ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಇಂದು ಬೆಳಗ್ಗೆ ಪತ್ನಿ ಜೊತೆ ಭೇಟಿ ಮಾಡಿದ ಸಿಎಂ ಡಿ ಕೆ ಶಿವಕುಮಾರ್  
ರಾಜಕೀಯ

D K ಶಿವಕುಮಾರ್ ಮುಖ್ಯಮಂತ್ರಿಯಾಗಿ ಒಂದು ತಿಂಗಳು: ಹೇಗಿತ್ತು ಆಡಳಿತ, ತೆಗೆದುಕೊಂಡ ಪ್ರಮುಖ ನಿರ್ಧಾರಗಳೇನು?

ಈಗಲೂ ಸಹ ಡಿ ಕೆ ಶಿವಕುಮಾರ್ ಸಂಪುಟದಲ್ಲಿ ಬಾಕಿ ಉಳಿದಿರುವ 20 ಸಚಿವ ಸ್ಥಾನಗಳಿಗೆ ಸಚಿವರ ಆಯ್ಕೆಯಾಗಿಲ್ಲ. ಹೊಸ ಹಾಗೂ ಯುವಕರಿಗೆ ಮಣೆ ಹಾಕಬೇಕು ಎನ್ನುವುದು ಕಾಂಗ್ರೆಸ್ ಹೈಕಮಾಂಡ್‌ನ ಲೆಕ್ಕಾಚಾರವಾಗಿದೆ.

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಅವರು ಅಧಿಕಾರ ವಹಿಸಿ ಇಂದಿಗೆ ಜುಲೈ 3ಕ್ಕೆ ಒಂದು ತಿಂಗಳಾಗಿದೆ. ಲೋಕಭವನದಲ್ಲಿ ಗಾಜಿನ ಮನೆಯಲ್ಲಿ ನಡೆದ ಭವ್ಯ ಕಾರ್ಯಕ್ರಮದಲ್ಲಿ ಡಿಕೆಶಿ, ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು.

ಆದರೆ ಈಗಲೂ ಸಹ ಬಾಕಿ ಉಳಿದಿರುವ 20 ಸಚಿವ ಸ್ಥಾನಗಳಿಗೆ ಸಚಿವರ ಆಯ್ಕೆಯಾಗಿಲ್ಲ. ಹೊಸ ಹಾಗೂ ಯುವಕರಿಗೆ ಮಣೆ ಹಾಕಬೇಕು ಎನ್ನುವುದು ಕಾಂಗ್ರೆಸ್ ಹೈಕಮಾಂಡ್‌ನ ಲೆಕ್ಕಾಚಾರವಾಗಿದೆ. ಸಚಿವ ಸ್ಥಾನಕ್ಕೆ ಕಾಂಗ್ರೆಸ್‌ನಲ್ಲಿ ಪೈಪೋಟಿ ಹೆಚ್ಚಾಗಿದ್ದು, ಬಣ ರಾಜಕೀಯವೂ ಸೇರಿದಂತೆ ಹಲವು ಕಾರಣಗಳಿಗೆ ಹೊಸ ಸಚಿವರ ನೇಮಕ ಆಗಿಲ್ಲ.

ಕಳೆದ ಮೂವತ್ತು ದಿನಗಳಲ್ಲಿ ಡಿಕೆಶಿ ನೇತೃತ್ವದ ಹೊಸ ಸರ್ಕಾರ ತೆಗೆದುಕೊಂಡ ಮಹತ್ವದ ನಿರ್ಧಾರಗಳೇನು ಎಂಬುದನ್ನು ನೋಡುವುದಾದರೆ ಹೀಗಿದೆ:

  • ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್.

  • ರಾಜ್ಯದ ಎಲ್ಲಾ ಪಂಚಾಯಿತಿ, ವಾರ್ಡ್ ಗಳಲ್ಲಿ ಭಾರತ ಜೋಡೋ ಯುವಕರ ಸಂಘ ಸ್ಥಾಪನೆ. ತಲಾ 10 ಲಕ್ಷ ರೂ. ನೀಡುವ ನಿರ್ಣಯ.

