ಮಾಜಿ ಸಂಸದೆ ಹಾಗೂ ನಟಿ ರಮ್ಯಾ 
ರಾಜಕೀಯ

ಡಿಕೆಶಿ ಪದಗ್ರಹಣಕ್ಕೆ ಆಗಮಿಸಿದ ನಟಿ ರಮ್ಯಾ; ಸಕ್ರಿಯೆ ರಾಜಕಾರಣಕ್ಕೆ ಮರಳುವ ಬಗ್ಗೆ ಮಾಜಿ ಸಂಸದೆ ಹೇಳಿದ್ದೇನು?

ಇಂದು ಸಂಜೆ ಲೋಕಭವನದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಡಿಕೆ ಶಿವಕುಮಾರ್ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಲೋಕಭವನದಲ್ಲಿ ನಡೆದ ಸಮಾರಂಭದಲ್ಲಿ ಸದ್ಯ ಸಕ್ರಿಯೆ ರಾಜಕಾರಣದಿಂದ ದೂರ ಉಳಿದಿರುವ ಮಂಡ್ಯ ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಅವರು ಭಾಗವಹಿಸಿದ್ದರು.

ಇಂದು ಸಂಜೆ ಲೋಕಭವನದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಡಿಕೆ ಶಿವಕುಮಾರ್ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಅವರೊಂದಿಗೆ ಉಪ ಮುಖ್ಯಮಂತ್ರಿಯಾಗಿ ಜಿ. ಪರಮೇಶ್ವರ ಹಾಗೂ 12 ನಾಯಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.

ಇನ್ನೂ ಡಿಕೆಶಿ ಪದಗ್ರಹಣ ವಿಚಾರ ಕುರಿತು ಮಾತನಾಡಿದ ನಟಿ ರಮ್ಯಾ, ಡಿಕೆ ಶಿವಕುಮಾರ್‌ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ಸ್ವೀಕಾರ ಮಾಡ್ತಿರೋದು ಖುಷಿ ಆಗ್ತಿದೆ. ಬಹಳ ವರ್ಷದಿಂದ ಅವರು ಪಟ್ಟ ಕಷ್ಟಕ್ಕೆ ಫಲ ಸಿಕ್ಕಿದೆ ಎಂದರು.

ನಾನೀಗ ಬಂದಿರೋದು ಡಿಕೆ ಶಿವಕುಮಾರ್‌ ಅವರ ಫ್ಯಾಮಿಲಿಗೋಸ್ಕರ. ಇಷ್ಟು ವರ್ಷ ಕಷ್ಟಪಟ್ಟಿರುವುದರ ಫಲ ಅವರಿಗೆ ಈಗ ಸಿಕ್ಕಿದೆ. ಅದನ್ನ ನೋಡಿ ಸೆಲಬ್ರೇಟ್‌ ಮಾಡೋಕೆ ಬಂದಿದ್ದೇನೆ. ನಾನು ಮತ್ತೆ ಸಕ್ರಿಯೆ ರಾಜಕಾರಣಕ್ಕೆ ಮರಳಲು ಕಾಲ ಕೂಡಿಬರಬೇಕು. ಎಲ್ಲದಕ್ಕೂ ಸಮಯ ಬೇಕಲ್ಲ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ರಧಾನಿ ನಿವಾಸದ ಮುಂದೆ ರಾಹುಲ್ ನೇತೃತ್ವದಲ್ಲಿ ಕಾಂಗ್ರೆಸ್ ಉಗ್ರ ಪ್ರತಿಭಟನೆ; ಮೋದಿ, ಅಮಿತ್‌ ಶಾ, ಪ್ರಧಾನ್‌ ರಾಜೀನಾಮೆಗೆ ಪಟ್ಟು; Video

CJP Protest LIVE Updates | ಪ್ರತಿಭಟನೆ ಮುಂದುವರಿಯಲಿದೆ; ಭರವಸೆ ಕಳೆದುಕೊಳ್ಳಬೇಡಿ: ಸಿಜೆಪಿಯ ಅಭಿಜೀತ್ ದೀಪ್ಕೆ ವಿನಂತಿ

'Surrender Or Lose Bail': ಮೇಘಾಲಯ ಹನಿಮೂನ್ ಮರ್ಡರ್, ಆರೋಪಿಗೆ ಆಪ್ಷನ್ ಕೊಟ್ಟ ಸುಪ್ರೀಂಕೋರ್ಟ್!

ಖಾಸಗಿ ಆಸ್ಪತ್ರೆಗೆ ಸೋನಮ್ ವಾಂಗ್‌ಚುಕ್‌ ಸ್ಥಳಾಂತರಕ್ಕೆ ದೆಹಲಿ ಹೈಕೋರ್ಟ್ ಸೂಚನೆ; ಧನ್ಯವಾದ ಅರ್ಪಿಸಿದ ಪತ್ನಿ ಗೀತಾಂಜಲಿ!

ಬೆಂಗಳೂರಿನಲ್ಲಿ 500 ರೂ. ನಕಲಿ ನೋಟು ಮುದ್ರಿಸಿ ಚಲಾವಣೆ: ಇಬ್ಬರ ಬಂಧನ; ಬೆಚ್ಚಿ ಬಿದ್ದ ರಾಜಧಾನಿ ಜನ!