈಗಿನಿಂದಲೇ ಬೆಳೆಸುವಂತೆ ಸೂಚಿಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಇತ್ತ, ಜೆಡಿಎಸ್ ಮೂಲಗಳು ತಮ್ಮ ಪಕ್ಷದ ನಾಲ್ವರು ಶಾಸಕರು ಕ್ರಾಸ್‌ವೋಟಿಂಗ್ ಮಾಡಿರುವ ಸಾಧ್ಯತೆ ಇದ್ದು, ಉಳಿದ ಏಳು ಮತಗಳು ಬಿಜೆಪಿ ಶಾಸಕರಿಂದ ಬಂದಿರಬಹುದು ಎಂದು ಅಂದಾಜಿಸಿವೆ.

ಈ ಕುರಿತು ಕೇಂದ್ರ ಸಚಿವ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬೀನ್ ಅವರೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.

ಆದರೆ, ಕುಮಾರಸ್ವಾಮಿ ಅವರು ವಿಧಾನ ಪರಿಷತ್ ಚುನಾವಣೆಯ ಸೋಲನ್ನು "ಮುಗಿದ ಅಧ್ಯಾಯ" ಎಂದು ಪರಿಗಣಿಸಿದ್ದು, ಈಗ ಸ್ಥಳೀಯ ಸಂಸ್ಥೆಗಳ ಚುನಾವಣೆ, ವಿಶೇಷವಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆಯತ್ತ ಗಮನ ಹರಿಸುವ ಸಮಯ ಬಂದಿದೆ ಎಂದು ಹೇಳಿದ್ದಾರೆ.

ಮೈತ್ರಿಯಲ್ಲಿರುವ ಭಿನ್ನಾಭಿಪ್ರಾಯಗಳನ್ನು ಬಗೆಹರಿಸುವ ಉದ್ದೇಶದಿಂದ ಮುಂದಿನ ಎರಡು ವಾರಗಳೊಳಗೆ ಸಮನ್ವಯ ಸಮಿತಿ ಸಭೆ ನಡೆಸುವ ಉದ್ದೇಶವೂ ಕುಮಾರಸ್ವಾಮಿಯವರಿಗಿದೆ ಎಂದು ತಿಳಿದುಬಂದಿದೆ.

ಈ ನಡುವೆ ಕ್ರಾಸ್‌ವೋಟಿಂಗ್ ಮಾಡಿರುವ ಜೆಡಿಎಸ್ ಶಾಸಕರ ವಿರುದ್ಧ ಕುಮಾರಸ್ವಾಮಿ ಯಾವುದೇ ಶಿಸ್ತು ಕ್ರಮ ಕೈಗೊಳ್ಳುವ ಸಾಧ್ಯತೆ ಇಲ್ಲ. 2028ರ ವಿಧಾನಸಭೆ ಚುನಾವಣೆ ಹಾಗೂ 2029ರ ಲೋಕಸಭೆ ಚುನಾವಣೆಯವರೆಗೂ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರಿಯಲಿದೆ" ಎಂದು ಜೆಡಿಎಸ್ ನಾಯಕರೊಬ್ಬರು ತಿಳಿಸಿದ್ದಾರೆ.

ಇನ್ನೊಂದೆಡೆ, ರಾಜಕೀಯ ವಿಶ್ಲೇಷಕರ ಅಭಿಪ್ರಾಯದಂತೆ, ಈ ಕ್ರಾಸ್‌ವೋಟಿಂಗ್ ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಬಿರುಕು ಮೂಡಿಸುವ ಉದ್ದೇಶದಿಂದ ಕೆಲವರು ರೂಪಿಸಿರುವ ತಂತ್ರದ ಭಾಗವಾಗಿರಬಹುದು ಎಂಬ ಅನುಮಾನವೂ ವ್ಯಕ್ತವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

''ಲೋ-ವೇಜ್ ಫಾರಿನರ್ಸ್ ಬೇಡ'' ಎಂದ ಜೆಡಿ ವ್ಯಾನ್ಸ್: 'ನಿಮ್ಮ ಹಿಂದೂ ಪತ್ನಿಯೂ ವಿದೇಶಿಯಲ್ಲವೇ?' ಉಷಾ ವ್ಯಾನ್ಸ್ ಹಿನ್ನೆಲೆ ಹಿಡಿದು ನೆಟ್ಟಿಗರ ಹಿಗ್ಗಾಮುಗ್ಗಾ ಟ್ರೋಲ್..!

'ಪನಾಮ ಕಾಲುವೆ ಬಿಟ್ಟುಕೊಟ್ಟಿದ್ದು ದೊಡ್ಡ ಮೂರ್ಖತನದ ನಿರ್ಧಾರ': ಚೀನಾ ಕಬಳಿಸಲು ಯತ್ನಿಸುತ್ತಿದೆ; ಟ್ರಂಪ್

'ಗುರುದಕ್ಷಿಣೆಯೇ ನಮ್ಮ ಆದಾಯ, ಪ್ರತಿಯೊಂದು ರೂಪಾಯಿಗೂ ಲೆಕ್ಕವಿದೆ', ನಮಗೆ ನೋಂದಣಿಯ ಅಗತ್ಯವಿಲ್ಲ: ಪ್ರಿಯಾಂಕ್ ಖರ್ಗೆಗೆ RSS ತಿರುಗೇಟು

Hindi Imposition: BEL ಸರ್ಕಲ್‌ನಲ್ಲಿ ಹಿಂದಿ ನಾಮಫಲಕ ಕಿತ್ತೆಸೆದ ಕರವೇ ಕಾರ್ಯಕರ್ತರು; FIR ದಾಖಲು

ಭಾರತಕ್ಕೆ ಆಗಮಿಸಿದ ಜಪಾನ್ ಪ್ರಧಾನಿ; ಜು.2 ರಂದು ಪ್ರಧಾನಿ ಮೋದಿ ಜೊತೆ ದ್ವಿಪಕ್ಷೀಯ ಮಾತುಕತೆ