  • 2500 ಅಡಿವರೆಗಿನ ನೂತನ ವಸತಿ ಕಟ್ಟಡಗಳ ಶಾಶ್ವತ ವಿದ್ಯುತ್ ಸಂಪರ್ಕಕ್ಕೆ ಒಸಿ ವಿನಾಯಿತಿ.

  • ರಾಜ್ಯದೆಲ್ಲೆಡೆ ‘ಬಿ’ ಯಿಂದ ‘ಎ’ ಖಾತಾ ಪರಿವರ್ತನೆ.

  • ಬೆಂಗಳೂರಿನ ರಸ್ತೆಗಳನ್ನು ಗುಂಡಿಮುಕ್ತಗೊಳಿಸಲು 2 ಸಾವಿರ ಕೋಟಿ ರೂ. ಯೋಜನೆ.

  • ಖಾಸಗಿ ವಲಯದ ಉದ್ಯೋಗ ವಿನಿಮಯ ಕೇಂದ್ರ ಸ್ಥಾಪಿಸಲು ತೀರ್ಮಾನ.

  • 72 ಸಾವಿರ ಸರ್ಕಾರಿ ಹುದ್ದೆಗಳ ನೇಮಕಾತಿಗೆ 6 ತಿಂಗಳ ಗಡವು.

  • ಸಾರ್ವಜನಿಕರ ಕುಂದುಕೊರತೆ, ಅಹವಾಲು ಆಲಿಸಲು 'ಪ್ರಜಾಸೇವೆ' ಎಂಬ ಪ್ರತ್ಯೇಕ ಸಚಿವಾಲಯ.

  • ಶಾಸಕರು, ಮಂತ್ರಿಗಳ ಒತ್ತಡಕ್ಕೆ ಮಣಿಯದೇ ಕಾನೂನು ಚೌಕಟ್ಟಿನಲ್ಲಿ ಕಾರ್ಯನಿರ್ವಹಿಸಲು ಅಧಿಕಾರಿಗಳಿಗೆ ಸೂಚನೆ.

  • ಗ್ಯಾರಂಟಿ ಯೋಜನೆಗಳು ಕರ್ನಾಟಕ ರಾಜ್ಯದವರಿಗೆ ಮಾತ್ರ ಸಿಗಬೇಕು ಹಾಗೂ ಸೋರಿಕೆ ತಪ್ಪಿಸಲು ಕ್ರಮ.

  • ರೌಡಿಗಳ ನಿಗ್ರಹಕ್ಕೆ ಜಿಲ್ಲೆಗೊಂದು ಪಡೆ ರಚನೆಗೆ ಸೂಚನೆ.

  • ಕೇಂದ್ರದ ನೀತಿ ಆಯೋಗ ಸಭೆಯಲ್ಲಿ ಭಾಗಿ ಕರ್ನಾಟಕದ ಬೇಡಿಕೆಗಳ ಪ್ರಸ್ತಾಪ.

  • ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಸಚಿವರುಗಳಾದ ಅಮಿತ್ ಶಾ, ಸಿ.ಆರ್ ಪಾಟೀಲ್, ನಿರ್ಮಲಾ ಸೀತರಾಮನ್, ಮನೋಹರ್ ಲಾಲ್ ಖಟ್ಟರ್ ಅವರನ್ನು ಭೇಟಿ ಮಾಡಿ ರಾಜ್ಯದ ನೀರಾವರಿ ಯೋಜನೆಗಳು, ಬೆಂಗಳೂರಿನ ಮೆಟ್ರೋ, RRTS ರೈಲು ಹಾಗೂ ಪೋಲೀಸ್ ಇಲಾಖೆಗಳ ಯೋಜನೆಗಳು ಹಾಗೂ ವಿಶೇಷ ಅನುದಾನಗಳ ಬಗ್ಗೆ ಚರ್ಚೆ.

  • ದೆಹಲಿಯಲ್ಲಿರುವ ರಾಜ್ಯದ ಐಎಎಸ್, ಐಪಿಎಸ್, ಐಎಫ್ಎಸ್ ಅಧಿಕಾರಿಗಳ ಸಭೆ ಮಾಡಿ ಕರ್ನಾಟಕದ ಸರ್ವತೋಮುಖ ಅಭಿವೃದ್ಧಿಗೆ ಕೈ ಜೋಡಿಸಲು ಕರೆ.

