ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ 
ರಾಜಕೀಯ

ಜು.30ಕ್ಕೆ ಸಚಿವ ಸಂಪುಟ ವಿಸ್ತರಣೆ ನಿರೀಕ್ಷೆ: ರಾಜ್ಯಪಾಲರ ಕಚೇರಿಗೆ ಸರ್ಕಾರ ಅನೌಪಚಾರಿಕ ಮಾಹಿತಿ

ರಾಜ್ಯಪಾಲರು ಎರಡು ದಿನಗಳ ಕಾಲ ಬೆಂಗಳೂರು ಹೊರಗಿರುವುದರಿಂದ, ಅಧಿಕೃತ ಮಾಹಿತಿ ಬಂದ ನಂತರವೇ ಅವರು ಹಿಂದಿರುಗಲಿದ್ದಾರೆ ಎಂದು ರಾಜ್ಯಪಾಲರ ಕಚೇರಿ ತಿಳಿಸಿದೆ.

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್​​ ಹಂತ ತಲುಪಿದೆ. ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಜುಲೈ 30 ಗುರುವಾರ ಅಪರಾಹ್ನ ರಾಜ್ಯಪಾಲರ ಕಚೇರಿ ಲೋಕಭವನದಲ್ಲಿ ಪ್ರಮಾಣವಚನ ಸಮಾರಂಭ ನಡೆಯುವ ಸಾಧ್ಯತೆ ಇದೆ ಎಂದು ರಾಜ್ಯ ಸರ್ಕಾರವು ಅನೌಪಚಾರಿಕವಾಗಿ ರಾಜ್ಯಪಾಲರ ಕಚೇರಿಗೆ ಮಾಹಿತಿ ನೀಡಿದೆ.

ರಾಜ್ಯಪಾಲರು ಎರಡು ದಿನಗಳ ಕಾಲ ಬೆಂಗಳೂರು ಹೊರಗಿರುವುದರಿಂದ, ಅಧಿಕೃತ ಮಾಹಿತಿ ಬಂದ ನಂತರವೇ ಅವರು ಹಿಂದಿರುಗಲಿದ್ದಾರೆ ಎಂದು ರಾಜ್ಯಪಾಲರ ಕಚೇರಿ ತಿಳಿಸಿದೆ.

ಗುರುವಾರ ಪ್ರಮಾಣವಚನ

ರಾಹುಲ್ ಗಾಂಧಿ ಜೊತೆ ಸಿಎಂ ಡಿಕೆ ಶಿವಕುಮಾರ್​, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್​​​ ಇಂದು ರಾತ್ರಿ ಮತ್ತೊಂದು ಸುತ್ತಿನ ಮಾತುಕತೆ ನಡೆಸಲಿದ್ದಾರೆ. ಈ ಸಭೆಯಲ್ಲೇ ಸಚಿವರ ಪಟ್ಟಿ ಅಂತಿಮಗೊಳ್ಳುವ ಸಾಧ್ಯತೆ ಇದ್ದು, ಗುರುವಾರ ಅಪರಾಹ್ನ ಲೋಕಭವನದಲ್ಲಿ ಸಚಿವರು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

20 ಸ್ಥಾನಗಳ ಪೈಕಿ 18 ಸಚಿವರ ಪಟ್ಟಿ ಅಂತಿಮ

ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚಿಸುವ ಸಲುವಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಸೋಮವಾರವೇ ದೆಹಲಿಗೆ ತಲುಪಿದ್ದರು. ಖಾಲಿ ಇರುವ 20 ಸ್ಥಾನಗಳ ಪೈಕಿ 18 ಸಚಿವರ ಪಟ್ಟಿಯನ್ನು ಮಾತ್ರ ಅಂತಿಮಗೊಳಿಸಿ, ಎರಡು ಸ್ಥಾನಗಳನ್ನು ಖಾಲಿ ಇಡುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CJP March Violence: ಹೊಣೆಗಾರಿಕೆ ನಿಗದಿಯಾಗದ ತನಿಖೆ ನಿರರ್ಥಕ; ಕಾನೂನು ಕೈಗೆತ್ತಿಕೊಂಡವರ ವಿರುದ್ಧ ಕ್ರಮ, ಸ್ವತಂತ್ರ ತನಿಖೆಗೆ ಸುಪ್ರೀಂ ಕೋರ್ಟ್ ಮುಂದು..!

ಪ್ರಧಾನಿ ಮೋದಿ ಫೇಸ್‌ಬುಕ್ ಪೋಸ್ಟ್‌ ಡಿಲೀಟ್: Metaಗೆ ಐಟಿ ಸಚಿವಾಲಯ ಸಮನ್ಸ್‌

"ಇದೆಂಥಾ ಅಸಂವೇದನಾಶೀಲತೆ"?: ಬೇಡಿಕೆ ಈಡೇರಿದ ಬೆನ್ನಲ್ಲೇ ಸಿಜೆಪಿ ನಾಯಕರಿಂದ ವಿಚಿತ್ರ ಸಂಭ್ರಮಾಚರಣೆ ಟೀಕೆಗೆ ಗುರಿ; ವಾಂಗ್ಚುಕ್ ಗೂ ಬೇಸರ!

CJP ಪ್ರತಿಭಟನೆ ವೇಳೆ ಬಳಸಿದ್ದು Plastic pellets: ಪೊಲೀಸ್ ದಾಖಲೆಯಿಂದ ಸ್ಫೋಟಕ ಮಾಹಿತಿ ಬಹಿರಂಗ..!

Parliament Monsoon Session: ಉಭಯ ಸದನಗಳಲ್ಲಿ ಪ್ರತಿಪಕ್ಷಗಳ ತೀವ್ರ ಗದ್ದಲ, ಲೋಕಸಭೆ-ರಾಜ್ಯಸಭೆ ಕಲಾಪ ಮಧ್ಯಾಹ್ನ 2 ಗಂಟೆಗೆ ಮುಂದೂಡಿಕೆ..!