ಯತೀಂದ್ರ ಸಿದ್ದರಾಮಯ್ಯ 
ರಾಜಕೀಯ

ಸಿಎಂ ಹುದ್ದೆಯಿಂದ ಸಿದ್ದರಾಮಯ್ಯ ನಿರ್ಗಮನ: ಪುತ್ರ ಯತೀಂದ್ರಗೆ ಸಚಿವ ಸಂಪುಟದಲ್ಲಿ ಸ್ಥಾನ!

ಸಚಿವರ ಅಧಿಕೃತ ಪಟ್ಟಿ ಇನ್ನೂ ಬಿಡುಗಡೆಯಾಗದಿದ್ದರೂ, ಮೊದಲ ಹಂತದಲ್ಲಿ ಯತೀಂದ್ರ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಮೂಲಕ ಮೈಸೂರು ಜಿಲ್ಲೆ ಸಂಪುಟದಲ್ಲಿ ಮಹತ್ವದ ಸ್ಥಾನ ಉಳಿಸಿಕೊಳ್ಳಲಿದೆ ಎಂದು ಬಲ್ಲ ಮೂಲಗಳು ದೃಢಪಡಿಸಿವೆ.

ಮಂಡ್ಯ: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಹೊಸ ಸಚಿವ ಸಂಪುಟ ರಚನೆಯಾಗಲಿದ್ದು, ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಅವರ ಹೆಸರನ್ನು ಕಾಂಗ್ರೆಸ್ ಹೈಕಮಾಂಡ್ ಅನುಮೋದಿಸಿದೆ.

ಸಚಿವರ ಅಧಿಕೃತ ಪಟ್ಟಿ ಇನ್ನೂ ಬಿಡುಗಡೆಯಾಗದಿದ್ದರೂ, ಮೊದಲ ಹಂತದಲ್ಲಿ ಯತೀಂದ್ರ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಮೂಲಕ ಮೈಸೂರು ಜಿಲ್ಲೆ ಸಂಪುಟದಲ್ಲಿ ಮಹತ್ವದ ಸ್ಥಾನ ಉಳಿಸಿಕೊಳ್ಳಲಿದೆ ಎಂದು ಬಲ್ಲ ಮೂಲಗಳು ದೃಢಪಡಿಸಿವೆ.

ತಂದೆ ಸಿದ್ದರಾಮಯ್ಯ ಅವರು ಸಿಎಂ ಆಗಿ ನಿರ್ಗಮಿಸಿದ ನಂತರ ಯತೀಂದ್ರ ಅವರು ಸರ್ಕಾರದಲ್ಲಿ ಮೈಸೂರಿನ ಪ್ರಮುಖ ರಾಜಕೀಯ ಮುಖವಾಗಲು ಸಜ್ಜಾಗಿರುವುದರಿಂದ ಈ ಸೇರ್ಪಡೆ ಮಹತ್ವ ಪಡೆದುಕೊಂಡಿದೆ. ರೋಗಶಾಸ್ತ್ರಜ್ಞರಾಗಿರುವ ಯತೀಂದ್ರ ಅವರು ಎಂಬಿಬಿಎಸ್ ಪೂರ್ಣಗೊಳಿಸಿ ನಂತರ ಎಂಡಿ ಪದವಿ ಪಡೆದು ಸಕ್ರಿಯ ರಾಜಕೀಯಕ್ಕೆ ಪ್ರವೇಶಿಸಿದರು.

2018 ಮತ್ತು 2023 ರ ನಡುವೆ ವರುಣ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸಿದರು ಮತ್ತು ನಂತರ ಪರಿಷತ್ತಿಗೆ ಆಯ್ಕೆಯಾದರು.ತಮ್ಮ ತಂದೆಯ ವರುಣ ಕ್ಷೇತ್ರದ ಉಸ್ತುವಾರಿ ವಹಿಸಿಕೊಂಡರು.

ಸಂಘಟನಾತ್ಮಕ ವ್ಯವಹಾರಗಳಲ್ಲಿ ಸಕ್ರಿಯವಾಗಿರುವ ಯತೀಂದ್ರ ಸರಳ ಸಜ್ಜನಿಕಗೆ ಹೆಸರುವಾಸಿಯಾಗಿದ್ದಾರೆ. ಹೀಗಾಗಿ ಅವರಿಗೆ ಒಂದು ಪ್ರಮುಖ ಖಾತೆಯನ್ನು ವಹಿಸುವ ನಿರೀಕ್ಷೆಯಿದೆ.

ಯತೀಂದ್ರ ಅವರು ಸಂಪುಟಕ್ಕೆ ಬಡ್ತಿ ಪಡೆಯುವುದರಿಂದ ಸರ್ಕಾರದಲ್ಲಿ ಸಿದ್ದರಾಮಯ್ಯ ಅವರ ಪ್ರಭಾವ ಮುಂದುವರಿಯುವುದು ಮಾತ್ರವಲ್ಲದೆ, ಯುವ ಪೀಳಿಗೆಯ ನಾಯಕರನ್ನು ಉತ್ತೇಜಿಸುವ ಮತ್ತು ಮೈಸೂರು ಪ್ರದೇಶದ ಪ್ರಮುಖ ಧ್ವನಿ ಮತ್ತು ಪ್ರಾತಿನಿಧ್ಯವಾಗಬೇಕೆಂಬ ಕಾಂಗ್ರೆಸ್ ನಾಯಕತ್ವದ ಉದ್ದೇಶವೂ ಸ್ಪಷ್ಟವಾಗುತ್ತದೆ ಎಂದು ಮೈಸೂರಿನ ರಾಜಕೀಯ ನಾಯಕರು ನಂಬುತ್ತಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

18ನೇ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಇಂದು ಪ್ರಮಾಣ ವಚನ: 15 ಸಚಿವರು ಸಂಪುಟ ಸೇರುವ ಸಾಧ್ಯತೆ; ಮೊದಲ ಪಟ್ಟಿಯಿಂದ ಹೆಬ್ಬಾಳ್ಕರ್ ಔಟ್?

ಶಾ ಭೇಟಿಯಾದ 'ಸಿಂಗಂ': ತಮಿಳುನಾಡು BJP ರಾಜ್ಯಾಧ್ಯಕ್ಷರಿಗೆ ಬುಲಾವ್; ರಾಜ್ಯಸಭೆ ಟಿಕೆಟ್ ನಿರಾಕರಿಸಿದ ಅಣ್ಣಾಮಲೈ!

ಪಶ್ಚಿಮ ಏಷ್ಯಾದಲ್ಲಿ ಮತ್ತೆ ಯುದ್ಧ ಆರಂಭ: ಗಲ್ಫ್ ರಾಷ್ಟ್ರಗಳ ಮೇಲೆ ಇರಾನ್ ದಾಳಿ, ಕೆಶ್ಮ್ ದ್ವೀಪದ ಮೇಲೆ ಅಮೆರಿಕ ಸೇನೆಯ ಪ್ರತಿದಾಳಿ!

DK Shivakumar and cabinet swearing-in LIVE updates | ಡಿಕೆ ಶಿವಕುಮಾರ್ ಜೊತೆಗೆ 12-15 ಸಚಿವರು ಇಂದು ಪ್ರಮಾಣ ವಚನ ಸ್ವೀಕಾರ ಸಾಧ್ಯತೆ!

ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ಬಿ ನಾಗೇಂದ್ರ, ಇತರ 29 ಮಂದಿ ವಿರುದ್ಧ CBI ಚಾರ್ಜ್ ಶೀಟ್ ಸಲ್ಲಿಕೆ

SCROLL FOR NEXT