ಸಿಟಿ ರವಿ 
ರಾಜಕೀಯ

ಸಿ.ಟಿ ರವಿ ಮತ್ತೊಂದು ಎಡವಟ್ಟು: NEET ಪ್ರತಿಭಟನೆಯ ವಿಡಿಯೋ ಅಂತ ಬಿಹಾರದ Video ತೋರಿಸಿದ MLC!

ನೀಟ್ ಪ್ರತಿಭಟನೆಯ ಸಂದರ್ಭದ ವಿಡಿಯೋ ಎಂದು ಹೇಳಿ ಬಿಹಾರದ ರಸ್ತೆ ಅಪಘಾತದ ವಿಡಿಯೋ ತೋರಿಸುವ ಮೂಲಕ ಬಿಜೆಪಿ MLC ಸಿ.ಟಿ ರವಿ ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದಾರೆ. ನೀಟ್ ಗೂ ಮುಲ್ಲಾಗಳಿಗೂ ಏನು ಸಂಬಂಧ?...

ಚಿಕ್ಕಮಗಳೂರು: ನೀಟ್ ಪ್ರತಿಭಟನೆಯ ಸಂದರ್ಭದ ವಿಡಿಯೋ ಎಂದು ಹೇಳಿ ಬಿಹಾರದ ರಸ್ತೆ ಅಪಘಾತದ ವಿಡಿಯೋ ತೋರಿಸುವ ಮೂಲಕ ಬಿಜೆಪಿ MLC ಸಿ.ಟಿ ರವಿ ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದಾರೆ. ನೀಟ್ ಗೂ ಮುಲ್ಲಾಗಳಿಗೂ ಏನು ಸಂಬಂಧ? ಎದೆ ಸೀಳಿದರೆ ಮೂರು ಅಕ್ಷರವಿಲ್ಲದ ಮುಲ್ಲಾಗಳು ನೀಟ್ ಪ್ರತಿಭಟನೆಯಲ್ಲಿ ಭಾಗಿಯಾಗುವುದಂತೆ, ಪ್ರಧಾನ್ ರಾಜೀನಾಮೆ ಕೇಳುವುದಂತೆ… ಎಂದು ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದರು.

ಈ ಸಂಬಂಧ ಸಿ.ಟಿ ರವಿ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಇಂದು ಚಿಕ್ಕಮಗಳೂರು ಪೊಲೀಸರು ಸಿಟಿ ರವಿ ಅವರ ಬಸವನಹಳ್ಳಿಯಲ್ಲಿರುವ ನಿವಾಸಕ್ಕೆ ತೆರಳಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲು ತೆರಳಿದ್ದರು. ನೋಟಿಸ್ ಸ್ವೀಕರಿಸದ ಸಿ.ಟಿ ರವಿ ಪೊಲೀಸರೊಂದಿಗೆ ವಾಗ್ವಾದ ನಡೆಸಿದರು. ಇನ್ನು ಪೊಲೀಸರು ಅಂಟಿಸುತ್ತಿದ್ದಂತೆ ನೋಟಿಸ್ ಅನ್ನು ಅವರ ಬೆಂಬಲಿಗರು ಕಿತ್ತು ಬಿಸಾಕಿ ಪೊಲೀಸರ ವಿರುದ್ಧವೇ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದರು.

ಈ ಘಟನೆ ಬಳಿಕ ಸುದ್ದಿಗೋಷ್ಠಿ ನಡೆಸಿದ ಸಿ.ಟಿ ರವಿ, ನಾನು ಮುಸ್ಲಿಂ ಸಮುದಾಯದ ಬಗ್ಗೆ ಮಾತನಾಡಿಲ್ಲ. ನೀಟ್ ಪ್ರತಿಭಟನೆ ವೇಳೆ ವಾಹನಕ್ಕೆ ಬೆಂಕಿ ಹಚ್ಚಲು ಉದ್ರಿಕ್ತರು ಯತ್ನಿಸಿದ್ದರು. ಮುಲ್ಲಾ ಓರ್ವ ವಾಹನಕ್ಕೆ ಬೆಂಕಿ ಹಚ್ಚಲು ಯತ್ನಿಸಿದ್ದಾನೆ ಎಂದು ಹೇಳಿ ಬಿಹಾರದಲ್ಲಿ ವಾರದ ಹಿಂದೆ ನಡೆದಿದ್ದ ರಸ್ತೆ ಅಪಘಾತದ ವಿಡಿಯೋವೊಂದನ್ನು ತೋರಿಸಿದ್ದರು. ಇದು ವೈರಲ್ ಆಗುತ್ತಿದ್ದಂತೆ ಒಬ್ಬ ಜನಪ್ರತಿನಿಧಿಯಾಗಿ ವೈರಲ್ ವಿಡಿಯೋದ ಸತ್ಯಾಸತ್ಯತೆ ತಿಳಿಯದೆ ತೋರಿಸಿದ್ದಾರೆ ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತದಲ್ಲಿ ಮುಸ್ಲಿಮರು PM, CM ಆಗದಿರುವುದಕ್ಕೆ ಕಾರಣ ಏನು ಗೊತ್ತ? Owaisi ಮುಸ್ಲಿಮರ ದೊಡ್ಡ ಶತ್ರು: ಮೌಲಾನಾ ಸಾಜಿದ್

'ಪ್ರಧಾನ್ ರಾಜೀನಾಮೆಯಿಂದ ಭಾರತ ಅಸ್ಥಿರಗೊಳಿಸುವ ವಿದೇಶಿ ಶಕ್ತಿಗಳ ಸಂಚು ವಿಫಲ': ಕೈಲಾಶ್ ವಿಜಯವರ್ಗೀಯ

3rd T20I: 15ರ ವಯಸ್ಸಿನಲ್ಲೇ ವಿಶ್ವದಾಖಲೆ! ಜಿಂಬಾಬ್ವೆ ವಿರುದ್ಧ ಮತ್ತೊಮ್ಮೆ ಅಬ್ಬರಿಸಿದ Vaibhav Sooryavanshi

UP ಚುನಾವಣೆ: ಈಗಲೇ ಮೈತ್ರಿ ಮಾತುಕತೆ ಆರಂಭಿಸೋಣ; ಚುನಾವಣೆ ಬಳಿಕ ಅತ್ತರೆ ಪ್ರಯೋಜನ ಇಲ್ಲ- ಅಖಿಲೇಶ್ ಗೆ ಓವೈಸಿ ಆಫರ್!

ಪ್ರಶ್ನೆ ಪತ್ರಿಕೆ ಸೋರಿಕೆ: ಪಂಜಾಬ್ ಶಿಕ್ಷಣ ಸಚಿವರ ರಾಜೀನಾಮೆಗೆ ಬಿಜೆಪಿ ಒತ್ತಾಯ; ಏನೂ ಆಗೇ ಇಲ್ಲ- ಸಿಎಂ ಭಗವಂತ್ ಮಾನ್