  • ಕಾಲೇಜು ಚುನಾವಣೆಗಳನ್ನು ಪ್ರಸಕ್ತ ವರ್ಷದಿಂದಲೇ ಪ್ರಾರಂಭಿಸಲು ಚಿಂತನೆ‌.

  • ಎಲ್ಲಾ ತಾಲ್ಲೂಕುಗಳಲ್ಲಿ ರಿಂಗ್ ರಸ್ತೆ ಗ್ರಿಡ್ ಗುರುತಿಸಲು ನಿರ್ದೇಶನ.

  • ಭ್ರಷ್ಟಾಚಾರ ವಿರುದ್ಧ ದೂರು ನೀಡಲು ದೂರವಾಣಿ ಸಂಖ್ಯೆ.

  • ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಬೆಳಗ್ಗೆ 10 ಗಂಟೆಗೆ ಜಿಪಿಎಸ್ ತಂತ್ರಾಂಶದ ಸಿಬ್ಬಂದಿ ಹಾಜರಾತಿಗೆ ಸೂಚನೆ.

  • ಮೀಟರ್ ಬಡ್ಡಿ ದಂಧೆಗೆ ಕಡಿವಾಣ ಹಾಕಲು ಅಧಿಕಾರಿಗಳಿಗೆ ನಿರ್ದೇಶನ.

  • ನೂತನ ಸಿಎಸ್ಆರ್ ನೀತಿ ತರಲು ಅಧಿಕಾರಿಗಳಿಗೆ ಸೂಚನೆ.

  • ಬರ ಪರಿಸ್ಥಿತಿ ನಿರ್ವಹಣೆಗೆ ಅಗತ್ಯ ಸಿದ್ಧತೆಗೆ ಅಧಿಕಾರಿಗಳ ಜೊತೆ ಸಭೆ.

  • ಮಾವು ಬೆಳೆಗಾರರಿಗೆ ಕಳೆದ ವರ್ಷದಂತೆ ಪ್ರೋತ್ಸಾಹ ಧನ ಮುಂದುವರಿಸಲು ತೀರ್ಮಾನ.

  • ರೈತರಿಗೆ ಸಕಾಲದಲ್ಲಿ ಬಿತ್ತನೆ ಬೀಜ, ಗೊಬ್ಬರ ಪೂರೈಕೆಗೆ ನಿರ್ದೇಶನ.

  • ಕರಾವಳಿಯಲ್ಲಿ ಪ್ರವಾಸೋದ್ಯಮ ಉತ್ತೇಜನಕ್ಕೆ ವಿವಿಧ ಕ್ರಮ.

  • ವಿದ್ಯಾರ್ಥಿಗಳಿಗಾಗಿ ದೆಹಲಿಯಲ್ಲಿ ಕರ್ನಾಟಕ ಭವನ ನಿರ್ಮಾಣಕ್ಕೆ ತೀರ್ಮಾನ.

  • ಕರ್ನಾಟಕ ರಾಜ್ಯದ ಹಿತ ಕಾಯಲು ದೆಹಲಿಯಲ್ಲಿ ನಿವೃತ್ತ ಐಎಎಸ್, ಐಪಿಎಸ್ ಅಧಿಕಾರಿಗಳ ತಂಡ ರಚನೆಗೆ ನಿರ್ಧಾರ.

  • ಸುಪ್ರೀಂ ಕೋರ್ಟ್ ನಲ್ಲಿ ರಾಜ್ಯಕ್ಕೆ ಸಂಬಂಧಿಸಿದ ವಿವಿಧ ಪ್ರಕರಣಗಳ ನಿರ್ವಹಣೆ ಮತ್ತು ತ್ವರಿತ ಇತ್ಯರ್ಥಕ್ಕೆ ವಕೀಲರ ತಂಡ ಸದೃಢಗೊಳಿಸಲು ತೀರ್ಮಾನ.

  • ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಜಾರಿಗೆ ಪಂಚಾಯಿತಿ ಹಾಗೂ ವಾರ್ಡ್ ಮಟ್ಟದಲ್ಲಿ ಗ್ಯಾರಂಟಿ ಸಮಿತಿ ರಚನೆಗೆ ನಿರ್ಧಾರ.

