ಬೆಂಗಳೂರು: ಬಿಜೆಪಿಗರು ಎಲ್ಲವನ್ನೂ ಜೆಡಿಎಸ್ ಕೈಗೆ ಬಿಟ್ಟುಕೊಟ್ಟಿದ್ದಾರೆ. ಹಾಗಾಗಿ ಕಾಂಗ್ರೆಸ್ಗೆ ಬಿಜೆಪಿಗಿಂತಲೂ ದಳದಿಂದಲೇ ಪ್ರಬಲ ಪೈಪೋಟಿ ವ್ಯಕ್ತವಾಗಲಿದೆ ಎಂದು ಕಾಂಗ್ರೆಸ್ ಶಾಸಕ ಎಚ್ಸಿ ಬಾಲಕೃಷ್ಣ ವ್ಯಾಖ್ಯಾನಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಗೆ ಜೆಡಿಎಸ್ ನಿಂದ ಪ್ರಬಲ ಪೈಪೋಟಿಯಿದೆ, ಪ್ರಬಲ ಪೈಪೋಟಿ ಇರುವ ಕಡೆ ಹೆಚ್ಚಿನ ಒತ್ತು ಕೊಟ್ಟು ಮಂತ್ರಿಗಳನ್ನು ಮಾಡಬೇಕು. ಬಿಜೆಪಿಯವರು ಎಲ್ಲವನ್ನು ಜೆಡಿಎಸ್ ನಾಯಕರಿಗೆ ಬಿಟ್ಟುಕೊಟ್ಟಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.
ಮುಂದುವರಿದು ಮಾತನಾಡಿದ ಅವರು, ಕುಮಾರಸ್ವಾಮಿಯವರು ರಾಜ್ಯ ರಾಜಕೀಯಕ್ಕೆ ಬರಲಿ ಎಂದು ರವೀಂದ್ರ ಶ್ರೀಕಂಠಯ್ಯ ಹೇಳಿದ್ದಾರೆ. ಅಂದರೆ ಬಿಜೆಪಿಯವರು ಎಲ್ಲವನ್ನು ಜೆಡಿಸ್ ಕೈ ಬಿಟ್ಟು ಬಿಟ್ಟಿದ್ದಾರೆ ಎಂದರು.
ಹಿರಿಯೂರು ಕ್ಷೇತ್ರದಿಂದ ಕುಮಾರಸ್ವಾಮಿ ಸ್ಪರ್ಧಿಸುತ್ತಾರೆ ಎಂಬ ವಿಷಯ ಮಾಧ್ಯಮಗಳಿಂದ ತಿಳಿದುಕೊಂಡಿದ್ದೇನೆ. ಹಲವು ಸಂದರ್ಭಗಳಲ್ಲಿ ಅವರು ಉಪ ಚುನಾವಣೆ ನಡೆಸಿದ್ದಾರೆ, ಉಪ ಚುನಾವಣೆ ಮಾಡೋದ್ರಲ್ಲಿ ಕುಮಾರಸ್ವಾಮಿ ಎತ್ತಿದ ಕೈ ಎಂದು ವ್ಯಂಗ್ಯವಾಡಿದರು.
ಸಿಟಿ ರವಿ ಇರಲಾರದೆ ಇರುವೆ ಬಿಟ್ಟುಕೊಳ್ಳುತ್ತಾರೆ. ಪ್ರತಿ ಹಂತದಲ್ಲಿ, ಪ್ರತಿ ವಿಷಯದಲ್ಲೂ ಮುಸ್ಲಿಮರನ್ನು ಎಳೆದು ತರುತ್ತಾರೆ. ಆ ಮೂಲಕ ಕೇಂದ್ರ ಬಿಜೆಪಿ ನಾಯಕರ ಗಮನ ಸೆಳೆಯಲು ಹೋಗುತ್ತಾರೆ ಎಂದು ಟೀಕಿಸಿದರು.
ಸಿದ್ದರಾಮಯ್ಯ ಇಲ್ಲದಿದ್ದರೇ ಕಾಂಗ್ರೆಸ್ ಇರಲು ಸಾಧ್ಯವಿಲ್ಲ, ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸದಿದ್ದರೂ ಪರವಾಗಿಲ್ಲ. ಪಕ್ಷ ಸಂಘಟನೆಗೆ ಅವರು ಇರಲೇ ಬೇಕು.. ಕಾಂಗ್ರೆಸ್ ಶಕ್ತಿಯುತವಾಗಿರಬೇಕು ಎಂದರೆ ಅವರ ಆಶೀರ್ವಾದ ಇರಲೇಬೇಕು ಎಂದಿದ್ದಾರೆ. ಅವರಿಲ್ಲದಿದ್ದರೇ ಪಕ್ಷಕ್ಕೆ ಕಷ್ಟವಾಗುತ್ತದೆ ಎಂದಿದ್ದಾರೆ.