ಡಿಕೆ ಶಿವಕುಮಾರ್ - ಬಿ ಕೆ ಹರಿಪ್ರಸಾದ್ 
ರಾಜಕೀಯ

ಸಂಪುಟ ವಿಸ್ತರಣೆ ಸರ್ಕಸ್: ಅಂತಿಮವಾಗದ ಸಚಿವರ ಪಟ್ಟಿ; ಮಾತುಕತೆ ಮುಂದೂಡಿಕೆ ಎಂದ ಹರಿಪ್ರಸಾದ್

ಇದಕ್ಕೂ ಮೊದಲು, ಹರಿಪ್ರಸಾದ್ ಅವರಿಗೂ ಸಚಿವ ಸ್ಥಾನ ನೀಡಬಹುದು ಎಂಬ ವರದಿಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, "ನನಗೆ ಅದರ ಬಗ್ಗೆ ಮಾಹಿತಿ ಇಲ್ಲ. ಆ ಬಗ್ಗೆ ಹೈಕಮಾಂಡ್ ನಿರ್ಧರಿಸುತ್ತದೆ" ಎಂದರು.

ನವದೆಹಲಿ: ಡಿಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ವಿಸ್ತರಣೆ ಕರಸತ್ತು ಮತ್ತಷ್ಟು ತೀವ್ರಗೊಂಡಿದ್ದು, ಕಾಂಗ್ರೆಸ್‌ನ ಹಲವು ಶಾಸಕರು ಸಚಿವ ಸ್ಥಾನಕ್ಕಾಗಿ ತೀವ್ರ ಲಾಭಿ ನಡೆಸುತ್ತಿದ್ದಾರೆ. ಆದರೆ ಇದುವರೆಗೂ ನೂತನ ಸಚಿವರ ಪಟ್ಟಿ ಅಂತಿಮವಾಗಿಲ್ಲ ಎಂದು ಮೂಲಗಳು ತಿಳಿಸಿವೆ.

ಈ ಮಧ್ಯೆ, ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದ ಚರ್ಚೆಗಳು ಒಂದು ಅಥವಾ ಎರಡು ದಿನ ಮುಂದೂಡಲಾಗಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಗುರುವಾರ ಹೇಳಿದ್ದಾರೆ. ಇದರಿಂದ ಸಚಿವ ಆಕಾಂಕ್ಷಿಗಳಿಗೆ ತೀವ್ರ ನಿರಾಶೆಯಾಗಿದೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಹರಿಪ್ರಸಾದ್, "ನಾವು ಕೆಲವು ವಿಷಯಗಳ ಬಗ್ಗೆ ಚರ್ಚಿಸಿದ್ದೇವೆ. ಅದರ ಹೊರತಾಗಿ, ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ(ಮಲ್ಲಿಕಾರ್ಜುನ ಖರ್ಗೆ)ರು ಬೆಂಗಳೂರಿಗೆ ಹೋಗಿದ್ದಾರೆ. ಹೀಗಾಗಿ ಒಂದು ಅಥವಾ ಎರಡು ದಿನ ಮಾತುಕತೆ ಮುಂದೂಡಲಾಗಿದೆ. ಚರ್ಚೆಗಳು ಪುನರಾರಂಭವಾದಾಗ ನಮಗೆ ತಿಳಿಸುತ್ತಾರೆ" ಎಂದರು.

ಇದಕ್ಕೂ ಮೊದಲು, ಹರಿಪ್ರಸಾದ್ ಅವರಿಗೂ ಸಚಿವ ಸ್ಥಾನ ನೀಡಬಹುದು ಎಂಬ ವರದಿಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, "ನನಗೆ ಅದರ ಬಗ್ಗೆ ಮಾಹಿತಿ ಇಲ್ಲ. ಆ ಬಗ್ಗೆ ಹೈಕಮಾಂಡ್ ನಿರ್ಧರಿಸುತ್ತದೆ" ಎಂದರು.

ಸಚಿವ ಸಂಪುಟ ವಿಸ್ತರಣೆಯನ್ನು ಒಂದೇ ಹಂತದಲ್ಲಿ ಮಾಡಬೇಕೇ ಅಥವಾ ಬೇಡವೇ ಎಂಬುದನ್ನು ಸಹ ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆ. ಪಕ್ಷದಲ್ಲಿ ಐದಾರು ಬಾರಿ ಶಾಸಕರಾದವರೂ ಇದ್ದಾರೆ. ಹಲವು ಶಾಸಕರಿಗೆ ಈಗಾಗಲೇ ಹಲವು ಬಾರಿ ಸಚಿವರಾಗುವ ಅವಕಾಶ ಸಿಕ್ಕಿದೆ. ಹೀಗಾಗಿ ಯಾರನ್ನು ಸಂಪುಟಕ್ಕ ಸೇರಿಸಿಕೊಳ್ಳಬೇಕು ಎಂಬುದನ್ನು ಹೈಕಮಾಂಡ್ ನಿರ್ಧರಿಸುತ್ತದೆ ಎಂದರು.

ನಾನು ದೆಹಲಿಗೆ ಯಾವುದೇ ಪಟ್ಟಿಯನ್ನು ತಂದಿಲ್ಲ. ನಾನು ಪಟ್ಟಿ ಹಿಡಿದುಕೊಂಡು ಓಡಾಡುವ ವ್ಯಕ್ತಿ ಅಲ್ಲ. ಪಕ್ಷದ ಅಧ್ಯಕ್ಷನಾಗಿ ನನಗೆ ಎಲ್ಲಾ ಶಾಸಕರೂ ಸಮಾನರು. ನಾನು ಯಾರ ಪರವಾಗಿಯೂ ಲಾಬಿ ಮಾಡುವುದಿಲ್ಲ ಎಂದು ಹರಿಪ್ರಸಾದ್ ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Puri Rath Yatra: ಭಾರಿ ಜನಸಾಗರ, ಕಾಲ್ತುಳಿತ ಓರ್ವ ಸಾವು, ನೂರಾರು ಮಂದಿಗೆ ಗಾಯ!

ವಿಧಿ ಬರೆದ ಕಥೆ: ಆವತ್ತು Lionel Messi ಬಾತ್ ಟಬ್ ನಲ್ಲಿ ಮುದ್ದಾಡಿದ್ದ ಮಗುವೇ ಇಂದು FIFA WorldCup ಫೈನಲ್ ನಲ್ಲಿ ಎದುರಾಳಿ!

'ಬರವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ'; ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ, ಕೇಂದ್ರದಿಂದ ವಿಶೇಷ ನೆರವಿಗೆ ಮನವಿ

ಹಿಂದೂ ವಿದ್ಯಾರ್ಥಿಗೆ ಇಸ್ಲಾಮಿಕ್‌ ಪ್ರಾರ್ಥನೆ 'ಕಲ್ಮಾ' ಪಠಿಸಲು ಹೋಂ ವರ್ಕ್‌ ನೀಡಿದ ಶಿಕ್ಷಕಿ; ಕಠಿಣ ಕ್ರಮಕ್ಕೆ ಬಿಜೆಪಿ ಆಗ್ರಹ

ಗ್ರಾಮ ಪಂಚಾಯಿತಿಗಳಿಗೆ ಬಾಕಿ 2,186 ಕೋಟಿ ರೂ ಬಿಡುಗಡೆಗೆ ಒತ್ತಾಯ; ರಾಜ್ಯದ ಎಲ್ಲಾ ಸಂಸದರಿಗೆ ಸಚಿವ Eshwar Khandre ಪತ್ರ