ಖರ್ಗೆ, ರಾಹುಲ್ ಜೊತೆಗೆ ಡಿಕೆ ಶಿವಕುಮಾರ್, ಸಿದ್ದರಾಮಯ್ಯ 
ರಾಜಕೀಯ

ಸಂಪುಟ ವಿಸ್ತರಣೆ ಸರ್ಕಸ್: ಸಚಿವರ ಪಟ್ಟಿ ಬಹುತೇಕ ಫೈನಲ್; 'ಲಕ್ಷ್ಮಿ'ಗೂ ಜಾಕ್‌ಪಾಟ್ ಸಾಧ್ಯತೆ!

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ದೆಹಲಿಯಲ್ಲಿ ಕಾಂಗ್ರೆಸ್‌ನ ಉನ್ನತ ನಾಯಕರೊಂದಿಗೆ ಚರ್ಚೆ ನಡೆಸಿದ್ದು, ಎರಡನೇ ಹಂತದಲ್ಲಿ ಸಂಪುಟ ಸೇರುವ ಸಚಿವರ ಪಟ್ಟಿ ಬಹುತೇಕ ಅಂತಿಮವಾಗಿದೆ.

ನವದೆಹಲಿ: ಡಿಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ವಿಸ್ತರಣೆ ಕರಸತ್ತು ಮತ್ತಷ್ಟು ತೀವ್ರಗೊಂಡಿದ್ದು, ಕಾಂಗ್ರೆಸ್‌ನ ಹಲವು ಶಾಸಕರು ಸಚಿವ ಸ್ಥಾನಕ್ಕಾಗಿ ತೀವ್ರ ಲಾಭಿ ನಡೆಸುತ್ತಿದ್ದಾರೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ದೆಹಲಿಯಲ್ಲಿ ಕಾಂಗ್ರೆಸ್‌ನ ಉನ್ನತ ನಾಯಕರೊಂದಿಗೆ ಚರ್ಚೆ ನಡೆಸಿದ್ದು, ಎರಡನೇ ಹಂತದಲ್ಲಿ ಸಂಪುಟ ಸೇರುವ ಸಚಿವರ ಪಟ್ಟಿ ಬಹುತೇಕ ಅಂತಿಮವಾಗಿದೆ.

ಈ ಮಧ್ಯೆ ಮುಂದಿನ ತಿಂಗಳು ಆರಂಭವಾಗಲಿರುವ ವಿಧಾನಸಭಾ ಅಧಿವೇಶನಕ್ಕೂ ಮುನ್ನವೇ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಹೇಳಿದ್ದಾರೆ.

ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಇಬ್ಬರು ನಾಯಕರೂ ಇಂದು ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಅವರ ನಿವಾಸದಲ್ಲಿ ಭೇಟಿಯಾದರು ಮತ್ತು ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರೊಂದಿಗೆ ಚರ್ಚೆ ನಡೆಸಿದರು.

ಆದಾಗ್ಯೂ, ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಲು ಸಾಧ್ಯವಾಗಿಲ್ಲ. ಖರ್ಗೆ ಅವರು ತುರ್ತಾಗಿ ಕರ್ನಾಟಕಕ್ಕೆ ತೆರಳಬೇಕಾಗಿರುವುದರಿಂದ ಅವರನ್ನು ಭೇಟಿ ಮಾಡಲು ಸಾಧ್ಯವಾಗಲಿಲ್ಲ.

"ಚರ್ಚೆಗಳು ಇದೀಗ ಪ್ರಾರಂಭವಾಗಿವೆ. ಇವು ಪ್ರಾಥಮಿಕ ಚರ್ಚೆಗಳಾಗಿದ್ದು, ಶೀಘ್ರದಲ್ಲೇ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ನಡೆಯಲಿದೆ" ಎಂದು ಸಭೆಯ ನಂತರ ಸುರ್ಜೇವಾಲ ಸುದ್ದಿಗಾರರಿಗೆ ತಿಳಿಸಿದ್ದಾರೆ.

"ರಾಜ್ಯ ವಿಧಾನಸಭೆಯ ಸ್ಪೀಕರ್ ಹುದ್ದೆಯ ಜೊತೆಗೆ ಕರ್ನಾಟಕ ಸಚಿವ ಸಂಪುಟದಲ್ಲಿ 20 ಹುದ್ದೆಗಳು ಖಾಲಿ ಇವೆ. ಎಲ್ಲಾ ಹುದ್ದೆಗಳನ್ನು ಭರ್ತಿ ಮಾಡುವ ಪ್ರಯತ್ನ ನಡೆಯುತ್ತಿದೆ" ಎಂದು ಅವರು ಹೇಳಿದ್ದಾರೆ.