  • ಪುಸ್ತಕ ಪ್ರೇಮಿ ಅಂಕೇಗೌಡರ ಪುಸ್ತಕಗಳ ಸಂರಕ್ಷಣೆಗೆ 5 ಕೋಟಿ ರೂ ಹಾಗೂ 2 ಎಕರೆ ಜಾಗ ನೀಡಲು ತೀರ್ಮಾನ.

  • ತುಂಗಭದ್ರಾ ಅಣೆಕಟ್ಟು ನೂತನವಾಗಿ ಅಳವಡಿಸಲಾಗಿರುವ ಸ್ಪಿಲ್ ಗೇಟ್ ಗಳ ಉದ್ಘಾಟನೆ.

  • ತುಂಗಾಭದ್ರ ಪಾತ್ರದ ರೈತರ ರಕ್ಷಣೆಗೆ ಕೇಂದ್ರ ಜಲಶಕ್ತಿ ಸಚಿವರಾದ ಸಿ.ಆರ್ ಪಾಟೀಲ್ ನೇತೃತ್ವದಲ್ಲಿ ಕರ್ನಾಟಕ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ತೆಲಂಗಾಣ ಸಿಎಂ ರೇವಂತ್ ರೆಡ್ಡಿ, ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಅವರು ಒಗ್ಗಟ್ಟಾಗಿ ಸೇರಿ ಒಮ್ಮತದ ತೀರ್ಮಾನ.

  • ಅಣೆಕಟ್ಟಿನಲ್ಲಿ ಹೂಳು ತೆಗೆಯಲು ಕೇಂದ್ರದಿಂದ ಯೋಜನೆ.

  • ಬಡವರ ವಸತಿ ಯೋಜನೆಗಳ ಮಂದಗತಿಗೆ ಅಸಮಾಧಾನ, ಆದಷ್ಟು ಬೇಗ ವಸತಿ ವಿತರಣೆಗೆ ಅಧಿಕಾರಿಗಳಿಗೆ ಸೂಚನೆ.

  • ಬಡವರಿಗೆ ನಿವೇಶನ ಬದಲು ಮನೆ ಕಟ್ಟಿಕೊಡಿ ಎಂದು ಅಧಿಕಾರಿಗಳಿಗೆ ಸೂಚನೆ.

  • ಕೆಂಪೇಗೌಡ ಬಡಾವಣೆಯಲ್ಲಿ 10 ಪಥಗಳ ಎಸ್.ಎಂ ಕೃಷ್ಣ ರಸ್ತೆ ಉದ್ಘಾಟನೆ.

  • ತೆರಿಗೆ ವಂಚನೆ ತಡೆಯುವಂತೆ ಅಧಿಕಾರಿಗಳಿಗೆ ಸೂಚನೆ.

  • ರಾಜಕೀಯ ವ್ಯವಹಾರಗಳ ಸಮಿತಿ ರಚನೆಗೆ ತೀರ್ಮಾನ.

  • ಬಂಡೀಪುರ, ನಾಗರಹೊಳೆ ಹುಲಿ ಸಫಾರಿ ಪುನರಾರಂಭ.

  • ಹೆಬ್ಬಾಳ ಬಳಿ ಸಣ್ಣ ಸುರಂಗ ರಸ್ತೆ ನಿರ್ಮಾಣಕ್ಕೆ ಶಂಕುಸ್ಥಾಪನೆ.

  • ಕೆಂಪೇಗೌಡ ಜಯಂತಿ ಹಿನ್ನೆಲೆಯಲ್ಲಿ ಬಿಡಿಎ ವತಿಯಿಂದ ಬೆಂಗಳೂರಿನಲ್ಲಿ 15 ಲಕ್ಷ ಸಸಿ ನೆಡುವ ಕಾರ್ಯಕ್ರಮ, ಗಿನ್ನೆಸ್ ದಾಖಲೆ ನಿರ್ಮಾಣ.

  • ಸಾರ್ವಜನಿಕ ಯೋಜನೆಗಳಿಗೆ ಭೂಮಿ ಕೊಡುವ ರೈತರು, ಭೂಮಾಲೀಕರಿಗೆ ಗೌರವ ನೀಡಲು ವಾಲ್ ಆಫ್ ಗ್ರ್ಯಾಟಿಟ್ಯೂಡ್ ನಿರ್ಮಾಣಕ್ಕೆ ನಿರ್ಧಾರ.

