ಬಿಆರ್‌ ಪಾಟೀಲ್‌ 
ರಾಜಕೀಯ

Vote chori ಆರೋಪದ ಕೇಂದ್ರಬಿಂದುವಾಗಿದ್ದ ಬಿ.ಆರ್ ಪಾಟೀಲ್‌ಗೆ ಸಚಿವ ಸ್ಥಾನ ಭಾಗ್ಯ?

2025ರ ಸೆಪ್ಟೆಂಬರ್ 18ರಂದು ಮತದಾರರ ಹೆಸರುಗಳನ್ನು ಕೇಂದ್ರೀಕೃತ ಸಾಫ್ಟ್‌ವೇರ್ ಮೂಲಕ ಅಳಿಸಿ, ಹೊಸ ಹೆಸರುಗಳನ್ನು ಸೇರಿಸಲಾಗಿದೆ ಎಂದು ಅವರು ಆರೋಪಿಸಿದ್ದರು.

ಬೆಂಗಳೂರು: ಸಚಿವ ಸಂಪುಟದಲ್ಲಿ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿರುವ ಆಳಂದ ಶಾಸಕ ಬಿ.ಆರ್. ಪಾಟೀಲ್, ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಪ್ರಸ್ತಾಪಿಸಿದ್ದ 'ವೋಟ್ ಚೋರಿ' (ಮತ ಕಳವು) ವಿಚಾರವೇ ತಮ್ಮ ಪರವಾಗಿ ಕೆಲಸ ಮಾಡಬಹುದು ಎಂಬ ನಿರೀಕ್ಷೆಯಲ್ಲಿದ್ದಾರೆ.

2025ರಲ್ಲಿ ಚುನಾವಣಾ ಆಯೋಗದ ವಿರುದ್ಧ ಅಭಿಯಾನ ಆರಂಭಿಸಿದ್ದ ರಾಹುಲ್ ಗಾಂಧಿ, ಆಳಂದ ಮತ್ತು ಮಹಾರಾಷ್ಟ್ರದ ರಾಜಪುರ ಕ್ಷೇತ್ರಗಳನ್ನು ಉದಾಹರಣೆಯಾಗಿ ಉಲ್ಲೇಖಿಸಿ ಬಿಜೆಪಿ ಮತ ಕಳವು ನಡೆಸಿದೆ ಎಂದು ಆರೋಪಿಸಿದ್ದರು.

2025ರ ಸೆಪ್ಟೆಂಬರ್ 18ರಂದು ಮತದಾರರ ಹೆಸರುಗಳನ್ನು ಕೇಂದ್ರೀಕೃತ ಸಾಫ್ಟ್‌ವೇರ್ ಮೂಲಕ ಅಳಿಸಿ, ಹೊಸ ಹೆಸರುಗಳನ್ನು ಸೇರಿಸಲಾಗಿದೆ ಎಂದು ಅವರು ಆರೋಪಿಸಿದ್ದರು.

ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಬಿ.ಆರ್. ಪಾಟೀಲ್, ಸಿದ್ದರಾಮಯ್ಯ ಬಣದ ಪ್ರಮುಖ ನಾಯಕರಲ್ಲಿ ಒಬ್ಬರೆಂದು ಗುರುತಿಸಿಕೊಂಡಿದ್ದಾರೆ. 'ವೋಟ್ ಚೋರಿ' ವಿಚಾರಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಅವರೊಂದಿಗೆ ಮೂರು ಬಾರಿ ಪ್ರತ್ಯೇಕವಾಗಿ ಚರ್ಚೆ ನಡೆಸಿರುವುದು ಅವರಿಗೆ ಸಚಿವ ಸ್ಥಾನ ನೀಡುವ ವಿಚಾರದಲ್ಲಿ ಅನುಕೂಲವಾಗಬಹುದು ಎಂಬ ಮಾತುಗಳು ಕಾಂಗ್ರೆಸ್ ವಲಯದಲ್ಲಿ ಕೇಳಿಬರುತ್ತಿವೆ.

ಸಿದ್ದರಾಮಯ್ಯ ಅವರ ಆಡಳಿತಾವಧಿಯಲ್ಲಿ ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷರಾಗಿಯೂ ಬಿ.ಆರ್. ಪಾಟೀಲ್ ಸೇವೆ ಸಲ್ಲಿಸಿದ್ದರು.

ಮೂಲಗಳ ಪ್ರಕಾರ ಸಚಿವ ಸ್ಥಾನ ಕೈತಪ್ಪಿದರೆ, ಹಾಲಿ ಸಭಾಧ್ಯಕ್ಷ ಎಚ್.ಕೆ. ಪಾಟೀಲ್ ಆ ಹುದ್ದೆಯನ್ನು ಮುಂದುವರಿಸಲು ನಿರಾಕರಿಸಿದಲ್ಲಿ, ವಿಧಾನಸಭೆ ಸಭಾಧ್ಯಕ್ಷರ ಹುದ್ದೆಗೆ ಬಿ.ಆರ್. ಪಾಟೀಲ್ ಅವರ ಹೆಸರನ್ನು ಹೈಕಮಾಂಡ್ ಪರಿಗಣಿಸುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ರಧಾನಿ ನಿವಾಸದ ಮುಂದೆ ರಾಹುಲ್ ನೇತೃತ್ವದಲ್ಲಿ ಕಾಂಗ್ರೆಸ್ ಉಗ್ರ ಪ್ರತಿಭಟನೆ; ಮೋದಿ, ಅಮಿತ್‌ ಶಾ, ಪ್ರಧಾನ್‌ ರಾಜೀನಾಮೆಗೆ ಪಟ್ಟು; Video

CJP Protest LIVE Updates | ಪ್ರತಿಭಟನೆ ಮುಂದುವರಿಯಲಿದೆ; ಭರವಸೆ ಕಳೆದುಕೊಳ್ಳಬೇಡಿ: ಸಿಜೆಪಿಯ ಅಭಿಜೀತ್ ದೀಪ್ಕೆ ವಿನಂತಿ

'Surrender Or Lose Bail': ಮೇಘಾಲಯ ಹನಿಮೂನ್ ಮರ್ಡರ್, ಆರೋಪಿಗೆ ಆಪ್ಷನ್ ಕೊಟ್ಟ ಸುಪ್ರೀಂಕೋರ್ಟ್!

ಖಾಸಗಿ ಆಸ್ಪತ್ರೆಗೆ ಸೋನಮ್ ವಾಂಗ್‌ಚುಕ್‌ ಸ್ಥಳಾಂತರಕ್ಕೆ ದೆಹಲಿ ಹೈಕೋರ್ಟ್ ಸೂಚನೆ; ಧನ್ಯವಾದ ಅರ್ಪಿಸಿದ ಪತ್ನಿ ಗೀತಾಂಜಲಿ!

ಬೆಂಗಳೂರಿನಲ್ಲಿ 500 ರೂ. ನಕಲಿ ನೋಟು ಮುದ್ರಿಸಿ ಚಲಾವಣೆ: ಇಬ್ಬರ ಬಂಧನ; ಬೆಚ್ಚಿ ಬಿದ್ದ ರಾಜಧಾನಿ ಜನ!