ವಿಸ್ತರಣೆ ಯಾವಾಗ ನಡೆಯಲಿದೆ ಎಂದು ಕೇಳಿದಾಗ, ಆಗಸ್ಟ್ 6 ರಂದು ಪ್ರಾರಂಭವಾಗಲಿರುವ ರಾಜ್ಯ ವಿಧಾನಸಭಾ ಅಧಿವೇಶನಕ್ಕೂ ಮುನ್ನ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿದೆ ಎಂದು ಅವರು ಹೇಳಿದರು.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಕೂಡ ಈ ಸಭೆಯಲ್ಲಿ ಹಾಜರಿದ್ದರು.

ಮೂಲಗಳ ಪ್ರಕಾರ, ಮಾಜಿ ಸ್ಪೀಕರ್ ಯು ಟಿ ಖಾದರ್ ರಾಜ್ಯದಲ್ಲಿ ಆರೋಗ್ಯ ಸಚಿವರಾಗಿರುವುದರಿಂದ ಖಾಲಿ ಇರುವ ಸ್ಪೀಕರ್ ಹುದ್ದೆಯನ್ನು ಭರ್ತಿ ಮಾಡುವ ಬಗ್ಗೆಯೂ ಸಭೆಯಲ್ಲಿ ಚರ್ಚೆಯಾಗಿದೆ.

ವಿಧಾನ ಪರಿಷತ್ತಿನ ಉಪಸಭಾಪತಿ ಹುದ್ದೆಯ ಮತ್ತೊಂದು ಖಾಲಿ ಹುದ್ದೆಯೂ ಭರ್ತಿಯಾಗುವ ಸಾಧ್ಯತೆಯಿದೆ.

ಜಾತಿ, ಧರ್ಮ ಮತ್ತು ಪ್ರದೇಶದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಪ್ರಾತಿನಿಧ್ಯದ ಮೂಲಕ ಆಯ್ಕೆ ಮಾಡಲಾಗುವುದು ಎಂದು ಸುರ್ಜೇವಾಲಾ ಹೇಳಿದ್ದಾರೆ.

ಸಂಪುಟ ವಿಸ್ತರಣೆಯಲ್ಲಿ ಯುವ ನಾಯಕರಿಗೆ ಆದ್ಯತೆ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿದ್ದು, ಕರ್ನಾಟಕ ಸಚಿವ ಸಂಪುಟದಲ್ಲಿ ಪ್ರಸ್ತುತ ಮಹಿಳಾ ಸದಸ್ಯರು ಇಲ್ಲದಿರುವುದರಿಂದ ಮಹಿಳಾ ಸಚಿವೆಯೂ ಸೇರ್ಪಡೆಗೊಳ್ಳುವ ಸಾಧ್ಯತೆಯಿದೆ. ಈ ಮಹಿಳಾ ಕೋಟಾದಲ್ಲಿ ಮಾಜಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಮತ್ತೆ ಜಾಕ್‌ಪಾಟ್ ಹೊಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Puri Rath Yatra: ಭಾರಿ ಜನಸಾಗರ; ಕಾಲ್ತುಳಿತ ಓರ್ವ ಸಾವು, ನೂರಾರು ಮಂದಿಗೆ ಗಾಯ!

ಶ್ರೀಕೃಷ್ಣ ದಿನಕ್ಕೆ ಐದು ಬಾರಿ ನಮಾಜ್ ಮಾಡುತ್ತಿದ್ದ: Video ವೈರಲ್, ಮುಸ್ಲಿಂ ಮೌಲ್ವಿಯ ನಾಲಿಗೆ ಕತ್ತರಿಸುವವರಿಗೆ 10 ಲಕ್ಷ ರೂ ಬಹುಮಾನ ಘೋಷಿಸಿದ ಅಯೋಧ್ಯೆ ಸ್ವಾಮೀಜಿ!

ಮಂಗಳೂರು: ಹಾಡಹಗಲೇ ಭಯಾನಕ ಘಟನೆ; ಜನರ ಎದುರೇ ಮಚ್ಚಿನಿಂದ ಕೊಚ್ಚಿ ಯುವತಿಯ ಕಗ್ಗೊಲೆ!

India Vs England: ರಿಕಿ ಪಾಂಟಿಂಗ್ ದಾಖಲೆ ಮುರಿದ ವಿರಾಟ್ ಕೊಹ್ಲಿ; ಸಾರ್ವಕಾಲಿಕ ಟಾಪ್-ಫೈವ್ ಪಟ್ಟಿಗೆ ಸೇರ್ಪಡೆ!

ಕಿಸ್ಮತ್ ಕಿ ಕಹಾನಿ: ಅಂದು Lionel Messi ಬಾತ್ ಟಬ್ ನಲ್ಲಿ ಮುದ್ದಾಡಿದ್ದ ಮಗುವೇ ಇಂದು FIFA WorldCup ಫೈನಲ್ ನಲ್ಲಿ ಎದುರಾಳಿ!