  • 2028ಕ್ಕೆ ನಶೆ ಮುಕ್ತ ಕರ್ನಾಟಕ ನಿರ್ಮಾಣದ ಗುರಿ.

  • ಅಮಲು ಬೆರೆಸುವ ಪಾನ್ ಮಸಾಲ, ಗುಟ್ಕಾಗಳ ನಿಷೇಧಿಸುವ ಎಚ್ಚರಿಕೆ.

  • ಡ್ರಗ್ಸ್ ಜಾಲ ನಿಗ್ರಹಕ್ಕೆ ಸುಳಿವು ನೀಡಿದವರಿಗೆ ಬಹುಮಾನ ನೀಡಲು ತೀರ್ಮಾನ.

  • ಖಾಸಗೀಕರಣ ವಿರೋಧಿಸುತ್ತಿದ್ದ ಎಸ್ಕಾಂ ಸಿಬ್ಬಂದಿಗಳಿಗೆ ಆತ್ಮಸ್ಥೈರ್ಯ.

  • ಹಾಸನದ ಐಐಟಿಗೆ ಭೂಸ್ವಾಧೀನದಿಂದ ಸರಿಯಾದ ಪರಿಹಾರ ಸಿಗದೆ ನೊಂದ ಹಾಸನದ ರೈತರಿಗೆ 2013ರ ಕೋರ್ಟ್ ಆದೇಶ ಅನ್ವಯ ಪರಿಹಾರ ನೀಡುವ ಭರವಸೆ.

  • ಎಸ್ಐಆರ್ ಪ್ರಕ್ರಿಯೆಯಲ್ಲಿ ರಾಜ್ಯದ ಜನರ ಮತದಾನದ ಹಕ್ಕು ರಕ್ಷಣೆಗೆ ನಿವಾಸ ದೃಢೀಕರಣ ಪತ್ರ ಸೇರಿದಂತೆ ಸರ್ಕಾರದಿಂದ ಅಗತ್ಯ ನೆರವು.

  • ಕೇಂದ್ರ ಅರಣ್ಯ ಇಲಾಖೆಗಳಲ್ಲಿ ಅರಣ್ಯ ಅನುಮತಿ ಬಾಕಿ ಇರುವ ಎಲ್ಲಾ ಪ್ರಕರಣಗಳನ್ನು ಜು.15ರ ಒಳಗೆ ಇತ್ಯರ್ಥಕ್ಕೆ ಸೂಚನೆ.

  • ಗಣಿಗಾರಿಕೆ ಸೇರಿ ನಾನಾ ಚಟುವಟಿಕೆಗಳಿಗೆ ಸರ್ಕಾರಿ ಜಾಗ ಪಡೆದು ವರ್ಷಗಳ ಕಾಲ ಚಟುವಟಿಕೆ ಆರಂಭಿಸದಿದ್ದರೆ ಆ ಭೂಮಿ ಹಿಂಪಡೆಯಲು ಸೂಚನೆ.

  • ಮೇಕೆದಾಟು ಯೋಜನೆ ಅನುಷ್ಠಾನಕ್ಕಾಗಿ ಭೂಕಂಪನ ಅಧ್ಯಯನಕ್ಕೆ ಮಣ್ಣು ಪರೀಕ್ಷೆಗೆ ಹಾಗೂ ಸಮೀಕ್ಷೆಗೆ ರಾಜ್ಯ ವನ್ಯಜೀವಿ ಮಂಡಳಿಯಿಂದ ಅನುಮತಿ ನೀಡಿದ್ದು, ಇದರ ಮುಂದುವರಿದ ಭಾಗವಾಗಿ ಕೇಂದ್ರ ವನ್ಯಜೀವಿ ಮಂಡಳಿಗೆ ಅನುಮತಿ ಕೋರಿ ಶಿಫಾರಸ್ಸು.

