ಸತೀಶ್ ಜಾರಕಿಹೊಳಿ  
ರಾಜಕೀಯ

ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರದ ಬುಡ ಅಲುಗಾಡಬಹುದು: ಮೂರನೇ CM ಬರಲು ಸಾಧ್ಯವಿಲ್ಲ; ಸತೀಶ್ ಜಾರಕಿಹೊಳಿ

ಕಾಂಗ್ರೆಸ್ ಪಕ್ಷದಲ್ಲೂ ಮೂವರು ಸಿಎಂಗಳಾಗುತ್ತಾರೆ ಎಂಬುದು ಸರಿಯಲ್ಲ. ಡಿ.ಕೆ.ಶಿವಕುಮಾರ್ ಅವರೇ ಮುಂದುವರೆಯುತ್ತಾರೆ. ನಮ್ಮ ಸರಕಾರ ಗಟ್ಟಿಯಾಗಿದೆ ಎಂದು ಹೇಳಿದರು.

ಬೆಂಗಳೂರು: ಮುಂದಿನ ಸುತ್ತಿನ ಸಚಿವ ಸಂಪುಟ ವಿಸ್ತರಣೆಯ ನಂತರ ಕಾಂಗ್ರೆಸ್ ಸರ್ಕಾರ "ಎರಡು-ಮೂರು ದಿನಗಳವರೆಗೆ ಅಲುಗಾಡುತ್ತದೆ" ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಸರ್ಕಾರದ ಬುಡ ಅಲ್ಲಾಡಲಿದೆ ಎಂದು ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ನೀಡಿದ್ದ ಹೇಳಿಕೆ ಕುರಿತು ಸುದ್ದಿಗಾರರ ಪ್ರಶ್ನೆಗೆ ಅವರು ಉತ್ತರಿಸಿದ ಅವರು , ಆಗಸ್ಟ್‌ನಲ್ಲಿ ವಿಸ್ತರಣೆಯಾಗುವ ಸಾಧ್ಯತೆಯಿದೆ ಎಂದು ಹೇಳಿದರು. ಸ್ವಲ್ಪ ಮಟ್ಟಿಗೆ ಅಲುಗಾಡುತ್ತೆ ಆದ್ರೆ ಏನು ಆಗಲ್ಲ ಎಂದಿದ್ದಾರೆ. ಹೆಚ್ಚೆಂದ್ರೆ ಎರಡು ಮೂರು ದಿನಗಳು ಅಲ್ಲಾಡಬಹುದು, ಆಮೇಲೆ ಎಲ್ಲವೂ ಸರಿ ಹೋಗುತ್ತೆ ಎಂದಿದ್ದಾರೆ.

ಕಾಂಗ್ರೆಸ್ ಪಕ್ಷದಲ್ಲೂ ಮೂವರು ಸಿಎಂಗಳಾಗುತ್ತಾರೆ ಎಂಬುದು ಸರಿಯಲ್ಲ. ಡಿ.ಕೆ.ಶಿವಕುಮಾರ್ ಅವರೇ ಮುಂದುವರೆಯುತ್ತಾರೆ. ನಮ್ಮ ಸರಕಾರ ಗಟ್ಟಿಯಾಗಿದೆ ಎಂದು ಹೇಳಿದರು.

ಸಂಪುಟ ವಿಸ್ತರಣೆ ವಿಳಂಬ ವಿಚಾರದಲ್ಲಿ ನಾವು ಏನೂ ಮಾಡಲು ಆಗುವುದಿಲ್ಲ. ವಿಸ್ತರಣೆ ಮಾಡುವವರೆಗೆ ಕಾಯಲೇಬೇಕು. ಈಗಾಗಲೇ ಒಂದು ತಿಂಗಳು ತಡವಾಗಿದೆ ಎಂದರು.

