ಬಿ ವೈ ವಿಜಯೇಂದ್ರ  
ರಾಜಕೀಯ

ಕಾಂಗ್ರೆಸ್ ರಾಜಕೀಯ ಆಟಕ್ಕೆ ಬ್ರೇಕ್ ಹಾಕಲು ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿಜಯೇಂದ್ರ

ರಾಷ್ಟ್ರ ರಾಜಧಾನಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದರೂ ಕಾಂಗ್ರೆಸ್ ವಿದ್ಯಾರ್ಥಿಗಳ ಪ್ರತಿಭಟನೆಯನ್ನು ತನ್ನ ರಾಜಕೀಯ ಉದ್ದೇಶಗಳಿಗೆ ಬಳಸಿಕೊಳ್ಳುವ "ಹೀನ ರಾಜಕೀಯ" ನಡೆಸುತ್ತಿದೆ.

ಬೆಂಗಳೂರು: ಕಾಂಗ್ರೆಸ್ ರಾಜಕೀಯ ಆಟಕ್ಕೆ ಬ್ರೇಕ್ ಹಾಕಲು ಧರ್ಮೇಂದ್ರ ಪ್ರಧಾನ್ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಹೇಳಿದ್ದಾರೆ.

ಶನಿವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ವಿದ್ಯಾರ್ಥಿಗಳ ಪ್ರತಿಭಟನೆಯನ್ನು ಕಾಂಗ್ರೆಸ್ ರಾಜಕೀಯ ಲಾಭಕ್ಕಾಗಿ ದುರುಪಯೋಗಪಡಿಸಿಕೊಳ್ಳುವುದನ್ನು ತಡೆಯುವ ಉದ್ದೇಶದಿಂದ ಸ್ವಯಂಪ್ರೇರಿತವಾಗಿ ರಾಜೀನಾಮೆ ನೀಡಿದ್ದಾರೆ ಎಂದು ಹೇಳಿದರು.

ರಾಷ್ಟ್ರ ರಾಜಧಾನಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದರೂ ಕಾಂಗ್ರೆಸ್ ವಿದ್ಯಾರ್ಥಿಗಳ ಪ್ರತಿಭಟನೆಯನ್ನು ತನ್ನ ರಾಜಕೀಯ ಉದ್ದೇಶಗಳಿಗೆ ಬಳಸಿಕೊಳ್ಳುವ "ಹೀನ ರಾಜಕೀಯ" ನಡೆಸುತ್ತಿದೆ. ವಿದ್ಯಾರ್ಥಿಗಳ ಪ್ರತಿಭಟನೆಯಲ್ಲಿ ಸಮಾಜವಿರೋಧಿ ಶಕ್ತಿಗಳು ನುಸುಳಿರುವ ಕಾರಣ ಚಳವಳಿ ಹಿಂಸಾತ್ಮಕ ಸ್ವರೂಪ ಪಡೆದಿದ್ದು, ಹಲವು ಪೊಲೀಸ್ ಸಿಬ್ಬಂದಿಗೆ ಗಂಭೀರ ಗಾಯಗಳಾಗಿವೆ ಎಂಬ ವರದಿಗಳಿವೆ.

ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಕಡೆಗಣಿಸಿ ಅರಾಜಕತೆ ಸೃಷ್ಟಿಸುವ ರಾಜಕೀಯವನ್ನು ಕಾಂಗ್ರೆಸ್ ಮಾಡುತ್ತಿದೆ. ಕಾಂಗ್ರೆಸ್‌ಗೆ ಈ ಹೀನ ರಾಜಕೀಯ ಮುಂದುವರಿಸಲು ಅವಕಾಶ ನೀಡಬಾರದು ಎಂಬ ಕಾರಣಕ್ಕೆ ಧರ್ಮೇಂದ್ರ ಪ್ರಧಾನ್ ಸ್ವಯಂಪ್ರೇರಿತವಾಗಿ ರಾಜೀನಾಮೆ ನೀಡಿದ್ದಾರೆ ಎಂದು ತಿಳಿಸಿದರು.

ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯನ್ನು ತಡೆಯಲು ಕೇಂದ್ರ ಸರ್ಕಾರ ಈಗಾಗಲೇ ಹಲವು ಕಠಿಣ ಕ್ರಮಗಳನ್ನು ಕೈಗೊಂಡಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ತ್ವರಿತ ವಿಚಾರಣೆಗೆ ಫಾಸ್ಟ್ ಟ್ರ್ಯಾಕ್ ನ್ಯಾಯಾಲಯಗಳನ್ನು ಸ್ಥಾಪಿಸುವುದಾಗಿ ಘೋಷಿಸಿದ್ದಾರೆ.

ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿ ಭಾಗಿಯಾದವರಿಗೆ ರೂ.10 ಕೋಟಿ ದಂಡ ಹಾಗೂ 10 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವ ಕಾನೂನು ಜಾರಿಯಲ್ಲಿದೆ. ಜೊತೆಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ)ಯ ಉನ್ನತ ಅಧಿಕಾರಿಗಳನ್ನು ಕೂಡ ಬದಲಾವಣೆ ಮಾಡಲಾಗಿದೆ ಎಂದು ತಿಳಿಸಿದರು.

ಇದೇ ವೇಳೆ ಬೆಂಗಳೂರು ಪ್ರತಿಭಟನೆ ವೇಳೆ ರಾಷ್ಟ್ರವಿರೋಧಿ ಘೋಷಣೆಗಳು ಹಾಗೂ ಫಲಕಗಳು ಪ್ರದರ್ಶಿಸಲ್ಪಟ್ಟಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, "ರಾಜ್ಯದ ಗೃಹ ಸಚಿವರು ಸ್ವಯಂಪ್ರೇರಿತವಾಗಿ (ಸುವೋ ಮೋಟು) ಪ್ರಕರಣ ದಾಖಲಿಸಿ, ಎಫ್‌ಐಆರ್ ದಾಖಲಿಸಲು ಪೊಲೀಸರಿಗೆ ನಿರ್ದೇಶನ ನೀಡಲು ಸಾಧ್ಯವಿಲ್ಲವೇ?" ಎಂದು ಪ್ರಶ್ನಿಸಿದರು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CJP ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮ ಇಲ್ಲ, ಸರ್ಕಾರದಿಂದ ಭರವಸೆ- ಜೆ.ಪಿ. ನಡ್ಡಾ

ಪ್ರಧಾನ್ ರಾಜೀನಾಮೆ: ಕನ್ನಡಿಗ ಪ್ರಹ್ಲಾದ್ ಜೋಶಿಗೆ ಜಾಕ್‌ಪಾಟ್; ಹೆಚ್ಚುವರಿಯಾಗಿ ಶಿಕ್ಷಣ ಖಾತೆ ಜವಾಬ್ದಾರಿ!

ಮುಸ್ಲಿಂ, ಕ್ರೈಸ್ತ-ವಿರೋಧಿ ರಾಜಕೀಯದ ಆಡಳಿತ ನಿಲ್ಲಿಸಿ: ಇದು ಕೇವಲ ಟ್ರೈಲರ್ ಅಷ್ಟೇ, ಅಸಲಿ ಪಿಕ್ಚರ್ ಬಾಕಿಯಿದೆ- ಸೌರವ್ ದಾಸ್!

ಐರ್ಲೆಂಡ್, ಇಂಗ್ಲೆಂಡ್ ವಿರುದ್ಧ T20 ಸರಣಿ ಸೋಲಿನ ಕಹಿ ಬಳಿಕ ಈಗ ಜಿಂಬಾಬ್ವೆ ವಿರುದ್ಧ ಸರಣಿ ಗೆದ್ದ ಭಾರತ!

ಸಿಜೆಪಿ ಅಭಿಜಿತ್ ದೀಪ್ಕೆ ರಾಜಕೀಯ ಪ್ರವೇಶ? ಮೊದಲು ಸುರಕ್ಷಿತವಾಗಿ ಮನೆಗೆ ಬರಲಿ- ಪೋಷಕರ ಆತಂಕ!