ಡಿ ಕೆ ಶಿವಕುಮಾರ್ ಸಂಪುಟದಲ್ಲಿ ಈಗಿರುವ ಸಚಿವರು

ಈಗ ಇರುವವರು ಪ್ರಮುಖ ಸಚಿವರು ಡಿ.ಕೆ.ಶಿವಕುಮಾರ್ - ಮುಖ್ಯಮಂತ್ರಿ

1. ಡಾ. ಜಿ. ಪರಮೇಶ್ವರ್ - ಉಪ ಮುಖ್ಯಮಂತ್ರಿ, ಕಂದಾಯ ಮತ್ತು ಯುವಸಬಲೀಕರಣ.

2.. ಪ್ರಿಯಾಂಕ್‌ ಖರ್ಗೆ- ಗೃಹ ಇಲಾಖೆ ಮತ್ತು ಐಟಿಬಿಟಿ

3. ರಾಮಲಿಂಗಾ ರೆಡ್ಡಿ- ಜಲಸಂಪನ್ಮೂಲ ಸಚಿವ.

4. ಸತೀಶ್‌ ಜಾರಕಿಹೊಳಿ-ಲೋಕೋಪಯೋಗಿ.

5. ಕೆಎಚ್‌ ಮುನಿಯಪ್ಪ- ಆಹಾರ ಇಲಾಖೆ.

6. ಕೆಜೆ ಜಾರ್ಜ್‌ - ಇಂಧನ ಮತ್ತು ಪ್ರವಾಸೋದ್ಯಮ.

7. ಭೈರತಿ ಸುರೇಶ್ - ಸಾರಿಗೆ ಇಲಾಖೆ.

8. ಕೃಷ್ಣ ಭೈರೇಗೌಡ - ಬೆಂಗಳೂರು ನಗರಾಭಿವೃದ್ಧಿ.

9. ಎಂಬಿ ಪಾಟೀಲ್‌- ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ.

10. ಯುಟಿ ಖಾದರ್‌-ಆರೋಗ್ಯ.

11. ಈಶ್ವರ್‌ ಖಂಡ್ರೆ- ಗ್ರಾಮೀಣಾಭಿವೃದ್ಧಿ.

12. ಯತೀಂದ್ರ ಸಿದ್ದಾಮಯ್ಯ- ನಗರಾಭಿವೃದ್ಧಿ.

13. ಶರಣ್‌ ಪ್ರಕಾಶ್‌ ಪಾಟೀಲ್‌- ವೈದ್ಯಕೀಯ ಶಿಕ್ಷಣ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಚಿಕ್ಕಬಳ್ಳಾಪುರ: ಕ್ವಾರಿಯಲ್ಲಿ ಡ್ರಿಲ್ಲಿಂಗ್ ವೇಳೆ ಸ್ಫೋಟ, ಕಾರ್ಮಿಕ ಸಾವು

ಅಂತರಾಷ್ಟ್ರೀಯ ವಿಮಾನ ಪ್ರಯಾಣಿಕರಿಗೆ ಗುಡ್‌ನ್ಯೂಸ್: Fuel surcharge ಇಳಿಸಿದ Air India; ವಿಮಾನ ಟಿಕೆಟ್ ದರವೂ ಇಳಿಕೆ ಸಾಧ್ಯತೆ..!

ಬೆಳಗಾವಿ: 300 ವರ್ಷಗಳ ಪುರಾತನ ಮೆಟ್ಟಿಲು ಬಾವಿಗೆ ಮರುಜೀವ, Video

ರಷ್ಯಾದಿಂದಲೇ ತೈಲ ತಂದು, ರಷ್ಯಾಕ್ಕೇ ಪೆಟ್ರೋಲ್ ಮಾರಾಟ...? ಏನಿದು ಭಾರತದ ರಿಫೈನರಿಗಳ ‘ಉಲ್ಟಾ’ ಗೇಮ್? ಕೇಂದ್ರ ಸರ್ಕಾರ ಹೇಳಿದ್ದೇನು..?

ಅಮೆರಿಕವೇ ಹೆಚ್ಚು ಖರ್ಚು ಮಾಡುತ್ತಿದ್ದರೂ ಕಷ್ಟದ ಸಮಯದಲ್ಲಿ ಕೈಕೊಟ್ಟರು: ಏಕಪಕ್ಷೀಯ ಸಂಬಂಧ ಮುಂದುವರಿಸುವುದು ಹಾಸ್ಯಾಸ್ಪದ: NATO ವಿರುದ್ಧ ಟ್ರಂಪ್‌ ಆಕ್ರೋಶ