ಉಳಿದ 20 ಸ್ಥಾನಗಳನ್ನು ಭರ್ತಿ ಮಾಡುವಾಗ ಜಾತಿ ಮತ್ತು ಪ್ರಾದೇಶಿಕ ಸಮೀಕರಣಗಳನ್ನು ಪರಿಗಣಿಸಲು ಪಕ್ಷವು ಉತ್ಸುಕವಾಗಿದೆ ಎಂದು ಹೇಳಲಾಗುತ್ತದೆ (ಕರ್ನಾಟಕವು 224 ಸದಸ್ಯರನ್ನು ಹೊಂದಿರುವ ವಿಧಾನಸಭೆಯಲ್ಲಿ ಗರಿಷ್ಠ 34 ಮಂತ್ರಿಗಳನ್ನು ಹೊಂದಬಹುದು.

ಧಾರವಾಡ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆಯಾಗುವ ಮುನ್ನವೇ ಚರ್ಚೆ ಮಾಡುವ ಅಗತ್ಯ ಇಲ್ಲ. ಅಲ್ಲಿ ನಾವು ಯಾರನ್ನೂ ಗುರಿ ಮಾಡುತ್ತಿಲ್ಲ. ಕೆಲ ಜವಾಬ್ದಾರಿಗಳ ಹಿನ್ನೆಲೆಯಲ್ಲಿ ತಾವು ಆ ಕ್ಷೇತ್ರಕ್ಕೆ ಭೇಟಿ ಮಾಡಿದ್ದು ನಿಜ. ಚುನಾವಣೆ ಬಂದಾಗ ಕೆಲಸ ಮಾಡಬೇಕಾಗುತ್ತದೆ ಎಂದು ಅವರು ವಿವರಣೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುರಿದುಬಿದ್ದ ಶಾಂತಿ ಒಪ್ಪಂದ: ಇರಾನ್ ಮೇಲೆ ಅಮೆರಿಕ ಭಾರಿ ವೈಮಾನಿಕ ದಾಳಿ; ಮೂರು ಗಲ್ಫ್ ರಾಷ್ಟ್ರಗಳ ಮೇಲೆ ಟೆಹ್ರಾನ್ ಪ್ರತಿದಾಳಿ, ಮಧ್ಯಪ್ರಾಚ್ಯ ಮತ್ತೆ ಉದ್ವಿಗ್ನ..!

ಯುದ್ಧದಲ್ಲಿ ಈಗಾಗಲೇ ಗೆದ್ದಿದ್ದೇವೆ, ಒಪ್ಪಂದಕ್ಕಾಗಿ ಇರಾನ್ ಬೇಡಿಕೊಳ್ಳುತ್ತಿದೆ: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ಅಮೆರಿಕ ದಾಳಿಗೆ ಇರಾನ್ ತಿರುಗೇಟು: ಬಹ್ರೇನ್‌ನಲ್ಲಿ ಅಮೆರಿಕಾ ನೌಕಾಪಡೆ ಕೇಂದ್ರದ ಮೇಲೆ ಕ್ಷಿಪಣಿ ದಾಳಿ; ಭಾರೀ ಬೆಂಕಿ, Video ವೈರಲ್

ಕಾರವಾರ: ಅರಬೈಲ್ ಘಾಟ್‌ನಲ್ಲಿ ಲಾರಿ- ಕ್ರೂಸರ್ ಮುಖಾಮುಖಿ ಡಿಕ್ಕಿ; Swiggyಯಲ್ಲಿ ಕೆಲಸ ಮಾಡುತ್ತಿದ್ದ ಧಾರವಾಡದ 6 ಯುವಕರು ಸ್ಥಳದಲ್ಲೇ ಸಾವು

ರಾತ್ರಿ ಇರಾನ್ ಮೇಲೆ ಮತ್ತೆ ದಾಳಿ: ಅಮೆರಿಕ ಅಧ್ಯಕ್ಷ ಟ್ರಂಪ್