ಸತೀಶ್ ಜಾರಕಿಹೊಳಿ  
ರಾಜಕೀಯ

KPCC ಪಟ್ಟಕ್ಕೆ ಭಾರೀ ಪೈಪೋಟಿ: ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಮಹತ್ವದ ಸಭೆ, 21 ಸ್ವಾಮೀಜಿಗಳಿಂದ ಬೆಂಬಲದ ಸಂದೇಶ..!

ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ನಂತರ ಹೊಸ ರಾಜಕೀಯ ಸಮೀಕರಣಗಳು ರೂಪುಗೊಳ್ಳುತ್ತಿರುವ ಸಂದರ್ಭದಲ್ಲಿ ಈ ಭೇಟಿ ವಿಶೇಷ ಮಹತ್ವ ಪಡೆದುಕೊಂಡಿದೆ.

ಬೆಳಗಾವಿ/ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಹಾಗೂ ಹೊಸ ಸಚಿವ ಸಂಪುಟ ರಚನೆ ಕುರಿತ ಚರ್ಚೆಗಳು ತೀವ್ರಗೊಂಡಿರುವ ನಡುವೆಯೇ ಹಿರಿಯ ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ ಅವರನ್ನು 21 ಸ್ವಾಮೀಜಿಗಳ ನಿಯೋಗ ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದೆ.

ಈ ಭೇಟಿಯಲ್ಲಿ ಹಿಂದುಳಿದ ವರ್ಗಗಳು, ದಲಿತರು ಹಾಗೂ ಆದಿವಾಸಿ ಸಮುದಾಯಗಳಿಗೆ ಪಕ್ಷ ಸಂಘಟನೆ ಮತ್ತು ಸರ್ಕಾರದಲ್ಲಿ ಹೆಚ್ಚಿನ ಪ್ರಾತಿನಿಧ್ಯ ನೀಡುವ ವಿಷಯ ಕುರಿತು ಚರ್ಚೆಯಾಗಿದೆ ಎಂದು ತಿಳಿದುಬಂದಿದೆ.

ಬೆಂಗಳೂರಿನಲ್ಲಿರುವ ಸತೀಶ್ ಜಾರಕಿಹೊಳಿ ಅವರ ಅಧಿಕೃತ ನಿವಾಸದಲ್ಲಿ ನಡೆದ ಈ ಸಭೆ ರಾಜಕೀಯ ವಲಯದಲ್ಲಿ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ನಂತರ ಹೊಸ ರಾಜಕೀಯ ಸಮೀಕರಣಗಳು ರೂಪುಗೊಳ್ಳುತ್ತಿರುವ ಸಂದರ್ಭದಲ್ಲಿ ಈ ಭೇಟಿ ವಿಶೇಷ ಮಹತ್ವ ಪಡೆದುಕೊಂಡಿದೆ.

ನಿಯೋಗದಲ್ಲಿ ಬೋವಿ ಸಮುದಾಯ, ವಾಲ್ಮೀಕಿ ಪೀಠ, ಕುರುಬ, ಮಡಿವಾಳ ಸೇರಿದಂತೆ ವಿವಿಧ ಹಿಂದುಳಿದ ವರ್ಗಗಳು ಹಾಗೂ ಪರಿಶಿಷ್ಟ ಜಾತಿ-ಪಂಗಡಗಳಿಗೆ ಸೇರಿದ ಧಾರ್ಮಿಕ ಮುಖಂಡರು ಭಾಗವಹಿಸಿದ್ದರು.

ಹಿಂದುಳಿದ ವರ್ಗಗಳು, ದಲಿತರು ಮತ್ತು ಆದಿವಾಸಿಗಳಿಗೆ ಸಚಿವ ಸಂಪುಟ ಹಾಗೂ ಪಕ್ಷದ ಸಂಘಟನೆಯಲ್ಲಿ ಸೂಕ್ತ ಪ್ರಾತಿನಿಧ್ಯ ನೀಡಬೇಕೆಂಬ ಒತ್ತಾಯವನ್ನು ಸ್ವಾಮೀಜಿಗಳು ಮುಂದಿಟ್ಟಿದ್ದಾರೆ ಎನ್ನಲಾಗಿದೆ.

ಮೂಲಗಳ ಪ್ರಕಾರ, ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಹಿಂದುಳಿದ ವರ್ಗದ ನಾಯಕರಿಗೆ ನೀಡಬೇಕು ಎಂಬ ಅಭಿಪ್ರಾಯವನ್ನು ಸ್ವಾಮೀಜಿಗಳು ವ್ಯಕ್ತಪಡಿಸಿದ್ದು, ಕಾಂಗ್ರೆಸ್‌ನ ಪ್ರಭಾವಿ ಒಬಿಸಿ ನಾಯಕರಲ್ಲಿ ಒಬ್ಬರಾಗಿರುವ ಸತೀಶ್ ಜಾರಕಿಹೊಳಿ ಆ ಹುದ್ದೆಗೆ ಸೂಕ್ತ ಅಭ್ಯರ್ಥಿ ಎಂದು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ.

