ಸಿದ್ದರಾಮಯ್ಯ, ಬಿಎಸ್ ಯಡಿಯೂರಪ್ಪ, ಹೆಚ್. ಡಿ ದೇವೇಗೌಡರನ್ನು ಭೇಟಿಯಾದ ಡಿಕೆ ಶಿವಕುಮಾರ್  
ರಾಜಕೀಯ

ಪ್ರಮಾಣ ವಚನ ಸ್ವೀಕಾರ ಹಿನ್ನೆಲೆ: ಹೆಚ್. ಡಿ. ದೇವೇಗೌಡ ಸೇರಿದಂತೆ ಪ್ರಬಲ ಸಮುದಾಯದ ನಾಯಕರನ್ನು ಭೇಟಿಯಾದ ಡಿಕೆಶಿ!

ಮೊದಲಿಗೆ ಉಸ್ತುವಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಧನ್ಯವಾದ ಅರ್ಪಿಸಿದರು.

ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡ ಸೇರಿದಂತೆ ಪ್ರಬಲ ಸಮುದಾಯದ ಹಿರಿಯ ನಾಯಕರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ.

ಮೊದಲಿಗೆ ಉಸ್ತುವಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಧನ್ಯವಾದ ಅರ್ಪಿಸಿದರು.

ಬಳಿಕ ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ಜಿ.ಪಮೇಶ್ವರ್ ಅವರೂ ಧನ್ಯವಾದ ಅರ್ಪಿಸಿದರು. ಸಿದ್ದರಾಮಯ್ಯ ಅವರು ಇಬ್ಬರಿಗೂ ಅಭಿನಂದಿಸಿ ಶುಭಕೋರಿದರು.

ಬಳಿಕ ಲಿಂಗಾಯತ ಸಮುದಾಯದ ಪ್ರಬಲ ನಾಯಕರಾದ ಬಿ.ಎಸ್. ಯಡಿಯೂರಪ್ಪ ಅವರ ನಿವಾಸಕ್ಕೆ ತೆರಳಿದ ಡಿಕೆ ಶಿವಕುಮಾರ್, ದೇವರ ಮನೆಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಯಡಿಯೂರಪ್ಪ ಅವರು ಶಾಲು ಹೂದಿಸಿ ಡಿಕೆ ಶಿವಕುಮಾರ್ ಅವರನ್ನು ಸನ್ಮಾನಿಸಿದರು.

ತದನಂತರ ಮಾಜಿ ಪ್ರಧಾನಿ ಹಾಗೂ ತಮ್ಮ ಧೀರ್ಘಕಾಲದ ರಾಜಕೀಯ ಎದುರಾಳಿ ಹೆಚ್. ಡಿ. ದೇವೇಗೌಡ ಅವರ ನಿವಾಸಕ್ಕೆ ತೆರಳಿ ಅವರಿಂದ ಆಶೀರ್ವಾದ ಪಡೆದುಕೊಂಡರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

DK Shivakumar and cabinet swearing-in LIVE updates | ಡಿಕೆ ಶಿವಕುಮಾರ್ ಪ್ರಮಾಣವಚನ: 13 ಶಾಸಕರಿಗೆ ಮಂತ್ರಿಗಿರಿ, ಉಪಮುಖ್ಯಮಂತ್ರಿಯಾಗಿ ಪರಮೇಶ್ವರ್ ಆಯ್ಕೆ ಖಚಿತ

ಡಿಕೆ ಶಿವಕುಮಾರ್ ಪ್ರಮಾಣವಚನ: 13 ಶಾಸಕರಿಗೆ ಮಂತ್ರಿ ಸ್ಥಾನ, ಯಾರಿಗೆಲ್ಲಾ ಸಚಿವಗಿರಿ? ಇಲ್ಲಿದೆ ಪಟ್ಟಿ

ಜಪಾನ್‌ನಲ್ಲಿ ಮಸೀದಿ ಉದ್ಘಾಟಿಸಿದ ಪಾಕಿಸ್ತಾನ, ‘ಇದು ಕಾನೂನುಬಾಹಿರ’ ಎಂದ ಸರ್ಕಾರ, ಬುಲ್ಡೋಜರ್ ಭೀತಿ!

ಶಾ ಭೇಟಿಯಾದ 'ಸಿಂಗಂ': ತಮಿಳುನಾಡು BJP ರಾಜ್ಯಾಧ್ಯಕ್ಷರಿಗೆ ಬುಲಾವ್; ರಾಜ್ಯಸಭೆ ಟಿಕೆಟ್ ನಿರಾಕರಿಸಿದ ಅಣ್ಣಾಮಲೈ!

ಪಶ್ಚಿಮ ಏಷ್ಯಾದಲ್ಲಿ ಮತ್ತೆ ಯುದ್ಧ ಆರಂಭ: ಗಲ್ಫ್ ರಾಷ್ಟ್ರಗಳ ಮೇಲೆ ಇರಾನ್ ದಾಳಿ, ಕೆಶ್ಮ್ ದ್ವೀಪದ ಮೇಲೆ ಅಮೆರಿಕ ಸೇನೆಯ ಪ್ರತಿದಾಳಿ!

SCROLL FOR NEXT