ಜಮೀರ್ ಅಹ್ಮದ್ ಖಾನ್, ಡಿಕೆ ಸುರೇಶ್ 
ರಾಜಕೀಯ

ಆಡಿಯೋ ವೈರಲ್ : ಜಮೀರ್ ಅಹ್ಮದ್ ಖಾನ್, ಸಿರಾಜ್ ವಿರುದ್ಧ ಕ್ರಮಕ್ಕೆ ದಾವಣಗೆರೆ ಜಿಲ್ಲಾ ಘಟಕ ಒತ್ತಾಯ!

ಮಡಿಕೇರಿಯಿಂದ ಬಂದ ಎಸ್‌ಡಿಪಿಐ ಅಭ್ಯರ್ಥಿ ಹಣ ಹಂಚಿದರು. ದಾವಣಗೆರೆಗೆ ಬರಲು ಹಣವಿಲ್ಲದ ವ್ಯಕ್ತಿಗೆ ಕೋಟಿ ರೂ. ಹೇಗೆ ಸಿಕ್ಕಿತು? ಆ ಅಭ್ಯರ್ಥಿ ಪ್ರತಿ ಮತಕ್ಕೆ 2,000 ರೂ. ಹಂಚಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಹೇಳಿರುವುದಾಗಿ ಬಸವರಾಜ್ ಹೇಳಿದರು.

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಲುವಂತೆ ಮಾಡಬೇಕು ಎಂದು ಮಾಜಿ ಸಚಿವ ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ಕರ್ನಾಟಕ ಮುಸ್ಲಿಂ ಅಭಿವೃದ್ಧಿ ನಿಗಮ (ಕೆಎಂಡಿಸಿ) ಮಾಜಿ ನಿರ್ದೇಶಕ ಮೊಹಮ್ಮದ್ ಸಿರಾಜ್ ಅವರಿಗೆ ಸೂಚಿಸಿದ್ದಾರೆ ಎಂಬ ಆಡಿಯೋ ವೈರಲ್ ಆಗಿದ್ದು, ದಾವಣಗೆರೆ ಜಿಲ್ಲಾ ಕಾಂಗ್ರೆಸ್‌ನಲ್ಲಿ ಆಕ್ರೋಶ ಭುಗಿಲೆದ್ದಿದೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ವಕ್ತಾರ ಮತ್ತು ಕೆಎಸ್‌ಐಸಿ ಮಾಜಿ ಅಧ್ಯಕ್ಷ ಡಿ. ಬಸವರಾಜ್ ಮತ್ತು ದಾವಣಗೆರೆಯ ಮಾಜಿ ಮೇಯರ್ ಚಮನ್ ಸಾಬ್ , ಜಮೀರ್ ಅವರನ್ನು ಕಾಂಗ್ರೆಸ್‌ನಿಂದ ಹೊರಹಾಕಬೇಕು ಎಂದು ಒತ್ತಾಯಿಸಿದರು.

“ಮಡಿಕೇರಿಯಿಂದ ಬಂದ ಎಸ್‌ಡಿಪಿಐ ಅಭ್ಯರ್ಥಿ ಹಣ ಹಂಚಿದರು. ದಾವಣಗೆರೆಗೆ ಬರಲು ಹಣವಿಲ್ಲದ ವ್ಯಕ್ತಿಗೆ ಕೋಟಿ ರೂ. ಹೇಗೆ ಸಿಕ್ಕಿತು? ಆ ಅಭ್ಯರ್ಥಿ ಪ್ರತಿ ಮತಕ್ಕೆ 2,000 ರೂ. ಹಂಚಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರು ನನಗೆ ಹೇಳಿದರು. ಅವರಿಗೆ ಯಾರು ಹಣಕಾಸು ಒದಗಿಸಿದರು? ಎಂದು ಪ್ರಶ್ನಿಸಿದ ಬಸವರಾಜು, ಈಗ ಎಐ ತಂತ್ರಜ್ಞಾನವನ್ನು ದೂಷಿಸಬಾರದು ಎಂದು ಹೇಳಿದರು.