ಇದೇ ವೇಳೆ ಹೊಸ ಸಚಿವ ಸಂಪುಟದಲ್ಲಿ ಹಿಂದುಳಿದ ವರ್ಗಗಳ ಶಾಸಕರಿಗೆ ಹೆಚ್ಚಿನ ಅವಕಾಶ ನೀಡಬೇಕು ಹಾಗೂ ಪ್ರಮುಖ ಖಾತೆಗಳ ಹಂಚಿಕೆಯಲ್ಲೂ ಅವರಿಗೆ ಆದ್ಯತೆ ನೀಡಬೇಕು ಎಂಬ ಬೇಡಿಕೆಯನ್ನೂ ನಿಯೋಗ ಮುಂದಿಟ್ಟಿದೆ ಎಂದು ತಿಳಿದುಬಂದಿದೆ.

ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಹೊಸ ರಾಜಕೀಯ ಹಂತಕ್ಕೆ ಕಾಲಿಡಲು ಸಜ್ಜಾಗಿರುವ ಸಂದರ್ಭದಲ್ಲಿ ಜಾತಿ ಸಮೀಕರಣಗಳ ಸಮತೋಲನ ಕಾಪಾಡುವುದು ಪಕ್ಷದ ಮುಂದೆ ಪ್ರಮುಖ ಸವಾಲಾಗಿ ಪರಿಣಮಿಸಿದೆ.

ಈ ಹಿನ್ನೆಲೆಯಲ್ಲಿ ಸ್ವಾಮೀಜಿಗಳ ನಿಯೋಗದ ಭೇಟಿ ಮತ್ತು ಅವರ ಒತ್ತಾಯಗಳು ಕಾಂಗ್ರೆಸ್‌ನ ಮುಂದಿನ ರಾಜಕೀಯ ನಿರ್ಧಾರಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನ ಹಾಗೂ ಸಚಿವ ಸಂಪುಟ ವಿಸ್ತರಣೆಯ ಕುರಿತು ಪಕ್ಷದ ಹೈಕಮಾಂಡ್ ಅಂತಿಮ ತೀರ್ಮಾನ ಕೈಗೊಳ್ಳುವ ಮುನ್ನವೇ ಹಿಂದುಳಿದ ವರ್ಗಗಳ ಪರ ಒತ್ತಡ ಹೆಚ್ಚುತ್ತಿರುವುದು ಕಾಂಗ್ರೆಸ್ ಪಾಳಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಡಿ.ಕೆ. ಶಿವಕುಮಾರ್ ಜೊತೆ ಪ್ರಮಾಣವಚನ ಸ್ವೀಕರಿಸಲಿರುವ 10-12 ಸಚಿವರ ಪಟ್ಟಿ ಇಂದು ಪ್ರಕಟ ಸಾಧ್ಯತೆ

ಬೆನ್ನಿಗೆ ಚೂರಿ ಹಾಕುವ ಕೆಲಸ, ಬಿಜೆಪಿಗೆ ಸಹಾಯ ಮಾಡಲು ಹೀಗೆ ಮಾಡಿದ್ದಾರೆ: ಜಮೀರ್ ವಿರುದ್ಧ SS ಮಲ್ಲಿಕಾರ್ಜುನ್ ಆಕ್ರೋಶ

'ಗರ್ಭಿಣಿನೂ ಇಲ್ಲ.. ಮಹಿಳೆಯೂ ಇಲ್ಲ.. ಕಾರಿನಲ್ಲಿ ಒಬ್ಬರೇ ಬಂದಿದ್ದರು': ಝೀರೋ ಟ್ರಾಫಿಕ್ ಪ್ರತಿಭಟನೆಯ ಅಸಲೀಯತ್ತು ಬಯಲು ಮಾಡಿದ ಪೊಲೀಸರು!

ಅವಕಾಶ ವಂಚಿತ ಇಂಡಿ; ಡಿಕೆಶಿ ಸರ್ಕಾರದಲ್ಲಿ ಸ್ಥಾನ ಸಿಗುವ ನಿರೀಕ್ಷೆ, ಯಾರೆಲ್ಲಾ ಇದ್ದಾರೆ ಸಚಿವ ಸ್ಥಾನದ ರೇಸ್ ನಲ್ಲಿ?

ಟ್ರಂಪ್ ಒತ್ತಡಕ್ಕೆ ಮಣಿದ ನೆತನ್ಯಾಹು; ಲೆಬನಾನ್ ಮೇಲಿನ ದಾಳಿಗೆ ಬ್ರೇಕ್, ಸಂಘರ್ಷ ನಿಲ್ಲಿಸಲು ಇಸ್ರೇಲ್-ಹಿಜ್ಬುಲ್ಲಾ ಸಮ್ಮತಿ..!

SCROLL FOR NEXT