ಆಡಿಯೋ ಕ್ಲಿಪ್ ಅನ್ನು ತನಿಖೆಗಾಗಿ ಎಫ್‌ಎಸ್‌ಎಲ್‌ಗೆ ಕಳುಹಿಸಬೇಕು ಎಂದು ಬಸವರಾಜು ಒತ್ತಾಯಿಸಿದರು. ಆಡಿಯೋ ಕ್ಲಿಪ್ ನಕಲಿಯಾಗಿದ್ದರೆ ದೇವರ ಮುಂದೆ ಪ್ರಮಾಣ ಮಾಡಬೇಕು ಎಂದು ಜಮೀರ್ ಅವರಿಗೆ ಮಾಜಿ ಮೇಯರ್ ಚಮನ್ ಸಾಬ್ ಸವಾಲು ಹಾಕಿದರು.

"ಚಾಮರಾಜಪೇಟೆಯ ಕಾರ್ಯಕರ್ತರು ಬಂದು ಎಸ್‌ಡಿಪಿಐ ಪರ ಪ್ರಚಾರ ಮಾಡಿದ್ದಾರೆ. ಬಿಜೆಪಿಗೆ ಗೆಲುವು ಸಾಧಿಸುವುದು ಅವರ ಏಕೈಕ ಕಾರ್ಯಸೂಚಿಯಾಗಿತ್ತು ಎಂದು ಅವರು ಆರೋಪಿಸಿದ್ದಾರೆ.

ಈ ಮಧ್ಯೆ ಬೆಂಗಳೂರಿನಲ್ಲಿ ಡಿಕೆ ಸುರೇಶ್ ಮತ್ತು ಜಮೀರ್ ಅಹ್ಮದ್ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಆಡಿಯೋ ಸೋರಿಕೆ ಕುರಿತು ಇಬ್ಬರು ನಾಯಕರು ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

DK Shivakumar and cabinet swearing-in LIVE updates | ಡಿಕೆ ಶಿವಕುಮಾರ್ ಜೊತೆ ಸಚಿವರಾಗಿ ಪ್ರಮಾಣ ವಚನ ಹಿನ್ನಲೆ, ಸ್ಪೀಕರ್ ಸ್ಥಾನಕ್ಕೆ ಯುಟಿ ಖಾದರ್ ರಾಜಿನಾಮೆ!

18ನೇ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಇಂದು ಪ್ರಮಾಣ ವಚನ: 15 ಸಚಿವರು ಸಂಪುಟ ಸೇರುವ ಸಾಧ್ಯತೆ; ಮೊದಲ ಪಟ್ಟಿಯಿಂದ ಹೆಬ್ಬಾಳ್ಕರ್ ಔಟ್?

ಶಾ ಭೇಟಿಯಾದ 'ಸಿಂಗಂ': ತಮಿಳುನಾಡು BJP ರಾಜ್ಯಾಧ್ಯಕ್ಷರಿಗೆ ಬುಲಾವ್; ರಾಜ್ಯಸಭೆ ಟಿಕೆಟ್ ನಿರಾಕರಿಸಿದ ಅಣ್ಣಾಮಲೈ!

ಪಶ್ಚಿಮ ಏಷ್ಯಾದಲ್ಲಿ ಮತ್ತೆ ಯುದ್ಧ ಆರಂಭ: ಗಲ್ಫ್ ರಾಷ್ಟ್ರಗಳ ಮೇಲೆ ಇರಾನ್ ದಾಳಿ, ಕೆಶ್ಮ್ ದ್ವೀಪದ ಮೇಲೆ ಅಮೆರಿಕ ಸೇನೆಯ ಪ್ರತಿದಾಳಿ!

ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ಬಿ ನಾಗೇಂದ್ರ, ಇತರ 29 ಮಂದಿ ವಿರುದ್ಧ CBI ಚಾರ್ಜ್ ಶೀಟ್ ಸಲ್ಲಿಕೆ

SCROLL FOR NEXT